Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: 44 ಗಂಟೆ ತಡವಾಗಿ ಬಂದ್ರು – ನಾ ಬಂದು ಏನ್ಮಾಡಬೇಕಿತ್ತೆಂದು ಆರೋಗ್ಯ ಸಚಿವರ ಉಡಾಫೆ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | 44 ಗಂಟೆ ತಡವಾಗಿ ಬಂದ್ರು – ನಾ ಬಂದು ಏನ್ಮಾಡಬೇಕಿತ್ತೆಂದು ಆರೋಗ್ಯ ಸಚಿವರ ಉಡಾಫೆ

Districts

44 ಗಂಟೆ ತಡವಾಗಿ ಬಂದ್ರು – ನಾ ಬಂದು ಏನ್ಮಾಡಬೇಕಿತ್ತೆಂದು ಆರೋಗ್ಯ ಸಚಿವರ ಉಡಾಫೆ

Public TV
Last updated: December 16, 2018 12:26 pm
Public TV
Share
3 Min Read
MYS HEALTH MINISTER copy
SHARE

– ಪ್ರಸಾದ ವಿಷ ವಿಚಾರ ಗೊತ್ತಾಗಿದ್ದೇ ನಿನ್ನೆ ಸಂಜೆಯಂತೆ!
– ಆರೋಗ್ಯ ಸಚಿವರಿಗೇ ಮಾಹಿತಿ ಕೊರತೆಯ ಅನಾರೋಗ್ಯ!
– ಸಿಎಂ ಬಂದಿರುವಾಗ ನಾ ಬಂದು ಇನ್ನೇನಾಗಬೇಕಿದೆ?

ಮೈಸೂರು: ಕೇಳ್ರಪ್ಪೋ ಕೇಳಿ…., ಸುಳ್ವಾಡಿ ಗ್ರಾಮದಲ್ಲಿ ಮಾರಮ್ಮ ದೇಗುಲದ ವಿಷ ಪ್ರಸಾದ ಸೇವನೆ ವಿಷಯ ನಮ್ಮ ಘನತೆವತ್ತ ಆರೋಗ್ಯ ಸಚಿವ ಶಿವಾನಂದ ಪಾಟೀಲರಿಗೆ ಗೊತ್ತಾಗಿದ್ದೇ ನಿನ್ನೆ ಸಂಜೆಯಂತೆ. ಶುಕ್ರವಾರ ಮಧ್ಯಾಹ್ನ ನಡೆದ ಘಟನೆ ಆರೋಗ್ಯ ಸಚಿವ ಶಿವಾನಂದ ಪಾಟೀಲರ ಗಮನಕ್ಕೆ ಬಂದಿದ್ದು ನಿನ್ನೆ ಸಂಜೆ 4 ಗಂಟೆಗಂತೆ. ಈ ಮೂಲಕ ಸಚಿವರು ರಾಜ್ಯವೇ ಬೆಚ್ಚಿಬಿದ್ದ ಪ್ರಕರಣ ತಮ್ಮ ಗಮನಕ್ಕೆ ತಡವಾಗಿ ಬಂತು ಎಂದು ಅಜ್ಞಾನದ ಪ್ರದರ್ಶನ ಮಾಡಿದ್ದಾರೆ. ಜೊತೆಗೆ ನಾನು ಬಂದು ಏನು ಮಾಡೋದಿತ್ತು ಎಂಬ ಉಡಾಫೆಯನ್ನೂ ಪ್ರದರ್ಶಿಸಿದ್ದಾರೆ.

MYS 5 1

ಇಂದು ಬೆಳಗ್ಗೆ ಮೈಸೂರಿಗೆ ಬಂದ ಸಚಿವರು ಮಾಧ್ಯಮಗಳ ಜೊತೆ ಮಾತನಾಡುತ್ತಾ, 44 ಗಂಟೆ ತಡವಾಗಿ ಬಂದಿದ್ದಕ್ಕೆ ತಮ್ಮನ್ನು ತಾವೇ ಸಮರ್ಥಿಸಿಕೊಂಡರು. 13 ಜನರ ಸಾವಿನ ಪ್ರಕರಣದ ಬಗ್ಗೆ ಸಚಿವರ ಅಜ್ಞಾನ ಎಷ್ಟಿತ್ತೆಂದರೆ, ನನಗೆ ವಿಷಯ ಗೊತ್ತಾಗಿದ್ದೇ ನಿನ್ನೆ ಸಂಜೆ 4 ಗಂಟೆಗೆ. ನಾನಿರೋದು ವಿಜಯಪುರದಲ್ಲಿ. ಅಲ್ಲಿಂದ ಇಲ್ಲಿಗೆ ಬರೋಕೆ ಟೈಂ ಆಗುತ್ತೆ. ಮುಖ್ಯಮಂತ್ರಿಗಳೇ ಬಂದಿದ್ದಾರೆ ತಾನೇ…? ನಾ ಬಂದು ಇನ್ನೇನು ಆಗಬೇಕಿದೆ. ನನಗಿಂತ ದೊಡ್ಡವರೇ ಬಂದಿದ್ದರಲ್ಲ ಬಿಡಿ ಎಂದು ರಾಜ್ಯಕ್ಕೆ ರಾಜ್ಯವೇ ಮರುಗಿದ ಪ್ರಕರಣಕ್ಕೆ ಉಢಾಫೆ ಉತ್ತರ ನೀಡಿದರು.

vlcsnap 2018 12 16 12h20m06s228

ಮಾರಮ್ಮ ದೇವಿಯ ಪ್ರಸಾದದಲ್ಲಿ ವಿಷ ಸೇರಿತ್ತು ಎಂಬುದನ್ನು ಖಚಿತ ಮಾಡಿಕೊಳ್ಳುವ ವಿಚಾರದಲ್ಲಿ ವಿಳಂಬವಾಯಿತು. ಹೀಗಾಗಿ ಅಸ್ವಸ್ಥರಿಗೆ ಚಿಕಿತ್ಸೆ ನೀಡಲು ಮೈಸೂರಿಗೆ ಸ್ಥಳಾಂತರ ಮಾಡುವಾಗ ತಡವಾಗಿದ್ದು ಸತ್ಯ ಎಂದು ಒಪ್ಪಿಕೊಂಡರು. ಕೆ.ಆರ್. ಆಸ್ಪತ್ರೆಗೆ ಪುಟ್ಟರಂಗಶೆಟ್ಟಿ, ಸಂಸದ ಧೃವನಾರಾಯಣ್ ಜೊತೆ ಭೇಟಿ ನೀಡಿದ ಆರೋಗ್ಯ ಸಚಿವರಾದ ಶಿವಾನಂದ್ ಪಾಟೀಲ್, ಅಪೋಲೋ ಆಸ್ಪತ್ರೆಯಲ್ಲಿ 6 ಮಂದಿ ಪರಿಸ್ಥಿತಿ ಗಂಭೀರವಾಗಿದೆ ಎಂದರು.

MYS 4 1

ಅಜ್ಞಾನ ದರ್ಶನದ ನಡುವೆಯೂ ತಮ್ಮ ಬೆನ್ನನ್ನು ತಾವೇ ತಟ್ಟಿಕೊಂಡ ಸಚಿವರು, ನಾನು ಬಂದ ಮೇಲೆ ಹಲವು ವಿಚಾರಗಳನ್ನು ಸರಿಪಡಿಸಿದ್ದೇನೆ. 400 ಅಂಬ್ಯುಲೆನ್ಸ್ ಖರೀದಿ ಮಾಡಿದ್ದೇವೆ. 360 ವೈದ್ಯರನ್ನ ನೇಮಿಸಿಕೊಂಡಿದ್ದೇವೆ. ಇನ್ನೂ 1000 ಹುದ್ದೆ ಕೊರತೆ ಇದ್ದು, ಅವೆಲ್ಲವನ್ನು ತುಂಬುವ ಪ್ರಯತ್ನ ಮಾಡುವುದಾಗಿ ಭರವಸೆ ನೀಡಿದ್ದಾರೆ.

MYS 1 3

ಇಡೀ ರಾಜ್ಯವೇ ಮಾರಮ್ಮ ದೇವಿಯ ಪ್ರಸಾದಕ್ಕೆ ವಿಷ ಹಾಕಿದ ವರ್ತನೆಗೆ ಆಕ್ರೋಶ ವ್ಯಕ್ತಪಡಿಸಿದ್ದರೂ ಅವರ ಗಮನಕ್ಕೆ ಬಂದಿರಲಿಲ್ಲ ಎನ್ನುವುದು ಎಷ್ಟರ ಮಟ್ಟಿಗೆ ಸರಿ ಎನ್ನುವುದಕ್ಕೆ ಸಚಿವರೇ ಉತ್ತರ ನೀಡಬೇಕು. ಘಟನೆಯ ತೀವ್ರತೆ ಅರಿತು ಸಿದ್ದಗಂಗಾ ಶ್ರೀಗಳ ಆರೋಗ್ಯ ವಿಚಾರಿಸಲು ಚೆನ್ನೈಗೆ ತೆರಳಿದ್ದ ಸಿಎಂ ಎಚ್.ಡಿ.ಕುಮಾರಸ್ವಾಮಿ ಅವರು ನೇರವಾಗಿ ಬೆಂಗಳೂರಿಗೆ ಬಂದಿದ್ದರು. ಬೆಂಗಳೂರಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲೇ ಅಧಿಕಾರಿಗಳ ಸಭೆ ನಡೆಸಿದ್ದ ಸಿಎಂ ಕುಮಾರಸ್ವಾಮಿ ಅವರು ಅಲ್ಲಿಂದಲೇ ನೇರವಾಗಿ ವಿಶೇಷ ವಿಮಾನದ ಮೂಲಕ ಮೈಸೂರಿಗೆ ಧಾವಿಸಿ ಆಸ್ಪತ್ರೆಗಳಲ್ಲಿ ದಾಖಲಾಗಿದ್ದವರ ಆರೋಗ್ಯ ವಿಚಾರಿಸಿದ್ದರು. ಮಾಜಿ ಸಿಎಂ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್, ಧರ್ಮಸೇನ, ಸಚಿವ ಜಿ.ಟಿ.ದೇವೇಗೌಡ, ಸಂಸದ ಧೃವನಾರಾಯಣ, ಪ್ರತಾಪ್ ಸಿಂಹ ಸೇರಿದಂತೆ ಸ್ಥಳೀಯ ಶಾಸಕರೆಲ್ಲಾ ಆಸ್ಪತ್ರೆಗೆ ಆಗಮಿಸಿ ಎಲ್ಲರ ಯೋಗ ಕ್ಷೇಮ ವಿಚಾರಿಸಿದ್ದರು.

MYS 3 2

ಆದರೆ ಸರ್ಕಾರದ ಆರೋಗ್ಯ ಇಲಾಖೆಯನ್ನು ಮುನ್ನಡೆಸಬೇಕಾದ ಶಿವಾನಂದ ಪಾಟೀಲರು ನನಗೂ ಇದಕ್ಕೂ ಸಂಬಂಧವೇ ಇಲ್ಲ ಎನ್ನುವಂತೆ ವರ್ತಿಸಿದ್ದು ಮಾತ್ರ ವಿಪರ್ಯಾಸ. 44 ಗಂಟೆ ತಡವಾಗಿ ಬಂದರೂ ತಾನು ಮಾಡಿದ್ದೇ ಸರಿ ಎಂದ ಸಚಿವ ಶಿವಾನಂದ ಪಾಟೀಲರ ಉಡಾಫೆ ಉತ್ತರಕ್ಕೆ ನಿಮ್ಮ ಅಭಿಪ್ರಾಯವನ್ನು ಕಮೆಂಟ್ ಮಾಡಿ.

ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

TAGGED:chamarajanagarhealth ministerkichguttu marammamysuruPoison foodpubli ctvshivananda patilsuluvadiಆರೋಗ್ಯ ಸಚಿವಕಿಚ್‍ಗುತ್ ಮಾರಮ್ಮಚಾಮರಾಜನಗರಮೈಸೂರುವಿಷ ಪ್ರಸಾದಶಿವಾನಂದ ಪಾಟೀಲ್ಸುಳವಾಡಿ
Share This Article
Facebook Whatsapp Whatsapp Telegram

Cinema news

The trailer of the movie Love Mocktail 3 released Darling Krishna Milana Nagaraj 1
ಬಿಡುಗಡೆಯಾಯ್ತು ಲವ್‌ಮಾಕ್ಟೇಲ್ 3 ಚಿತ್ರದ ಟ್ರೈಲರ್!
Cinema Latest Top Stories
Kamal Haasan Donald Trump
ನಿಮ್ಮ ಕೆಲಸ ಎಷ್ಟಿದೆ ಅದನ್ನಷ್ಟೇ ನೋಡಿಕೊಳ್ಳಿ – ಟ್ರಂಪ್‌ ವಿರುದ್ಧ ಕಮಲ್‌ ಹಾಸನ್‌ ಕಿಡಿ
Cinema Latest National South cinema Top Stories
Jr NTR
ಬೆಂಗ್ಳೂರಲ್ಲಿ ಜ್ಯೂ.ಎನ್‍ಟಿಆರ್ ನೋಡಲು ಮುಗಿಬಿದ್ದ ಫ್ಯಾನ್ಸ್ – ಪೊಲೀಸರಿಂದ ಲಾಠಿಚಾರ್ಜ್‌
Bengaluru City Cinema Latest Top Stories
Dhurandhar 2 Trailer
ದುರಂಧರ್ 2 ಟ್ರೈಲರ್‌ ರಿಲೀಸ್ – ರಿವೆಂಜ್ ಮೋಡ್‌ನಲ್ಲಿ ರಣವೀರ್ ಸಿಂಗ್
Bollywood Cinema Latest Top Stories

You Might Also Like

Davangere South Ticket Fight Siraj Ahmed
Davanagere

ಜಮೀರ್‌ ಬಳಿ ಕ್ಷಮೆ ಕೇಳದೇ ಇದ್ರೆ ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಎಫೆಕ್ಟ್ ಆಗುತ್ತೆ: ಮಲ್ಲಿಕಾರ್ಜುನ್‌ಗೆ ಸಿರಾಜ್ ಅಹ್ಮದ್‌ ವಾರ್ನಿಂಗ್‌

Public TV
By Public TV
2 minutes ago
Shehbaz Sharif
Latest

ಇಂಧನ ಹೊಡೆತಕ್ಕೆ ಪಾಕ್ ತತ್ತರ – ಶಾಲೆಗಳಿಗೆ 2 ವಾರ ರಜೆ, ಸರ್ಕಾರಿ ಕಚೇರಿಗಳಿಗೆ 4 ದಿನ ಕೆಲಸ

Public TV
By Public TV
6 minutes ago
Raichur Couple Death
Districts

ನಿರ್ಮಾಣ ಹಂತದ ಮನೆಯ ಮೆಟ್ಟಿಲು ಕುಸಿದು ದಂಪತಿ ಸಾವು

Public TV
By Public TV
28 minutes ago
lpg sylender
Latest

ಇರಾನ್‌ ಯುದ್ಧ| ಎಲ್‌ಪಿಜಿ ಕನಿಷ್ಠ ಬುಕ್ಕಿಂಗ್‌ ಅವಧಿಯನ್ನು ಹೆಚ್ಚಿಸಿದ ಕೇಂದ್ರ

Public TV
By Public TV
2 hours ago
GBA Maheshwar Rao
Bengaluru City

ಪರಿಷ್ಕೃತ ಕರಡು ಮತದಾರರ ಪಟ್ಟಿ ಬಿಡುಗಡೆ ಮಾಡಿದ ಜಿಬಿಎ

Public TV
By Public TV
2 hours ago
HD Devegowda
Karnataka

ರಾಜ್ಯ ಸರ್ಕಾರದಿಂದಲೇ ಎತ್ತಿನಹೊಳೆಗೆ ಆಮೆಗತಿ, ಮೇಕೆದಾಟು ವಿಳಂಬವಾಗುತ್ತಿದೆ: ಕಾಂಗ್ರೆಸ್‌ ವಿರುದ್ಧ ಹೆಚ್‌ಡಿಡಿ ಕಿಡಿ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?