Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Latest

ಏನಿದು ದೆಹಲಿ ಮದ್ಯ ಹಗರಣ? ಕೇಜ್ರಿವಾಲ್‌ ಮೇಲಿರುವ ಆರೋಪ ಏನು? ಬಂಧನವಾದ ಪ್ರಮುಖರು ಯಾರು?

Public TV
Last updated: March 22, 2024 9:18 am
Public TV
Share
4 Min Read
Arvind Kejriwal
SHARE

ಅಬಕಾರಿ ನೀತಿ ಹರಣದಲ್ಲಿ (Delhi Excise Policy Case) ದೆಹಲಿ ಸಿಎಂ ಅರವಿಂದ್‌ ಕೇಜ್ರಿವಾಲ್‌ ( Delhi CM Arvind Kejriwal) ಅವರನ್ನು ಜಾರಿ ನಿರ್ದೇಶನಾಲಯ (ED) ಬಂಧಿಸಿದೆ. ಇಡಿ ವಿಚಾರಣೆಗೆ ಹಾಜರಾಗುವಂತೆ ಜಾರಿಗೊಳಿಸಿದ್ದ 9 ಸಮನ್ಸ್‌ಗೆ ಕೇಜ್ರಿವಾಲ್‌ ಗೈರಾಗಿದ್ದರು. ಹೈಕೋರ್ಟ್‌ನಲ್ಲೂ (High Court) ಇಡಿ ವಿಚಾರಣೆಯನ್ನು ಮುಂದೂಡವಂತೆ ಕೇಜ್ರಿವಾಲ್‌ ಪರ ವಕೀಲರು ಮನವಿ ಮಾಡಿದ್ದರು. ಆದರೆ ಹೈಕೋರ್ಟ್‌ ವಾದವನ್ನು ಪುರಸ್ಕರಿಸದೇ ಕೇಜ್ರಿವಾಲ್‌ಗೆ ರಕ್ಷಣೆ ನೀಡಲು ನಿರಾಕರಿಸಿತು. ಈ ಬೆನ್ನಲ್ಲೇ ರಾತ್ರಿ ಇಡಿ ಕೇಜ್ರಿವಾಲ್‌ ನಿವಾಸಕ್ಕೆ ತೆರಳಿ ಬಂಧಿಸಿದೆ.

ಏನಿದು ಹಗರಣ?
ಕೋವಿಡ್‌ 2ನೇ ಅಲೆ ಉತ್ತುಂಗದಲ್ಲಿದ್ದಾಗ ಮನೀಶ್ ಸಿಸೋಡಿಯಾ 2021ರ ಏಪ್ರಿಲ್‌ನಲ್ಲಿ ಕ್ಯಾಬಿನೆಟ್‌ ಅನುಮೋದನೆ ಇಲ್ಲದೇ ಮದ್ಯದಂಗಡಿ ಟೆಂಡರ್‌ಗೆ ಅರ್ಜಿ ಸಲ್ಲಿಸಿದವರ 144.36 ಕೋಟಿ ಪರವಾನಗಿ ಶುಲ್ಕವನ್ನು ಮನ್ನಾ ಮಾಡಲು ಆದೇಶ ಹೊರಡಿಸುತ್ತಾರೆ. ಈ ಮಹತ್ವದ ನಿರ್ಧಾರದ ಬಳಿಕ ಮೇ ತಿಂಗಳಿನಲ್ಲಿ ಕೇಜ್ರಿವಾಲ್‌ ನೇತೃತ್ವದ ಕ್ಯಾಬಿನೆಟ್‌ ಸಭೆ ಕರೆದು ಅಬಕಾರಿ ನೀತಿಯಲ್ಲಿ ಬದಲಾವಣೆ ಮಾಡುತ್ತದೆ. ಮದ್ಯವನ್ನು ಮನೆಗ ಹೋಮ್‌ ಡೆಲಿವರಿ ಮಾಡಬಹುದು ಅಷ್ಟೇ ಅಲ್ಲದೇ ಮದ್ಯದ ಅಂಗಡಿಗಳನ್ನು ಬೆಳಗಿನ ಜಾವ 3 ಗಂಟೆಯವರೆಗೆ ತೆರೆಯಬಹುದು. ಪರವಾನಗಿದಾರರು ಅನಿಯಮಿತ ರಿಯಾಯಿತಿಗಳನ್ನು ನೀಡಲು ನೀತಿ ಅನುಮತಿ ಕಲ್ಪಿಸಿತ್ತು.

ಲೆಫ್ಟಿನೆಂಟ್‌ ಗವರ್ನರ್‌ ಅವರು ಕ್ಯಾಬಿನೆಟ್‌ ನಿರ್ಧಾರಕ್ಕೆ ಆಕ್ಷೇಪ ವ್ಯಕ್ತಪಡಿಸಿದ ಬಳಿಕ ದೆಹಲಿ ಸರ್ಕಾರ ತನ್ನ ನಿರ್ಧಾರವನ್ನು ಹಿಂದಕ್ಕೆ ಪಡೆಯುತ್ತದೆ. ಆದರೆ ಸಿಸೋಡಿಯಾ ಕೈಗೊಂಡ ನಿರ್ಧಾರ ಮುಂದುವರಿಯುತ್ತದೆ. ಸರ್ಕಾರದ ನಿರ್ಧಾರ ಬಗ್ಗೆ ದೆಹಲಿ ಮುಖ್ಯ ಕಾರ್ಯದರ್ಶಿ ಅವರು ಲೆಫ್ಟಿನೆಂಟ್‌ ಗವರ್ನರ್‌ ಬಳಿ ದೂರು ನೀಡುತ್ತಾರೆ. ಸಿಸೋಡಿಯಾ ನಿರ್ಧಾರದಿಂದ ಸರ್ಕಾರಕ್ಕೆ ಭಾರೀ ನಷ್ಟವಾಗಿದೆ. ವಿಸ್ಕಿ ಮತ್ತು ವೈನ್‌ ಮಾರಾಟ ಅನುಕ್ರಮವಾಗಿ 60% ಮತ್ತು 87%ರಷ್ಟು ಭಾರೀ ಏರಿಕೆಯಾಗಿದ್ದರೂ ಆದಾಯ 80% ರಷ್ಟು ಇಳಿಕೆಯಾಗಿದೆ ಎಂದು ದೂರಿನಲ್ಲಿ ಉಲ್ಲೇಖಿಸುತ್ತಾರೆ.

Liquor Party 2 e1682567560961

ಕೇಜ್ರಿವಾಲ್‌- ಸಿಸೋಡಿಯಾ ಅವರು ಲೆಫ್ಟಿನೆಂಟ್‌ ಗವರ್ನರ್‌ ಗಮನಕ್ಕೆ ತಾರದೇ ತುರ್ತು ಕ್ಯಾಬಿನೆಟ್‌ ಸಭೆಯನ್ನು ಕರೆಯುತ್ತಾರೆ. ಸಿಸೋಡಿಯಾ ಅಕ್ರಮವಾಗಿ ಹೊರಡಿಸಿದ ಆದೇಶವನ್ನು ಸಕ್ರಮ ಮಾಡಲು ಕ್ಯಾಬಿನೆಟ್‌ನಲ್ಲಿ ಪ್ರಯತ್ನ ಮಾಡಲಾಗುತ್ತದೆ. ಈ ನಿರ್ಧಾರಕ್ಕೆ ಬಿಜೆಪಿ ಮತ್ತು ಕಾಂಗ್ರೆಸ್‌ ಭಾರೀ ವಿರೋಧ ವ್ಯಕ್ತಪಡಿಸಿ ಪ್ರತಿಭಟಿಸುತ್ತದೆ. ವಿರೋಧ ವ್ಯಕ್ತವಾಗುತ್ತಿದ್ದಂತೆ 2022ರ ಜುಲೈನಲ್ಲಿ ಮದ್ಯ ಹಗರಣದ ಬಗ್ಗೆ ಸಿಬಿಐ ತನಿಖೆ ನಡೆಸುವಂತೆ ಲೆಫ್ಟಿನೆಂಟ್‌ ಗವರ್ನರ್‌ ಅವರು ಆದೇಶ ಹೊರಡಿಸುತ್ತಾರೆ. 2022ರ ಜುಲೈನಲ್ಲಿ ಕೇಜ್ರಿವಾಲ್‌ ಸರ್ಕಾರ ಈ ಹಿಂದೆ ಹೊರಡಿಸಿದ್ದ ಅಬಕಾರಿ ನೀತಿಯನ್ನು ಹಿಂದಕ್ಕೆ ಪಡೆಯುತ್ತದೆ. ಇದನ್ನೂ ಓದಿ: ದೆಹಲಿ ಮದ್ಯ ಹಗರಣ – ತೆಲಂಗಾಣ ಮಾಜಿ ಸಿಎಂ ಕೆಸಿಆರ್‌ ಪುತ್ರಿ ಕವಿತಾ ಅರೆಸ್ಟ್‌ ಆಗಿದ್ದು ಯಾಕೆ?

ಆರೋಪ ಏನು?
ಕೊರೊನಾ ಸಮಯದಲ್ಲಿ ಕಿಕ್‌ ಬ್ಯಾಕ್‌ ಪಡೆಯಲೆಂದೇ ಮದ್ಯದಂಗಡಿ ಟೆಂಡರ್‌ಗೆ ಅರ್ಜಿ ಸಲ್ಲಿಸಿದವರ 144.36 ಕೋಟಿ ರೂ. ಪರವಾನಗಿ ಶುಲ್ಕವನ್ನು ಮನ್ನಾ ಮಾಡಲಾಗಿದೆ ಎಂಬ ಗಂಭೀರ ಭ್ರಷ್ಟಾಚಾರ ಆರೋಪ ಬಂದಿದೆ. ಕಾನೂನುಬಾಹಿರ ನಿರ್ಧಾರವನ್ನು ತೆಗೆದುಕೊಂಡ ಬಳಿಕ ಅದನ್ನು ಕಾನೂನುಬದ್ಧಗೊಳಿಸಲು ಸರ್ಕಾರ ಪ್ರಯತ್ನಿಸಿದ್ದು ಮತ್ತೊಂದು ವಿವಾದಕ್ಕೆ ಕಾರಣವಾಗಿದೆ.

Manish Sisodia 3

ವಿಮಾನ ನಿಲ್ದಾಣದಲ್ಲಿ ಮದ್ಯ ಮಾರಾಟಕ್ಕೆ ಅನುಮತಿ ಇದ್ದರೂ ವಿಮಾನ ನಿಲ್ದಾಣದ ಅಧಿಕಾರಿಗಳಿಂದ ನಿರಾಕ್ಷೇಪಣಾ ಪ್ರಮಾಣ ಪತ್ರವನ್ನು ಪಡೆದುಕೊಳ್ಳಬೇಕಾಗುತ್ತದೆ. ಎನ್‌ಒಸಿ ಇಲ್ಲದೇ ಮಾರಾಟ ಮಾಡಿದರೆ ದಂಡವನ್ನು ಹಾಕಲಾಗುತ್ತದೆ. ಎನ್‌ಒಸಿ ಇಲ್ಲದೇ ಮದ್ಯ ಮಾರಾಟ ಮಾಡಿದವರಿಗೆ 30 ಕೋಟಿ ರೂ. ದಂಡವನ್ನು ಹಾಕಬೇಕಿತ್ತು. ಆದರೆ ಸಿಸೋಡಿಯಾ ನಿರ್ದೇಶನದ ಹಿನ್ನೆಲೆಯಲ್ಲಿ 30 ಕೋಟಿ ರೂ ದಂಡವನ್ನು ಮನ್ನಾ ಮಾಡಲಾಗಿದೆ. ಪರವಾನಗಿ ಶುಲ್ಕ ಬಾಕಿ ಉಳಿಸಿಕೊಂಡ ಪರವಾನಗಿದಾರರ ವಿರುದ್ಧದ ಕಠಿಣ ಕ್ರಮಕ್ಕೆ ತಡೆ ನೀಡಲಾಗಿದೆ. ಅಬಕಾರಿ ನೀತಿ ಉಲ್ಲಂಘಿಸಿದ ಪರವಾನಗಿದಾರರ ವಿರುದ್ಧ ಯಾವುದೇ ದಂಡ ಕ್ರಮ ಕೈಗೊಂಡಿಲ್ಲ. ಆಮದು ಮಾಡಿದ ಪ್ರತಿ ಕೇಸ್‌ ಬಿಯರ್‌ ಮೇಲಿದ್ದ ದರವನ್ನು 50 ರೂ.ಇಳಿಕೆ ಮಾಡಲಾಗಿದೆ. ಹೊಸ ಮದ್ಯ ನೀತಿಯಿಂದಾಗಿ ಸರ್ಕಾರದ ಬೊಕ್ಕಸಕ್ಕೆ 2631 ಕೋಟಿ ರೂ. ನಷ್ಟವಾಗಿದೆ ಎಂಬ ಆರೋಪ ಬಂದಿದೆ. ಇದನ್ನೂ ಓದಿ: ಸಿಎಂ ಹುದ್ದೆಗೆ ಕೇಜ್ರಿವಾಲ್‌ ರಾಜೀನಾಮೆ ಇಲ್ಲ – ಜೈಲಿನಿಂದಲೇ ಆಡಳಿತ ನಡೆಸಲು ಸಾಧ್ಯವೇ?

ಕೇಜ್ರಿವಾಲ್‌ ಮೇಲಿರುವ ಆರೋಪ ಏನು?
ಕೆಲ ಆಯ್ದ ವ್ಯಕ್ತಿಗಳಿಗೆ ಲಾಭ ತರಲು ದೆಹಲಿಯಲ್ಲಿ ಮದ್ಯ ತೆರೆಯಲು ರಾಜ್ಯ ಸರ್ಕಾರ ಅನುಮತಿ ನೀಡಿದೆ. ಲೈಸನ್ಸ್‌ ಪಡೆಯಲು ನೂರಾರು ಕೋಟಿ ರೂ. ಲಂಚ ಪಡೆಯಲಾಗಿದೆ. ಕಂಪನಿಗಳ ಜೊತೆ ನಡೆದ ಸಭೆಯಲ್ಲಿ ಕೇಜ್ರಿವಾಲ್‌ ಸಹ ಭಾಗಿಯಾಗಿದ್ದರು. ಈ ಪ್ರಕರಣದಲ್ಲಿ ಬಂಧನಕ್ಕೆ ಒಳಗಾದ ಆಪ್‌ ನಾಯಕ, ಪಕ್ಷದ ಚುನಾವಣಾ ವೆಚ್ಚಗಳನ್ನು ನೋಡುತ್ತಿದ್ದ ವಿಜಯ್‌ ನಾಯರ್‌ಗೆ ಕಂಪನಿಗಳು ಲೈಸೆನ್ಸ್‌ ಪಡೆಯಲು ಕಿಕ್‌ಬ್ಯಾಕ್‌ ನೀಡಲಾಗಿದೆ. ಈ ನೀತಿಯಿಂದ ಲಾಭ ಪಡೆದ ಮದ್ಯ ವ್ಯಾಪಾರಿಗಳು ಕೇಜ್ರಿವಾಲ್‌ ಆಪ್ತ ಮಂತ್ರಿಗಳಿಗೆ, ಆಪ್ತರಿಗೆ, ಸಹಚರರಿಗೆ ಕೋಟ್ಯಂತರ ರೂ. ಪಾವತಿ ಮಾಡಿದ್ದಾರೆ. ಆಪ್‌ ನಾಯಕ ವಿಜಯ್ ನಾಯರ್ ಅವರು ಕೆಲವು ಉದ್ಯಮಿಗಳು ಮತ್ತು ರಾಜಕಾರಣಿಗಳ ನಿಯಂತ್ರಣದಲ್ಲಿರುವ ‘ದಕ್ಷಿಣ ಗುಂಪಿನಿಂದ’ 100 ಕೋಟಿ ರೂಪಾಯಿಗಳನ್ನು ಕಿಕ್‌ಬ್ಯಾಕ್ ಪಡೆದಿದ್ದಾರೆ ಎಂಬ ಆರೋಪವಿದೆ.

ED Enforcement Directorate

ಇಡಿ ಎಂಟ್ರಿಯಾಗಿದ್ದು ಹೇಗೆ?
ದೆಹಲಿ ಲೆಫ್ಟಿನೆಂಟ್‌ ಗವರ್ನರ್‌ ಈ ಪ್ರಕರಣವನ್ನು ಸಿಬಿಐ ತನಿಖೆಗೆ ನೀಡಿದ್ದರು. ತನಿಖೆಗೆ ಇಳಿದು ವ್ಯಕ್ತಿಗಳನ್ನು ಬಂಧನ ಮಾಡುತ್ತಿದ್ದಂತೆ ಅಕ್ರಮ ಹಣ ವರ್ಗಾವಣೆ ಮಾಡಿರುವ ವಿಚಾರ ಬೆಳಕಿಗೆ ಬಂದಿದೆ. ಈ ಬೆನ್ನಲ್ಲೇ ಜಾರಿ ನಿರ್ದೇಶನಾಲಯ ಪ್ರಕರಣ ದಾಖಲಿಸಿ ತನಿಖೆ ನಡೆಸುತ್ತಿದೆ.

ಬಂಧನಗೊಂಡವರು ಯಾರು?
ಈ ಪ್ರಕಣಕ್ಕೆ ಸಂಬಂಧಿಸಿದಂತೆ ಸಿಬಿಐ ಮತ್ತು ಇಡಿ ಮನೀಶ್‌ ಸಿಸೋಡಿಯಾ‌ (ಆಪ್ ಡಿಸಿಎಂ), ಸತ್ಯೇಂದ್ರ ಜೈನ್‌(ಆಪ್‌ ಸಚಿವ), ಸಂಜಯ್‌ ಸಿಂಗ್‌(ಆಪ್‌ ಸಂಸದ), ಕೆ.ಕವಿತಾ(ಬಿಆರ್‌ಎಸ್‌ ಶಾಸಕಿ)

9 ಸಮನ್ಸ್‌ಗೆ ಗೈರು:
2023ರ ನವೆಂಬರ್‌ 23ಕ್ಕೆ ಮೊದಲ ಬಾರಿ ಕೇಜ್ರಿವಾಲ್‌ಗೆ ಸಮನ್ಸ್‌ ಜಾರಿ ಮಾಡಲಾಗಿತ್ತು. ಆದರೆ ವಿಚಾರಣೆಗೆ ಗೈರಾದ ಹಿನ್ನೆಲೆಯಲ್ಲಿ ಡಿ.23 ರಂದು ಮತ್ತೆ ಸಮನ್ಸ್‌ ಜಾರಿ ಮಾಡಲಾಗಿತ್ತು. ಈ ಸಮನ್ಸ್‌ಗೆ ಗೈರಾದ ನಂತರ 2024ರಲ್ಲಿ ಜ.3, ಜ.18, ಫೆ.2, ಫೆ.19, ಫೆ.26, ಮಾರ್ಚ್‌ 4 ರಂದು ಸಮನ್ಸ್‌ ಜಾರಿ ಮಾಡಲಾಗಿತ್ತು. ಈ ಎಲ್ಲಾ ಸಮನ್ಸ್‌ಗಳಿಗೆ ಗೈರಾದ ಹಿನ್ನೆಲೆಯಲ್ಲಿ ಮಾರ್ಚ್‌ 21 ರಂದು ಸಮನ್ಸ್‌ ಜಾರಿ ಮಾಡಿ ಕೇಜ್ರಿವಾಲ್‌ ಅವರನ್ನು ಇಡಿ ಬಂಧಿಸಿದೆ.

 

TAGGED:aapArvind KejriwalCorruption Delhi Excise Policy CaseEDjailಅರವಿಂದ್ ಕೇಜ್ರಿವಾಲ್ಆಪ್ದೆಹಲಿ ಮದ್ಯ ಹಗರಣ
Share This Article
Facebook Whatsapp Whatsapp Telegram

Cinema News

madenuru manu actor
ಮಡೆನೂರು ಮನು ಜೊತೆ ಕಾಂಪ್ರಮೈಸ್ – ಕೇಸ್ ಹಿಂಪಡೆದ ಸಂತ್ರಸ್ತೆ
Cinema Latest Main Post
Jothe Neeniralu Serial
ತದ್ವಿರುದ್ಧ ಮನಸುಗಳ ಧಾರಾವಾಹಿ: ನೀ ಇರಲು ಜೊತೆಯಲ್ಲಿ
Cinema Latest Top Stories TV Shows
Karavali movie 1
‘ಮಾವೀರ’ನಾಗಿ ಎಂಟ್ರಿ ಕೊಟ್ಟ ಸು ಫ್ರಂ ಸೋ ಕರುಣಾಕರ ಗುರೂಜಿ
Cinema Latest Sandalwood Top Stories
Rajath Dharmasthala
ಯೂಟ್ಯೂಬರ್ಸ್ ಮೇಲೆ 50-60 ಜನ ಅಟ್ಯಾಕ್ ಮಾಡಿದ್ರು, ನನ್ನ ಬಳಿ ಸಾಕ್ಷಿ ಇದೆ: ರಜತ್
Cinema Dakshina Kannada Latest Main Post South cinema
Dhanush Mrunal Thakur
ಧನುಷ್-ಮೃಣಾಲ್ ವಯಸ್ಸಿನ ಅಂತರವೆಷ್ಟು ಗೊತ್ತಾ?
Cinema Latest Top Stories

You Might Also Like

karwar house collapse
Latest

ಕಾರವಾರ| ಧಾರಾಕಾರ ಮಳೆಗೆ ಕುಸಿದ 2 ಮನೆಗಳು

Public TV
By Public TV
15 minutes ago
UttaraKashi Rescue Operation
Latest

ಉತ್ತರಕಾಶಿಯಲ್ಲಿ ಮೇಘಸ್ಫೋಟ – ಈವರೆಗೆ 274 ಮಂದಿ ರಕ್ಷಣೆ, ಪತ್ತೆಯಾಗದ 59 ಜನರು

Public TV
By Public TV
24 minutes ago
Kalaburagi Fake doctor
Crime

ಕುಡಿತದ ಚಟ ಬಿಡಿಸೋ ನಾಟಿ ಔಷಧಿ ಸೇವಿಸಿ ನಾಲ್ವರು ಸಾವು – ನಕಲಿ ವೈದ್ಯ ಅರೆಸ್ಟ್

Public TV
By Public TV
26 minutes ago
KR Market
Bengaluru City

ವರಮಹಾಲಕ್ಷ್ಮಿ ಹಬ್ಬದ ಸಂಭ್ರಮ – ಕೆಆರ್ ಮಾರ್ಕೆಟ್‌ನಲ್ಲಿ ಖರೀದಿ ಭರಾಟೆ ಜೋರು

Public TV
By Public TV
54 minutes ago
modi putin
Latest

ಟ್ರಂಪ್‌ ಸುಂಕ ಶಾಕ್‌ ಬೆನ್ನಲ್ಲೇ ಈ ವರ್ಷ ಭಾರತಕ್ಕೆ ಪುಟಿನ್‌ ಭೇಟಿ

Public TV
By Public TV
1 hour ago
Uttarakhand disaster
Latest

ಮೇಘಸ್ಫೋಟವಲ್ಲ ಉತ್ತರಾಖಂಡದಲ್ಲಿ ಸಂಭವಿಸಿದ್ದು ಹಿಮಕೊಳ ಸ್ಫೋಟ!

Public TV
By Public TV
1 hour ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?