Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಮತ್ತೊಮ್ಮೆ ಸಾಬೀತು – ಚಿಂಚೋಳಿಯಲ್ಲಿ ಗೆದ್ದವರಿಗೆ ವಿಧಾನಸಭೆಯ ಗದ್ದುಗೆ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | ಮತ್ತೊಮ್ಮೆ ಸಾಬೀತು – ಚಿಂಚೋಳಿಯಲ್ಲಿ ಗೆದ್ದವರಿಗೆ ವಿಧಾನಸಭೆಯ ಗದ್ದುಗೆ

Districts

ಮತ್ತೊಮ್ಮೆ ಸಾಬೀತು – ಚಿಂಚೋಳಿಯಲ್ಲಿ ಗೆದ್ದವರಿಗೆ ವಿಧಾನಸಭೆಯ ಗದ್ದುಗೆ

Public TV
Last updated: July 24, 2019 8:00 pm
Public TV
Share
3 Min Read
BJP FINAL
SHARE

ಕಲಬುರಗಿ: ಚಿಂಚೋಳಿ ವಿಧಾನಸಭಾ ಕ್ಷೇತ್ರದ ಮಹಿಮೆಯೋ ಅಥವಾ ಕಾಕತಾಳೀಯವೋ ಗೊತ್ತಿಲ್ಲ. ಈ ಕ್ಷೇತ್ರದಿಂದ ರಾಜ್ಯ ವಿಧಾನಸಭೆಗೆ ಯಾವ ಪಕ್ಷ ಆಯ್ಕೆ ಆಗುತ್ತೋ ಅದೇ ಪಕ್ಷ ರಾಜ್ಯದ ಆಡಳಿತದ ಚುಕ್ಕಾಣಿ ಹಿಡಿಯುತ್ತಿರುವುದು ವಿಶೇಷ.

ಚಿಂಚೋಳಿ ವಿಧಾನಸಭಾ ಕ್ಷೇತ್ರ ರಾಜ್ಯದ 224 ವಿಧಾನಸಭಾ ಕ್ಷೇತ್ರಗಳಲ್ಲೇ ಅತ್ಯಂತ ವಿಶಿಷ್ಟ ಮತ್ತು ವಿಶೇಷ. ಚಿಂಚೋಳಿ ವಿಧಾನಸಭಾ ಕ್ಷೇತ್ರದ ಇತಿಹಾಸದ ಪುಟಗಳನ್ನು ಬಿಚ್ಚಿದ್ದಾಗ ಚಿಂಚೋಳಿಯ ಮಹಿಮೆ ಏನು ಎನ್ನುವುದು ಅರ್ಥವಾಗುತ್ತದೆ. ಯಾಕೆಂದರೆ 1957 ರಿಂದ ಇಲ್ಲಿಯವರೆಗೆ ಚಿಂಚೋಳಿಯಿಂದ ರಾಜ್ಯ ವಿಧಾನಸಭೆಗೆ ಯಾವ ಪಕ್ಷ ಆಯ್ಕೆಯಾಗಿದೆಯೋ ಅದೇ ಪಕ್ಷ ರಾಜ್ಯದಲ್ಲಿ ಆಡಳಿತ ನಡೆಸಿರುವುದು ನೂರಕ್ಕೆ ನೂರರಷ್ಟು ಸತ್ಯವಾಗಿದೆ.

Congress BJP JDS

1957 ರಿಂದ 2019ರವರೆಗೆ ನಡೆದ 15 ವಿಧಾನಸಭೆ ಚುನಾವಣೆಯ ಫಲಿತಾಂಶ ಅವಲೋಕಿಸಿದಾಗ ಇತಂಹದೊಂದು ಅಚ್ಚರಿಯ ಸಂಗತಿ ರಾಜ್ಯದ ಜನರ ಮುಂದೆ ತೆರೆದುಕೊಂಡಿದೆ. ಯಾಕೆಂದರೆ 1957 ರಿಂದ 2018ರವರೆಗೆ ಚಿಂಚೋಳಿ ಕ್ಷೇತ್ರದಲ್ಲಿ ಗೆದ್ದಂತಹ ಪಕ್ಷವೇ ರಾಜ್ಯದಲ್ಲಿ ಆಡಳಿತ ನಡೆಸಿದೆ. 2019ರ ಮೇ ನಲ್ಲಿ ನಡೆದ ವಿಧಾನಸಭೆಯ ಉಪಚುನಾವಣೆಯ ಫಲಿತಾಂಶ ಪ್ರಕಟವಾದಗಲೇ ಈ ಕ್ಷೇತ್ರದಲ್ಲಿ ದೋಸ್ತಿ ಸರ್ಕಾರ ಪತನವಾಗಲಿದೆ ಎನ್ನುವ ಚರ್ಚೆ ಆರಂಭವಾಗಿತ್ತು. ಅದರಂತೆ ದೋಸ್ತಿ ಸರ್ಕಾರ ಪತನವಾಗಿ ಇದೀಗ ಬಿಜೆಪಿ ಸರ್ಕಾರ ಆಡಳಿಕ ಚಿಕ್ಕಾಣಿ ಹಿಡಿಯಲು ಸಜ್ಜಾಗಿದೆ. ಈ ಮೂಲಕ ಮತ್ತೊಮ್ಮೆ ಕ್ಷೇತ್ರದ ಮಹಿಮೆ ಇತಿಹಾಸದ ಪುಟ ಸೇರುವಂತೆ ಮಾಡಿದೆ.

ಯಾವ ವರ್ಷ ಗೆದ್ದವರು ಯಾರು?
1. 1957 – ಕಾಂಗ್ರೆಸ್‍ನ ವೀರೆಂದ್ರ ಪಾಟೀಲ್ ಗೆದ್ದಿದ್ದರು. ಆಗ ರಾಜ್ಯದಲ್ಲಿ ಬಿಡಿ ಜತ್ತಿ ನೇತೃತ್ವದ ಕಾಂಗ್ರೆಸ್ ಸರ್ಕಾರ ಆಡಳಿತ ನಡೆಸಿತ್ತು.

2. 1962- ಕಾಂಗ್ರೆಸ್‍ನ ವೀರೆಂದ್ರ ಪಾಟೀಲ್ ಜಯಗಳಿಸಿದ್ದರು. ಈ ವೇಳೆ ಎಸ್.ಆರ್ ಕಂಠಿ ನೇತೃತ್ವದ ಕಾಂಗ್ರೆಸ್ ಸರ್ಕಾರ ಇತ್ತು.

3. 1967- ಮತ್ತೆ ಕಾಂಗ್ರೆಸ್‍ನ ವೀರೆಂದ್ರ ಪಾಟೀಲ್ ಗೆದ್ದಾಗ ಎಸ್ ನಿಜಲಿಂಗಪ್ಪ ನೇತೃತ್ವದ ಕಾಂಗ್ರೆಸ್ ಸರ್ಕಾರ ಅಧಿಕಾರದಲ್ಲಿತ್ತು.

election ink 2

4. 1972 ಮತ್ತು 1977ರಲ್ಲಿ ಕಾಂಗ್ರೆಸ್‍ನ ದೇವೇಂದ್ರಪ್ಪ ಘಾಳಪ್ ಗೆದ್ದು, ದೇವರಾಜು ಅರಸು ನೇತೃತ್ವದ ಕಾಂಗ್ರೆಸ್ ಸರ್ಕಾರ ಆಡಳಿತ ನಡೆಸಿತ್ತು.

5. 1983 – ದೇವೇಂದ್ರಪ್ಪ ಘಾಳಪ್ಪ ಗೆದ್ದಿದ್ದು, ಆಗ ಆರ್ ಗುಂಡುರಾವ್ ನೇತೃತ್ವದ ಕಾಂಗ್ರೆಸ್ ಸರ್ಕಾರ ಅಸ್ತಿತ್ವದಲ್ಲಿತ್ತು.

6. 1989 – ವೀರೇಂದ್ರ ಪಾಟೀಲ್ ಮತ್ತೆ ಜಯಗಳಿಸಿದ್ದರು. ಈ ವೇಳೆ ಅವರ ನೇತೃತ್ವದ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದಿತ್ತು.

7. 1994 – ಜನತಾದಳದಿಂದ ಸ್ಪರ್ಧಿಸಿದ್ದ ವೈಜನಾಥ್ ಪಾಟೀಲ್ ಗೆದ್ದಿದ್ದರು. ಈ ವೇಳೆ ದೇವೇಗೌಡರ ನೇತೃತ್ವದ ಜನತಾದಳ ಸರ್ಕಾರ ಇತ್ತು.

8. 1999 – ಕಾಂಗ್ರೆಸ್‍ನ ಕೈಲಾಸ್‍ನಾಥ್ ಪಾಟೀಲ್ ಜಯಗಳಿಸಿ, ಎಸ್ ಎಂ ಕೃಷ್ಣ ನೇತೃತ್ವದ ಕಾಂಗ್ರೆಸ್ ಸರ್ಕಾರ ಆಡಳಿತ ನಡೆಸಿತ್ತು.

9. 2004 – ಜೆಡಿಎಸ್‍ನಿಂದ ವೈಜನಾಥ್ ಪಾಟೀಲ್ ಗೆದ್ದಿದ್ದರು. ಧರ್ಮಸಿಂಗ್ ನೇತೃತ್ವದ ಮೈತ್ರಿ ಸರ್ಕಾರ ಆಡಳಿತದ ಚುಕ್ಕಾಣಿ ಹಿಡಿದಿತ್ತು.

10. 2008- ಬಿಜೆಪಿ ಸುನೀಲ್ ವಲ್ಯಾಪುರೆ ಆಯ್ಕೆಯಾಗಿ, ಯಡಿಯೂರಪ್ಪ ನೇತೃತ್ವದ ಬಿಜೆಪಿ ಸರ್ಕಾರ ಬಂದಿತ್ತು.

11. 2013 – ಕಾಂಗ್ರೆಸ್ ಉಮೇಶ್ ಜಾಧವ್ ಗೆದ್ದು, ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಅಧಿಕಾರ ಪಡೆದಿತ್ತು.

election 2

12. 2018 – ಉಮೇಶ್ ಜಾಧವ್ ಎರಡನೇ ಬಾರಿ ಜಯಗಳಿಸಿದ್ದು, ಕುಮಾರಸ್ವಾಮಿ ನೇತೃತ್ವದ ಮೈತ್ರಿ ಸರ್ಕಾರ ಆಡಳಿತಕ್ಕೆ ಬಂತು.

13. 2019 – ಉಪಚುನಾವಣೆಯಲ್ಲಿ ಉಮೇಶ್ ಜಾಧವ್ ಪುತ್ರ ಬಿಜೆಪಿ ಅವಿನಾಶ್ ಜಾಧವ್ ಗೆಲುವು ಸಾಧಿಸಿದ್ದರು. ಈಗ ಕರ್ನಾಟಕದಲ್ಲಿ ಯಡಿಯೂರಪ್ಪ ನೇತೃತ್ವದ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಏರಲು ಸಿದ್ಧತೆ ನಡೆಸುತ್ತಿದೆ.

ಇದೀಗ ಅವಿನಾಶ್ ಜಾಧವ್ ಆಯ್ಕೆಯ ಬಳಿಕ ಬಿಜೆಪಿ ಅಧಿಕಾರಕ್ಕೆ ಬರುತ್ತಿರುವುದನ್ನು ನೋಡಿದರೆ, ಚಿಂಚೋಳಿಯ ಇತಿಹಾಸ ಮತ್ತೆ ಮತ್ತೆ ಹೌದು ಎನ್ನುವಂತಾಗಿದೆ. ಆದರೆ ಇಷ್ಟೆಲ್ಲಾ ಇತಿಹಾಸ ಹೊಂದಿರುವ ಚಿಂಚೋಳಿ ಕ್ಷೇತ್ರ ರಾಜ್ಯದ 224 ಕ್ಷೇತ್ರಗಳಲ್ಲೆ ಅತ್ಯಂತ ಹಿಂದುಳಿದಂತಹ ಕ್ಷೇತ್ರವಾಗಿರುವುದು ದುರಾದೃಷ್ಟಕರ ಸಂಗತಿಯಾಗಿದೆ.

avinash jadav1

ಕಲಬುರಗಿ ಜಿಲ್ಲೆಯಿಂದ ರಾಜ್ಯಕ್ಕೆ ಇಬ್ಬರು ಮುಖ್ಯಮಂತ್ರಿಗಳನ್ನು ನೀಡಿದ್ದರೂ ಕೂಡ ಚಿಂಚೋಳಿ ಮಾತ್ರ ಇದುವರೆಗೂ ಅಭಿವೃದ್ಧಿ ಆಗಿಲ್ಲ. ಅಷ್ಟೇ ಅಲ್ಲದೆ ಸ್ವತಃ ಚಿಂಚೋಳಿ ವಿಧಾನಸಭೆಯಿಂದ ಆಯ್ಕೆಯಾದತಂಹ ವೀರೇಂದ್ರ ಪಾಟೀಲ್ ಮುಖ್ಯಮಂತ್ರಿ ಆದಂತಹ ಸಂದರ್ಭದಲ್ಲೂ ಯಾವುದೇ ಅಭಿವೃದ್ಧಿ ಆಗಿಲ್ಲ. ಇನ್ನು ಮುಂದೆ ಬರುವಂತಹ ಸರ್ಕಾರವಾದರೂ ಚಿಂಚೋಳಿಯ ಅಭಿವೃದ್ಧಿಯತ್ತ ಗಮನ ಹರಿಸಲಿ ಎಂದು ಜನ ಕೇಳಿಕೊಂಡಿದ್ದಾರೆ.

TAGGED:ChincholiCoalition GovernmentKalaburagiPublic TVState Governmentಕಲಬುರಗಿಚಿಂಚೋಳಿಪಬ್ಲಿಕ್ ಟಿವಿಮೈತ್ರಿ ಸರ್ಕಾರ ಪತನರಾಜ್ಯ ಸರ್ಕಾರ
Share This Article
Facebook Whatsapp Whatsapp Telegram

Cinema news

Darshan 6
ಜೈಲಿನಲ್ಲಿ ಟಿವಿ ಕೊಟ್ಟಿದ್ದಕ್ಕಾಗಿ ಜಡ್ಜ್‌ಗೆ ಥ್ಯಾಂಕ್ಸ್‌ ಹೇಳಿ ನೇರ ಕೋರ್ಟ್ ವಿಚಾರಣೆಗೆ ದರ್ಶನ್‌ ಮನವಿ
Cinema Crime Karnataka Latest Main Post
Rashmika Mandanna Vijay Devarakonda 1
ನಮ್ಮದು ‘ವಿರೋಶ್‌’ ಜೋಡಿ, ಮದುವೆಗೆ ಬನ್ನಿ..: ಆಮಂತ್ರಣ ನೀಡಿದ ರಶ್ಮಿಕಾ ಮಂದಣ್ಣ
Cinema Latest Top Stories
Ranveer Singh Rishab Shetty Kantara
ದೈವನಿಂದನೆ ಕೇಸಲ್ಲಿ ನಟ ರಣವೀರ್ ಸಿಂಗ್‌ಗೆ ನೋಟಿಸ್
Bollywood Cinema Latest Top Stories
rishab shetty anjanadri hills
ಅಂಜನಾದ್ರಿ ಬೆಟ್ಟಕ್ಕೆ ನಟ ರಿಷಬ್‌ ಶೆಟ್ಟಿ ದಂಪತಿ ಭೇಟಿ‌
Cinema Koppal Latest Sandalwood Top Stories

You Might Also Like

Double Decker Bus Overturns In Lucknow
Crime

ಲಕ್ನೋದಲ್ಲಿ ಡಬಲ್ ಡೆಕ್ಕರ್ ಬಸ್ ಪಲ್ಟಿ – ಐವರು ದುರ್ಮರಣ, 16 ಮಂದಿಗೆ ಗಾಯ

Public TV
By Public TV
3 minutes ago
ಸಾಂದರ್ಭಿಕ ಚಿತ್ರ
Bengaluru City

ಜಕ್ಕೂರಿನಲ್ಲಿ ಸಿಎಂ, ಡಿಸಿಎಂ ಜೊತೆ ಸುರ್ಜೇವಾಲಾ ಕ್ಲೋಸ್‌ ಡೋರ್‌ ಮೀಟಿಂಗ್‌

Public TV
By Public TV
15 minutes ago
Baldota Factory
Districts

ಬಲ್ಡೋಟಾ ಕಾರ್ಖಾನೆ ವಿಸ್ತರಣೆ ವಿರೋಧಿಸಿ ಕೊಪ್ಪಳ ಬಂದ್ – ಮಂಗಳವಾರ ಖಾಸಗಿ ಶಾಲೆಗಳಿಗೆ ರಜೆ

Public TV
By Public TV
40 minutes ago
Rahul Gandhi Gym Trainer Mohammad Deepak
Latest

ನಿಮ್ಮ ಜಿಮ್‌ಗೆ ಸೇರುತ್ತೇನೆ: ಜಿಮ್ ಟ್ರೈನರ್ ಮೊಹಮ್ಮದ್ ದೀಪಕ್ ಭೇಟಿಯಾದ ರಾಹುಲ್ ಗಾಂಧಿ

Public TV
By Public TV
1 hour ago
Indias Big Decolonisation Move Chakravarti Rajagopalachari replaces Lutyens at Rashtrapati Bhavan Delhi 1
Latest

ವಸಾಹತುಶಾಹಿ ವಿರುದ್ಧ ಕೇಂದ್ರದ ಸಮರ – ಲುಟ್ಯೆನ್ಸ್ ಪ್ರತಿಮೆ ತೆಗೆದು ರಾಜಗೋಪಾಲಾಚಾರಿ ಪುತ್ಥಳಿ ಅನಾವರಣ

Public TV
By Public TV
2 hours ago
School 3
Bengaluru City

ಮಿಷನ್ ಪ್ರಕೃತಿ | ಕುಂದಾಪುರ, ಚಾ. ನಗರ ಸೇರಿ ರಾಜ್ಯದ 10 ಶಾಲೆಗಳಿಗೆ ʻಅತ್ಯುತ್ತಮ ಶಾಲೆʼ ಪ್ರಶಸ್ತಿ‌

Public TV
By Public TV
3 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?