Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Search
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Latest

ಬಿಜೆಪಿಯವ್ರು ಪಕ್ಷಕ್ಕೆ ಬರುವಾಗ ಜಾಮೂನು ಕೊಡ್ತಾರೆ, ಅಧಿಕಾರ ಮುಗಿದಾಗ ವಿಷ ಕೊಡ್ತಾರೆ: ಎಸ್‌ಟಿಎಸ್ ಕಿಡಿ

Public TV
Last updated: November 8, 2023 3:02 pm
Public TV
Share
3 Min Read
s.t.somashekar
SHARE

ಮೈಸೂರು: ಬಿಜೆಪಿಯವರು ಪಕ್ಷಕ್ಕೆ ಬರುವಾಗ ಜಾಮೂನು ಕೊಡುತ್ತಾರೆ. ಅಧಿಕಾರ ಮುಗಿದ ಮೇಲೆ ವಿಷ ಕೊಡುತ್ತಾರೆ ಎಂದು ಸ್ವಪಕ್ಷದ ವಿರುದ್ಧವೇ ಬಿಜೆಪಿ ಶಾಸಕ ಎಸ್.ಟಿ.ಸೋಮಶೇಖರ್ (S.T.Somashekar) ಕಿಡಿಕಾರಿದರು.

ನಗರದಲ್ಲಿ ಮಾತನಾಡಿದ ಅವರು, ನಾನು ಕಾಂಗ್ರೆಸ್‌ನಲ್ಲಿದ್ದವನು. ಅವರಾಗೆ ಪಕ್ಷಕ್ಕೆ ಸೇರಿಸಿಕೊಂಡರು. ಈಗ ಎಸ್.ಟಿ.ಸೋಮಶೇಖರ್ ಹೋದರೆ ಹೋಗಲಿ ಎಂದು ಮಾತನಾಡುತ್ತಿದ್ದಾರೆ. ನನ್ನನ್ನ ಪಕ್ಷ ಬಿಡಿಸಲು ರೆಡಿಯಾಗಿದ್ದಾರೆ. ನಾನು ಕ್ಷೇತ್ರದ ಅನುಕೂಲಕ್ಕಾಗಿ ಕೆಲಸ ಮಾಡುತ್ತಿದ್ದೇನೆ. ನನ್ನ ಕ್ಷೇತ್ರದ ಅಭಿವೃದ್ಧಿಗೆ ಸಿಎಂ, ಡಿಸಿಎಂ ಹತ್ತಿರ ಹೋಗುತ್ತೇನೆ. ಇದರಲ್ಲಿ ತಪ್ಪೇನಿದೆ? ಜೊತೆಗೆ ನಾನು ಸಿಎಂ, ಡಿಸಿಎಂ ಹೊಗಳುವುದನ್ನು ಸಹಿಸುತ್ತಿಲ್ಲ. ನನ್ನ ಕಚೇರಿಯಿಂದ ಕಾಂಗ್ರೆಸ್ ಗ್ಯಾರಂಟಿಯಿಂದ ಫಾಲೋಅಪ್ ಮಾಡಿದ್ದೇನೆ. ಇದರಿಂದ ನನ್ನ ಕ್ಷೇತ್ರದ ಜನರಿಗೆ ಅನುಕೂಲವಾಗಿದೆ. ಆದರೆ ಬಿಜೆಪಿಯವರು ಅದೆಲ್ಲ ಕಾಂಗ್ರೆಸ್ ಗ್ಯಾರಂಟಿ, ಅದನ್ನ ನೀವೇಕೆ ಉತ್ತೇಜನ ನೀಡುತ್ತೀರಿ ಎಂದು ಪ್ರಶ್ನೆ ಮಾಡುತ್ತಾರೆ. ಅರೇ, ಸರ್ಕಾರ ಯಾವುದಾದರೂ ಇರಲಿ. ಜನಕ್ಕೆ ಒಳ್ಳೆಯದು ಮಾಡುವುದು ಬೇಡವ ಎಂದು ಪ್ರಶ್ನಿಸಿದರು. ಇದನ್ನೂ ಓದಿ: ಬೆಂಗಳೂರು ಕುಡಿಯುವ ನೀರಿಗೆ ಕಾವೇರಿಯಿಂದ 24 ಟಿಎಂಸಿ ಬಳಕೆ: ಡಿಕೆಶಿ

d.k.shivakumar s.t.somashekar

ಈಶ್ವರಪ್ಪನಿಗೆ ಯಾವುದೇ ಬೆಲೆ ಇಲ್ಲ. ಬೆಲೆ ಇಲ್ಲದವರ ಹೇಳಿಕೆಗಳಿಗೆ ನಾನು ತಲೆ ಕೆಡಿಸಿಕೊಳ್ಳುವುದಿಲ್ಲ. ನನ್ನನ್ನು ಪಕ್ಷದಿಂದ ಬಿಟ್ಟುಹೋಗು ಅಂತ ಹೇಳಲು ಈಶ್ವರಪ್ಪ ಯಾರು? ಈಶ್ವರಪ್ಪ ಏನು ರಾಜ್ಯಾಧ್ಯಕ್ಷನ? ಈಶ್ವರಪ್ಪ ನಂಬಿ ಪಕ್ಷಕ್ಕೆ ಬರಲಿಲ್ಲ. ನಾನು ಯಡಿಯೂರಪ್ಪ ನಂಬಿ ಪಕ್ಷಕ್ಕೆ ಬಂದಿದ್ದೇನೆ. ಇದೆಲ್ಲ ಬೆಳವಣಿಗೆಯಾದ ಮೇಲೆ ನಾನು ಯಡಿಯೂರಪ್ಪ ಜೊತೆ ಮಾತನಾಡಿದ್ದೇನೆ. ಅವರು ಯಾವುದೇ ಕಾರಣಕ್ಕೆ ಪಕ್ಷ ಬಿಡಬೇಡ ಎಂದು ಹೇಳಿದ್ದಾರೆ. ಅವರ ಮಾತಿಗೆ ಬೆಲೆ ಕೊಟ್ಟು ಪಕ್ಷದಲ್ಲಿದ್ದೇನೆ. ಈಗ ಯಾರೋ 5 ಜನರು ಮಾತನಾಡುತ್ತಿರುವವರ ಬಗ್ಗೆ ತಲೆ ಕೆಡಿಸಿಕೊಳ್ಳುವುದಿಲ್ಲ. ಎಸ್.ಟಿ.ಸೋಮಶೇಖರ್ ಬೆಂಬಲಿಗರು ಮಾತ್ರ ಪಕ್ಷ ಬಿಟ್ಟಿಲ್ಲ. ಅಶೋಕ್ ಕ್ಷೇತ್ರದಲ್ಲಿ ಹೋಗಿಲ್ಲವ? ಮುನಿರತ್ನ ಕ್ಷೇತ್ರದಲ್ಲಿ ಹೋಗಿಲ್ಲವ? ದಾಸರಹಳ್ಳಿ, ಕೆ.ಆರ್.ಪುರಂ ಕ್ಷೇತ್ರದಲ್ಲಿ ಹೋಗಿಲ್ಲ. ಕೇವಲ ನನ್ನನ್ನೆ ಏಕೆ ಟಾರ್ಗೆಟ್ ಮಾಡುತ್ತಿರಾ? ಕ್ಷೇತ್ರದಲ್ಲಿ ಸಾವಿರ ಜನ ಲೀಡರ್ ಇರುತ್ತಾರೆ. ಚುನಾವಣೆ ಸಂಧರ್ಭದಲ್ಲಿ ಆ ಕಡೆ ಈ ಕಡೆ ಹೋಗುತ್ತಾರೆ. ಇದಕ್ಕೆ ಮಹತ್ವ ಬೇಡ ಎಂದು ತಿಳಿಸಿದರು.

ನಾನು ಬಿಜೆಪಿ ಪಕ್ಷ ಬಿಟ್ಟು ಹೋಗಲ್ಲ. ನಾನು ಮಾನಸಿಕ, ದೈಹಿಕವಾಗಿ ಪಕ್ಷದಲ್ಲೆ ಇದ್ದೇನೆ. ಕಾಂಗ್ರೆಸ್ ಸೇರುತ್ತಾರೆ ಎಂಬುದ್ದೆಲ್ಲ ಊಹಾಪೋಹ. ನಾನು ಯಡಿಯೂರಪ್ಪ ಮಾತು ನಂಬಿ ಬಿಜೆಪಿಯಲ್ಲಿದ್ದೇನೆ. ಆದರೆ ಇವರೇ ಪಕ್ಷದಿಂದ ಓಡಿಸುವ ಕೆಲಸ ಮಾಡುತ್ತಿದ್ದಾರೆ. ಕಳೆದ ಚುನಾವಣೆಯಲ್ಲಿ ನಮ್ಮ ಪಕ್ಷದವರೆ ನನ್ನ ವಿರುದ್ಧ ಕೆಲಸ ಮಾಡಿದರು. ಈ ಬಗ್ಗೆ ದಾಖಲೆ ಸಮೇತ ದೂರು ಕೊಟ್ಟೆ. ಆದರೆ ಪ್ರಯೋಜನವಾಗಲಿಲ್ಲ. ಅವರ ಹುಟ್ಟಹಬ್ಬವನ್ನೇ ಕ್ಷೇತ್ರದಲ್ಲಿ ಅದ್ಧೂರಿಯಾಗಿ ಮಾಡಿದರು. ಇದೆಲ್ಲ ಏನ್ ಅರ್ಥ? ಬಸವರಾಜ ಬೊಮ್ಮಾಯಿ ಅವರು ಮುಖ್ಯಮಂತ್ರಿಯಾದಾಗ ನನ್ನನ್ನು ಯಡಿಯೂರಪ್ಪ ಉಳಿಸಿಕೊಂಡರು. ಯಡಿಯೂರಪ್ಪನವರ ವಿರುದ್ಧ ಐದಾರು ಜನರು ಮಾತನಾಡಿದರು. ಅವರ ವಿರುದ್ಧ ಪಕ್ಷದಲ್ಲಿ ಕ್ರಮ ತೆಗೆದುಕೊಳ್ಳಲಿಲ್ಲ. ಇದು ಕೂಡ ಪಕ್ಷದ ಹಿನ್ನೆಡೆಗೆ ಕಾರಣ ಅಸಮಾಧಾನ ಹೊರಹಾಕಿದರು. ಇದನ್ನೂ ಓದಿ: ಬಿಜೆಪಿ ಜೊತೆ ಮೈತ್ರಿಗೆ ಈಗಲೂ ನನ್ನ ವಿರೋಧವಿದೆ – ಜೆಡಿಎಸ್‌ ವಿರುದ್ಧ ಕಂದಕೂರು ರೆಬೆಲ್‌

siddaramaiah s.t.somshekar

ಬಿಜೆಪಿ ಬರ ಅಧ್ಯಯನಕ್ಕೆ ವಿರೋಧ
ನಿಮ್ಮದೇ ಕೇಂದ್ರ ಸರ್ಕಾರ ಇದೆ. ನೀವು ಕೇಂದ್ರಕ್ಕೆ ಮನವರಿಕೆ ಮಾಡುವ ಕೆಲಸ ಮಾಡಿ ಎಂದು ಬಿಜೆಪಿ ಬರ ಅಧ್ಯಯನಕ್ಕೆ ಸ್ವಪಕ್ಷದವರೇ ಆದ ಶಾಸಕ ಎಸ್.ಟಿ.ಸೋಮಶೇಖರ್ ವಿರೋಧ ವ್ಯಕ್ತಪಡಿಸಿದರು.

ಅಧಿಕಾರಿಗಳು ಬರಕ್ಕೆ ಸಂಬಂಧಿಸಿದಂತೆ ಅಧ್ಯಯನ ಮಾಡಿ ಹೋಗಿದ್ದಾರೆ. ನೀವು ಕೇಂದ್ರಕ್ಕೆ ಮನವರಿಕೆ ಮಾಡುವ ಕೆಲಸ ಮಾಡಿ. ಅದನ್ನು ಬಿಟ್ಟು ಇಲ್ಲಿ ಪ್ರವಾಸ ಮಾಡಿದರೆ ಏನು ಪ್ರಯೋಜನ? ನಿಮ್ಮ ಬರ ಅಧ್ಯಯನ ಪ್ರವಾಸದಿಂದ ಯಾವುದೇ ಪ್ರಯೋಜನ ಇಲ್ಲ ಎಂದು ಟೀಕಿಸಿದರು. ಇದನ್ನೂ ಓದಿ: ಜೆಡಿಎಸ್‌ನಲ್ಲಿ ಮುಂದುವರಿದ ಶಾಸಕ ಶರಣಗೌಡ ಕಂದಕೂರು ಅಸಮಾಧಾನ – ಸಭೆಗೆ ಹಾಜರಾಗದೇ ವರಿಷ್ಠರಿಗೆ ಸೆಡ್ಡು

TAGGED:bjpcongressmysurus.t.somashekarಎಸ್‌.ಟಿ.ಸೋಮಶೇಖರ್‌ಕಾಂಗ್ರೆಸ್ಬಿಜೆಪಿಮೈಸೂರು
Share This Article
Facebook Whatsapp Whatsapp Telegram

You Might Also Like

Iran Israel
Latest

ಇರಾನ್‌ ಮೇಲೆ ಯಾವುದೇ ಕ್ಷಣದಲ್ಲೂ ದಾಳಿ – ದೊಡ್ಡ ಎಚ್ಚರಿಕೆ ಕೊಟ್ಟ ಇಸ್ರೇಲ್‌

Public TV
By Public TV
5 minutes ago
allu arjun received gaddar film award as best actor for pushpa 2 movie 2
Cinema

ಸಿಎಂ ರೇವಂತ್ ರೆಡ್ಡಿ ಕೈಯಿಂದ ಉತ್ತಮ ನಟ ಪ್ರಶಸ್ತಿ ಸ್ವೀಕರಿಸಿದ ಅಲ್ಲು ಅರ್ಜುನ್‌

Public TV
By Public TV
9 minutes ago
Honeymoon Murder
Crime

ಪತಿ ಕೊಲೆ ಬಳಿಕ ಇಂದೋರ್‌ನ ಫ್ಲ್ಯಾಟ್‌ನಲ್ಲಿ ವಾಸವಿದ್ದ ಹನಿಮೂನ್ ಹಂತಕಿ

Public TV
By Public TV
30 minutes ago
11A Seat
Latest

ಮೃತ್ಯುಂಜಯ `ವಿಶ್ವಾಸ್ ಎಫೆಕ್ಟ್’ – 11A ಲಕ್ಕಿ ಸೀಟಿಗೆ ಫುಲ್ ಡಿಮ್ಯಾಂಡ್!

Public TV
By Public TV
31 minutes ago
Fire Accident Dubai UAE
Latest

ದುಬೈನ 67 ಅಂತಸ್ತಿನ ಕಟ್ಟಡದಲ್ಲಿ ಭಾರೀ ಅಗ್ನಿ ಅವಘಡ – 4,000 ಜನರ ಸ್ಥಳಾಂತರ

Public TV
By Public TV
44 minutes ago
US Senator
Latest

ಅಮೆರಿಕದ ರಾಜಕಾರಣಿಗಳ ಮನೆಯೊಳಗೇ ಗುಂಡಿನ ದಾಳಿ – ಶಾಸಕಿ ಮೆಲಿಸ್ಸಾ, ಪತಿ ಹತ್ಯೆ; ಓರ್ವ ಸಂಸದನಿಗೆ ಗಾಯ

Public TV
By Public TV
46 minutes ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?