Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ನೋವಿಲ್ಲದ ಸಾವಿಗೆ ರಹದಾರಿ – ಯುಕೆನಲ್ಲಿ ಹೊಸ ಮಸೂದೆ ಮಂಡನೆ!
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Latest | ನೋವಿಲ್ಲದ ಸಾವಿಗೆ ರಹದಾರಿ – ಯುಕೆನಲ್ಲಿ ಹೊಸ ಮಸೂದೆ ಮಂಡನೆ!

Latest

ನೋವಿಲ್ಲದ ಸಾವಿಗೆ ರಹದಾರಿ – ಯುಕೆನಲ್ಲಿ ಹೊಸ ಮಸೂದೆ ಮಂಡನೆ!

Public TV
Last updated: December 10, 2024 1:21 am
Public TV
Share
4 Min Read
Assisted Dying Bill
SHARE

ಅತ್ತ ಬದುಕಲೂ ಆಗದೆ, ಇತ್ತ ಸಾಯುವ ಹಾದಿಯೂ ಸಿಗದೆ ಪರಿತಪಿಸುವ ಜೀವಗಳು ಕೊನೆಗೆ ‘ದಯಾಮರಣ’ (Euthanasia) ಎಂಬ ಕನ್ನಡಿಯೊಳಗಿನ ಗಂಟನ್ನು ಹುಡುಕುತ್ತಾ ಹೊರಡುತ್ತವೆ. ‘ಸಾವಿನ ಭಿಕ್ಷೆ’ ಬೇಡುತ್ತಾ ಹೊರಟವರಿಗೆ ಗೌರವಯುತ ಸಾವು ಸಿಗುವುದು ಭಾರತ ಸಹಿತ ಹಲವು ದೇಶಗಳ ಕಾನೂನಿನಲ್ಲಿ (Law) ಸಾಧ್ಯವೇ ಇಲ್ಲ. ಆದಾಗ್ಯೂ ಕೆಲ ದೇಶಗಳಲ್ಲಿ ದಯಾಮರಣವನ್ನು ಕಾನೂನುಬದ್ಧಗೊಳಿಸಲಾಗಿದೆ. ವೈದ್ಯರ ನೆರವಿನೊಂದಿಗೆ ನೋವಿಲ್ಲದ ಸಾವು ಹೊಂದುವವರಿಗೆ ಇದು ರಹದಾರಿಯಾಗಿದೆ.

Contents
  • ʻದಯಾಮರಣʼ ಎಂದರೇನು?
  • ಮಸೂದೆ ಏನು ಹೇಳುತ್ತದೆ?
  • ಪ್ರಕ್ರಿಯೆ ಹೇಗೆ ನಡೆಯುತ್ತೆ?
  • ವಿರೋಧ ಏಕೆ?
  • ಭಾರತದಲ್ಲಿ ಮೊದಲ ದಯಾಮರಣ ಯಾವಾಗ?

ಹೌದು. ಇತ್ತೀಚೆಗೆ ಯುಕೆನಲ್ಲಿ ದಯಾಮರಣಕ್ಕಾಗಿ ಹೊಸ ಕಾನೂನು ಪರಿಚಯಿಸಲು ಅಲ್ಲಿನ ಸರ್ಕಾರ (England Government) ಮುಂದಾಗಿದೆ. ಇತ್ತೀಚೆಗಷ್ಟೇ ಸಂಸತ್‌ನಲ್ಲಿ ಹೊಸ ಮಸೂದೆ ಮಂಡನೆ ಮಾಡಿದ್ದು, ಅದನ್ನ ಆತ್ಮಸಾಕ್ಷಿ ಮತಗಳ ಮೂಲಕ ಅಂಗೀಕರಿಸಲಾಯಿತು. ಬಳಿಕ ಅದರಲ್ಲಿನ ಅಂಶಗಳನ್ನ ಪರಿಶೀಲಿಸಲು ಸಾರ್ವಜನಿಕ ಮಸೂದೆ ಸಮಿತಿಗೆ ಕಳುಹಿಸಲಾಗಿದೆ. ಮತ್ತೊಮ್ಮೆ ಹೌಸ್‌ ಆಫ್‌ ಕಾಮನ್ಸ್‌ನಲ್ಲಿ ಮಸೂದೆಗೆ ತಿದ್ದುಪಡಿ ತರುವ ಕುರಿತು ಮತಚಲಾವಣೆ ಮಾಡಲಾಗುತ್ತದೆ. ಬಳಿಕ ಅದನ್ನು ಹೌಸ್‌ ಆಫ್‌ ಲಾರ್ಡ್ಸ್‌ಗೆ ಕಳುಹಿಸಲಾಗುತ್ತದೆ, ಅಲ್ಲಿ ಮಸೂದೆ ಕುರಿತು ಚರ್ಚೆ ನಡೆಸಿದ ಬಳಿಕ ಕಾನೂನು ರೂಪ ನೀಡಲಾಗುತ್ತದೆ. ಅಷ್ಟಕ್ಕೂ ಈ ʻಅಸಿಸ್ಟೆಡ್‌ ಡೈಯಿಂಗ್‌ ಬಿಲ್‌ʼ (Assisted Dying Bill) ಪರಿಚಯಿಸಲು ಕಾರಣವೇನು? ಅನ್ನೋದನ್ನ ತಿಳಿಯೋದಕ್ಕೂ ಮುನ್ನ ದಯಾಮರಣ ಎಂದರೇನು ಎಂಬುದನ್ನು ತಿಳಿಯೋಣ.

Assisted Dying Bill 1

ʻದಯಾಮರಣʼ ಎಂದರೇನು?

ಘೋರ ನೋವಿನಿಂದ ನರಳುತ್ತಿರುವ ವ್ಯಕ್ತಿಯ ಇಚ್ಛೆಯ ಅನುಸಾರ ನೀಡಲಾಗುವ ‘ಸಾವು’. ಅಂದ್ರೆ, ಆರೋಗ್ಯ ಸಮಸ್ಯೆಯಿಂದ ಬಳಲುತ್ತಿರುವ ವ್ಯಕ್ತಿ ಇನ್ನು ಸಹಿಸಿಕೊಳ್ಳುವುದು ಸಾಧ್ಯವೇ ಇಲ್ಲ ಎಂಬ ಸಂದರ್ಭದಲ್ಲಿ ತನಗೆ ಮರಣದ ದಯೆಯನ್ನು ನೀಡಿ ಎಂದು ಅರ್ಜಿ ಸಲ್ಲಿಸುತ್ತಾರೆ. ಕಾನೂನಿನ ಅಡಿಯಲ್ಲಿಯೇ ಅವರಿಗೆ ಸಾವನ್ನು ‘ಕರುಣಿಸಲಾಗುತ್ತದೆ’. ಆದರೆ, ಭಾರತ ಸಹಿತ ಹಲವು ದೇಶಗಳಲ್ಲಿ ಇದಕ್ಕೆ ಅವಕಾಶ ಇಲ್ಲ. ಇದಕ್ಕೆ ಯುಥೆನೇಸಿಯಾ ಎಂಬ ಗ್ರೀಕ್ ಪದವನ್ನು ಸಾಮಾನ್ಯವಾಗಿ ಬಳಸುತ್ತಾರೆ. ಇದರ ಅರ್ಥ ಒಳ್ಳೆಯ ಸಾವು ಎಂದು. 2013 ರಿಂದ, ಯುಕೆಯಲ್ಲಿ ದಯಾಮರಣ ಅನುಮತಿಸಲು ಕನಿಷ್ಠ ಮೂರು ಮಸೂದೆಗಳನ್ನು ಪರಿಚಯಿಸಲಾಗಿದೆ. ಆದ್ರೆ ಕಾನೂನಾಗಿ ಅಧಿಕೃತಗೊಂಡಿಲ್ಲ. ಒಂದು ವೇಳೆ ಮತ್ತೊಬ್ಬರ ಸಹಾಯದಿಂದ ದಯಾಮರಣ ಹೊಂದಿದರೆ, ಸಹಾಯ ಮಾಡಿದವರಿಗೆ 14 ವರ್ಷಗಳ ಕಾಲ ಕಠಿಣ ಜೈಲು ಶಿಕ್ಷೆ ವಿಧಿಸುವ ಅವಕಾಶ ಕಾನೂನಿಗೆ ಇದೆ.

Assisted Dying Bill 2

ಮಸೂದೆ ಏನು ಹೇಳುತ್ತದೆ?

ಸ್ವಂತ ಮರಣಕ್ಕೆ ಇಚ್ಚಿಸುವ ಯಾವುದೇ ವ್ಯಕ್ತಿ 18 ವರ್ಷಕ್ಕಿಂತ ಮೇಲ್ಪಟ್ಟು ಮಾರಣಾಂತಿಕ ಕಾಯಿಲೆಗೆ ತುತ್ತಾಗಿದ್ದು, ತನ್ನಿಂದ ಬದುಕಲು ಸಾಧ್ಯವಾಗುವುದೇ ಇಲ್ಲ ಅನ್ನೂ ಹಂತಕ್ಕೆ ತಲುಪಿರಬೇಕು. ಅಲ್ಲದೇ ದೇಶದಲ್ಲಿ ದಯಾಮರಣ ಬಯಸುವವರು ಇಂಗ್ಲೆಂಡ್‌ ಅಥವಾ ವೇಲ್ಸ್‌ನಲ್ಲಿ ಕನಿಷ್ಠ 1 ವರ್ಷ ವಾಸವಿರಬೇಕು.

Assisted Dying Bill 3

ಪ್ರಕ್ರಿಯೆ ಹೇಗೆ ನಡೆಯುತ್ತೆ?

ಮೊದಲು ವೈದ್ಯರ ಷರತ್ತುಗಳಿಗೆ ಒಪ್ಪಿ ಆತ ಸಹಿ ಹಾಕಬೇಕು. ಷರತ್ತುಗಳನ್ನು ಪೂರ್ಣಗೊಳಿಸಿದ ನಂತರ ವೈದ್ಯರು ಆತನ ದೇಹಸ್ಥಿತಿ ಪರಿಶೀಲಿಸುತ್ತಾರೆ. ಒಂದು ವೇಳೆ ವೈದ್ಯರು ದಯಾಮರಣಕ್ಕೆ ನಿರಾಕರಿಸಿದ್ರೆ ಮತ್ತೊಬ್ಬ ವೈದ್ಯರಿಗೆ ಸಂತ್ರಸ್ತನು ತನ್ನ ಮನವಿ ಸಲ್ಲಿಸಬಹುದು. ಇಷ್ಟಕ್ಕೆ ಮುಗಿಯುವುದಿಲ್ಲ, ವೈದ್ಯರು ದಯಾಮರಣಕ್ಕೆ ಸಂಪೂರ್ಣ ಒಪ್ಪಿ ದೃಢೀಕರಿಸಿದ ನಂತರ ಅದನ್ನು ಲಂಡನ್‌ನಲ್ಲಿನ ಹೈಕೋರ್ಟ್‌ಗೆ ಕಳುಹಿಸಲಾಗುತ್ತದೆ. ರೋಗಿಯ ಎಲ್ಲಾ ಅವಶ್ಯಕತೆಗಳನ್ನು ಪೂರೈಸಲಾಗಿದೆ ಎಂದು ಕೋರ್ಟ್‌ ದೃಢೀಕರಿಸಿದ ನಂತರವಷ್ಟೇ ಮುಂದಿನ 7 ಅಥವಾ 14 ದಿನಗಳಲ್ಲಿ ರೋಗಿಯ ಇಚ್ಛೆಯನ್ನು ಪೂರೈಸಲಾಗುತ್ತದೆ.

Assisted Dying Bill 4

ವಿರೋಧ ಏಕೆ?

ಯುಕೆ ನಲ್ಲಿ ದಯಾಮರಣ ಕಾನೂನು ಪರಿಚಯಿಸಲು ಕೆಲವರಿಂದ ವಿರೋಧವೂ ಇದೆ. ಏಕೆಂದರೆ ಇತ್ತೀಚಿನ ದಿನಗಳಲ್ಲಿ ಯುವಕರ ಸಂಖ್ಯೆಗಿಂತ ವೃದ್ಧರ ಸಂಖ್ಯೆ ಹೆಚ್ಚಾಗುತ್ತಿದೆ. ಇದು ದೇಶದ ಆರ್ಥಿಕತೆಯ ಮೇಲೆ ಪರಿಣಾಮ ಬೀರುವ ಸಾಧ್ಯತೆಗಳೂ ಇವೆ ಎಂದು ಹೇಳಲಾಗಿದೆ. ಹಾಗಾಗಿ ಇಂತಹ ಕಾನೂನನ್ನು ಜಾರಿಗೊಳಿಸಿದ್ರೆ ದುರ್ಬಲರಾದವರು, ವಯಸ್ಸಾದ ವ್ಯಕ್ತಿಗಳಿಗೆ ಒತ್ತಾಯಪೂರ್ವಕವಾಗಿ ದಯಾಮರಣಕ್ಕೆ ಸಹಿ ಮಾಡಿಸಲು ಅನುವು ಮಾಡಿಕೊಟ್ಟಂತಾಗುತ್ತದೆ. ಆದ್ದರಿಂದ ಈ ಮಸೂದೆ ಜಾರಿಗೆ ಬೇಡ ಎಂದು ಕೆಲವರು ವಿರೋಧಿಸಿದ್ದಾರೆ.

Assisted Dying Bill 5

ಭಾರತದಲ್ಲಿ ಮೊದಲ ದಯಾಮರಣ ಯಾವಾಗ?

ಅರುಣಾ ಶಾನುಬಾಗ್ ಅವರದ್ದು ಭಾರತದ ಮೊದಲ ದಯಾಮರಣ ಪ್ರಕರಣ. 1973ರಲ್ಲಿ ಕ್ರೂರವಾಗಿ ಅತ್ಯಾಚಾರಕ್ಕೆ ಒಳಗಾದ ಅರುಣಾ ಅವರು 42 ವರ್ಷ ಪ್ರಜ್ಞಾಹೀನ ಸ್ಥಿತಿಯಲ್ಲಿದ್ದರು. 2015ರಲ್ಲಿ ಅವರು ಮೃತಪಟ್ಟರು. ಅರುಣಾ ಅವರಿಗೆ ಬಲವಂತವಾಗಿ ಆಹಾರ ನೀಡುವುದನ್ನು ನಿಲ್ಲಿಸಬೇಕು ಎಂದು ಕೋರಿ ಸಲ್ಲಿಕೆಯಾದ ಅರ್ಜಿಯನ್ನು 2011ರಲ್ಲಿ ಸುಪ್ರೀಂ ಕೋರ್ಟ್ ವಜಾ ಮಾಡಿತ್ತು. ಬಳಿಕ ದಯಾಮರಣಕ್ಕೆ ಅವಕಾಶ ಕೊಟ್ಟಿತ್ತು. ಜೀವನಕ್ಕೆ ಮರಳುವುದು ಸಾಧ್ಯವೇ ಇಲ್ಲ ಎಂಬಂತಹ ರೋಗಿಗಳಿಗೆ ದಯಾಮರಣದ ಅವಕಾಶ ನೀಡಬೇಕು ಎಂದು ಸುಪ್ರೀಂ ಕೋರ್ಟ್‌ ಹೇಳಿತ್ತು.

Assisted Dying Bill 6

ಒರೆಗಾನ್‌ನಲ್ಲಿ ವಿಷ ಔಷಧಿ:

ಅಮೆರಿಕದ ಒರೆಗಾನ್ ರಾಜ್ಯದಲ್ಲಿ ‘ಒರೆಗಾನ್‌ನ ಘನತೆವೆತ್ತ ಸಾವು ಕಾಯ್ದೆ’ (ಡಿಡಬ್ಲ್ಯೂಡಿಎ)ಯನ್ನು 1997ರಲ್ಲಿ ಶಾಸನಬದ್ಧಗೊಳಿಸಲಾಯಿತು. ಈ ಕಾಯಿದೆಯ ಪ್ರಕಾರ, ಮಾರಕ ಅನಾರೋಗ್ಯಕ್ಕೆ ತುತ್ತಾದ ಒರೆಗಾನ್‌ನ ಮಂದಿ ತಮ್ಮ ವೈದ್ಯರಿಂದ ವಿಷಕಾರಿ ಔಷಧ ಪಡೆದು, ಅದನ್ನು ಸ್ವಯಂ ನುಂಗಿ ಸಾಯುವುದಕ್ಕೆ ಅವಕಾಶ ನೀಡಲಾಯಿತು. ಈ ಕಾನೂನು ಜಾರಿಗೆ ಬಂದ ದಿನದಿಂದ ಇದುವರೆಗೆ ಈ ರಾಜ್ಯದಲ್ಲಿ 1,173 ಮಂದಿ ಡಿಡಬ್ಲ್ಯೂಡಿಎ ಅಡಿ ವಿಷಯುಕ್ತ ಔಷಧಗಳನ್ನು ತಮ್ಮ ವೈದ್ಯರಿಂದ ಬರೆಸಿಕೊಂಡಿದ್ದಾರೆ. ಇವರಲ್ಲಿ ಈ ಔಷಧಗಳನ್ನು ಚುಚ್ಚಿಕೊಂಡು 752 ಸತ್ತಿದ್ದಾರೆ. 2013ನೇ ಇಸವಿಯೊಂದರಲ್ಲೇ 122 ಮಂದಿ ವಿಷ ಔಷಧಿ ಚೀಟಿ ಬರೆಸಿಕೊಂಡಿದ್ದಾರೆ. 2014ರ ಜ.22ರವರೆಗೆ ಇವರಲ್ಲಿ 71 ಜನರು ಈ ಔಷಧಗಳನ್ನು ನುಂಗಿ ಮರಣ ಹೊಂದಿದ್ದಾರೆ. ಅಧ್ಯಕ್ಷ ಜಾರ್ಜ್ ಬುಷ್ ವಿರೋಧದ ನಡುವೆಯೂ ಈ ಕಾಯ್ದೆಯನ್ನು ಅಮೆರಿಕದ ಸುಪ್ರೀಂ ಕೊರ್ಟ್ 2006ರಲ್ಲಿ ಎತ್ತಿ ಹಿಡಿದಿತ್ತು. ಇದೇ ರೀತಿಯ ಕಾಯ್ದೆ ಒರೆಗಾನ್‌ನ ಪಕ್ಕದ ರಾಜ್ಯ ವಾಷಿಂಗ್ಟನ್‌ನಲ್ಲೂ 2008ರಲ್ಲಿ ಅನುಷ್ಠಾನಗೊಂಡಿತು.

Assisted Dying Bill 7

ಬೇರೆ ಬೇರೆ ದೇಶಗಳ ಕಾನೂನು ಹೇಗಿದೆ?

ನೆದರ್‌ಲ್ಯಾಂಡ್ಸ್‌ನಲ್ಲಿ ಒಬ್ಬ ರೋಗಿಯ ಮನವಿಯನ್ನು ಆಧರಿಸಿ ಆತನ ಬದುಕನ್ನು ಕೊನೆಗೊಳಿಸುವ ಅಧಿಕಾರ ವೈದ್ಯರಿಗೆ ಇದೆ. ಇದರಲ್ಲಿ ಸ್ವ ಪ್ರೇರಿತ, ಸ್ವಪ್ರೇರಿತವಲ್ಲದ ಹಾಗೂ ಸ್ವಪ್ರೇರಣೆಗೆ ವಿರುದ್ಧವಾದ ಎಂಬ ಮೂರು ಪ್ರತ್ಯೇಕ ವಿಭಾಗಗಳಿವೆ. ಸ್ವಪ್ರೇರಿತ ದಯಾಮರಣಕ್ಕೆ ಅಮೆರಿಕ ಹಾಗೂ ಕೆನಡಾದ ಕೆಲವು ಭಾಗಗಳಲ್ಲಿ ಅವಕಾಶ ಇದೆ. ಬೆಲ್ಜಿಯಂ. ಲಕ್ಸಂಬರ್ಗ್, ಸ್ವಿಜರ್‌ಲೆಂಡ್, ಎಸ್ಟೋನಿಯ, ಅಲ್ಬೇನಿಯಾ ಮುಂತಾದೆಡೆ ದಯಾಮರಣಕ್ಕೆ ಕಾನೂನಿನ ಮನ್ನಣೆ ಇದೆ.

TAGGED:Assisted Dying BillenglandEngland ParliamentKeir StarmerWalesದಯಾಮರಣನೆದರ್‍ಲ್ಯಾಂಡ್ಭಾರತಯುಕೆ
Share This Article
Facebook Whatsapp Whatsapp Telegram

Cinema news

Udupi Rishab Shetty Home Bhajane Kunitha Yakshagana Harake
ನಟ ರಿಷಬ್ ಶೆಟ್ಟಿ ಮನೆಯಲ್ಲಿ ಕುಣಿತ ಭಜನೆ, ಯಕ್ಷಗಾನ ಹರಕೆ ಪ್ರದರ್ಶನ
Cinema Districts Karnataka Latest Sandalwood Top Stories Udupi
Asha Bhosle Funeral
ಸರ್ಕಾರಿ ಗೌರವಗಳೊಂದಿಗೆ ನೆರವೇರಿದ ಗಾಯಕಿ ಆಶಾ ಭೋಸ್ಲೆ ಅಂತ್ಯಕ್ರಿಯೆ
Cinema Latest National Top Stories
Jogi Prem
ಕನ್ನಡ ಸಿನಿಮಾ ಅಂತಲೇ ರಾಜಕಾರಣ – ಸೆನ್ಸಾರ್ ಬೋರ್ಡ್ ವಿರುದ್ಧ ಪ್ರೇಮ್ ಕಿಡಿ
Cinema Latest Sandalwood Top Stories
Dhruva Sarja
LPG ಗ್ಯಾಸ್‌ ಬಿಕ್ಕಟ್ಟಿನಿಂದ ಕಂಗಾಲಾದ ಆಟೋ ಚಾಲಕರಿಗೆ ಆಸರೆ – 25 ಲಕ್ಷ ನೆರವು ನೀಡಿದ ಧ್ರುವ ಸರ್ಜಾ!
Bengaluru City Cinema Latest Sandalwood Top Stories

You Might Also Like

ballot paper counting india
Bengaluru City

ಈಗ ಅಧಿಕೃತ – ಕರ್ನಾಟಕದಲ್ಲಿ ಇನ್ಮುಂದೆ ಇವಿಎಂ ಬದಲು ಬ್ಯಾಲೆಟ್‌ ಪೇಪರ್‌

Public TV
By Public TV
7 minutes ago
GBA
Bengaluru City

ಜಿಬಿಎ ಚುನಾವಣೆ – ಸುಪ್ರೀಂಗೆ ಅಫಿಡವಿಟ್ ಸಲ್ಲಿಸಿದ ರಾಜ್ಯ ಸರ್ಕಾರ

Public TV
By Public TV
33 minutes ago
Love with Nadaf Bhumika commits suicide Bagalkote Town
Bagalkot

ನದಾಫ್‌ ಜೊತೆ ಪ್ರೀತಿ – ಮನೆಯಲ್ಲೇ ಭೂಮಿಕಾ ಆತ್ಮಹತ್ಯೆ

Public TV
By Public TV
1 hour ago
Yogesh Gowda Sister Akkamma
Dharwad

ನಮ್ಮ ತಮ್ಮನ ಸಾವಿನ ಪ್ರಕರಣ ಎಲ್ಲಾ ರಾಜಕಾರಣಿಗಳಿಗೆ ತಕ್ಕ ಪಾಠವಾಗಬೇಕು: ಯೋಗೇಶ್ ಗೌಡ ಸಹೋದರಿ

Public TV
By Public TV
1 hour ago
RR Nagar Son Kills Mother
Bengaluru City

ಅರೆ ಪ್ರಜ್ಞಾವಸ್ಥೆಯಲ್ಲಿದ್ದ ತಾಯಿಯನ್ನು ಬಹುಮಹಡಿ ಕಟ್ಟಡದಿಂದ ತಳ್ಳಿ ಕೊಲೆಗೈದ ಮಗ

Public TV
By Public TV
2 hours ago
ಟಿಸಿಎಸ್‌ನಲ್ಲಿದ್ದ ಬಂಧಿತ ನೌಕರರು
Crime

ಕಾರ್ಪೋರೇಟ್‌ ಜಿಹಾದ್‌ಗೆ ಮಲೇಷ್ಯಾ ಲಿಂಕ್‌ – ವಿದೇಶಿ ಉದ್ಯೋಗ ಮಾರ್ಗದರ್ಶಕನಾಗಿದ್ದ ಧಾರ್ಮಿಕ ಬೋಧಕ!

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?