ಚಿಕ್ಕಮಗಳೂರಿನಲ್ಲಿ ಪಾಕಿಸ್ತಾನದ ಗೆಲುವು ಸಂಭ್ರಮಿಸಿದ ಕಿಡಿಗೇಡಿಗಳು – ನಾಲ್ವರು ವಶಕ್ಕೆ

Public TV
1 Min Read
Pakistan

ಚಿಕ್ಕಮಗಳೂರು: ಟಿ20 ವಿಶ್ವಕಪ್ (T20 WorldCup) ಸೆಮಿಫೈನಲ್‌ನಲ್ಲಿ ಕಿವೀಸ್ ವಿರುದ್ಧ ಗೆದ್ದು ಪಾಕಿಸ್ತಾನ (Pakistan) ಫೈನಲ್ ಪ್ರವೇಶಿಸಿದೆ. ಈ ಹಿನ್ನೆಲೆಯಲ್ಲಿ ಪಾಕಿಸ್ತಾನದ ಗೆಲುವು ಸಂಭ್ರಮಿಸಿದ ನಾಲ್ವರು ಕಿಡಿಗೇಡಿಗಳನ್ನು ಪೊಲೀಸರು ವಶಕ್ಕೆ ಪಡೆದಿರುವ ಘಟನೆ ಚಿಕ್ಕಮಗಳೂರಿನಲ್ಲಿ (Chikkamagaluru) ನಡೆದಿದೆ.

Pakistan Vs New Zealand 1

ಎನ್.ಆರ್.ಪುರ ತಾಲೂಕಿನ ಬಾಳೆಹೊನ್ನೂರು ಸಮೀಪದ ಕಾಫಿತೋಟದಲ್ಲಿ ಘಟನೆ ನಡೆದಿದ್ದು, ಅಸ್ಸಾಂ ಮೂಲದ ಅಜರ್ ಅಲಿ, ಆಹಿಲ್ ಉದ್ದಿನ್, ಸೇರಿದಂತೆ ಮತ್ತಿಬ್ಬರು ಅಪ್ರಾಪ್ತರನ್ನು ವಶಕ್ಕೆ ಪಡೆಯಲಾಗಿದೆ. ಇವರ ವಿರುದ್ಧ ಅಸ್ಸಾಂ ಕಾರ್ಮಿಕರ ಸೋಗಿನಲ್ಲಿ ಬಾಂಗ್ಲಾದವರು ಅಕ್ರಮವಾಗಿ ಬಂದಿರೋ ಆರೋಪವಿದೆ. ಇದನ್ನೂ ಓದಿ: ಕಿವೀಸ್ ವಿರುದ್ಧ 7 ವಿಕೆಟ್‌ಗಳ ಭರ್ಜರಿ ಜಯ – 3ನೇ ಬಾರಿ ಫೈನಲ್‍ಗೇರಿದ ಪಾಕ್

Pakistan Vs New Zealand

ಪಾಕಿಸ್ತಾನ ಕಿವೀಸ್ (NewZealand) ವಿರುದ್ಧ ಗೆದ್ದು ಫೈನಲ್ ಪ್ರವೇಶಿಸುತ್ತಿದ್ದಂತೆ ಸಂಭ್ರಮಿಸತೊಡಗಿದ್ದಾರೆ. ಕಿಡಿಗೇಡಿಗಳು ಪಾಕಿಸ್ತಾನ್ ಜಿಂದಾಬಾದ್ ಘೋಷಣೆ ಸಹ ಕೂಗಿದ್ದಾರೆ. ಈ ವಿಷಯವನ್ನು ಸ್ಥಳೀಯರು ಹಾಗೂ ಕಾರ್ಮಿಕರು ಕೂಡಲೇ ಎಸ್ಟೇಟ್ ಮಾಲೀಕರ ಗಮನಕ್ಕೆ ತಂದಿದ್ದಾರೆ. ನಂತರ ಎಸ್ಟೇಟ್ ಮ್ಯಾನೇಜರ್ ನಾರಾಯಣಮೂರ್ತಿ ಅವರಿಂದ ಪೊಲೀಸರಿಗೆ (Police) ಮಾಹಿತಿ ನೀಡಲಾಗಿದೆ. ಇದನ್ನೂ ಓದಿ: ಭಯಂಕರವಾಗಿ ಆಡಿದ್ರೂ ಭಾರತ ಸೋಲೋದಕ್ಕೆ ಅರ್ಹವಾಗಿತ್ತು- ಅಖ್ತರ್ ಟೀಕೆ

Pakistan Vs New Zealand 2

ಸದ್ಯ ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಿದ ಬಾಳೆಹೊನ್ನೂರು ಪೊಲೀಸರು ನಾಲ್ವರು ಆರೋಪಿಗಳನ್ನ ವಶಕ್ಕೆ ಪಡೆದು ಪೊಲೀಸರಿಂದ ವಿಚಾರಣೆ ನಡೆಸುತ್ತಿದ್ದಾರೆ.

ಬುಧವಾರ ನ್ಯೂಜಿಲೆಂಡ್ ವಿರುದ್ಧ ನಡೆದ ಟಿ20 ವಿಶ್ವಕಪ್ ಸೆಮಿ ಫೈನಲ್‌ನಲ್ಲಿ ಮೊದಲು ಬ್ಯಾಟ್ ಮಾಡಿದ ಕಿವೀಸ್ ಪಡೆ 20 ಓವರ್‌ಗಳಲ್ಲಿ 4 ವಿಕೆಟ್ ನಷ್ಟಕ್ಕೆ 152 ರನ್‌ಗಳಿಸಿತ್ತು. ಈ ರನ್‌ಗಳ ಗುರಿ ಬೆನ್ನತ್ತಿದ ಪಾಕಿಸ್ತಾನ 3 ವಿಕೆಟ್ ನಷ್ಟಕ್ಕೆ 19.1 ಓವರ್‌ಗಳಲ್ಲೇ 153 ರನ್ ಸಿಡಿಸಿ ಗೆಲುವು ಸಾಧಿಸಿತು.

Live Tv
[brid partner=56869869 player=32851 video=960834 autoplay=true]

Share This Article
Leave a Comment

Leave a Reply

Your email address will not be published. Required fields are marked *