Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಲೋಕಸಭಾ ಚುನಾವಣೆಗೂ ಮುನ್ನ I.N.D.I.A ಒಕ್ಕೂಟದಲ್ಲಿ ಒಡಕು – ಚೂರನ್ನು ಮತ್ತೆ ಜೋಡಿಸುತ್ತಾ ಕಾಂಗ್ರೆಸ್‌?
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Latest | ಲೋಕಸಭಾ ಚುನಾವಣೆಗೂ ಮುನ್ನ I.N.D.I.A ಒಕ್ಕೂಟದಲ್ಲಿ ಒಡಕು – ಚೂರನ್ನು ಮತ್ತೆ ಜೋಡಿಸುತ್ತಾ ಕಾಂಗ್ರೆಸ್‌?

Latest

ಲೋಕಸಭಾ ಚುನಾವಣೆಗೂ ಮುನ್ನ I.N.D.I.A ಒಕ್ಕೂಟದಲ್ಲಿ ಒಡಕು – ಚೂರನ್ನು ಮತ್ತೆ ಜೋಡಿಸುತ್ತಾ ಕಾಂಗ್ರೆಸ್‌?

Public TV
Last updated: February 28, 2024 5:29 pm
Public TV
Share
5 Min Read
INDIA Bloc
SHARE

ಲೋಕಸಭಾ ಚುನಾವಣೆಗೆ (General Elections 2024) ವೇದಿಕೆ ಸಿದ್ಧವಾಗಿದೆ. ಅಖಾಡದಲ್ಲಿ ಸೆಣಸಾಡಲು ಪೈಲ್ವಾನರು ತೆರೆಮರೆಯಲ್ಲಿ ಕಸರತ್ತು ನಡೆಸುತ್ತಿದ್ದಾರೆ. ಒಂದೆಡೆ ಆಡಳಿತಾರೂಢ ಬಿಜೆಪಿ (BJP) ನೇತೃತ್ವದ ಎನ್‌ಡಿಎ ಒಕ್ಕೂಟ (NDA) ಹ್ಯಾಟ್ರಿಕ್ ಗೆಲುವಿನ ನಿರೀಕ್ಷೆಯಲ್ಲಿದೆ. ಮತ್ತೊಂದೆಡೆ ಎನ್‌ಡಿಎ ಒಕ್ಕೂಟವನ್ನು ಮಟ್ಟಹಾಕಲು ಒಂದಾಗಿದ್ದ ಯುಪಿಎ ನೇತೃತ್ವದ ಇಂಡಿಯಾ ಮೈತ್ರಿಕೂಟ ಈಗ ನಾಲ್ಕು ದಿಕ್ಕಿಗೂ ಹರಿದು ಹಂಚಿಹೋಗಿದೆ. ಒಡೆದ ಮಡಿಕೆಯಂತಾಗಿರುವ ಮೈತ್ರಿಕೂಟವನ್ನು ಮತ್ತೆ ಜೋಡಿಸುತ್ತಾ ಕಾಂಗ್ರೆಸ್?

ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಎನ್‌ಡಿಎ ಒಕ್ಕೂಟ ಮತ್ತೊಂದು ಗೆಲುವು ಸಾಧಿಸುವುದನ್ನು ತಡೆಯಲು ರಚಿಸಲಾಗಿದ್ದ ‘ಇಂಡಿಯಾ’ ಬಣವು (INDIA Alliance) ಶಿಥಿಲಗೊಳ್ಳುತ್ತಿರುವಂತೆ ತೋರುತ್ತಿದೆ. ಮೈತ್ರಿಕೂಟದ ಭಾಗವಾಗಿದ್ದ ತೃಣಮೂಲ ಕಾಂಗ್ರೆಸ್ ಸಮಿತಿ (ಟಿಎಂಸಿ), ಜೆಡಿಯು, ಆರ್‌ಎಲ್‌ಡಿ ಪಕ್ಷಗಳು ಸೀಟು ಹಂಚಿಕೆ ವಿಚಾರದಲ್ಲಿ ಕಾಂಗ್ರೆಸ್‌ಗೆ ನೀಡಿದ್ದ ತಮ್ಮ ಬೆಂಬಲವನ್ನು ಹಿಂತೆಗೆದುಕೊಂಡಿವೆ. ಲೋಕಸಭೆ ಚುನಾವಣೆಗೆ ಸೀಟು ಹಂಚಿಕೆ ವಿಚಾರವಾಗಿಯೇ ಕಾಂಗ್ರೆಸ್ ವಿರುದ್ಧ ಮುನಿಸಿಕೊಂಡಿದ್ದ ಎಸ್‌ಪಿ ಮತ್ತು ಎಎಪಿ ಸಂಧಾನ ಮಾತುಕತೆ ಬಳಿಕ ಮತ್ತೆ ಮೈತ್ರಿಕೂಟಕ್ಕೆ ವಾಪಸ್ ಆಗಿವೆ. ಮೈತ್ರಿಕೂಟದಲ್ಲಿ ತಲೆದೋರಿರುವ ಭಿನ್ನಾಭಿಪ್ರಾಯವನ್ನು ಕಾಂಗ್ರೆಸ್‌ ಹೇಗೆ ನಿಭಾಯಿಸಲಿದೆ ಎಂಬುದೇ ಯಕ್ಷ ಪ್ರಶ್ನೆಯಾಗಿದೆ. ಇದನ್ನೂ ಓದಿ: I.N.D.I.A ಮೈತ್ರಿಕೂಟದ ಜವಾಬ್ದಾರಿ ಮಲ್ಲಿಕಾರ್ಜುನ್‌ ಖರ್ಗೆ ಹೆಗಲಿಗೆ

INDIA Bloc 1 3

ಕಮಲ ಮುಡಿದ ಜೆಡಿಯು!
ವಿಪಕ್ಷಗಳ ಮೈತ್ರಿಕೂಟಕ್ಕೆ ಐಎನ್‌ಡಿಐಎ ಹೆಸರು ಸೇರಿದಂತೆ ಹಲವು ವಿಚಾರಗಳಿಗಾಗಿ ಮುನಿಸಿಕೊಂಡು ಬಿಹಾರ ಸಿಎಂ ನಿತೀಶ್ ಕುಮಾರ್ ಮಹಾಘಟಬಂಧನದಿಂದ ಹೊರಬಂದರು. ನಂತರ ಮಹಾಘಟಬಂಧನ ಜೊತೆಗಿನ ಮೈತ್ರಿ ತೊರೆದು ಬಿಜೆಪಿ ಸೇರಿ ಬಿಹಾರದಲ್ಲಿ ಸರ್ಕಾರ ರಚಿಸಿದರು. ಇಂಡಿಯಾ ಮೈತ್ರಿಕೂಟದ ಕಥೆ ಈಗ ಮುಗಿದ ಅಧ್ಯಾಯ ಎಂಬ ಮಾತುಗಳನ್ನು ನಿತೀಶ್ ಕುಮಾರ್ ಆಡುತ್ತಿದ್ದಾರೆ. ಇಂಡಿಯಾ ಒಕ್ಕೂಟದ ಅವಿಭಾಜ್ಯ ಅಂಗವೇ ಆಗಿದ್ದ ಜೆಡಿಯು ಇನ್ಮುಂದೆ ಮೈತ್ರಿಯ ಭಾಗವಾಗಿಲ್ಲ. ಅಲ್ಲಿ ಎಲ್ಲವೂ ಸರಿಯಿಲ್ಲ ಎಂದು ನಿತೀಶ್ ಕುಮಾರ್ ಮೈತ್ರಿಕೂಟದಿಂದ ಹೊರಬರುತ್ತಿದ್ದಂತೆ ಅನೇಕ ರಾಜಕೀಯ ಬೆಳವಣಿಗೆಗಳು ನಡೆದವು. ಇದು ಇಂಡಿಯಾ ಬಣಕ್ಕೆ ನುಂಗಲಾರದ ತುತ್ತಾಗಿ ಪರಿಣಮಿಸಿತು.

ಟಿಎಂಸಿ ಜೊತೆಗಿನ ಮೈತ್ರಿ ಏನಾಯ್ತು?
ಮೈತ್ರಿಕೂಟದಿಂದ ಜೆಡಿಯು ಹೊರಬರುತ್ತಿದ್ದಂತೆ ಇತ್ತ ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ನೇತೃತ್ವದ ಟಿಎಂಸಿಯಲ್ಲೂ ಅಸಮಾಧಾನ ಸ್ಫೋಟಿಸಿತು. ಲೋಕಸಭೆ ಚುನಾವಣೆಯಲ್ಲಿ ಬಂಗಾಳದಲ್ಲಿ ಪಕ್ಷ ಏಕಾಂಗಿಯಾಗಿ ಸ್ಪರ್ಧಿಸಲಿದೆ. ಕಾಂಗ್ರೆಸ್ ಜೊತೆಗೆ ಯಾವುದೇ ಮೈತ್ರಿ ಇಲ್ಲ ಎಂದು ಕಳೆದ ತಿಂಗಳು ಬ್ಯಾನರ್ಜಿ ಘೋಷಿಸಿದ್ದರು. ಮೈತ್ರಿಕೂಟದ ಜೊತೆಗಿನ ಟಿಎಂಸಿ ಮುನಿಸು ಇನ್ನೂ ಶಮನವಾದಂತೆ ಕಾಣುತ್ತಿಲ್ಲ. ಇದನ್ನೂ ಓದಿ: I.N.D.I.A ಮೈತ್ರಿಕೂಟದಿಂದ ಹೊರಬಂದ ಆಪ್‌

2019 ರ ಚುನಾವಣೆಯಲ್ಲಿ ಪಶ್ಚಿಮ ಬಂಗಾಳದಲ್ಲಿ ಟಿಎಂಸಿ 22 ಸ್ಥಾನಗಳನ್ನು ಗೆದ್ದಿತ್ತು. ಬಿಜೆಪಿ 18 ಹಾಗೂ ಕಾಂಗ್ರೆಸ್ 2 ಸ್ಥಾನಗಳಲ್ಲಿ ಗೆಲುವು ಸಾಧಿಸಿದ್ದವು. ಈ ಹಿನ್ನೆಲೆಯಲ್ಲಿ ಈ ಬಾರಿಯ ಲೋಕಸಭಾ ಚುನಾವಣೆಗೆ ಸೀಟು ಹಂಚಿಕೆ ವಿಚಾರವಾಗಿ ಟಿಎಂಸಿ ಮತ್ತು ಕಾಂಗ್ರೆಸ್ ನಡುವೆ ಒಮ್ಮತ ಮೂಡಲಿಲ್ಲ. ಕಾಂಗ್ರೆಸ್ ಹೆಚ್ಚಿನ ಸ್ಥಾನಗಳಿಗೆ ಪಟ್ಟು ಹಿಡಿದಿದೆ. ಟಿಎಂಸಿ ಕೂಡ ತನ್ನ ಹಠ ಬಿಡುತ್ತಿಲ್ಲ. ಹೀಗಾಗಿ ಎರಡೂ ಪಕ್ಷಗಳ ನಡುವೆ ಅಸಮಾಧಾನ ಹಾಗೆಯೇ ಮುಂದುವರಿದಿದೆ.

INDIA Bloc 1 4

ಎಎಪಿ ಜೊತೆ ಸಂಧಾನ?
ಪಂಜಾಬ್‌ನಲ್ಲಿ 2019 ರ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ 8, ಎಸ್‌ಎಡಿ ಮತ್ತು ಬಿಜೆಪಿ ತಲಾ 2 ಸ್ಥಾನಗಳನ್ನು ಗೆದ್ದಿದ್ದವು. ಈ ಬಾರಿ ಸೀಟು ಹಂಚಿಕೆ ಸಂಬಂಧ ಎಎಪಿ-ಕಾಂಗ್ರೆಸ್ ನಡುವೆ ಹಗ್ಗಜಗ್ಗಾಟ ನಡೆದಿತ್ತು. ಸಾರ್ವತ್ರಿಕ ಚುನಾವಣೆಗೆ ಪಂಜಾಬ್‌ನಲ್ಲಿ 13 ಮತ್ತು ಚಂಡೀಗಢದಲ್ಲಿ 1 ಸ್ಥಾನಕ್ಕಾಗಿ ಕಾಂಗ್ರೆಸ್ ಜೊತೆ ಮೈತ್ರಿ ಮಾಡಿಕೊಳ್ಳುವ ಯಾವುದೇ ಉದ್ದೇಶವಿಲ್ಲ ಎಂದು ಕೆಲದಿನಗಳ ಹಿಂದಷ್ಟೇ ಕೇಜ್ರಿವಾಲ್ ಸ್ಪಷ್ಟಪಡಿಸಿದ್ದರು. ಮೈತ್ರಿಕೂಟದ ಒಡಕಿನಿಂದ ಎಚ್ಚೆತ್ತ ಕಾಂಗ್ರೆಸ್ ಕೇಜ್ರಿವಾಲ್ ಜೊತೆಗೆ ಸಂಧಾನ ಮಾತುಕತೆಯಾಡಿತು. ಈಗ ಎರಡೂ ಪಕ್ಷಗಳ ನಡುವೆ ಸೀಟು ಹಂಚಿಕೆ ಮಾತುಕತೆ ಅಂತಿಮ ಹಂತದಲ್ಲಿದೆ. ಅಧಿಕೃತ ಘೋಷಣೆಯೊಂದೇ ಬಾಕಿ ಇದೆ.

ಎಸ್‌ಪಿ-ಕಾಂಗ್ರೆಸ್ ಮುನಿಸು ಶಮನ?
ಚುನಾವಣೆಯಲ್ಲಿ ಸೀಟು ಹಂಚಿಕೆ ಸಂಬಂಧವೇ ಮೈತ್ರಿಕೂಟದಿಂದ ದೂರವಾಗಿದ್ದ ಸಮಾಜವಾದಿ ಪಕ್ಷ ಈಗ ಮತ್ತೆ ಒಂದಾಗಿದೆ. ಉತ್ತರ ಪ್ರದೇಶದಲ್ಲಿ ಕಾಂಗ್ರೆಸ್ ಜೊತೆ ಸೀಟು ಹಂಚಿಕೆ ಪ್ರಕ್ರಿಯೆ ಮುಗಿಸಿದೆ. ಯುಪಿ ಯಲ್ಲಿ ಕಾಂಗ್ರೆಸ್‌ಗೆ 11 ಕ್ಷೇತ್ರಗಳನ್ನು ಬಿಟ್ಟುಕೊಡುವುದಾಗಿ ಎಸ್‌ಪಿ ಹೇಳಿತ್ತು. ಆದರೆ ಇದಕ್ಕೆ ಕಾಂಗ್ರೆಸ್ ತಕರಾರು ತೆಗೆದು ಹೆಚ್ಚಿನ ಸ್ಥಾನಕ್ಕೆ ಬೇಡಿಕೆ ಇಟ್ಟಿತ್ತು. ಇದಕ್ಕೆ ಎಸ್‌ಪಿ ಒಪ್ಪಿಗೆ ಸೂಚಿಸಿರಲಿಲ್ಲ. ಅಲ್ಲದೇ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ನೇತೃತ್ವದಲ್ಲಿ ನಡೆಯುತ್ತಿರುವ ಭಾರತ್ ಜೋಡೋ ನ್ಯಾಯ ಯಾತ್ರೆಯಲ್ಲಿ ಪಾಲ್ಗೊಳ್ಳುವುದಿಲ್ಲ ಎಂದೂ ಸಹ ಅಖಿಲೇಶ್ ಯಾದವ್ ಘೋಷಿಸಿದ್ದರು. ಆದರೀಗ ಎರಡೂ ಪಕ್ಷಗಳು ಒಂದಾಗಿವೆ. ಇದನ್ನೂ ಓದಿ: INDIA ಮೈತ್ರಿಕೂಟ ನಮ್ಮ ನಂಬಿಕೆಗೆ ಧಕ್ಕೆ ತರುತ್ತಿದೆ: ಮೋದಿ

INDIA Bloc 1 1

ಯುಪಿಯಲ್ಲಿ ರಾಷ್ಟ್ರೀಯ ಲೋಕದಳ ಕೈ ಕೊಟ್ಟ ಕಾರಣ, ಕಾಂಗ್ರೆಸ್‌ಗೆ 17 ಕ್ಷೇತ್ರಗಳನ್ನು ಬಿಟ್ಟುಕೊಡಲು ಎಸ್‌ಪಿ ಒಪ್ಪಿಗೆ ಸೂಚಿಸಿದೆ. ಸಂಧಾನ ಮಾತುಕತೆ ಯಶಸ್ವಿಯಾದ ಬೆನ್ನಲ್ಲೇ ಉತ್ತರ ಪ್ರದೇಶ ತಲುಪಿದ್ದ ರಾಹುಲ್ ಗಾಂಧಿ ಯಾತ್ರೆಯನ್ನು ಅಖಿಲೇಶ್ ಯಾದವ್ ಸೇರಿಕೊಂಡರು. ಉಭಯ ಪಕ್ಷಗಳ ನಾಯಕರೂ ಶಕ್ತಿ ಪ್ರದರ್ಶನ ಮಾಡಿದರು. ಮೈತ್ರಿಕೂಟದೊಂದಿಗೆ ಚುನಾವಣೆ ಎದುರಿಸಲಾಗುವುದು ಎಂದು ಅಖಿಲೇಶ್ ಘೋಷಿಸಿದ್ದಾರೆ.

ಕಾಂಗ್ರೆಸ್ ನಿಲುವೇನು?
ಟಿಎಂಸಿ ಇಲ್ಲದ ಮೈತ್ರಿಕೂಟವನ್ನು ಪಕ್ಷವು ಊಹಿಸಿಕೊಳ್ಳಲು ಸಾಧ್ಯವಿಲ್ಲ ಎಂದು ಹಿರಿಯ ಕಾಂಗ್ರೆಸ್ ಸಂಸದ ಜೈರಾಮ್ ರಮೇಶ್ ಹೇಳಿದ್ದಾರೆ. ಮುಂಬರುವ ಚುನಾವಣೆಯಲ್ಲಿ 255 ಸ್ಥಾನಗಳಲ್ಲಿ ಸ್ಪರ್ಧಿಸುವುದಾಗಿ ಕಾಂಗ್ರೆಸ್ ಕಳೆದ ತಿಂಗಳು ಘೋಷಿಸಿತ್ತು. ಇದು 2019 ರ ಲೋಕಸಭೆ ಚುನಾವಣೆಗಿಂತ ಕಡಿಮೆ ಸಂಖ್ಯೆಯ ಸ್ಥಾನಗಳನ್ನು ಹೊಂದಿದೆ. ಇದನ್ನೂ ಓದಿ: ಇಂಡಿಯಾ ಮೈತ್ರಿಕೂಟದಲ್ಲಿ ಯಾವುದೇ ಪ್ರಗತಿ ಕಾಣುತ್ತಿಲ್ಲ: ನಿತೀಶ್‌ ಕುಮಾರ್‌ ಬೇಸರ

ಕಳೆದ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ 421 ಸ್ಥಾನಗಳಲ್ಲಿ ಸ್ಪರ್ಧಿಸಿ 52 ಸ್ಥಾನಗಳನ್ನು ಗೆದ್ದಿತ್ತು. ಇದು ಬಿಹಾರದ ಆರ್‌ಜೆಡಿ, ಮಹಾರಾಷ್ಟ್ರದ ಎನ್‌ಸಿಪಿ, ಕರ್ನಾಟಕದ ಜೆಡಿಎಸ್, ಜಾರ್ಖಂಡ್‌ನ ಜೆಎಂಎಂ ಮತ್ತು ತಮಿಳುನಾಡಿನ ಡಿಎಂಕೆ ಜೊತೆ ಮೈತ್ರಿಯ ಭಾಗವಾಗಿತ್ತು. ಸ್ಥಳೀಯ ಪಕ್ಷಗಳ ಪ್ರಭಾವವನ್ನು ದೃಷ್ಟಿಯಲ್ಲಿಟ್ಟುಕೊಂಡು ಪ್ರತಿ ರಾಜ್ಯಗಳಲ್ಲಿ ಇಂಡಿಯಾ ಒಕ್ಕೂಟದ ಪಕ್ಷಗಳ ಜೊತೆ ಮಾತುಕತೆ ನಡೆಸಲು ನಿರ್ಧರಿಸಲಾಗಿದೆ ಎಂದು ಕಾಂಗ್ರೆಸ್ ತಿಳಿಸಿದೆ. ಪಕ್ಷಗಳ ಭಿನ್ನಾಭಿಪ್ರಾಯಗಳನ್ನು ಶಮನ ಮಾಡಿ, ಪಕ್ಷದ ಆಂತರಿಕ ವಿಚಾರಗಳ ಬಗ್ಗೆ ಪರಸ್ಪರ ಟೀಕೆ ಮಾಡದಂತೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹೇಳಿದ್ದಾರೆ.

INDIA Bloc 1 2

ಮುಂದಿನ ನಡೆ ಏನು?
7 ತಿಂಗಳ ಹಿಂದೆ ಪಾಟ್ನಾದಲ್ಲಿ ರಚನೆಯಾದಾಗಿನಿಂದ 28 ವಿಪಕ್ಷಗಳ ಇಂಡಿಯಾ ಬಣವು ಮತದಾರರನ್ನು ಸೆಳೆಯಲು ಯಾವುದೇ ದೊಡ್ಡ ಕಾರ್ಯಕ್ರಮವನ್ನು ಹಮ್ಮಿಕೊಂಡಿಲ್ಲ. ಆದರೆ ಒಕ್ಕೂಟದ ಪಕ್ಷಗಳಲ್ಲೇ ಆಂತರಿಕ ಭಿನ್ನಾಭಿಪ್ರಾಯದಿಂದಾದ ಗಾಯವೇ ದೊಡ್ಡದಾಗಿದೆ. ಗಾಯಕ್ಕೆ ಮುಲಾಮು ಹಚ್ಚಿ, ಚುನಾವಣೆಯಲ್ಲಿ ಒಕ್ಕೂಟದ ಪಕ್ಷಗಳನ್ನು ಒಟ್ಟಿಗೆ ತೆಗೆದುಕೊಂಡು ಹೋಗುವ ಸವಾಲು ಕಾಂಗ್ರೆಸ್ ಮುಂದಿದೆ.

ಸೀಟು ಹಂಚಿಕೆ ಒಪ್ಪಂದಗಳು ಮತ್ತು ಚುನಾವಣೋತ್ತರ ಮೈತ್ರಿಯನ್ನು ಅವಲಂಬಿಸಿ ರಾಜ್ಯಗಳ ಜೊತೆಗಿನ ಮೈತ್ರಿಯನ್ನು ಕಾಂಗ್ರೆಸ್ ನೋಡಬೇಕಿದೆ. ಪ್ರಮುಖ ರಾಜ್ಯಗಳಾದ ರಾಜಸ್ಥಾನ, ಮಧ್ಯಪ್ರದೇಶ, ಛತ್ತೀಸಗಢವನ್ನು ಕಾಂಗ್ರೆಸ್ ಕಳೆದುಕೊಂಡಿರುವುದು, ಅಶೋಕ್ ಗೆಹ್ಲೋಟ್ ಮತ್ತು ಸಚಿನ್ ಪೈಲಟ್ ನಡುವಿನ ಸಂಘರ್ಷ, ಆಡಳಿತ ವಿರೋಧಿ ಅಲೆ (ಹಿರಿಯ ನಾಯಕ ಕಮಲ್ ನಾಥ್), ಅತಿಯಾದ ಆತ್ಮವಿಶ್ವಾಸ (ಭೂಪೇಶ್ ಬಘೇಲ್) ಮತ್ತು ರಾಜ್ಯ ನಾಯಕತ್ವಕ್ಕೆ ಪ್ರಾಮುಖ್ಯತೆ ಇಲ್ಲದಿರುವುದು ಕಾಂಗ್ರೆಸ್ ಅವನತಿಗೆ ಕಾರಣವಾಗಬಹುದು. ಇದೆಲ್ಲವನ್ನೂ ಅರಿತು ಎಚ್ಚರಿಕೆಯಿಂದ ಹೆಜ್ಜೆ ಇಡಬೇಕಾದ ಮತ್ತೊಂದು ಸವಾಲು ಕೂಡ ಕಾಂಗ್ರೆಸ್ ಮುಂದೆ ಈಗ ಇದೆ. ಇದನ್ನೂ ಓದಿ: INDIA ಮೈತ್ರಿಕೂಟ ನಮ್ಮ ನಂಬಿಕೆಗೆ ಧಕ್ಕೆ ತರುತ್ತಿದೆ: ಮೋದಿ

TAGGED:2024 lok sabha electionaapbjpcongressINDIA BlocjduRLDTMC
Share This Article
Facebook Whatsapp Whatsapp Telegram

Cinema news

rishab shetty public tv anniversary
ಪಬ್ಲಿಕ್‌ ಟಿವಿಗೆ ಇನ್ನೂ ಟೀನೇಜ್‌, ರಂಗಣ್ಣ ಸರ್‌ ಈ ಸಮಾಜಕ್ಕೆ ದೊಡ್ಡ ಕೊಡುಗೆ: ರಿಷಬ್‌ ಶೆಟ್ಟಿ
Bengaluru City Cinema Latest Main Post Sandalwood
Sathish Ninasam Public TV Anniversary
ಆಟೋ ಡ್ರೈವರ್‌ಗಳಿಂದ ಕಾರಿನಲ್ಲಿ ಓಡಾಡೋರು ನಿಮ್ಮನ್ನ ಇಷ್ಟ ಪಡ್ತಾರೆ, ರಂಗಣ್ಣ ಸರ್‌ ಮಾಸ್‌ ಹೀರೋ: ನೀನಾಸಂ ಸತೀಶ್‌ ಬಣ್ಣನೆ
Bengaluru City Cinema Latest Main Post Sandalwood
Toxic
ʻಟಾಕ್ಸಿಕ್‌ʼ ಚಿತ್ರತಂಡಕ್ಕೆ ಮತ್ತೊಂದು ಸಂಕಷ್ಟ – ಸಿನಿಮಾ ವಿರುದ್ಧ ಕ್ರೈಸ್ತರ ಒಕ್ಕೂಟ ದೂರು
Bengaluru City Cinema Latest Main Post Sandalwood
nandini milk sudha rani
ನಂದಿನಿ ಉತ್ಪನ್ನಗಳ ಪ್ರಚಾರ ರಾಯಭಾರಿಯಾಗಿ ನಟಿ ಸುಧಾರಾಣಿ ಆಯ್ಕೆ
Bengaluru City Cinema Latest Main Post Sandalwood

You Might Also Like

Ashok Pattan
Karnataka

ಸಿದ್ದರಾಮಯ್ಯ ಅಲ್ಲದೇ ಬೇರೆ ಯಾರೇ ಸಿಎಂ ಆದ್ರೂ ಸರ್ಕಾರ ನಡೆಸೋದು ಕಷ್ಟ: ಅಶೋಕ್‌ ಪಟ್ಟಣ್

Public TV
By Public TV
12 minutes ago
siddaramaiah sunil kumar
Bengaluru City

ಸಿಎಂ ವಿರುದ್ಧ ಶಾಸಕ ಸುನಿಲ್ ಕುಮಾರ್ ಲೆಟರ್ ಬಾಂಬ್ – ಆರೋಗ್ಯ ಇಲಾಖೆಯಿಂದ ಅಬಕಾರಿ ಇಲಾಖೆಗೆ ಶಿಫಾರಸ್ಸು ಮಾಡಿದ್ರಾ!?

Public TV
By Public TV
18 minutes ago
Accident 4
Bengaluru City

ಹೊಸಕೋಟೆ ಡೆಡ್ಲಿ ಆಕ್ಸಿಡೆಂಟ್ – ಬದುಕಿ ಬಾಳಬೇಕಿದ್ದ, ಮನೆಗೆ ಆಧಾರ ಸ್ತಂಭವಾಗಿದ್ದ ಮಕ್ಕಳು ಬೀದಿ ಹೆಣ

Public TV
By Public TV
27 minutes ago
Lucknow Accident
Crime

ಫೇರ್‌ವೆಲ್‌ ಪಾರ್ಟಿ ಮುಗಿಸಿ ವಾಪಸ್‌ ಆಗ್ತಿದ್ದ ವಿದ್ಯಾರ್ಥಿ ಕಾರು ಡಿಕ್ಕಿ; 6 ವರ್ಷದ ಬಾಲಕ ಸಾವು

Public TV
By Public TV
38 minutes ago
DK Shivakumar 1
Bengaluru City

ಅಕ್ಕಪಕ್ಕದಲ್ಲಿ ಕುಳಿತರೂ ಮಾತನಾಡದ ಸಿಎಂ-ಡಿಸಿಎಂ; ʻಕುರ್ಚಿ ಕದನʼ ಮುನಿಸು ಜೋರಾಯ್ತಾ?

Public TV
By Public TV
46 minutes ago
mumbai murder
Crime

ಮುಂಬೈನಲ್ಲಿ ತನ್ನ ಲವ್ವರ್‌ನ ಟೀನೇಜ್‌ ಗರ್ಲ್‌ಫ್ರೆಂಡ್‌ ಮುಖಕ್ಕೆ ಗುಂಡು ಹಾರಿಸಿ ಕೊಂದ ಯುವತಿ

Public TV
By Public TV
1 hour ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?