ಡಿಕೆಶಿ ಏನೇ ಮಾಡಿದ್ರು ಅಂಜುವ ಮಗ ನಾನಲ್ಲ: ಯತ್ನಾಳ್

Public TV
1 Min Read
YATNAL

ವಿಜಯಪುರ: ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಏನೇ ಮಾಡಿದರೂ ಅಂಜುವ ಮಗ ನಾನಲ್ಲ. ನಾನು ಅಂಜಿ ರಾಜಕಾರಣ ಮಾಡಲ್ಲ. ಡಿಕೆಶಿಗೆ ನನ್ನ ಭಯ ಹುಟ್ಟಿದೆ. ಕರ್ನಾಟಕದಲ್ಲಿ ರಾಜಕೀಯ ಭವಿಷ್ಯ ಮುಗಿಯುತ್ತದೆ ಎನ್ನುವ ಭಯ ಶುರುವಾಗಿದೆ ಎಂದು ಡಿಕೆಶಿಗೆ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಟಾಂಗ್ ನೀಡಿದರು.

ವಿಜಯಪುರದಲ್ಲಿ ಮಾತನಾಡಿದ ಯತ್ನಾಳ್, ಸಿಎಂ ಆಗಲು ಹೈಕಮಾಂಡ್ ಹಣ ನೀಡಬೇಕಾಗುತ್ತದೆ ಎಂದು ನಾನು ಹೇಳಿಲ್ಲ. ನಾನು ಹೇಳಿದ ಅರ್ಥ ಬೇರೆ ಇದೆ. ಸಿಎಂ ಮಾಡುತ್ತೇವೆ ಎಂದು ಯಾರೋ ವಾಟ್ಸಪ್ ಕಾಲ್ ಮಾಡುತ್ತಾರೆ. ನಮಗೆ ಮೋದಿ ಗೊತ್ತು, ಸೋನಿಯಾ ಗಾಂಧಿ ಗೊತ್ತು, ದೇವೇಗೌಡ್ರು ಗೊತ್ತು ಎಂದು ಹೇಳುತ್ತಾರೆ. ವ್ಯವಸ್ಥೆ ಹಾಗಿದೆ. ಅವರನ್ನು ನಂಬಬೇಡಿ ಎಂದು ಹೇಳಿದ್ದೇನೆ ಎಂದರು. ಇದನ್ನೂ ಓದಿ: ಕೇಜ್ರಿವಾಲ್ ಓರ್ವ ಅರಾಜಕತೆ ಸೃಷ್ಟಿ ಮಾಡುವ ನಾಯಕ: ಸಂದೀಪ್ ಪಾಟೀಲ್

BasangoudaPatilYatnal

ದೆಹಲಿ ಸಾಧು ಒಬ್ಬ, ತಾನು ಕೇದಾರ ಮಹಾರಾಜ ಮಾತಾಡೋದು, ನನಗೆಲ್ಲರೂ ಗೊತ್ತು. ಇಷ್ಟು ಹಣ ತಂದು ಕೊಟ್ಟರೆ ಶಿಫಾರಸ್ಸು ಮಾಡುತ್ತೇನೆ ಎನ್ನುತ್ತಾರೆ. ಇದೆಲ್ಲಾ ರೆಕಾರ್ಡ್ ಇಟ್ಟುಕೊಳ್ಳಲು ಆಗುವುದಿಲ್ಲ. ರೆಕಾರ್ಡ್ ಇಟ್ಟು ರಾಜಕೀಯ ಮಾಡುವುದಕ್ಕೂ ಆಗುವುದಿಲ್ಲ ಎಂದು ತಿಳಿಸಿದರು.

ರಾಮದುರ್ಗದಲ್ಲಿ ಕಾಂಗ್ರೆಸ್, ಬಿಜೆಪಿ, ಜೆಡಿಎಸ್‌ನ ಕೆಲ ಟಿಕೆಟ್ ಆಕಾಂಕ್ಷಿಗಳಿದ್ದರು. ಅವರಿಗೆ ಹಿತವಚನ ಹೇಳಲು, ಹೇಗೆಲ್ಲಾ ರಾಜಕಾರಣ ನಡೆಯುತ್ತದೆ ಎಂದು ತಿಳಿಸಲು ನಾನು ಈ ರೀತಿಯಾಗಿ ಮಾತನಾಡಿದ್ದು ಎಂದು ಸ್ಪಷ್ಟಪಡಿಸಿದರು. ಇದನ್ನೂ ಓದಿ: ಸಿಎಂ ಪೋಸ್ಟ್‌ಗಾಗಿ 2,500 ಕೋಟಿ ರೂ. ಬೇಡಿಕೆ ವಿಚಾರ- ತನಿಖೆಗೆ ಡಿಕೆಶಿ ಒತ್ತಾಯ

Yatnal 1

ನಮಗೆ ಕಾಲ್ ಮಾಡಿ ಸೋನಿಯಾ ಗಾಂಧಿ ಭೇಟಿ ಮಾಡಿಸುತ್ತೇನೆ ಎಂದಿದ್ದಾರೆ. ಇಂತಹವರು ದೇಶದಲ್ಲಿದ್ದಾರೆ, ರಾಜ್ಯದಲ್ಲಿದ್ದಾರೆ, ಬೆಂಗಳೂರಲ್ಲಿಯೂ ಇದ್ದಾರೆ. ನಿಮ್ಮ ಸಿಎಂ ಸೀಟ್‌ಗಾಗಿ ನಾವು ಟ್ರೈ ಮಾಡುತ್ತೇವೆ. ಇಷ್ಟು ಸಾವಿರ ಕೋಟಿ ರೆಡಿ ಇಡಿ ಎಂದು ಅವರು ನನಗೆ ಹೇಳಿದ್ದರು ಎಂದರು.

ಹೈಕಮಾಂಡ್ ಹಣ ಕೇಳಿದೆ ಎಂದು ನಾನು ಹೇಳಿಲ್ಲ. ಪ್ರಧಾನಿ ಮೋದಿ ಕಾಲದಲ್ಲಿ ಇಂಥದ್ದೆಲ್ಲಾ ಸಾಧ್ಯವಿಲ್ಲ. ಮೋದಿ ಪ್ರಧಾನಿಯಾಗಿ ಇರುವವರೆಗೂ ಸಿಎಂ ಸೀಟಿಗಾಗಿ ಹಣ ಕೇಳುವಂತದ್ದು ನಡೆಯೋದೇ ಇಲ್ಲ ಎಂದು ಹೇಳಿದರು.

Share This Article
Leave a Comment

Leave a Reply

Your email address will not be published. Required fields are marked *