Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ದೇಶದ ಇತಿಹಾಸದಲ್ಲೇ ಮೊದಲ ಬಾರಿಗೆ ರಾಷ್ಟ್ರಪತಿ ಭವನದಲ್ಲಿ ಮದುವೆ – ಯಾರು ಈ ಪೂನಂ ಗುಪ್ತಾ?
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Latest | ದೇಶದ ಇತಿಹಾಸದಲ್ಲೇ ಮೊದಲ ಬಾರಿಗೆ ರಾಷ್ಟ್ರಪತಿ ಭವನದಲ್ಲಿ ಮದುವೆ – ಯಾರು ಈ ಪೂನಂ ಗುಪ್ತಾ?

Latest

ದೇಶದ ಇತಿಹಾಸದಲ್ಲೇ ಮೊದಲ ಬಾರಿಗೆ ರಾಷ್ಟ್ರಪತಿ ಭವನದಲ್ಲಿ ಮದುವೆ – ಯಾರು ಈ ಪೂನಂ ಗುಪ್ತಾ?

Public TV
Last updated: February 4, 2025 7:32 pm
Public TV
Share
3 Min Read
Rashtrapathi Bhavan
SHARE

ಮದುವೆಯಾಗುವ ಪ್ರತಿಯೊಬ್ಬರು ತನ್ನ ಮದುವೆ ಹೀಗೇ ಇರಬೇಕು, ಇಂತಹ ಜಾಗದಲ್ಲೇ ವಿವಾಹವಾಗಬೇಕು ಎಂಬ ಕನಸನ್ನು ಕಂಡಿರುತ್ತಾರೆ. ಕೆಲವರು ಸಿಂಪಲ್‌ ಆಗಿ ಸಾಂಪ್ರದಾಯಿಕವಾಗಿ ಮದುವೆಯಾದರೇ ಇನ್ನೂ ಕೆಲವು ಜೋಡಿಗಳು ಹಿಲ್‌ ಸ್ಟೇಷನ್‌, ರೆಸಾರ್ಟ್‌ ಸೇರಿದಂತೆ ಡೆಸ್ಟಿನೇಷನ್‌ ವೆಡ್ಡಿಂಗ್‌ಗೆ ಪ್ಲಾನ್‌ ಮಾಡುತ್ತಾರೆ. ಆದರೆ ದೇಶದ ಇತಿಹಾಸದಲ್ಲಿಯೇ ಇದೇ ಮೊದಲ ಬಾರಿಗೆ ಸರ್ಕಾರಿ ಬಂಗಲೆಯಲ್ಲಿ ಮದುವೆಯೊಂದು ನಡೆಯಲಿದೆ.

ಹೌದು, ಅತಿದೊಡ್ಡ ಸರ್ಕಾರಿ ಬಂಗಲೆ ಎನಿಸಿರುವ ಭಾರತದ ರಾಷ್ಟ್ರಪತಿ ಭವನ ಇತಿಹಾಸದಲ್ಲೇ ಮೊದಲ ಬಾರಿಗೆ ಮದುವೆ ಸಮಾರಂಭಕ್ಕೆ ಸಿದ್ಧಗೊಂಡಿದೆ. ರಾಷ್ಟ್ರಪತಿ ದ್ರೌಪದಿ ಮುರ್ಮು ಅವರ ಖಾಸಗಿ ಭದ್ರತಾ ಸಿಬಂದಿ ಆಗಿರುವ ಸಿಆರ್‌ಪಿಫ್ ಅಸಿಸ್ಟೆಂಟ್ ಕಮಾಂಡೆಂಟ್ ಪೂನಂ ಗುಪ್ತಾ ಮದುವೆಯನ್ನು ವೈಭವೋಪೇತ ಬಂಗಲೆಯಲ್ಲಿ ನಡೆಸಲು ಗ್ರೀನ್ ಸಿಗ್ನಲ್ ನೀಡಲಾಗಿದೆ.

ಪೂನಂ ಗುಪ್ತಾ ಅವರನ್ನು ಸಿಆರ್‌ಪಿಎಫ್ ಅಸಿಸ್ಟೆಂಟ್ ಕಮಾಂಡೆಂಟ್ ಆಗಿರುವ ಅವನೀಶ್ ಕುಮಾರ್ ಫೆ.12ರಂದು ವರಿಸಲಿದ್ದಾರೆ. 300 ಎಕ್ರೆ ವ್ಯಾಪ್ತಿಯ ರಾಷ್ಟ್ರಪತಿ ಭವನ ಸಂಕೀರ್ಣದ ಒಳಗಿನ ಮದರ್ ತೆರೆಸಾ ಕ್ರೌನ್ ಕಾಂಪ್ಲೆಕ್ಸ್‌ನಲ್ಲಿ ಮದುವೆ ಸಮಾರಂಭ ನಡೆಯಲಿದ್ದು, ಕೇವಲ ಹತ್ತಿರದ ಸಂಬಂಧಿಕರಿಗೆ ಮಾತ್ರ ಮದುವೆಯಲ್ಲಿ ಪಾಲ್ಗೊಳ್ಳಲು ಅವಕಾಶ ನೀಡಲಾಗಿದೆ.

ಪೂನಂ ಗುಪ್ತಾ ಯಾರು?
ಪಿಎಸ್‌ಓ ಪೂನಂ ಗುಪ್ತಾ ಗಣಿತದಲ್ಲಿ ಪದವಿ, ಇಂಗ್ಲಿಷ್ ಸಾಹಿತ್ಯದಲ್ಲಿ ಸ್ನಾತಕೋತ್ತರ ಪದವಿ ಮತ್ತು ಗ್ವಾಲಿಯರ್‌ನ ಜಿವಾಜಿ ವಿಶ್ವವಿದ್ಯಾಲಯದಿಂದ ಬಿಎಡ್ ಪದವಿ ಪಡೆದಿದ್ದಾರೆ. 2018ರಲ್ಲಿ, ಅವರು ಯುಪಿಎಸ್‌ಸಿ ಸಿಎಪಿಎಫ್ ಪರೀಕ್ಷೆಯಲ್ಲಿ 81 ನೇ ರ‍್ಯಾಂಕ್ ಗಳಿಸಿದರು. ಭವನಕ್ಕೆ ಪೋಸ್ಟಿಂಗ್ ಆಗುವುದಕ್ಕೂ ಮುನ್ನ ಪೂನಮ್ ಗುಪ್ತಾ ಅವರು ಬಿಹಾರದಲ್ಲಿ ನಕ್ಸಲ್ ಪೀಡಿತ ಪ್ರದೇಶದಲ್ಲಿ ಕೆಲಸ ಮಾಡಿದ್ದರು.

ದಕ್ಷ ಅಧಿಕಾರಿ ಎಂದೇ ಹೆಸರು ಪಡೆದಿರುವ ಪೂನಂ ಈ ಬಾರಿಯ ಗಣರಾಜ್ಯೋತ್ಸವ ಸಂದರ್ಭದ ಪರೇಡ್‌ನಲ್ಲಿ ಸಂಪೂರ್ಣ ಮಹಿಳಾ ತುಕಡಿಯನ್ನು ಮುನ್ನಡೆಸಿದ್ದರು. ಗಣರಾಜ್ಯೋತ್ಸವ ಪರೇಡ್ ಸಂದರ್ಭದಲ್ಲಿ ಸಿಆರ್‌ಪಿಎಫ್ ಮಹಿಳೆಯರ ವಿಭಾಗವನ್ನು ಪೂನಂ ಗುಪ್ತಾ ಮುನ್ನಡೆಸಿದ್ದು ದೇಶದ ಗಮನಸೆಳೆದಿತ್ತು.

ಪೂನಂ ಗುಪ್ತಾ ಇನ್‌ಸ್ಟಾಗ್ರಾಮ್‌ನಲ್ಲಿಯೂ ಸಹ ತುಂಬಾ ಸಕ್ರಿಯರಾಗಿದ್ದಾರೆ, ಅಲ್ಲಿ ಅವರು ತಮ್ಮ ಸಿಆರ್‌ಪಿಎಫ್ ಸಮವಸ್ತ್ರದಲ್ಲಿ ಹಲವಾರು ಚಿತ್ರಗಳನ್ನು ಹಂಚಿಕೊಂಡಿದ್ದಾರೆ. ಮಹಿಳಾ ಸಮಸ್ಯೆಗಳು ಮತ್ತು ಸಬಲೀಕರಣದ ಬಗ್ಗೆ ಉತ್ಸಾಹ ಹೊಂದಿರುವ ಅವರು ಆಗಾಗ್ಗೆ ತಮ್ಮ ಪೋಸ್ಟ್‌ಗಳ ಮೂಲಕ ವಿದ್ಯಾರ್ಥಿಗಳಿಗೆ ಪ್ರೇರಣೆ ನೀಡುತ್ತಾರೆ. ತಮ್ಮ ಇನ್‌ಸ್ಟಾಗ್ರಾಮ್ ಹ್ಯಾಂಡಲ್ ಮೂಲಕ, ಅವರು ಮುನ್ನಡೆಸುವ ವಿವಿಧ ಅಭಿಯಾನಗಳ ಬಗ್ಗೆ ಜಾಗೃತಿ ಮೂಡಿಸುತ್ತಾರೆ ಮತ್ತು ಅವುಗಳ ಬಗ್ಗೆ ನಿಯಮಿತವಾಗಿ ಅಪ್‌ಡೇಟ್‌ಗಳನ್ನು ಪೋಸ್ಟ್ ಮಾಡುತ್ತಾರೆ.

ಪೂನಂ ಅವರನ್ನು ವರಿಸಲಿರುವ ಅವನೀಶ್ ಕುಮಾರ್ ಸಿಆರ್‌ಪಿಎಫ್‌ನಲ್ಲಿ ಅಸಿಸ್ಟೆಂಟ್ ಕಮಾಂಡೆಂಟ್ ಆಗಿದ್ದು, ಜಮ್ಮು ಕಾಶ್ಮೀರ ಮೂಲದವರು. ಪೂನಂ ಗುಪ್ತಾ ಅವರ ಕೋರಿಕೆಯನ್ನು ರಾಷ್ಟ್ರಪತಿ ದ್ರೌಪತಿ ಮುರ್ಮು ಒಪ್ಪಿಕೊಂಡಿದ್ದು, ರಾಷ್ಟ್ರಾಧ್ಯಕ್ಷರ ಬಂಗಲೆಯೊಳಗೆ ಮದುವೆಗೆ ಸಿದ್ಧತೆ ನಡೆಸಿದ್ದಾರೆ.

ವಿವಾಹವಾಗುತ್ತಿರುವ ವ್ಯಕ್ತಿಯ ನಡವಳಿಕೆ ಮತ್ತು ಸೇವೆಯಿಂದ ಪ್ರಭಾವಿತರಾದ ರಾಷ್ಟ್ರಪತಿ ದ್ರೌಪದಿ ಮುರ್ಮು ಮದುವೆಗೆ ಹಸಿರು ನಿಶಾನೆ ತೋರಿಸಿದ್ದಾರೆ ಎನ್ನಲಾಗಿದೆ. ಈ ಕಾರ್ಯಕ್ರಮಕ್ಕೆ ಆಯ್ದ ಅತಿಥಿಗಳ ಪಟ್ಟಿ ಇರುತ್ತದೆ. ಪ್ರವೇಶ ಅನುಮತಿ ನೀಡಲು ಅಗತ್ಯವಾದ ಔಪಚಾರಿಕ ಪ್ರಕ್ರಿಯೆಗಳು ನಡೆಯುತ್ತಿವೆ.

ರಾಷ್ಟ್ರಪತಿ ಭವನದ ಬಗ್ಗೆ:
ರಾಷ್ಟ್ರಪತಿ ಭವನ ದೇಶದ ಪರಮೋಚ್ಛ ಗೌರವದ ಹುದ್ದೆಯೆನಿಸಿರುವ ರಾಷ್ಟ್ರಾಧ್ಯಕ್ಷರ ಸರ್ಕಾರಿ ನಿವಾಸವಾಗಿದ್ದು, ಸುಂದರ ಕೆತ್ತನೆಗಳಿಂದಾಗಿ ಜಗತ್ತಿನಲ್ಲೇ ಅತ್ಯಂತ ಆಕರ್ಷಕ ಮತ್ತು ಹಳೆಯ ಬಂಗಲೆಗಳಲ್ಲಿ ಒಂದೆನಿಸಿದೆ.

ಬ್ರಿಟಿಷ್ ಅಧಿಕಾರಿ ಸರ್ ಎಡ್ವಿನ್ ಲ್ಯೂಟನ್ಸ್ ಕಲ್ಪನೆಯಲ್ಲಿ 300 ಎಕ್ರೆ ವ್ಯಾಪ್ತಿಯಲ್ಲಿ ಪಾರ್ಕ್, ಭದ್ರತಾ ಕೊಠಡಿ ಒಳಗೊಂಡು ರಾಷ್ಟ್ರಾಧ್ಯಕ್ಷರ ನಿವಾಸವನ್ನು ನಿರ್ಮಿಸಲಾಗಿದೆ. 340 ಕೊಠಡಿಗಳನ್ನು ಒಳಗೊಂಡ ನಾಲ್ಕು ಅಂತಸ್ತಿನ ಬಂಗಲೆಯ ಕಟ್ಟಡ ಎರಡು ಲಕ್ಷ ಚದರಡಿಯಲ್ಲಿ ಹರಡಿಕೊಂಡಿದೆ. ದೇಶದ ಪರಮೋಚ್ಚ ನಾಯಕ ಸ್ಥಾನದ ವ್ಯಕ್ತಿ ನೆಲೆಸುವ ಜಗತ್ತಿನ ಎರಡನೇ ಅತಿ ದೊಡ್ಡ ಅಧಿಕೃತ ಸರ್ಕಾರಿ ನಿವಾಸವೂ ಇದಾಗಿದೆ. ಇಟಲಿಯ ಕ್ವಿರಿನಲ್ ಪ್ಯಾಲೇಸ್ ಜಗತ್ತಿನಲ್ಲಿ ಅತಿ ದೊಡ್ಡ ಸರ್ಕಾರಿ ನಿವಾಸ ಎಂದೆನಿಸಿದೆ. ಇಂಥ ಪ್ರತಿಷ್ಠಿತ ಬಂಗಲೆಯನ್ನು ವಿದೇಶಿ ಗಣ್ಯರಿಗೆ ಆತಿಥ್ಯ ನೀಡುವುದಕ್ಕೆ ಮಾತ್ರ ಬಳಸಲಾಗಿತ್ತು. ಈವರೆಗೂ ಖಾಸಗಿಯಾಗಿ ಯಾವುದೇ ಸಮಾರಂಭಕ್ಕೆ ಇಲ್ಲಿ ಅವಕಾಶ ನೀಡಿರಲಿಲ್ಲ.

ಹೀಗಾಗಿ ರಾಷ್ಟ್ರಪತಿ ಭವನದಲ್ಲಿ ಮದುವೆ ಸಮಾರಂಭ ಏರ್ಪಡಿಸಲಾಗಿದೆ ಎನ್ನುವ ಸುದ್ದಿಯನ್ನು ಆರಂಭದಲ್ಲಿ ಯಾರೂ ನಂಬಿರಲಿಲ್ಲ. ಆದರೆ ದ್ರೌಪದಿ ಮುರ್ಮು ಅವರು ಪೂನಂ ಗುಪ್ತಾ ಅವರ ಬದ್ಧತೆ ಮತ್ತು ಅತ್ಯುತ್ತಮ ಸೇವೆಯನ್ನು ಪರಿಗಣಿಸಿ ಮದುವೆ ಸಮಾರಂಭಕ್ಕೆ ವಿಶೇಷ ಅನುಮತಿ ನೀಡಿದ್ದಾರೆ ಅನ್ನುವುದು ಈಗ ಮೂಲಗಳಿಂದ ದೃಢಪಟ್ಟಿದೆ. ಆದರೆ ಈ ಕುರಿತು ರಾಷ್ಟ್ರಪತಿ ಭವನದಿಂದ ಯಾವುದೇ ಮಾಹಿತಿ ಹೊರಬಿದ್ದಿಲ್ಲ.

TAGGED:CRPFDroupadi MurmuPoonam GuptaRashtrapati BhavanRashtrapati Bhavan wedding
Share This Article
Facebook Whatsapp Whatsapp Telegram

Cinema news

ChetanKumar Ahimsa
ರಾಜ್‌ಕುಮಾರ್‌ ಸಮಾಧಿ ಬಗ್ಗೆ ವಿವಾದಾತ್ಮಕ ಪೋಸ್ಟ್‌ – ಅಭಿಮಾನಿಗಳು ಮುತ್ತಿಗೆ ಹಾಕುತ್ತಿದ್ದಂತೆ ಕ್ಷಮೆಯಾಚಿಸಿದ ಚೇತನ್‌
Cinema Karnataka Latest Top Stories
chetan 13 5
ರಾಜ್‌ಕುಮಾರ್‌ ಸಮಾಧಿಗೆ 2.5 ಎಕರೆ ಜಾಗ ನೀಡಿದ್ದು ಸರಿಯೇ? – ನಟ‌ ಚೇತನ್ ವಿರುದ್ಧ ಡಾಕ್ಟರ್ ರಾಜ್‌ ಅಭಿಮಾನಿಗಳಿಂದ ದೂರು
Bengaluru City Cinema Latest Sandalwood Top Stories
Akshay Kumar 1
ನಟ ಅಕ್ಷಯ್ ಕುಮಾರ್ ಅಪ್ರಾಪ್ತ ಪುತ್ರಿಯ ಬೆತ್ತಲೆ ಫೋಟೋಗೆ ಬೇಡಿಕೆಯಿಟ್ಟಿದ್ದ ವ್ಯಕ್ತಿ ಅರೆಸ್ಟ್
Bollywood Cinema Crime Latest Top Stories
ranveer singh 2
ದೈವಕ್ಕೆ ಅಪಮಾನ – ಇನ್ಮುಂದೆ ಧಾರ್ಮಿಕ ಭಾವನೆಗಳಿಗೆ ಧಕ್ಕೆ ತರಲ್ಲ: ಕ್ಷಮೆಯಾಚಿಸಿದ ರಣವೀರ್ ಸಿಂಗ್
Cinema Court Latest South cinema Top Stories

You Might Also Like

Trump says shooter apprehended after president rushed from White House Correspondents Dinner
Latest

White House Dinner Shooting| ಸೀಕ್ರೆಟ್ ಸರ್ವಿಸ್ ಅದ್ಭುತವಾಗಿ ಕೆಲಸ ಮಾಡಿದೆ, ದಾಳಿಕೋರನನ್ನು ಬಂಧಿಸಲಾಗಿದೆ: ಟ್ರಂಪ್‌

Public TV
By Public TV
4 minutes ago
Shots Heard During Press Dinner At White House Donald Tump Evacuated Correspondents Dinner
Latest

ಶ್ವೇತಭವನದ ಡಿನ್ನರ್ ವೇಳೆ ಗುಂಡಿನ ದಾಳಿ – ವೇದಿಕೆಯಿಂದ ಟ್ರಂಪ್‌ ಸ್ಥಳಾಂತರ

Public TV
By Public TV
15 minutes ago
Public Tv Vidhyapeeta 6
Bengaluru City

ಪಬ್ಲಿಕ್ ಟಿವಿ ಪ್ರಸ್ತುತ ವಿದ್ಯಾಪೀಠಕ್ಕೆ ಇಂದು ಕೊನೆ ದಿನ – ಬನ್ನಿ, ಭಾಗವಹಿಸಿ, ಮಾಹಿತಿ ಪಡೆಯಿರಿ

Public TV
By Public TV
15 minutes ago
daily horoscope dina bhavishya
Astrology

ದಿನ ಭವಿಷ್ಯ 26-04-2026

Public TV
By Public TV
1 hour ago
Abhishek Sharma Ishan Kishan
Cricket

ಅಭಿಷೇಕ್‌, ಕಿಶನ್‌ ಜವಾಬ್ದಾರಿ ಆಟ; ರಾಜಸ್ಥಾನ್‌ ವಿರುದ್ಧ ಹೈದರಾಬಾದ್‌ಗೆ 5 ವಿಕೆಟ್‌ಗಳ ಜಯ

Public TV
By Public TV
8 hours ago
Wanderer Student
Kalaburagi

ಹೊಟ್ಟೆಪಾಡಿಗೆ ಭಿಕ್ಷಾಟನೆ, ಜ್ಞಾನದ ಹಸಿವಿಗೆ ರ್‍ಯಾಂಕ್ – SSLC ಪರೀಕ್ಷೆಯಲ್ಲಿ 529 ಅಂಕ ಪಡೆದ ಅಲೆಮಾರಿ ಪ್ರತಿಭೆ

Public TV
By Public TV
9 hours ago

Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?