Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Bengaluru City

40% ಆರೋಪಕ್ಕೆ ಕಾಂಗ್ರೆಸಿಗರು ಏನು ದಾಖಲೆ ಕೊಟ್ಟಿದ್ರು: ಬೊಮ್ಮಾಯಿ ಟಕ್ಕರ್

Public TV
Last updated: January 6, 2025 6:28 pm
Public TV
Share
3 Min Read
bengaluru basavaraj bommai 1
SHARE

ಹುಬ್ಬಳ್ಳಿ: ರಾಜ್ಯ ಸರ್ಕಾರದ 60% ಕಮಿಷನ್ ಆರೋಪಕ್ಕೆ ದಾಖಲೆ ಕೊಡಿ ಎನ್ನುವ ಸಿಎಂ ಸಿದ್ದರಾಮಯ್ಯ (Siddaramaiah) ಅವರು ನಮ್ಮ ಆಡಳಿತದಲ್ಲಿ 40 % ಆರೋಪ ಮಾಡಿದ್ದರು. ಆಗ ಅವರು ಏನು ದಾಖಲೆ ಕೊಟ್ಟಿದ್ದರು? ಎಂದು ಮಾಜಿ ಸಿಎಂ ಬಸವರಾಜ ಬೊಮ್ಮಾಯಿ (Basavaraj Bommai) ಪ್ರಶ್ನಿಸಿದ್ದಾರೆ.

ಹುಬ್ಬಳ್ಳಿಯಲ್ಲಿ ಮಾಧ್ಯಮಗಳೊಂದಿಗೆ ಅವರು ಮಾತನಾಡಿದರು. ಈ ವೇಳೆ ಸರ್ಕಾರ ಯಾವ ರೀತಿ ನಡೆದುಕೊಳ್ಳತ್ತಿದೆ ಎಂದು ಗೊತ್ತು. ಪ್ರತಿಯೊಂದು ಇಲಾಖೆಯಲ್ಲಿ ಭ್ರಷ್ಟಾಚಾರ ತುಂಬಿ ತುಳಕುತ್ತಿದೆ. ಯಾವುದೇ ಅಭಿವೃದ್ಧಿ ಕೆಲಸ ಇಲ್ಲ. ಪ್ರತಿಯೊಂದು ಇಲಾಖೆಯಲ್ಲಿ ಭ್ರಷ್ಟಾಚಾರ ತಾಂಡವ ಆಡುತ್ತಿದೆ. ಯಾವುದೇ ಇಲಾಖೆಯಲ್ಲಿ ಕೆಲಸ ಆಗತ್ತಿಲ್ಲ. ಜನಸಾಮಾನ್ಯರು, ಗುತ್ತಿಗೆದಾರರು, ಎಲ್ಲಾ ವರ್ಗದ ಜನರಿಗೆ ಭ್ರಷ್ಟಾಚಾರದ ಬಿಸಿ ಮುಟ್ಟಿದೆ. ಇನ್ನೂ ಏನೂ ಆಗಿಲ್ಲ ಎಂದು ಮುಖ್ಯಮಂತ್ರಿಗಳು ವರ್ತಿಸುತ್ತಿರುವುದು ಭ್ರಷ್ಟಾಚಾರ ಮುಚ್ಚಿ ಹಾಕುವ ಪ್ರಯತ್ನ ಎಂದು ಆರೋಪಿದ್ದಾರೆ.

ಬಿಜೆಪಿಯೂ ಗ್ಯಾರಂಟಿ ಕೊಟ್ಟಿದೆ
ನಾವು ಗ್ಯಾರಂಟಿ ಜಾರಿ ಮಾಡಿದ್ದೇವೆ ನೀವು ಏನು ಮಾಡಿದ್ದೀರಿ ಎಂಬ ಕಾಂಗ್ರೆಸ್ (Congress) ಆರೋಪದ ಕುರಿತು ಕೇಳಿದ ಪ್ರಶ್ನೆಗೆ ಯಡಿಯೂರಪ್ಪ ಅವರ ಅವಧಿಯಲ್ಲಿ ರೈತರ ಪಂಪ್ ಸೆಟ್‌ಗಳಿಗೆ ಉಚಿತ ವಿದ್ಯುತ್ ಯೋಜನೆ ಜಾರಿ ಮಾಡಿದ್ದೇವೆ‌. ಹೆಣ್ಣು ಮಗು ಹುಟ್ಟಿದರೆ ಭಾಗ್ಯಲಕ್ಷೀ ಯೋಜನೆ ಜಾರಿ ಮಾಡಿದ್ದೇವೆ. ರೈತರ ಮಕ್ಕಳಿಗೆ ವಿದ್ಯಾನಿಧಿ ಯೋಜನೆ ಜಾರಿ ಮಾಡಿದ್ದೇವೆ. ಇವೆಲ್ಲವನ್ನು ಕಾಂಗ್ರೆಸ್ ಕೊಟ್ಟಿದಿಯಾ? ಆಶಾ, ಅಂಗನವಾಡಿ ಕಾರ್ಯಕರ್ತರಿಯೆ ಸಾಕಷ್ಟು ಸೌಲಭ್ಯ ಮಾಡಿದ್ದೇವೆ. ಇವರೇನು ಮಾಡಿದ್ದಾರೆ? ಒಂದು ರಸ್ತೆ ಸರಿ ಇಲ್ಲ ಎಂದು ಕಿಡಿಕಾರಿದ್ದಾರೆ.

Ambedkar amit shah

ಕಾಂಗ್ರೆಸ್ ಅಂಬೇಡ್ಕರ್ ವಿರೋಧಿ
ಅಮಿತಾ ಶಾ ಅಂಬೇಡ್ಕರ್ ಕುರಿತಾದ ಹೇಳಿಕೆ ವಿಚಾರವಾಗಿ ಕಾಂಗ್ರೆಸ್ ಪ್ರತಿಭಟನೆ ನಡೆಸಿದೆ. ಅಂಬೇಡ್ಕರ್ ಅವರು ಬದುಕಿದ್ದಾಗ ಕಾಂಗ್ರೆಸ್ ಹೇಗೆ ನಡೆದುಕೊಂಡಿದೆ ಎನ್ನುವುದು ಇವತ್ತಿನ ಯುವಜನತೆಗೆ ಬಹಿರಂಗವಾಗಿದೆ. ಸಂಸತ್ತಿನಲ್ಲಿ ಎರಡು ದಿನ ನಡೆದ ಚರ್ಚೆಯಲ್ಲಿ ಕಾಂಗ್ರೆಸ್ ಸಂವಿಧಾನ ವಿರೋಧಿ ಹಾಗೂ ಅಂಬೇಡ್ಕರ್ ವಿರೋಧಿ ಎನ್ನುವುದು ಸ್ಪಷ್ಟವಾಗಿದೆ. ತಾವು ಮಾಡಿರುವ ಅಪರಾಧವನ್ನು ಮುಚ್ಚಿ ಹಾಕಿಕೊಳ್ಳಲು ಅಮಿತ್ ಶಾ ಅವರ ಹೇಳಿಕೆಯನ್ನು ತಿರುಚುವ ಕೆಲಸ ಮಾಡುತ್ತಿದ್ದಾರೆ. ಅವರಿಗೆ ಅಂಬೇಡ್ಕರ್ ಬಗ್ಗೆ ಗೌರವ ಇದ್ದರೆ, ಮೊದಲು ಅಂಬೇಡ್ಕರ್‌ಗೆ ಅವರ ಹಿರಿಯರು ಮಾಡಿರುವ ಅಪಮಾನಕ್ಕೆ ಪ್ರಾಯಶ್ಚಿತ ಮಾಡಿಕೊಳ್ಳಲಿ ಎಂದಿದ್ದಾರೆ.

ಜನ ವಿರೋಧಿ ತೀರ್ಮಾನ
ಬಸ್ ದರ ಏರಿಕೆ ಜನ ವಿರೋಧಿ ತೀರ್ಮಾನ, ಜನರೇ ಈ ಬಗ್ಗೆ ಆಕ್ರೋಶ ಹೊರಹಾಕುತ್ತಿದ್ದಾರೆ. ಅವರು ಶಕ್ತಿ ಯೋಜನೆ ಮಾಡಿ ಅದಕ್ಕೆ ನೀಡಬೇಕಾದ ಹಣ ಸರಿಯಾಗಿ ನೀಡುತ್ತಿಲ್ಲ. ಆ ಯೋಜನೆಯಿಂದ ಯುವಜನತೆಗೆ, ವಿದ್ಯಾರ್ಥಿಗಳಿಗೆ ತೊಂದರೆಯಾಗುತ್ತಿದೆ. ಹೆಚ್ಚಿನ ಬಸ್‌ಗಳನ್ನೂ ನೀಡುತ್ತಿಲ್ಲ. ನಾನು ಸಿಎಂ ಆಗಿದ್ದಾಗ ಘೋಷಣೆ ಮಾಡಿರುವ ಬಸ್‌ಗಳೇ ಈಗ ಬರುತ್ತಿವೆ. ಸಾಲ ಅವರ ಕಾಲದಿಂದಲೂ ಇದೆ. ಕೊವಿಡ್ ಸಂದರ್ಭದಲ್ಲಿ ತೊಂದರೆ ಆದಾಗ ಯಡಿಯೂರಪ್ಪ ಅವರು ಸಹಾಯ ಮಾಡಿದ್ದರು. ನಮ್ಮ ಕಾಲದಲ್ಲಿ ಯಾವುದೇ ಹೊರೆಯಾಗದಂತೆ ನೋಡಿಕೊಳ್ಳಲಾಗಿತ್ತು. ಇವರು ಡಿಸೆಲ್ ದುಡ್ಡು ಕಟ್ಟಲು ಆಗದ ಪರಿಸ್ಥಿತಿಗೆ ತಂದಿದ್ದಾರೆ. ಅವರು ಗ್ಯಾರೆಂಟಿ ಯೋಜನೆಗಳಿಗೆ ಸರಿಯಾಗಿ ಸಂಪನ್ಮೂಲ ಕ್ರೋಢಿಕರಣ ಮಾಡಲಾಗದೇ ಜನರ ಮೇಲೆ ತೆರಿಗೆ ಭಾರ ಹಾಕುತ್ತಿದ್ದಾರೆ. ಕೇವಲ ಸಾರಿಗೆ ದರ ಹೆಚ್ಚಳವಲ್ಲ, ನೀರಿನ ದರ ಹೆಚ್ಚಳ, ವಿದ್ಯುತ್ ದರ ಹೆಚ್ಚಳ, ಹಾಲಿನ ದರ ಈಗಾಗಲೇ ಹೆಚ್ಚಳ ಮಾಡಿದ್ದಾರೆ. ಮತ್ತೆ ಮಾಡಲು ತೀರ್ಮಾನ ಮಾಡಿದ್ದಾರೆ. ಸ್ಟ್ಯಾಂಪ್ ಡ್ಯೂಟಿ, ಮೋಟರ್ ವೆಹಿಕಲ್ ತೆರಿಗೆ, ಪೆಟ್ರೋಲ್ ಡಿಸೇಲ್ ತೆರಿಗೆ ಹೆಚ್ಚಳ ಮಾಡಿದ್ದಾರೆ. ಜನಸಾಮಾನ್ಯರು ಬಳಸುವ ಜಲ್ಲಿಕಲ್ಲಿನ ಮೇಲೆ ತೆರಿಗೆ, ಪಶ್ಚಿಮ ಘಟ್ಟದಿಂದ ಬರುವ ನೀರಿನ ಮೇಲೆ ತೆರಿಗೆ ಹಾಕಲು ಯೋಚನೆ ಮಾಡಿದ್ದಾರೆ. ಗಾಳಿಗೆ ತೆರಿಗೆ ಹಾಕುವ ದಿನಗಳು ದೂರ ಇಲ್ಲ. ಇದೊಂದು ದುರಾಡಳಿತ, ಆರ್ಥಿಕ ನಿರ್ವಹಣೆಯಲ್ಲಿ ವಿಫಲವಾಗಿರುವ ಅಭಿವೃದ್ದಿ ಶೂನ್ಯವಾಗಿರುವ ಪ್ರತಿಫಲದಿಂದ ತೆರಿಗೆಗಳ ಭಾರ ಕರ್ನಾಟಕದ ಜನರ ಮೇಲೆ ಹಾಕುತ್ತಿದ್ದಾರೆ ಎಂದು ಆರೋಪಿಸಿದ್ದಾರೆ.

ವಿತಂಡವಾದ: ಬಸ್ ದರ ಏರಿಕೆಗೂ ರೈಲ್ವೆ ದರ ಏರಿಕೆಗೂ ಹೋಲಿಕೆ ಮಾಡಿರುವ ಕುರಿತು ಕೇಳಿದ ಪ್ರಶ್ನೆಗೆ ರೈಲ್ವೆಗೂ ಬಸ್ ದರ ಹೆಚ್ಚಳಕ್ಕೂ ಹೋಲಿಕೆ ಮಾಡಿ ವಿತಂಡವಾದ ಮಾಡುವುದು ಸರಿಯಲ್ಲ. ಮುಖ್ಯಮಂತ್ರಿಗಳು ನಮ್ಮ ರಾಜ್ಯದ ಸಮಸ್ಯೆ ಬಗ್ಗೆ ಮಾತಾಡಲಿ. ರಾಜ್ಯದಲ್ಲಿ ರಸ್ತೆ ಗುಂಡಿಗಳು ಬಿದ್ದಿವೆ. ಚಂದ್ರನ ಮೇಲೂ ಗುಂಡಿಗಳಿವೆ ಎಂದರೆ ಹೇಗೆ? ಎಂದು ಪ್ರಶ್ನಿಸಿದರು. ಸಚಿವ ಪ್ರಿಯಾಂಕ್ ಖರ್ಗೆ ವಿರುದ್ಧ ಕೇಳಿ ಬಂದಿರುವ ಆರೋಪದ ಕುರಿತು ಸೂಕ್ತ ತನಿಖೆಯಾಗಲಿ ಎಂದು ಇದೇ ವೇಳೆ ಆಗ್ರಹಿಸಿದ್ದಾರೆ.

TAGGED:Basavaraj Bommaibjpcongresspoliticssiddaramaiahಬಸವರಾಜ ಬೊಮ್ಮಾಯಿ
Share This Article
Facebook Whatsapp Whatsapp Telegram

You Might Also Like

Bengaluru Dog Murder
Bengaluru City

ತಾನೇ ಸಾಕಿದ್ದ ಶ್ವಾನಕ್ಕೆ ಚಿತ್ರಹಿಂಸೆ ಕೊಟ್ಟು ಬರ್ಬರವಾಗಿ ಹತ್ಯೆಗೈದ ಮಹಿಳೆ

Public TV
By Public TV
14 minutes ago
mysuru dasara jamboo savari 11
Bengaluru City

Mysuru Dasara | ಸೆ.22ರಿಂದ 11 ದಿನಗಳ ಕಾಲ ವಿಜೃಂಭಣೆಯ ದಸರಾ

Public TV
By Public TV
21 minutes ago
Tirupati Train
Bengaluru City

ತಿರುಪತಿಗೆ ತೆರಳೋ ಭಕ್ತಾದಿಗಳಿಗೆ ಗುಡ್ ನ್ಯೂಸ್ – ನೂತನ ರೈಲು ಸೇವೆ ಆರಂಭ

Public TV
By Public TV
49 minutes ago
CRIME
Bengaluru City

ಮದ್ವೆ ಆದ್ಮೇಲೆ ಗಂಡನ ಜೊತೆ ಹೇಗಿರಬೇಕು ಅಂತ ಹೇಳ್ಕೊಡ್ತೀನಿ – ತಾಯಿಯಿಂದಲೇ ಮಗಳ ಮೇಲೆ ಲೈಂಗಿಕ ದೌರ್ಜನ್ಯ!

Public TV
By Public TV
50 minutes ago
Yatnal
Latest

ರಮೇಶ್‌ ಜಾರಕಿಹೊಳಿ ಸಿಡಿ ಬಿಡುಗಡೆ ಮಾಡಿದ್ದೇ ವಿಜಯೇಂದ್ರ: ಮತ್ತೆ ಗುಡುಗಿದ ಯತ್ನಾಳ್

Public TV
By Public TV
58 minutes ago
PM Modi 4
Latest

ಪ್ರಧಾನಿ ಮೋದಿಗೆ `ಧರ್ಮ ಚಕ್ರವರ್ತಿ’ ಬಿರುದು ಪ್ರದಾನ

Public TV
By Public TV
1 hour ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?