Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: 44 ಗಂಟೆ ತಡವಾಗಿ ಬಂದ್ರು – ನಾ ಬಂದು ಏನ್ಮಾಡಬೇಕಿತ್ತೆಂದು ಆರೋಗ್ಯ ಸಚಿವರ ಉಡಾಫೆ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | 44 ಗಂಟೆ ತಡವಾಗಿ ಬಂದ್ರು – ನಾ ಬಂದು ಏನ್ಮಾಡಬೇಕಿತ್ತೆಂದು ಆರೋಗ್ಯ ಸಚಿವರ ಉಡಾಫೆ

Districts

44 ಗಂಟೆ ತಡವಾಗಿ ಬಂದ್ರು – ನಾ ಬಂದು ಏನ್ಮಾಡಬೇಕಿತ್ತೆಂದು ಆರೋಗ್ಯ ಸಚಿವರ ಉಡಾಫೆ

Public TV
Last updated: December 16, 2018 12:26 pm
Public TV
Share
3 Min Read
MYS HEALTH MINISTER copy
SHARE

– ಪ್ರಸಾದ ವಿಷ ವಿಚಾರ ಗೊತ್ತಾಗಿದ್ದೇ ನಿನ್ನೆ ಸಂಜೆಯಂತೆ!
– ಆರೋಗ್ಯ ಸಚಿವರಿಗೇ ಮಾಹಿತಿ ಕೊರತೆಯ ಅನಾರೋಗ್ಯ!
– ಸಿಎಂ ಬಂದಿರುವಾಗ ನಾ ಬಂದು ಇನ್ನೇನಾಗಬೇಕಿದೆ?

ಮೈಸೂರು: ಕೇಳ್ರಪ್ಪೋ ಕೇಳಿ…., ಸುಳ್ವಾಡಿ ಗ್ರಾಮದಲ್ಲಿ ಮಾರಮ್ಮ ದೇಗುಲದ ವಿಷ ಪ್ರಸಾದ ಸೇವನೆ ವಿಷಯ ನಮ್ಮ ಘನತೆವತ್ತ ಆರೋಗ್ಯ ಸಚಿವ ಶಿವಾನಂದ ಪಾಟೀಲರಿಗೆ ಗೊತ್ತಾಗಿದ್ದೇ ನಿನ್ನೆ ಸಂಜೆಯಂತೆ. ಶುಕ್ರವಾರ ಮಧ್ಯಾಹ್ನ ನಡೆದ ಘಟನೆ ಆರೋಗ್ಯ ಸಚಿವ ಶಿವಾನಂದ ಪಾಟೀಲರ ಗಮನಕ್ಕೆ ಬಂದಿದ್ದು ನಿನ್ನೆ ಸಂಜೆ 4 ಗಂಟೆಗಂತೆ. ಈ ಮೂಲಕ ಸಚಿವರು ರಾಜ್ಯವೇ ಬೆಚ್ಚಿಬಿದ್ದ ಪ್ರಕರಣ ತಮ್ಮ ಗಮನಕ್ಕೆ ತಡವಾಗಿ ಬಂತು ಎಂದು ಅಜ್ಞಾನದ ಪ್ರದರ್ಶನ ಮಾಡಿದ್ದಾರೆ. ಜೊತೆಗೆ ನಾನು ಬಂದು ಏನು ಮಾಡೋದಿತ್ತು ಎಂಬ ಉಡಾಫೆಯನ್ನೂ ಪ್ರದರ್ಶಿಸಿದ್ದಾರೆ.

MYS 5 1

ಇಂದು ಬೆಳಗ್ಗೆ ಮೈಸೂರಿಗೆ ಬಂದ ಸಚಿವರು ಮಾಧ್ಯಮಗಳ ಜೊತೆ ಮಾತನಾಡುತ್ತಾ, 44 ಗಂಟೆ ತಡವಾಗಿ ಬಂದಿದ್ದಕ್ಕೆ ತಮ್ಮನ್ನು ತಾವೇ ಸಮರ್ಥಿಸಿಕೊಂಡರು. 13 ಜನರ ಸಾವಿನ ಪ್ರಕರಣದ ಬಗ್ಗೆ ಸಚಿವರ ಅಜ್ಞಾನ ಎಷ್ಟಿತ್ತೆಂದರೆ, ನನಗೆ ವಿಷಯ ಗೊತ್ತಾಗಿದ್ದೇ ನಿನ್ನೆ ಸಂಜೆ 4 ಗಂಟೆಗೆ. ನಾನಿರೋದು ವಿಜಯಪುರದಲ್ಲಿ. ಅಲ್ಲಿಂದ ಇಲ್ಲಿಗೆ ಬರೋಕೆ ಟೈಂ ಆಗುತ್ತೆ. ಮುಖ್ಯಮಂತ್ರಿಗಳೇ ಬಂದಿದ್ದಾರೆ ತಾನೇ…? ನಾ ಬಂದು ಇನ್ನೇನು ಆಗಬೇಕಿದೆ. ನನಗಿಂತ ದೊಡ್ಡವರೇ ಬಂದಿದ್ದರಲ್ಲ ಬಿಡಿ ಎಂದು ರಾಜ್ಯಕ್ಕೆ ರಾಜ್ಯವೇ ಮರುಗಿದ ಪ್ರಕರಣಕ್ಕೆ ಉಢಾಫೆ ಉತ್ತರ ನೀಡಿದರು.

vlcsnap 2018 12 16 12h20m06s228

ಮಾರಮ್ಮ ದೇವಿಯ ಪ್ರಸಾದದಲ್ಲಿ ವಿಷ ಸೇರಿತ್ತು ಎಂಬುದನ್ನು ಖಚಿತ ಮಾಡಿಕೊಳ್ಳುವ ವಿಚಾರದಲ್ಲಿ ವಿಳಂಬವಾಯಿತು. ಹೀಗಾಗಿ ಅಸ್ವಸ್ಥರಿಗೆ ಚಿಕಿತ್ಸೆ ನೀಡಲು ಮೈಸೂರಿಗೆ ಸ್ಥಳಾಂತರ ಮಾಡುವಾಗ ತಡವಾಗಿದ್ದು ಸತ್ಯ ಎಂದು ಒಪ್ಪಿಕೊಂಡರು. ಕೆ.ಆರ್. ಆಸ್ಪತ್ರೆಗೆ ಪುಟ್ಟರಂಗಶೆಟ್ಟಿ, ಸಂಸದ ಧೃವನಾರಾಯಣ್ ಜೊತೆ ಭೇಟಿ ನೀಡಿದ ಆರೋಗ್ಯ ಸಚಿವರಾದ ಶಿವಾನಂದ್ ಪಾಟೀಲ್, ಅಪೋಲೋ ಆಸ್ಪತ್ರೆಯಲ್ಲಿ 6 ಮಂದಿ ಪರಿಸ್ಥಿತಿ ಗಂಭೀರವಾಗಿದೆ ಎಂದರು.

MYS 4 1

ಅಜ್ಞಾನ ದರ್ಶನದ ನಡುವೆಯೂ ತಮ್ಮ ಬೆನ್ನನ್ನು ತಾವೇ ತಟ್ಟಿಕೊಂಡ ಸಚಿವರು, ನಾನು ಬಂದ ಮೇಲೆ ಹಲವು ವಿಚಾರಗಳನ್ನು ಸರಿಪಡಿಸಿದ್ದೇನೆ. 400 ಅಂಬ್ಯುಲೆನ್ಸ್ ಖರೀದಿ ಮಾಡಿದ್ದೇವೆ. 360 ವೈದ್ಯರನ್ನ ನೇಮಿಸಿಕೊಂಡಿದ್ದೇವೆ. ಇನ್ನೂ 1000 ಹುದ್ದೆ ಕೊರತೆ ಇದ್ದು, ಅವೆಲ್ಲವನ್ನು ತುಂಬುವ ಪ್ರಯತ್ನ ಮಾಡುವುದಾಗಿ ಭರವಸೆ ನೀಡಿದ್ದಾರೆ.

MYS 1 3

ಇಡೀ ರಾಜ್ಯವೇ ಮಾರಮ್ಮ ದೇವಿಯ ಪ್ರಸಾದಕ್ಕೆ ವಿಷ ಹಾಕಿದ ವರ್ತನೆಗೆ ಆಕ್ರೋಶ ವ್ಯಕ್ತಪಡಿಸಿದ್ದರೂ ಅವರ ಗಮನಕ್ಕೆ ಬಂದಿರಲಿಲ್ಲ ಎನ್ನುವುದು ಎಷ್ಟರ ಮಟ್ಟಿಗೆ ಸರಿ ಎನ್ನುವುದಕ್ಕೆ ಸಚಿವರೇ ಉತ್ತರ ನೀಡಬೇಕು. ಘಟನೆಯ ತೀವ್ರತೆ ಅರಿತು ಸಿದ್ದಗಂಗಾ ಶ್ರೀಗಳ ಆರೋಗ್ಯ ವಿಚಾರಿಸಲು ಚೆನ್ನೈಗೆ ತೆರಳಿದ್ದ ಸಿಎಂ ಎಚ್.ಡಿ.ಕುಮಾರಸ್ವಾಮಿ ಅವರು ನೇರವಾಗಿ ಬೆಂಗಳೂರಿಗೆ ಬಂದಿದ್ದರು. ಬೆಂಗಳೂರಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲೇ ಅಧಿಕಾರಿಗಳ ಸಭೆ ನಡೆಸಿದ್ದ ಸಿಎಂ ಕುಮಾರಸ್ವಾಮಿ ಅವರು ಅಲ್ಲಿಂದಲೇ ನೇರವಾಗಿ ವಿಶೇಷ ವಿಮಾನದ ಮೂಲಕ ಮೈಸೂರಿಗೆ ಧಾವಿಸಿ ಆಸ್ಪತ್ರೆಗಳಲ್ಲಿ ದಾಖಲಾಗಿದ್ದವರ ಆರೋಗ್ಯ ವಿಚಾರಿಸಿದ್ದರು. ಮಾಜಿ ಸಿಎಂ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್, ಧರ್ಮಸೇನ, ಸಚಿವ ಜಿ.ಟಿ.ದೇವೇಗೌಡ, ಸಂಸದ ಧೃವನಾರಾಯಣ, ಪ್ರತಾಪ್ ಸಿಂಹ ಸೇರಿದಂತೆ ಸ್ಥಳೀಯ ಶಾಸಕರೆಲ್ಲಾ ಆಸ್ಪತ್ರೆಗೆ ಆಗಮಿಸಿ ಎಲ್ಲರ ಯೋಗ ಕ್ಷೇಮ ವಿಚಾರಿಸಿದ್ದರು.

MYS 3 2

ಆದರೆ ಸರ್ಕಾರದ ಆರೋಗ್ಯ ಇಲಾಖೆಯನ್ನು ಮುನ್ನಡೆಸಬೇಕಾದ ಶಿವಾನಂದ ಪಾಟೀಲರು ನನಗೂ ಇದಕ್ಕೂ ಸಂಬಂಧವೇ ಇಲ್ಲ ಎನ್ನುವಂತೆ ವರ್ತಿಸಿದ್ದು ಮಾತ್ರ ವಿಪರ್ಯಾಸ. 44 ಗಂಟೆ ತಡವಾಗಿ ಬಂದರೂ ತಾನು ಮಾಡಿದ್ದೇ ಸರಿ ಎಂದ ಸಚಿವ ಶಿವಾನಂದ ಪಾಟೀಲರ ಉಡಾಫೆ ಉತ್ತರಕ್ಕೆ ನಿಮ್ಮ ಅಭಿಪ್ರಾಯವನ್ನು ಕಮೆಂಟ್ ಮಾಡಿ.

ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

TAGGED:chamarajanagarhealth ministerkichguttu marammamysuruPoison foodpubli ctvshivananda patilsuluvadiಆರೋಗ್ಯ ಸಚಿವಕಿಚ್‍ಗುತ್ ಮಾರಮ್ಮಚಾಮರಾಜನಗರಮೈಸೂರುವಿಷ ಪ್ರಸಾದಶಿವಾನಂದ ಪಾಟೀಲ್ಸುಳವಾಡಿ
Share This Article
Facebook Whatsapp Whatsapp Telegram

Cinema news

Sanjay Dutt
ಸರ್ಸೆ ಸೆರಗ ಸರ್ಸೆ ಹಾಡಿನ ವಿವಾದ – ಕ್ಷಮೆಯಾಚಿಸಿದ ಸಂಜಯ್ ದತ್, ಬುಡಕಟ್ಟು ಜನಾಂಗದ 50 ಹುಡುಗಿಯರ ಶಿಕ್ಷಣಕ್ಕೆ ಹಣದ ಭರವಸೆ
Bollywood Cinema Latest National Sandalwood Top Stories
ChetanKumar Ahimsa
ರಾಜ್‌ಕುಮಾರ್‌ ಸಮಾಧಿ ಬಗ್ಗೆ ವಿವಾದಾತ್ಮಕ ಪೋಸ್ಟ್‌ – ಅಭಿಮಾನಿಗಳು ಮುತ್ತಿಗೆ ಹಾಕುತ್ತಿದ್ದಂತೆ ಕ್ಷಮೆಯಾಚಿಸಿದ ಚೇತನ್‌
Cinema Karnataka Latest Top Stories
chetan 13 5
ರಾಜ್‌ಕುಮಾರ್‌ ಸಮಾಧಿಗೆ 2.5 ಎಕರೆ ಜಾಗ ನೀಡಿದ್ದು ಸರಿಯೇ? – ನಟ‌ ಚೇತನ್ ವಿರುದ್ಧ ಡಾಕ್ಟರ್ ರಾಜ್‌ ಅಭಿಮಾನಿಗಳಿಂದ ದೂರು
Bengaluru City Cinema Latest Sandalwood Top Stories
Akshay Kumar 1
ನಟ ಅಕ್ಷಯ್ ಕುಮಾರ್ ಅಪ್ರಾಪ್ತ ಪುತ್ರಿಯ ಬೆತ್ತಲೆ ಫೋಟೋಗೆ ಬೇಡಿಕೆಯಿಟ್ಟಿದ್ದ ವ್ಯಕ್ತಿ ಅರೆಸ್ಟ್
Bollywood Cinema Crime Latest Top Stories

You Might Also Like

Mumbai Man Stabs 2 Security Guards After Asking Them To Recite The Kalma
Crime

ಮುಂಬೈನಲ್ಲಿ ‘ಪಹಲ್ಗಾಮ್’ ಮಾದರಿಯ ದಾಳಿ – ಕಲ್ಮಾ ಪಠಿಸದ ಇಬ್ಬರು ಹಿಂದೂಗಳಿಗೆ ಚಾಕು ಇರಿದ ದುಷ್ಕರ್ಮಿ

Public TV
By Public TV
2 minutes ago
watermelon 1
Food

ಊಟ ಮಾಡಿದ ತಕ್ಷಣ ಕಲ್ಲಂಗಡಿ ತಿನ್ನಬಾರದು ಯಾಕೆ?

Public TV
By Public TV
22 minutes ago
Mangaluru Blast Case The Shariq cooker bomb capable of blowing up the bus FSL Investigation report 1
Court

ಮಧ್ಯ ವಯಸ್ಸಲ್ಲಿ ಶಾರಿಕ್‌ ಹೊರಗೆ ಬಂದ್ರೆ ಅಪಾಯ – ಶಿಕ್ಷೆ ಪ್ರಮಾಣ ಪ್ರಶ್ನಿಸಿ ಹೈಕೋರ್ಟ್‌ ಮೆಟ್ಟಿಲೇರಲು NIA ಸಿದ್ಧತೆ

Public TV
By Public TV
33 minutes ago
Prostitution
Bengaluru City

ರಸ್ತೆಯಲ್ಲಿ ನಿಂತು ವೇಶ್ಯವಾಟಿಕೆಗೆ ಪ್ರಚೋದನೆ – ಬೆಂಗ್ಳೂರಲ್ಲಿ 6 ವಿದೇಶಿ ಮಹಿಳೆಯರು ವಶಕ್ಕೆ

Public TV
By Public TV
1 hour ago
KN Rajanna
Bengaluru City

ಪದತ್ಯಾಗಕ್ಕೂ ಸಿದ್ಧರಿದ್ದಾರೆ ಸಿದ್ದರಾಮಯ್ಯ – ಮುಂದೆ ದಲಿತರು ಸಿಎಂ ಆಗ್ಬೇಕು: ರಾಜಣ್ಣ ಸ್ಫೋಟಕ ಹೇಳಿಕೆ

Public TV
By Public TV
2 hours ago
Vachanananda Swamiji Managuli Sangabasava Swamiji
Davanagere

ನಾನು ಪಂಚಮಸಾಲಿ ಪೀಠಕ್ಕೆ ಬರೋದು ಭಕ್ತರಿಗೆ ಬಿಟ್ಟ ವಿಚಾರ: ಮನಗುಳಿ ಸಂಗನಬಸವ ಶ್ರೀ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?