Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Districts

44 ಗಂಟೆ ತಡವಾಗಿ ಬಂದ್ರು – ನಾ ಬಂದು ಏನ್ಮಾಡಬೇಕಿತ್ತೆಂದು ಆರೋಗ್ಯ ಸಚಿವರ ಉಡಾಫೆ

Public TV
Last updated: December 16, 2018 12:26 pm
Public TV
Share
3 Min Read
MYS HEALTH MINISTER copy
SHARE

– ಪ್ರಸಾದ ವಿಷ ವಿಚಾರ ಗೊತ್ತಾಗಿದ್ದೇ ನಿನ್ನೆ ಸಂಜೆಯಂತೆ!
– ಆರೋಗ್ಯ ಸಚಿವರಿಗೇ ಮಾಹಿತಿ ಕೊರತೆಯ ಅನಾರೋಗ್ಯ!
– ಸಿಎಂ ಬಂದಿರುವಾಗ ನಾ ಬಂದು ಇನ್ನೇನಾಗಬೇಕಿದೆ?

ಮೈಸೂರು: ಕೇಳ್ರಪ್ಪೋ ಕೇಳಿ…., ಸುಳ್ವಾಡಿ ಗ್ರಾಮದಲ್ಲಿ ಮಾರಮ್ಮ ದೇಗುಲದ ವಿಷ ಪ್ರಸಾದ ಸೇವನೆ ವಿಷಯ ನಮ್ಮ ಘನತೆವತ್ತ ಆರೋಗ್ಯ ಸಚಿವ ಶಿವಾನಂದ ಪಾಟೀಲರಿಗೆ ಗೊತ್ತಾಗಿದ್ದೇ ನಿನ್ನೆ ಸಂಜೆಯಂತೆ. ಶುಕ್ರವಾರ ಮಧ್ಯಾಹ್ನ ನಡೆದ ಘಟನೆ ಆರೋಗ್ಯ ಸಚಿವ ಶಿವಾನಂದ ಪಾಟೀಲರ ಗಮನಕ್ಕೆ ಬಂದಿದ್ದು ನಿನ್ನೆ ಸಂಜೆ 4 ಗಂಟೆಗಂತೆ. ಈ ಮೂಲಕ ಸಚಿವರು ರಾಜ್ಯವೇ ಬೆಚ್ಚಿಬಿದ್ದ ಪ್ರಕರಣ ತಮ್ಮ ಗಮನಕ್ಕೆ ತಡವಾಗಿ ಬಂತು ಎಂದು ಅಜ್ಞಾನದ ಪ್ರದರ್ಶನ ಮಾಡಿದ್ದಾರೆ. ಜೊತೆಗೆ ನಾನು ಬಂದು ಏನು ಮಾಡೋದಿತ್ತು ಎಂಬ ಉಡಾಫೆಯನ್ನೂ ಪ್ರದರ್ಶಿಸಿದ್ದಾರೆ.

MYS 5 1

ಇಂದು ಬೆಳಗ್ಗೆ ಮೈಸೂರಿಗೆ ಬಂದ ಸಚಿವರು ಮಾಧ್ಯಮಗಳ ಜೊತೆ ಮಾತನಾಡುತ್ತಾ, 44 ಗಂಟೆ ತಡವಾಗಿ ಬಂದಿದ್ದಕ್ಕೆ ತಮ್ಮನ್ನು ತಾವೇ ಸಮರ್ಥಿಸಿಕೊಂಡರು. 13 ಜನರ ಸಾವಿನ ಪ್ರಕರಣದ ಬಗ್ಗೆ ಸಚಿವರ ಅಜ್ಞಾನ ಎಷ್ಟಿತ್ತೆಂದರೆ, ನನಗೆ ವಿಷಯ ಗೊತ್ತಾಗಿದ್ದೇ ನಿನ್ನೆ ಸಂಜೆ 4 ಗಂಟೆಗೆ. ನಾನಿರೋದು ವಿಜಯಪುರದಲ್ಲಿ. ಅಲ್ಲಿಂದ ಇಲ್ಲಿಗೆ ಬರೋಕೆ ಟೈಂ ಆಗುತ್ತೆ. ಮುಖ್ಯಮಂತ್ರಿಗಳೇ ಬಂದಿದ್ದಾರೆ ತಾನೇ…? ನಾ ಬಂದು ಇನ್ನೇನು ಆಗಬೇಕಿದೆ. ನನಗಿಂತ ದೊಡ್ಡವರೇ ಬಂದಿದ್ದರಲ್ಲ ಬಿಡಿ ಎಂದು ರಾಜ್ಯಕ್ಕೆ ರಾಜ್ಯವೇ ಮರುಗಿದ ಪ್ರಕರಣಕ್ಕೆ ಉಢಾಫೆ ಉತ್ತರ ನೀಡಿದರು.

vlcsnap 2018 12 16 12h20m06s228

ಮಾರಮ್ಮ ದೇವಿಯ ಪ್ರಸಾದದಲ್ಲಿ ವಿಷ ಸೇರಿತ್ತು ಎಂಬುದನ್ನು ಖಚಿತ ಮಾಡಿಕೊಳ್ಳುವ ವಿಚಾರದಲ್ಲಿ ವಿಳಂಬವಾಯಿತು. ಹೀಗಾಗಿ ಅಸ್ವಸ್ಥರಿಗೆ ಚಿಕಿತ್ಸೆ ನೀಡಲು ಮೈಸೂರಿಗೆ ಸ್ಥಳಾಂತರ ಮಾಡುವಾಗ ತಡವಾಗಿದ್ದು ಸತ್ಯ ಎಂದು ಒಪ್ಪಿಕೊಂಡರು. ಕೆ.ಆರ್. ಆಸ್ಪತ್ರೆಗೆ ಪುಟ್ಟರಂಗಶೆಟ್ಟಿ, ಸಂಸದ ಧೃವನಾರಾಯಣ್ ಜೊತೆ ಭೇಟಿ ನೀಡಿದ ಆರೋಗ್ಯ ಸಚಿವರಾದ ಶಿವಾನಂದ್ ಪಾಟೀಲ್, ಅಪೋಲೋ ಆಸ್ಪತ್ರೆಯಲ್ಲಿ 6 ಮಂದಿ ಪರಿಸ್ಥಿತಿ ಗಂಭೀರವಾಗಿದೆ ಎಂದರು.

MYS 4 1

ಅಜ್ಞಾನ ದರ್ಶನದ ನಡುವೆಯೂ ತಮ್ಮ ಬೆನ್ನನ್ನು ತಾವೇ ತಟ್ಟಿಕೊಂಡ ಸಚಿವರು, ನಾನು ಬಂದ ಮೇಲೆ ಹಲವು ವಿಚಾರಗಳನ್ನು ಸರಿಪಡಿಸಿದ್ದೇನೆ. 400 ಅಂಬ್ಯುಲೆನ್ಸ್ ಖರೀದಿ ಮಾಡಿದ್ದೇವೆ. 360 ವೈದ್ಯರನ್ನ ನೇಮಿಸಿಕೊಂಡಿದ್ದೇವೆ. ಇನ್ನೂ 1000 ಹುದ್ದೆ ಕೊರತೆ ಇದ್ದು, ಅವೆಲ್ಲವನ್ನು ತುಂಬುವ ಪ್ರಯತ್ನ ಮಾಡುವುದಾಗಿ ಭರವಸೆ ನೀಡಿದ್ದಾರೆ.

MYS 1 3

ಇಡೀ ರಾಜ್ಯವೇ ಮಾರಮ್ಮ ದೇವಿಯ ಪ್ರಸಾದಕ್ಕೆ ವಿಷ ಹಾಕಿದ ವರ್ತನೆಗೆ ಆಕ್ರೋಶ ವ್ಯಕ್ತಪಡಿಸಿದ್ದರೂ ಅವರ ಗಮನಕ್ಕೆ ಬಂದಿರಲಿಲ್ಲ ಎನ್ನುವುದು ಎಷ್ಟರ ಮಟ್ಟಿಗೆ ಸರಿ ಎನ್ನುವುದಕ್ಕೆ ಸಚಿವರೇ ಉತ್ತರ ನೀಡಬೇಕು. ಘಟನೆಯ ತೀವ್ರತೆ ಅರಿತು ಸಿದ್ದಗಂಗಾ ಶ್ರೀಗಳ ಆರೋಗ್ಯ ವಿಚಾರಿಸಲು ಚೆನ್ನೈಗೆ ತೆರಳಿದ್ದ ಸಿಎಂ ಎಚ್.ಡಿ.ಕುಮಾರಸ್ವಾಮಿ ಅವರು ನೇರವಾಗಿ ಬೆಂಗಳೂರಿಗೆ ಬಂದಿದ್ದರು. ಬೆಂಗಳೂರಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲೇ ಅಧಿಕಾರಿಗಳ ಸಭೆ ನಡೆಸಿದ್ದ ಸಿಎಂ ಕುಮಾರಸ್ವಾಮಿ ಅವರು ಅಲ್ಲಿಂದಲೇ ನೇರವಾಗಿ ವಿಶೇಷ ವಿಮಾನದ ಮೂಲಕ ಮೈಸೂರಿಗೆ ಧಾವಿಸಿ ಆಸ್ಪತ್ರೆಗಳಲ್ಲಿ ದಾಖಲಾಗಿದ್ದವರ ಆರೋಗ್ಯ ವಿಚಾರಿಸಿದ್ದರು. ಮಾಜಿ ಸಿಎಂ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್, ಧರ್ಮಸೇನ, ಸಚಿವ ಜಿ.ಟಿ.ದೇವೇಗೌಡ, ಸಂಸದ ಧೃವನಾರಾಯಣ, ಪ್ರತಾಪ್ ಸಿಂಹ ಸೇರಿದಂತೆ ಸ್ಥಳೀಯ ಶಾಸಕರೆಲ್ಲಾ ಆಸ್ಪತ್ರೆಗೆ ಆಗಮಿಸಿ ಎಲ್ಲರ ಯೋಗ ಕ್ಷೇಮ ವಿಚಾರಿಸಿದ್ದರು.

MYS 3 2

ಆದರೆ ಸರ್ಕಾರದ ಆರೋಗ್ಯ ಇಲಾಖೆಯನ್ನು ಮುನ್ನಡೆಸಬೇಕಾದ ಶಿವಾನಂದ ಪಾಟೀಲರು ನನಗೂ ಇದಕ್ಕೂ ಸಂಬಂಧವೇ ಇಲ್ಲ ಎನ್ನುವಂತೆ ವರ್ತಿಸಿದ್ದು ಮಾತ್ರ ವಿಪರ್ಯಾಸ. 44 ಗಂಟೆ ತಡವಾಗಿ ಬಂದರೂ ತಾನು ಮಾಡಿದ್ದೇ ಸರಿ ಎಂದ ಸಚಿವ ಶಿವಾನಂದ ಪಾಟೀಲರ ಉಡಾಫೆ ಉತ್ತರಕ್ಕೆ ನಿಮ್ಮ ಅಭಿಪ್ರಾಯವನ್ನು ಕಮೆಂಟ್ ಮಾಡಿ.

ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

TAGGED:chamarajanagarhealth ministerkichguttu marammamysuruPoison foodpubli ctvshivananda patilsuluvadiಆರೋಗ್ಯ ಸಚಿವಕಿಚ್‍ಗುತ್ ಮಾರಮ್ಮಚಾಮರಾಜನಗರಮೈಸೂರುವಿಷ ಪ್ರಸಾದಶಿವಾನಂದ ಪಾಟೀಲ್ಸುಳವಾಡಿ
Share This Article
Facebook Whatsapp Whatsapp Telegram

Cinema Updates

shivarajkumar
ಕಮಲ್ ಹಾಸನ್ ಹೇಳಿಕೆಯನ್ನು ಸಮರ್ಥನೆ ಮಾಡಿಕೊಳ್ಳಲ್ಲ: ಕೊನೆಗೂ ಮೌನ ಮುರಿದ ಶಿವಣ್ಣ
12 minutes ago
smriti Irani e1500383222701
ಮತ್ತೆ ಬಣ್ಣ ಹಚ್ಚಿದ ಸ್ಮೃತಿ ಇರಾನಿ – 12 ವರ್ಷಗಳ ನಂತರ ಸೀರಿಯಲ್‌ಗೆ ರೀ ಎಂಟ್ರಿ
1 hour ago
darshan 1
‘ಅಂಬಿ’ ಕನ್ವರ್ ಲಾಲ್ ಲುಕ್‌ನಲ್ಲಿ ಬಂದ ದರ್ಶನ್- ‘ದ ಡೆವಿಲ್’ ಪೋಸ್ಟರ್ ಔಟ್
1 hour ago
disha patani 3
ಹಾಲಿವುಡ್‌ನತ್ತ ಹೊರಟ ಬಾಲಿವುಡ್ ಬೋಲ್ಡ್ ಬ್ಯೂಟಿ ದಿಶಾ ಪಟಾನಿ!
3 hours ago

You Might Also Like

tumakuru outrage erupts against hemavati express link canal project work temporarily halted 1
Districts

ಹೇಮಾವತಿ ನೀರಿಗೆ 2 ಜಿಲ್ಲೆಗಳ ಕಿತ್ತಾಟ; ಡಿಕೆಶಿ ಒತ್ತಡಕ್ಕೆ ತುಮಕೂರು `ಕೈ’ ನಾಯಕರು ಮೌನ ಸಮ್ಮತಿ ಆರೋಪ

Public TV
By Public TV
35 minutes ago
Rajastan Bomb Threat
Crime

ರಾಜಸ್ಥಾನದ ಮೂವರು ಸಚಿವರಿದ್ದ ಹೋಟೆಲ್‌ಗೆ ಬಾಂಬ್ ಬೆದರಿಕೆ ಸಂದೇಶ

Public TV
By Public TV
1 hour ago
chandra layout
Bengaluru City

ಬೆಂಗಳೂರು| ಬ್ಯಾಂಕ್ ಸಾಲ ಇದ್ದ ಕಟ್ಟಡವನ್ನ ಲೀಸ್‌ಗೆ ಪಡೆದು ಸಂಕಷ್ಟಕ್ಕೆ ಸಿಲುಕಿದ 17 ಕುಟುಂಬಗಳು

Public TV
By Public TV
2 hours ago
Mangaluru Landslide ASHWINI
Dakshina Kannada

Mangaluru Landslide | ಮಕ್ಕಳ ಅಗಲಿಕೆ ಮಧ್ಯೆ ಎರಡೂ ಕಾಲು ಕಳೆದುಕೊಂಡ ಅಶ್ವಿನಿ

Public TV
By Public TV
2 hours ago
madhu bangarappa 1
Belgaum

ಸರ್ಕಾರಿ ನೌಕರರಿಗೆ ಪ್ರತಿಭಟನೆ ಮಾಡುವ ಅವಕಾಶ ಇಲ್ಲ: ಮಧು ಬಂಗಾರಪ್ಪ

Public TV
By Public TV
3 hours ago
CRIME
Crime

ಅತ್ತಿಗೆಯ ಶಿರಚ್ಛೇದನ, ರುಂಡ ಹಿಡಿದು ಊರೆಲ್ಲಾ ಸುತ್ತಾಡಿ ಪೊಲೀಸರಿಗೆ ಶರಣಾದ ದುಷ್ಕರ್ಮಿ

Public TV
By Public TV
3 hours ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?