Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಕಳೆದ 10 ವರ್ಷದಲ್ಲಿ ಯಾರ‍್ಯಾರು ಸಿಎ ಸೈಟ್ ಪಡೆದಿದ್ದಾರೆ, ಎಲ್ಲಾ ತನಿಖೆ ಆಗಲಿ: ಸತೀಶ್ ಜಾರಕಿಹೊಳಿ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಕಳೆದ 10 ವರ್ಷದಲ್ಲಿ ಯಾರ‍್ಯಾರು ಸಿಎ ಸೈಟ್ ಪಡೆದಿದ್ದಾರೆ, ಎಲ್ಲಾ ತನಿಖೆ ಆಗಲಿ: ಸತೀಶ್ ಜಾರಕಿಹೊಳಿ

Bengaluru City

ಕಳೆದ 10 ವರ್ಷದಲ್ಲಿ ಯಾರ‍್ಯಾರು ಸಿಎ ಸೈಟ್ ಪಡೆದಿದ್ದಾರೆ, ಎಲ್ಲಾ ತನಿಖೆ ಆಗಲಿ: ಸತೀಶ್ ಜಾರಕಿಹೊಳಿ

Public TV
Last updated: August 29, 2024 11:22 pm
Public TV
Share
2 Min Read
SATISH JARKIHOLI 1
SHARE

ಬೆಂಗಳೂರು: ಖರ್ಗೆ ಅವರಷ್ಟೇ ಅಲ್ಲಾ ಕಳೆದ 10 ವರ್ಷದಲ್ಲಿ ಯಾರ‍್ಯಾರು ಸಿಎ ಸೈಟ್ ಪಡೆದಿದ್ದಾರೆ, ಎಲ್ಲಾ ತನಿಖೆ ಆಗಲಿ ಎಂದು ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ (Satish Jarkiholi) ಹೇಳಿದ್ದಾರೆ.

ಬೆಂಗಳೂರಿನಲ್ಲಿ ಮಾತನಾಡಿದ ಅವರು, ಖರ್ಗೆ ಕುಟುಂಬಕ್ಕೆ ಸಿಎ ಸೈಟ್ ನೀಡಿರುವ ವಿಚಾರ ರಾಜ್ಯಪಾಲರ ಅಂಗಳದಿಂದ ಅದಕ್ಕೂ ಸೂಚನೆ ಬಂದರೆ ಮತ್ತೆ ಹೋರಾಟ ಮಾಡಲಾಗುವುದು. ಏನು ಮಾಡುವುದಕ್ಕೆ ಆಗುವುದಿಲ್ಲ. ಹೋರಾಟ ನಡೆಯುತ್ತದೆ. ಏನು ಬರುತ್ತದೆ, ಏನು ಕೊಟ್ಟಿದ್ದಾರೆ ನೋಡೋಣ. ಲೀಗಲ್ ಬ್ಯಾಟಲ್ ಅನಿವಾರ್ಯವಾದರೆ ಮಾಡಲೇಬೇಕಾಗುತ್ತದೆ ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ಛಲವಾದಿ ನಾರಾಯಣಸ್ವಾಮಿ ಒಬ್ಬ ಶೆಡ್ ಗಿರಾಕಿ – ಎಂ.ಬಿ ಪಾಟೀಲ್‌ ಲೇವಡಿ

Priyank kharge

ಹಿಂದಿನ ಇತಿಹಾಸವನ್ನು ನೋಡಬೇಕಾಗುತ್ತದೆ. ಹಿಂದಿನ ಸರ್ಕಾರಗಳು ಬೆಂಗಳೂರು ಸುತ್ತಮುತ್ತ ಅವರ ಸಂಸ್ಥೆಗಳಿಗೆ ಜಮೀನು ನೀಡಿದ್ದಾರೆ. ರಾಜ್ಯಾದ್ಯಂತ ಜಮೀನು ನೀಡಿದ್ದಾರೆ. ಚರ್ಚೆ ಆಗೋದಾದ್ರೆ, ತನಿಖೆ ಆಗೋದಾದ್ರೆ ಎಲ್ಲರದ್ದೂ ಆಗಲಿ. ಕೇವಲ ಖರ್ಗೆಯವರ ವಿಚಾರ ಮಾತ್ರ ಯಾಕೆ ಚರ್ಚೆ? ಎಲ್ಲರದೂ ಚರ್ಚೆ ಆಗಲಿ. ಕಳೆದ ಹತ್ತು ವರ್ಷಗಳಲ್ಲಿ ಯಾರ‍್ಯಾರಿಗೆ ಸಿಎ ಸೈಟುಗಳನ್ನು ಕೊಟ್ಟಿದ್ದಾರೆ? ಎಲ್ಲವೂ ಚರ್ಚೆಯಾಗಲಿ. ಒಬ್ಬರಿಗೆ ಮಾತ್ರ ಮಹತ್ವ ಕೊಡುವುದು ಸರಿಯಲ್ಲ ಎಂದು ಅಭಿಪ್ರಾಯಪಟ್ಟಿದ್ದಾರೆ.

ಸರ್ಕಾರಿ ಜಮೀನನ್ನ ಸಾವಿರಾರು ಎಕರೆ ಕೊಟ್ಟಿದ್ದಾರೆ ಇತಿಹಾಸದಲ್ಲಿ. ಹಿಂದಿನದ್ದು ಬಿಟ್ಟು ಬಿಡುವುದು, ಈಗಿನದ್ದು ಮಾತ್ರ ಚರ್ಚೆ ಮಾಡುವುದು ಸರಿಯಾಗುವುದಿಲ್ಲ. ಚರ್ಚೆ ಆಗೋದಾದರೆ ಎಲ್ಲವೂ ಚರ್ಚೆಯಾಗಲಿ. ಹತ್ತು ವರ್ಷಗಳಲ್ಲಿ ಹಲವಾರು ಮಂದಿ ಸೈಟುಗಳನ್ನು ಪಡೆದುಕೊಂಡಿದ್ದಾರೆ. ಅವರವರ ಸರ್ಕಾರ ಇದ್ದಾಗ ಅವರ ಕುಟುಂಬಸ್ಥರೇ ಹಲವಾರು ಮಂದಿ ಪಡೆದುಕೊಂಡಿದ್ದಾರೆ. ಆ ಬಗ್ಗೆಯೂ ತನಿಖೆಯಾಗಲಿ, ಚರ್ಚೆಯಾಗಲಿ. ಎಲ್ಲ ಪಕ್ಷದ ಎಲ್ಲ ರಾಜಕಾರಣಿಗಳು ತೆಗೆದುಕೊಂಡಿದ್ದಾರೆ. ಯಾರಿಗೆ ಸೈಟ್ ನೀಡಬೇಕು ಎಂಬುದು, ಹಂಚಿಕೆ ಮಾಡುವ ಅಧಿಕಾರ ಸಂಬಂಧಪಟ್ಟ ಅಥಾರಿಟಿಯದ್ದು. ಮೂಡಾ ಆದ್ರೆ ಮೂಡಾ, ಬಿಡಿಎ ಆದ್ರೆ ಬಿಡಿಎ. ಸ್ಥಳೀಯ ಸಂಸ್ಥೆಯವರಿಗೆ ಅಧಿಕಾರ ಇರುತ್ತೆ, ಅಧಿಕಾರ ಚಲಾಯಿಸಿರಬಹುದು ಎಂದು ಸ್ಪಷ್ಟಪಡಿಸಿದ್ದಾರೆ. ಇದನ್ನೂ ಓದಿ: ಕೇಂದ್ರ ವಕ್ಫ್ ತಿದ್ದುಪಡಿ ಕಾಯ್ದೆಗೆ ರಾಜ್ಯ ವಕ್ಫ್ ಬೋರ್ಡ್ ವಿರೋಧ – ಖಂಡನಾ ನಿರ್ಣಯ ಅಂಗೀಕರಿಸುವಂತೆ ಸಿಎಂಗೆ ಮನವಿ

Thawar Chand Gehlot

ರಾಜ್ಯಪಾಲರ ಬಳಿಗೆ ಖರ್ಗೆ ವಿಚಾರ ಹೋಗಿದೆ. ರಾಜ್ಯಪಾಲರು ಏನ್ ಮಾಡ್ತಾರೆ ಕಾದು ನೋಡೋಣ. ಗವರ್ನರ್ ಏನು ಆದೇಶ ಕೊಡ್ತಾರೆ ನಂತರ ನಿರ್ಧಾರ ಮಾಡೋಣ. ವಿಶೇಷ ಅಧಿವೇಶನ ಕರೆಯೋ ಅವಶ್ಯಕತೆ ಏನಿದೆ? ಮೊನ್ನೆ ಅಧಿವೇಶನ ಕರೆದಾಗ ಬರಿ ಗದ್ದಲ ಗದ್ದಲಾಗಿ ಕೊನೆಗೊಂಡಿತು. ರಾಜ್ಯಪಾಲರನ್ನು ವಾಪಸ್ ಕಳಿಸಿ ಎಂಬ ಯಾವ ಉದ್ದೇಶ ಸರ್ಕಾರಕ್ಕೆ ಇಲ್ಲ. ಡಿಸೆಂಬರ್‌ನಲ್ಲಿ ಅಧಿವೇಶನ ನಡೆಯುತ್ತದೆ ಎಂದು ತಿಳಿಸಿದ್ದಾರೆ.

ವೈಯಕ್ತಿಕವಾಗಿ ನಾಯಕರು ಹೈಕಮಾಂಡ್ ಅನ್ನು ಭೇಟಿಯಾಗಿರಬಹುದು. ಸಿಎಂ ಹುದ್ದೆ ಕೇಳೋದಕ್ಕೆ ಅಂತ ಹೇಗೆ ಹೇಳ್ತೀರಾ? ಬೇರೆ ಬೇರೆ ಸಣ್ಣ ಪುಟ್ಟ ಕೆಲಸ ಇರುತ್ತದೆ. ಸಿಎಂ ಹುದ್ದೆಯನ್ನೇ ಕೇಳುತ್ತಾರೆ ಎಂದು ಹೇಗೆ ಹೇಳೋದು? ಹೈಕಮಾಂಡ್ ಸಿದ್ದರಾಮಯ್ಯ ಬೆನ್ನಿಗೆ ಗಟ್ಟಿಯಾಗಿ ನಿಂತಿದೆ. ಎಫ್‌ಐಆರ್ ಆಗುವಂತಹ ಪರಿಸ್ಥಿತಿ ಬರುವುದಿಲ್ಲ ಎಂಬ ವಿಶ್ವಾಸವಿದೆ ಎಂದಿದ್ದಾರೆ.

TAGGED:bengalurubjpCA SitecongressjdsRahul KhargeSatish jarkiholiಕಾಂಗ್ರೆಸ್ಜೆಡಿಎಸ್ಬಿಜೆಪಿರಾಹುಲ್ ಖರ್ಗೆಸತೀಶ್ ಜಾರಕಿಹೊಳಿಸಿಎ ಸೈಟ್‌
Share This Article
Facebook Whatsapp Whatsapp Telegram

Cinema news

Bharti Singh Haarsh Limbachiyaa
ಹಾಸ್ಯನಟಿ ಭಾರ್ತಿ ಸಿಂಗ್‌, ಹರ್ಷ್‌ ಲಿಂಬಾಚಿಯಾ ದಂಪತಿಗೆ 2ನೇ ಮಗು ಜನನ
Bollywood Cinema Latest Top Stories
Koragajja Kannada Film 1
ಕೊರಗಜ್ಜ ಚಿತ್ರಕ್ಕಿದೆ ಮೆಸ್ಸಿ ಹಾಡು ಕ್ರಿಯೇಟ್ ಮಾಡಿದ ತಂಡದ ಲಿಂಕ್
Cinema Latest TV Shows
Ranya Rao 1
ಕಾಫಿಪೋಸಾ ಆದೇಶ ಪ್ರಶ್ನಿಸಿದ್ದ ರನ್ಯಾಗೆ ಮತ್ತೆ ಶಾಕ್ – ಅರ್ಜಿ ವಜಾಗೊಳಿಸಿದ ಹೈಕೋರ್ಟ್
Bengaluru City Cinema Court Districts Karnataka Latest Top Stories
Vijay Deverakonda
ವಿಜಯ್ ದೇವರಕೊಂಡ ನಟನೆಯ ಹೊಸ ಚಿತ್ರದ ಅಪ್‌ಡೇಟ್‌
Cinema Latest South cinema

You Might Also Like

Yellow Line Metro
Bengaluru City

ಇದೇ ಭಾನುವಾರ ಹಳದಿ ಮಾರ್ಗದ ಮೆಟ್ರೋ ಸೇವೆ ಒಂದು ಗಂಟೆ ಲೇಟ್‌

Public TV
By Public TV
1 hour ago
Tilak Varma Hardik Pandya
Cricket

ಪಾಂಡ್ಯ ಸ್ಫೋಟಕ ಫಿಫ್ಟಿ – ಭಾರತಕ್ಕೆ 30 ರನ್‌ಗಳ ಜಯ

Public TV
By Public TV
1 hour ago
Anegondi Bridge collapse
Court

ಆನೆಗೊಂದಿ ಸೇತುವೆ ಕುಸಿತ ಕೇಸ್ – ರಾಜ್ಯ ಸರ್ಕಾರ ಬಡ್ಡಿ ಸಹಿತ 5.63 ಕೋಟಿ ಪರಿಹಾರ ನೀಡಬೇಕಿದ್ದ ಆದೇಶ ರದ್ದು: ಹೈಕೋರ್ಟ್‌

Public TV
By Public TV
2 hours ago
CET Exam
Bengaluru City

ಸಿಸಿಟಿವಿ ಕಣ್ಗಾವಲಿನಲ್ಲಿ ನೇಮಕಾತಿ ಪರೀಕ್ಷೆ: ಕೆಇಎ

Public TV
By Public TV
2 hours ago
SUPREME COURT
Court

ಕೇಂದ್ರದ ಪೂರ್ವಾನುಮತಿ ಇಲ್ಲದೆ ಅರಣ್ಯಭೂಮಿ ಗುತ್ತಿಗೆ ನೀಡಲು ಸಾಧ್ಯವಿಲ್ಲ: ಸುಪ್ರೀಂ

Public TV
By Public TV
3 hours ago
GBA
Bengaluru City

ಜಿಬಿಎ 5 ಪಾಲಿಕೆ ಚುನಾವಣೆ – ಸರ್ಕಾರದಿಂದ ಮೀಸಲಾತಿ ಮಾರ್ಗಸೂಚಿ ಪ್ರಕಟ

Public TV
By Public TV
3 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?