Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಕನ್ನಂಬಾಡಿ ಕಟ್ಟೆ ಕಟ್ಟಿದ್ದು ವಿಶ್ವೇಶ್ವರಯ್ಯ ಅಲ್ವಂತೆ – ವಿವಾದಕ್ಕೆ ಎಡೆಮಾಡಿಕೊಟ್ಟ ನಂಜರಾಜ ಅರಸ್ ಪುಸ್ತಕ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | ಕನ್ನಂಬಾಡಿ ಕಟ್ಟೆ ಕಟ್ಟಿದ್ದು ವಿಶ್ವೇಶ್ವರಯ್ಯ ಅಲ್ವಂತೆ – ವಿವಾದಕ್ಕೆ ಎಡೆಮಾಡಿಕೊಟ್ಟ ನಂಜರಾಜ ಅರಸ್ ಪುಸ್ತಕ

Districts

ಕನ್ನಂಬಾಡಿ ಕಟ್ಟೆ ಕಟ್ಟಿದ್ದು ವಿಶ್ವೇಶ್ವರಯ್ಯ ಅಲ್ವಂತೆ – ವಿವಾದಕ್ಕೆ ಎಡೆಮಾಡಿಕೊಟ್ಟ ನಂಜರಾಜ ಅರಸ್ ಪುಸ್ತಕ

Public TV
Last updated: June 4, 2017 5:05 pm
Public TV
Share
2 Min Read
MYS CM
SHARE

ಮೈಸೂರು: `ನಾನು ಕನ್ನಂಬಾಡಿ ಕಟ್ಟೆ’ ಹೀಗೊಂದು ಆತ್ಮಕಥೆ ಪುಸ್ತಕವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಇಂದು ಮೈಸೂರಿನ ರಾಣಿಬಹದ್ದೂರು ಇನ್‍ಸ್ಟಿಟ್ಯೂಟ್ ಸಭಾಂಗಣದಲ್ಲಿ ಬಿಡುಗಡೆ ಮಾಡಿದರು.

ಬಳಿಕ ಮಾತನಾಡಿದ ಸಿಎಂ, ಕೆಆರ್‍ಎಸ್ ಅಣೆಕಟ್ಟು ಪ್ರಮುಖವಾದ ಜಲಾಶಯ. ಅದರ ಇತಿಹಾಸದ ಸತ್ಯ ಎಲ್ಲರಿಗೂ ಗೊತ್ತಾಗಬೇಕಿತ್ತು. ಹೀಗಾಗಿ ನಂಜರಾಜ ಅರಸ್ ಸಂಶೋಧನೆ ನಡೆಸಿ ಸತ್ಯ ದರ್ಶನ ಮಾಡಿಸಿದ್ದಾರೆ. ನೀರಿನ ಹಂಚಿಕೆಯಲ್ಲಿ ಆದ ಒಪ್ಪಂದದಲ್ಲಿ ರಾಜ್ಯಕ್ಕೆ ಅನ್ಯಾಯವಾಗಿದೆ. ಈ ಅನ್ಯಾಯದಿಂದ ಇವತ್ತು ಸಮಸ್ಯೆ ಇದೆ. ನಾವು ಈಗಲೂ ಕಷ್ಟ ಅನುಭವಿಸುತ್ತಿದ್ದೇವೆ. ಇದರ ಬಗ್ಗೆಯೂ ಪುಸ್ತಕದಲ್ಲಿ ಬೆಳಕು ಚೆಲ್ಲಲಾಗಿದೆ ಅಂತಾ ಹೇಳಿದ್ರು.

MYS BOOK 4

ಕೆಆರ್‍ಎಸ್ ಕಟ್ಟಿದ್ದು ಸರ್.ಎಂ. ವಿಶ್ವೇಶ್ವರಯ್ಯ ಅಲ್ಲ ಕ್ಯಾಪ್ಟನ್ ಡಾಸ್ ಅಂತಾ ಪುಸ್ತಕದಲ್ಲಿ ಹೇಳಲಾಗಿದೆ. ಸಂಶೋಧನೆ ಮಾಡಿ ನಂಜರಾಜ ಅರಸ್ ಪುಸ್ತಕ ಬರೆದಿರೋ ಕಾರಣ ಇದನ್ನು ಸತ್ಯ ಅಂತಾ ನಂಬಬಹುದು. ಪುಸ್ತಕದಲ್ಲಿನ ಅಂಶವನ್ನು ಒಪ್ಪಿಕೊಳ್ಳುವುದು ಬಿಡುವುದು ಅವರವರ ಇಚ್ಛೆಗೆ ಬಿಟ್ಟಿದ್ದು. ಸತ್ಯ ಸರ್ವ ಸಮ್ಮತವಾಗಿದ್ದರೆ ಅದನ್ನು ಒಪ್ಪಿಕೊಳ್ಳಬಹುದು ಎಂದು ಸಿಎಂ ಹೇಳಿದ್ದಾರೆ.

ಇವತ್ತು ಜಲಾಶಯದಲ್ಲಿ ನೀರಿಲ್ಲ. ಅದರೂ ಪ್ರತಿ ದಿನ 2,000 ಕ್ಯೂಸೆಕ್ ನೀರು ಬಿಡಲು ಆದೇಶ ಮಾಡಲಾಗಿದೆ. ಆದರೆ ಜಲಾಶಯದಲ್ಲಿ ನೀರಿಲ್ಲದ ಕಾರಣ ಆದೇಶವನ್ನು ನಾವು ಪಾಲಿಸುತ್ತಿಲ್ಲ. ರಾಜ್ಯದಲ್ಲಿ ಕಂಡು ಕೇಳರಿಯದ ಬರ ಇದೆ. ಹೀಗಾಗಿ ಜಲಸಂಪನ್ಮೂಲ ಸಚಿವರು ಮಳೆಗಾಗಿ ಪೂಜೆ ಮಾಡುತ್ತಿದ್ದಾರೆ. ಈ ಪೂಜೆಗೂ ಸರ್ಕಾರಕ್ಕೂ ಸಂಬಂಧವಿಲ್ಲ. ನನಗೆ ಇಂತಹ ಪೂಜೆ ಮೇಲೆ ನಂಬಿಕೆ ಇಲ್ಲ ಸಚಿವರು ತಮ್ಮ ಸ್ವಂತ ಹಣದಲ್ಲಿ ಪೂಜೆ ಮಾಡುತ್ತಿದ್ದಾರೆ ಅಂದ್ರು.

MYS BOOK 1

`ನಾನು ಕನ್ನಂಬಾಡಿ ಕಟ್ಟೆ’ ಪುಸ್ತಕದ ಬಗ್ಗೆ ಸುತ್ತೂರು ಶ್ರೀ ಶಿವರಾತ್ರಿ ದೇಶಿಕೇಂದ್ರ ಸ್ವಾಮೀಜಿಯವರು ಮಾತನಾಡಿ, ಊಹಾಪೂಹಗಳಿಗೆ ಅವಕಾಶ ನೀಡದಂತೆ ಪುಸ್ತಕ ಬರೆದಿದ್ದಾರೆ. ಕಾವೇರಿ ನದಿಯ ಪ್ರತಿ ಅಂಚನ್ನು ವಿವರಿಸಿದ್ದಾರೆ. ಅತ್ಯಂತ ಸ್ವಾರಸ್ಯಕರವಾಗಿ ಪುಸ್ತಕ ಮೂಡಿ ಬಂದಿದೆ. ನಾನು ಪುಸ್ತಕವನ್ನು ಸಂಪೂರ್ಣ ಓದಿದ್ದೇನೆ. ಸಿಎಂ ಸಿದ್ದರಾಮಯ್ಯ ಪುಸ್ತಕ ಬಿಡುಗಡೆ ಮಾಡಿರುವುದು ಔಚಿತ್ಯಪೂರ್ಣ. ಪ್ರೊ. ನಂಜರಾಜ ಅರಸು ನೇರ ಮಾತಿನವರು. ಅವರು ಮಾಡಿರುವ ಕೆಲಸಕ್ಕೆ ಸೂಕ್ತ ಸ್ಥಾನ ಮಾನ ಸಿಗಲಿ ಅಂತಾ ಹೇಳಿದರು.

ವಿಶ್ವೇಶ್ವರಯ್ಯ ತೇಜೋವಧೆ: `ನಾನು ಕನ್ನಂಬಾಡಿ ಕಟ್ಟೆ’ ಆತ್ಮಕಥೆ ಪುಸ್ತಕದಲ್ಲಿ ಭಾರತ ರತ್ನ ಸರ್.ಎಂ. ವಿಶ್ವೇಶ್ವರಯ್ಯನವರ ತೇಜೋವಧೆ ಮಾಡಲಾಗಿದೆ. ‘ನಾನು ಕನ್ನಂಬಾಡಿ ಕಟ್ಟೆ’ ಕೃತಿಯ ಕರ್ತೃ ಪ್ರೊ. ನಂಜರಾಜ ಅರಸ್ ಇತಿಹಾಸವನ್ನು ತಿರುಚಿದ್ದಾರೆ. ರಾಜ್ಯ ಸರ್ಕಾರ ಕೂಡಲೇ ಈ ಪುಸ್ತಕವನ್ನು ಮುಟ್ಟುಗೋಲು ಹಾಕಿಕೊಳ್ಳಬೇಕು. ಇಲ್ಲದಿದ್ದರೆ ಮುಂಬರುವ ದಿನಗಳಲ್ಲಿ ದೊಡ್ಡ ಹೋರಾಟ ನಡೆಸಲಾಗುವುದು ಎಂದು ಭಾರತ ರತ್ನ ಸರ್.ಎಂ ವಿಶ್ವೇಶ್ವರಯ್ಯ ಸೇನಾಪಡೆ ಸಂಘಟನೆ ಸಂಚಾಲಕ ಪ್ರೇಮಕುಮಾರ್ ಎಚ್ಚರಿಕೆ ನೀಡಿದ್ದಾರೆ.

MYS BOOK 2

MYS BOOK

MYS BOOK 6

TAGGED:kannmbadi kattemysuruprof. nanjraja araspublictvsiddaramaiahsir m vishweshwarಕನ್ನಂಬಾಡಿ ಕಟ್ಟೆಪಬ್ಲಿಕ್ ಟಿವಿಪ್ರೊ. ನಂಜರಾಜ ಅರಸ್ಮೈಸೂರುಸರ್ ಎಂ ವಿಶ್ವೇಶ್ವರಯ್ಯಸಿದ್ದರಾಮಯ್ಯ
Share This Article
Facebook Whatsapp Whatsapp Telegram

Cinema news

rashmika mandanna
ಮದುವೆಯಂದು ರಶ್ಮಿಕಾ ಮಿನಿಮಲ್ ಮೇಕಪ್ ಹಾಕಿದ್ದು ಯಾಕೆ – ಗುಟ್ಟು ಬಿಚ್ಚಿಟ್ಟ ಮೇಕಪ್ ಆರ್ಟಿಸ್ಟ್‌
Cinema Latest Sandalwood South cinema
Suhana Khan
ಮಗಳನ್ನೇ ಸಹೋದ್ಯೋಗಿ ಥರ ನೋಡುವ ಶಾರುಖ್ ಖಾನ್!
Bollywood Cinema Latest Top Stories
trisha krishnan
ಶ್ರೀಮಂತ ಉದ್ಯಮಿಯನ್ನ ಮದ್ವೆಯಾಗಿ, 4 ಮಕ್ಕಳನ್ನು ಬೆಳೆಸುತ್ತಿದ್ದೇನೆ – ಸಿನಿಮಾ ನಿವೃತ್ತಿ ವದಂತಿಗೆ ನಟಿ ತ್ರಿಶಾ ಕೌಂಟರ್
Cinema Latest South cinema Top Stories
Rashmika Mandanna
ಕೊಡಗಿನಲ್ಲಿ ರಶ್ಮಿಕಾ – ವಿಜಯ್‌ ಡಿನ್ನರ್‌ ಪಾರ್ಟಿ; ಕೊಡವ ಶೈಲಿಯ ಭರ್ಜರಿ ಆತಿಥ್ಯ!
Cinema Kodagu Latest Main Post Sandalwood South cinema

You Might Also Like

lokayukta police arrest chief officer of sirwara town panchayat for accepting bribe of rs 1 lakh
Crime

1 ಲಕ್ಷ ಲಂಚ ಪಡೆದು ಪರಾರಿಗೆ ಯತ್ನ – ಅಧಿಕಾರಿಯನ್ನು ಚೇಸ್ ಮಾಡಿ ಹಿಡಿದ ʻಲೋಕಾʼ ಪೊಲೀಸರು

Public TV
By Public TV
16 minutes ago
CJ Roy
Bengaluru City

ಮಾನಸಿಕ ಖಿನ್ನತೆಯಿಂದ ಸಿಜೆ ರಾಯ್‌ ಆತ್ಮಹತ್ಯೆ – ಎಸ್‌ಐಟಿ ತನಿಖೆ ಪೂರ್ಣ

Public TV
By Public TV
41 minutes ago
Heat Waves Beach
Dakshina Kannada

ಕರಾವಳಿ ಜಿಲ್ಲೆಗಳಲ್ಲಿ ಬಿಸಿಗಾಳಿ ಎಚ್ಚರಿಕೆ – ಯೆಲ್ಲೋ ಅಲರ್ಟ್‌ ಜಾರಿ

Public TV
By Public TV
1 hour ago
Tejasvi Surya
Bengaluru City

TCS World 10K: 10 ಕಿ.ಮೀ. ರಸ್ತೆಯನ್ನು ಶೀಘ್ರವೇ ರಿಪೇರಿ ಮಾಡಿ – ಸರ್ಕಾರಕ್ಕೆ ತೇಜಸ್ವಿ ಸೂರ್ಯ ಮನವಿ

Public TV
By Public TV
1 hour ago
shivamogga hulikal ghat hill collapse three labours died
Districts

ಹುಲಿಕಲ್ ಘಾಟಿ ಬಳಿ ಗುಡ್ಡ ಕುಸಿತ – ಮಣ್ಣಿನಡಿ ಸಿಲುಕಿದ್ದ ಮೂರು ಮೃತದೇಹಗಳು ಪತ್ತೆ

Public TV
By Public TV
2 hours ago
Khawaja Asif Benjamin Netanyahu
Latest

ಶಾಂತಿ ಮಾತುಕತೆ ಮಧ್ಯೆ ಪಾಕ್‌, ಇಸ್ರೇಲ್‌ ಮಧ್ಯೆ ಭಯಂಕರ ಕಿತ್ತಾಟ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?