Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಯಾವ ಸಾರ್ವಜನಿಕ ಹಿತಾಸಕ್ತಿ ರೋಹಿಣಿ ಸಿಂಧೂರಿ ವರ್ಗಾವಣೆಯಲ್ಲಿದೆ: ಸರ್ಕಾರಕ್ಕೆ ಸಿಎಟಿ ಪ್ರಶ್ನೆ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಯಾವ ಸಾರ್ವಜನಿಕ ಹಿತಾಸಕ್ತಿ ರೋಹಿಣಿ ಸಿಂಧೂರಿ ವರ್ಗಾವಣೆಯಲ್ಲಿದೆ: ಸರ್ಕಾರಕ್ಕೆ ಸಿಎಟಿ ಪ್ರಶ್ನೆ

Bengaluru City

ಯಾವ ಸಾರ್ವಜನಿಕ ಹಿತಾಸಕ್ತಿ ರೋಹಿಣಿ ಸಿಂಧೂರಿ ವರ್ಗಾವಣೆಯಲ್ಲಿದೆ: ಸರ್ಕಾರಕ್ಕೆ ಸಿಎಟಿ ಪ್ರಶ್ನೆ

Public TV
Last updated: March 13, 2018 3:27 pm
Public TV
Share
2 Min Read
rohini sindhuri cm siddaramaiah
SHARE

ಬೆಂಗಳೂರು: ಹಾಸನ ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ವರ್ಗಾವಣೆ ವಿಚಾರಕ್ಕೆ ಸಂಬಂಧಿಸಿದಂತೆ ಕೇಂದ್ರೀಯ ಆಡಳಿತಾತ್ಮಕ ನ್ಯಾಯಮಂಡಳಿ(ಸಿಎಟಿ) ಮಾರ್ಚ್ 21ಕ್ಕೆ ಆದೇಶ ಕಾಯ್ದಿರಿಸಿದೆ.

ಇಂದು ಕಲಾಪದಲ್ಲಿ ರೋಹಿಣಿ ಪರ ಹಿರಿಯ ವಕೀಲ ಜೋಯಿಸ್ ವಾದ ಮಂಡಿಸಿದರೆ, ಸರ್ಕಾರದ ಪರವಾಗಿ ಹೆಚ್ಚುವರಿ ಅಡ್ವೊಕೇಟ್ ಜನರಲ್ ಎಎಸ್ ಪೊನ್ನಣ್ಣ ವಾದ ಮಾಡಿದರು. ಈ ವೇಳೆ ಮೈಸೂರು ಜಿಲ್ಲಾಧಿಕಾರಿ ರಂದೀಪ್ ಅವರ ವರ್ಗಾವಣೆಗೆ ಸಿಎಟಿ ತಡೆ ನೀಡಿದ್ದು, ಮುಂದಿನ ಆದೇಶ ಪ್ರಕಟವಾಗುವರೆಗೆ ಅಲ್ಲಿಯೇ ಮುಂದುವರಿಯುವಂತೆ ಸೂಚಿಸಿದೆ.

ಸಾರ್ವಜನಿಕ ಉದ್ದೇಶಕ್ಕಾಗಿ ರೋಹಿಣಿ ಅವರನ್ನು ವರ್ಗಾವಣೆ ಮಾಡಲಾಗಿದೆ. ಇದರಲ್ಲಿ ಕನಿಷ್ಠ ಎರಡು ವರ್ಷದ ನಿಯಮ ಅನ್ವಯವಾಗುವುದಿಲ್ಲ. ಐಎಎಸ್ ಅಧಿಕಾರಿಗಳ ವರ್ಗಾವಣೆಗೆ ಯಾವುದೇ ರೀತಿಯ ಮಂಡಳಿ ಇಲ್ಲ. ಮಂಡಳಿ ಇದ್ದರೆ ಮಾತ್ರ ನಿಯಮಗಳು ಅನ್ವಯ ಆಗುತ್ತವೆ. ಸಾರ್ವಜನಿಕ ಹಿತಾಸಕ್ತಿಯಿಂದ  ವರ್ಗಾವಣೆ ಮಾಡಲಾಗಿದೆ ಎಂದು ಪೊನ್ನಣ್ಣ ವಾದಿಸಿದರು.

ಈ ವೇಳೆ ನ್ಯಾಯಪೀಠ, ಯಾವ ಸಾರ್ವಜನಿಕ ಹಿತಾಸಕ್ತಿ ಈ ವರ್ಗಾವಣೆಯಲ್ಲಿದೆ ತಿಳಿಸಿ ಎಂದು ಪ್ರಶ್ನಿಸಿದರು. ಇದಕ್ಕೆ ಪೊನ್ನಣ್ಣ, ಆ ವಿಚಾರವನ್ನು ಇಲ್ಲಿ ಬಹಿರಂಗ ಪಡಿಸುವ ಅಗತ್ಯವಿಲ್ಲ. ಕಾರ್ಯಾಂಗದ ಮುಖ್ಯಸ್ಥರಾಗಿ ಸಿಎಂ ಸಿಎ ಆದೇಶ ಮಾಡಿದ್ದಾರೆ ಎಂದು ಉತ್ತರಿಸಿದರು.

ರೋಹಿಣಿ ಪರ ಹಿರಿಯ ವಕೀಲ ಜೋಯಿಸ್, ರಾಜ್ಯದ ಮುಖ್ಯಮಂತ್ರಿಗಳಾಗಿ ನಿಯಮಗಳನ್ನು ಮೀರುವಂತಿಲ್ಲ. ಇಲ್ಲಿ ಯಾವುದೇ ಸಾರ್ವಜನಿಕ ಹಿತಾಸಕ್ತಿ ಇಲ್ಲ. ಎಲ್ಲಾ ವೈಯಕ್ತಿಕ ಹಿತಾಸಕ್ತಿಯಿಂದ ಕೂಡಿದ ವರ್ಗಾವಣೆ ಇದು. ಅವಧಿಗಿಂತ ಮುಂಚೆ ವರ್ಗಾವಣೆ ಮಾಡಿದರೆ ಅದಕ್ಕೆ ಸೂಕ್ತ ಕಾರಣಗಳನ್ನು ನೀಡಲೇಬೇಕು. ಕಾರಣಗಳಿಲ್ಲದೆ ವರ್ಗಾವಣೆ ಮಾಡುವಂತಿಲ್ಲ. ವರ್ಗಾವಣೆಗೂ ಮುನ್ನ ನೋಟಿಸ್ ನೀಡಬೇಕು ಎಂದು ವಾದಿಸಿದರು.  ಇದನ್ನೂ ಓದಿ: ರೋಹಿಣಿ ಸಿಂಧೂರಿ ಯಾರು? ಈ ಹಿಂದೆ ಅವರು ಮಾಡಿದ್ದ ಕೆಲಸಗಳು ಏನು?

rohini sindhuri 1

ನಿಯಮಗಳ ವಿರುದ್ಧವಾಗಿ ಅವಧಿಗೂ ಮುನ್ನ ವರ್ಗಾವಣೆ ಮಾಡಿದ್ದನ್ನು ಪ್ರಶ್ನಿಸಿ ರೋಹಿಣಿ ಸಿಂಧೂರಿ ಅವರು ಸಿಎಟಿ ಮೊರೆ ಹೋಗಿದ್ದರು. ಈ ಅರ್ಜಿ ವಿಚಾರಣೆ ನಡೆಸಿದ ಸಿಎಟಿ ಮಾರ್ಚ್ 13ರವರೆಗೆ ವರ್ಗಾವಣೆಗೆ ತಡೆ ನೀಡಿತ್ತು.

ರೋಹಿಣಿ ಸಿಂಧೂರಿ ವರ್ಗಾವಣೆ ಆದೇಶವನ್ನು ಮಾ.6 ರಂದು ಹಿಂದಕ್ಕೆ ಪಡೆದಿದ್ದ ರಾಜ್ಯ ಸರ್ಕಾರ ಮಾ.7 ರಂದು ವರ್ಗಾವಣೆ ಮಾಡಿತ್ತು. ಒಟ್ಟು 12 ಐಎಎಸ್ ಅಧಿಕಾರಿಗಳನ್ನು ಸರ್ಕಾರ ವರ್ಗಾವಣೆ ಮಾಡಿದ್ದು ರೋಹಿಣಿ ಅವರನ್ನು ಉದ್ಯೋಗ ಮತ್ತು ತರಬೇತಿ ಇಲಾಖೆ ಆಯುಕ್ತರನ್ನಾಗಿ ನೇಮಿಸಿ ವರ್ಗಾವಣೆ ಆದೇಶ ಹೊರಡಿಸಿತ್ತು.

ಮತದಾರರ ಪಟ್ಟಿ ಪರಿಷ್ಕರಣೆ ಸಂದರ್ಭದಲ್ಲಿ ಜ.22 ರಂದು ರೋಹಿಣಿ ಅವರನ್ನು ಕರ್ನಾಟಕ ರಾಜ್ಯ ಕೈಗಾರಿಕಾ ಮತ್ತು ಮೂಲಸೌಲಭ್ಯ ಅಭಿವೃದ್ಧಿ ನಿಗಮ(ಕೆಎಸ್‍ಐಐಡಿಸಿ) ಆಡಳಿತ ನಿರ್ದೇಶಕಿಯನ್ನಾಗಿ ನೇಮಿಸಿ ಹಠಾತ್ ವರ್ಗಾವಣೆ ಮಾಡಿದ್ದ ಸರ್ಕಾರದ ಆದೇಶಕ್ಕೆ ಕೇಂದ್ರ ಚುನಾವಣಾ ಆಯೋಗ ತಡೆ ನೀಡಿತ್ತು. ಸರ್ಕಾರದ ಕ್ರಮಕ್ಕೆ ಸಾರ್ವಜನಿಕ ವಲಯದಿಂದಲೂ ಟೀಕೆ ಕೇಳಿ ಬಂದಿತ್ತು.

ಫೆಬ್ರವರಿ 28ಕ್ಕೆ ಮತದಾರರ ಪಟ್ಟಿ ಪರಿಷ್ಕರಣೆ ನಡೆಯಲಿದ್ದು, ಮತದಾರ ಪಟ್ಟಿ ಪರಿಷ್ಕರಣೆ ಮುಗಿಯುವವರೆಗೆ ವರ್ಗಾವಣೆ ಬೇಡ. ವರ್ಗಾವಣೆ ಆದೇಶ ಜಾರಿಯನ್ನು ಕೂಡಲೇ ನಿಲ್ಲಿಸಬೇಕು. ಚುನಾವಣಾ ಪ್ರಕ್ರಿಯೆಯಲ್ಲಿ ತೊಡಗಿರುವವರನ್ನ ಅದೇ ಸ್ಥಾನದಲ್ಲಿ ಮುಂದುವರಿಸಬೇಕು. ವರ್ಗಾವಣೆ ಬಗ್ಗೆ ಕೇಂದ್ರ ಚುನಾವಣಾ ಆಯೋಗದ ಗಮನಕ್ಕೆ ತರಬೇಕು. ವರ್ಗಾಯಿತ ಜಿಲ್ಲೆಗಳಿಗೆ ತೆರಳದಂತೆ 7 ಜಿಲ್ಲಾಧಿಕಾರಿಗಳಿಗೂ ಚುನಾವಣಾ ಆಯೋಗ ಈ ಹಿಂದೆ ಸೂಚನೆ ನೀಡಿತ್ತು. ಇದನ್ನೂ ಓದಿ:ಸರ್ಕಾರಕ್ಕೆ ಮತ್ತೊಮ್ಮೆ ಭಾರೀ ಮುಖಭಂಗ- ಕೊಪ್ಪಳ ಎಸ್‍ಪಿ ಅನೂಪ್ ಶೆಟ್ಟಿ ವರ್ಗಾವಣೆಗೂ ಸಿಎಟಿ ತಡೆ

TAGGED:bengaluruCatkarnatakaRohini Sindhuriಕರ್ನಾಟಕಪೊನ್ನಣ್ಣಬೆಂಗಳೂರುರೋಹಿಣಿ ಸಿಂಧೂರಿವರ್ಗಾವಣೆಸಿಎಟಿಹಾಸನ
Share This Article
Facebook Whatsapp Whatsapp Telegram

Cinema news

Daali Dhananjaya
ಮೊದಲ ಮಗುವಿನ ನಿರೀಕ್ಷೆಯಲ್ಲಿ ಡಾಲಿ ಧನಂಜಯ್‌ ದಂಪತಿ
Cinema Latest Main Post Sandalwood
Darshan
ಜಾಮೀನಿಗಾಗಿ ಎರಡನೇ ಬಾರಿ ಸುಪ್ರೀಂ ಕದ ತಟ್ಟಿದ ದರ್ಶನ್‌
Cinema Court Latest Main Post Sandalwood
yash toxic
ಜಾಗತಿಕ ಮಟ್ಟದಲ್ಲಿ ಅಬ್ಬರಿಸಲು ಸಜ್ಜಾದ ಯಶ್ – ಟಾಕ್ಸಿಕ್ ಬಿಡುಗಡೆ ದಿನಾಂಕ ಮತ್ತೆ ಮುಂದಕ್ಕೆ
Cinema Latest Main Post
Pooja Hegde Udupi
ಉಡುಪಿಯಲ್ಲಿ ನಾಗದೇವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟಿ ಪೂಜಾ ಹೆಗ್ಡೆ
Cinema Districts Karnataka Latest Top Stories Udupi

You Might Also Like

Rajat Patidar Catch
Cricket

Catch Controversy | ಜೇಸನ್‌ ಹೋಲ್ಡರ್‌ ಕ್ಯಾಚ್‌ ವಿವಾದ – ಅಂಪೈರ್‌ ತೀರ್ಪಿನ ವಿರುದ್ಧ ಆಕ್ರೋಶ

Public TV
By Public TV
21 seconds ago
Mamata Banerjee 4
Latest

226 ಕ್ಕೂ ಹೆಚ್ಚು ಕ್ಷೇತ್ರಗಳಲ್ಲಿ ಗೆಲುವು ಖಚಿತ – ಟುಡೇಸ್‌ ಚಾಣಕ್ಯ ಸಮೀಕ್ಷೆ ತಳ್ಳಿಹಾಕಿದ ದೀದಿ

Public TV
By Public TV
50 minutes ago
Assam CM Himanta Biswa Sarma
Latest

Today’s Chanakya Exit Polls | ಅಸ್ಸಾಂನಲ್ಲಿ ಬಿಜೆಪಿಗೆ ಹ್ಯಾಟ್ರಿಕ್‌ ಗೆಲುವು

Public TV
By Public TV
1 hour ago
Tamil Nadu Election 2026 Tomorrow DMK AIDMK Congress BJP TVK Vijay
Latest

Today’s Chanakya Exit Polls | ತಮಿಳುನಾಡಿನಲ್ಲಿ ಡಿಎಂಕೆಗೆ ಮತ್ತೆ ಪಟ್ಟ – ದಳಪತಿ ಟಿವಿಕೆಗೆ 63 ಸ್ಥಾನ

Public TV
By Public TV
2 hours ago
AMIT SHAH NARENDRA MODI
Latest

Today’s Chanakya Exit Polls | ಮೋದಿ-ಶಾ ತಂತ್ರಕ್ಕೆ ದೀದಿ ಕೋಟೆ ಛಿದ್ರ – ಬಂಗಾಳದಲ್ಲಿ ಬಿಜೆಪಿ ಬಿಗ್‌ ಬಾಸ್‌!

Public TV
By Public TV
2 hours ago
Dharmendra Pradhan
Bengaluru City

ಪಶ್ಚಿಮ ಬಂಗಾಳ, ಅಸ್ಸಾಂನಲ್ಲಿ ಬಿಜೆಪಿ ಸರ್ಕಾರ ಖಚಿತ: ಧರ್ಮೇಂದ್ರ ಪ್ರಧಾನ್ ವಿಶ್ವಾಸ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?