Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಕೇರಳದಲ್ಲಿ ಟಿಪ್ಪು ಸದ್ದು – ಸುಲ್ತಾನ್ ಬತ್ತೇರಿ ಹೆಸರನ್ನು ಬದಲಾಯಿಸುತ್ತೇನೆ ಎಂದ ಬಿಜೆಪಿ ಅಧ್ಯಕ್ಷ ಸುರೇಂದ್ರನ್‌
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Latest | ಕೇರಳದಲ್ಲಿ ಟಿಪ್ಪು ಸದ್ದು – ಸುಲ್ತಾನ್ ಬತ್ತೇರಿ ಹೆಸರನ್ನು ಬದಲಾಯಿಸುತ್ತೇನೆ ಎಂದ ಬಿಜೆಪಿ ಅಧ್ಯಕ್ಷ ಸುರೇಂದ್ರನ್‌

Latest

ಕೇರಳದಲ್ಲಿ ಟಿಪ್ಪು ಸದ್ದು – ಸುಲ್ತಾನ್ ಬತ್ತೇರಿ ಹೆಸರನ್ನು ಬದಲಾಯಿಸುತ್ತೇನೆ ಎಂದ ಬಿಜೆಪಿ ಅಧ್ಯಕ್ಷ ಸುರೇಂದ್ರನ್‌

Public TV
Last updated: April 11, 2024 9:35 pm
Public TV
Share
2 Min Read
Kerala BJP Chief K Surendran
SHARE

ತಿರುವನಂತಪುರಂ: ಕೇರಳದ ಲೋಕಸಭಾ ಚುನಾವಣೆಯಲ್ಲಿ (Kerala Lok Sabha Election) ಟಿಪ್ಪು ಸುಲ್ತಾನ್‌ (Tipu Sulthan) ಹೆಸರು ಸದ್ದು ಮಾಡಿದೆ. ನಾನು ಗೆದ್ದರೆ ಸುಲ್ತಾನ್ ಬತ್ತೇರಿ (Sultan Bathery) ಹೆಸರನ್ನು ಗಣಪತಿವಟ್ಟಂ ಎಂದು ಬದಲಾಯಿಸುವುದು ನನ್ನ ಮೊದಲ ಆದ್ಯತೆ ಎಂದು ವಯನಾಡು ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಸುರೇಂದ್ರನ್‌ (K Surendran) ಘೋಷಿಸಿದ್ದಾರೆ.

ಬಿಜೆಪಿ (BJP) ರಾಜ್ಯಾಧ್ಯಕ್ಷರಾಗಿರುವ ಸುರೇಂದ್ರನ್‌ ಅವರನ್ನು ರಾಹುಲ್‌ ಗಾಂಧಿ (Rahul Gandhi) ಸ್ಪರ್ಧಿಸುತ್ತಿರುವ ವಯನಾಡು (Wayanad) ಕ್ಷೇತ್ರದಿಂದ ಕಣಕ್ಕೆ ಇಳಿದಿದ್ದಾರೆ.

ಇಂದಿನ ಪ್ರಚಾರ ಭಾಷಣದಲ್ಲಿ ಮಾತನಾಡಿದ ಅವರು, ಟಿಪ್ಪು ಸುಲ್ತಾನ್ ಯಾರು? ಸುಲ್ತಾನ್‌ ಬತ್ತೇರಿ ಹೆಸರು ಯಾಕೆ ಬಂತು? ಮೊದಲು ಈ ಸ್ಥಳವನ್ನು ಗಣಪತಿವಟ್ಟಂ (Ganapativattam) ಎಂದು ಕರೆಯಲಾಗುತ್ತಿತ್ತು. ಈ ವಿಚಾರ ವಯನಾಡು ಜನತೆಗೆ ತಿಳಿದಿದೆಯೇ ಎಂದು ಪ್ರಶ್ನಿಸಿದರು.  ಇದನ್ನೂ ಓದಿ: ನಮ್ಮ ಬಲಿಷ್ಠ ಸರ್ಕಾರದ ಅವಧಿಯಲ್ಲಿ ಉಗ್ರರು ಅವರ ನೆಲದಲ್ಲೇ ಹತ್ಯೆಯಾಗುತ್ತಿದ್ದಾರೆ: ಮೋದಿ

 

Tipu Sultan

ಸುಲ್ತಾನ್ ಬತ್ತೇರಿ ಎಂಬ ಹೆಸರು ಟಿಪ್ಪು ಸುಲ್ತಾನನ ಆಕ್ರಮಣದ ಭಾಗವಾಗಿ ಹೊರಹೊಮ್ಮಿದೆ. ಸುಲ್ತಾನ್ ಬತ್ತೇರಿಯನ್ನು ಗಣಪತಿವಟ್ಟಂ ಎಂದು ಮರುನಾಮಕರಣ ಮಾಡಬೇಕು. ಇದು ಹಿಂದೂಗಳು ಮತ್ತು ಕ್ರಿಶ್ಚಿಯನ್ನರನ್ನು ಕಗ್ಗೊಲೆ ಮಾಡಿದ ಟಿಪ್ಪು ಸುಲ್ತಾನನ ನಾಡಲ್ಲ. ಕಾಂಗ್ರೆಸ್ ಮತ್ತು ಸಿಪಿಎಂಗಳು ಈಗಲೂ ಕ್ರಿಮಿನಲ್‌ಗಳ ಹೆಸರನ್ನು ಇಡಲು ಬಯಸುತ್ತವೆ ಎಂದು ವಾಗ್ದಾಳಿ ನಡೆಸಿದರು.

ಸುಲ್ತಾನ್‌ ಬತ್ತೇರಿ ಹೆಸರು ಬಂದಿದ್ದು ಹೇಗೆ?
ಈ ಪಟ್ಟಣವನ್ನು ಮೂಲತಃ ಗಣಪತಿವಟ್ಟಂ ಎಂದು ಕರೆಯಲಾಗುತ್ತಿತ್ತು. ಸುಲ್ತಾನ್ ಬತ್ತೇರಿಯ ಪುರಸಭಾ ವೆಬ್‌ಸೈಟ್‌ನ ಪ್ರಕಾರ ಗಣಪತಿ ದೇವಸ್ಥಾನದ ಹೆಸರನ್ನು ಇಡಲಾಗಿತ್ತು. ಸುಲ್ತಾನ್ ಬತ್ತೇರಿಯು ಮೈಸೂರು ಆಳ್ವಿಕೆಯ ಸಮಯದಲ್ಲಿ ಶಸ್ತ್ರಾಸ್ತ್ರ ಮತ್ತು ಮದ್ದುಗುಂಡುಗಳ ಡಂಪಿಂಗ್ ಮೈದಾನವಾಗಿತ್ತು ಎಂದು ಕೇರಳ ಪ್ರವಾಸೋದ್ಯಮದ ಅಧಿಕೃತ ವೆಬ್‌ಸೈಟ್ ಹೇಳುತ್ತದೆ.

18ನೇ ಶತಮಾನ ಟಿಪ್ಪು ಸುಲ್ತಾನ್ ಸೇನೆ ಪಟ್ಟಣವನ್ನು ವಶಪಡಿಸಿಕೊಳ್ಳುತ್ತದೆ ಮತ್ತು ದೇವಾಲಯವನ್ನು ಭಾಗಶಃ ನಾಶ ಮಾಡುತ್ತದೆ. ಈಗ ಭಾರತೀಯ ಪುರಾತತ್ವ ಸರ್ವೇಕ್ಷಣಾ ಇಲಾಖೆಯು ಸ್ವಾಧೀನಪಡಿಸಿಕೊಂಡಿದ್ದು,  ಈಗ ರಾಷ್ಟ್ರೀಯ ಪ್ರಾಮುಖ್ಯತೆಯ ಸ್ಮಾರಕವೆಂದು ಘೋಷಣೆ ಮಾಡಲಾಗಿದೆ. ಇದನ್ನೂ ಓದಿ: ಭಾರತದ ಮೊದಲ ಚುನಾವಣೆ 4 ತಿಂಗಳ ಕಾಲ ನಡೆದಿದ್ದು ನಿಮಗೆ ಗೊತ್ತಾ..?

Ganapativattam Sultan Bather

ಟಿಪ್ಪುವಿನ ಸೇನೆಯು ಗಣಪತಿವಟ್ಟಂ ಪಟ್ಟಣವನ್ನು ತನ್ನ ಬ್ಯಾಟರಿಯನ್ನು (ಕ್ಯಾನನ್‌ಗಳ ಸಮೂಹ) ಶೇಖರಿಸುವ ಸ್ಥಳವಾಗಿ ಬಳಸಿಕೊಂಡಿತು. ಬ್ರಿಟಿಷರ ಈ ಜಾಗವನ್ನು ವಶಪಡಿಸಿದ ಬಳಿಕ ಈ ಪಟ್ಟಣವನ್ನು ‘ಸುಲ್ತಾನರ ಬ್ಯಾಟರಿ’ ಎಂದು ಕರೆಯುತ್ತಿದ್ದರು. ಕಾಲಾನಂತರದಲ್ಲಿ ಈ ಹೆಸರು ಸುಲ್ತಾನ್ ಬತ್ತೇರಿಯಾಗಿ ಬದಲಾಯಿತು.

ದೇವಸ್ಥಾನ ಧ್ವಂಸ, ಬಲವಂತದ ಮತಾಂತರ
ಟಿಪ್ಪುವಿನ ಸೇನೆ ದೇವಸ್ಥಾನ ಮತ್ತು ಚರ್ಚುಗಳನ್ನು ಧ್ವಂಸ ಮಾಡಿತು. ಬಲವಂತದ ಧಾರ್ಮಿಕ ಮತಾಂತರದಿಂದ ತಪ್ಪಿಸಿಕೊಳ್ಳಲು ಹಲವು ಮಂದಿ ಆ ಪ್ರದೇಶವನ್ನು ತೊರೆದರು. 25 ಚರ್ಚುಗಳನ್ನು ಟಿಪ್ಪುವಿನ ಸೇನೆ ನಾಶ ಮಾಡಿತು. ಮತಾಂತರ ಮತ್ತು ಚರ್ಚ್‌ಗಳ ನಾಶದಿಂದ ಈ ಭಾಗದಲ್ಲಿ ಪ್ರಬಲವಾಗಿದ್ದ ರೋಮನ್ ಕ್ಯಾಥೋಲಿಕ್‌ ಜನರ ಸಂಖ್ಯೆ ಗಮನಾರ್ಹವಾಗಿ ಇಳಿಕೆಯಾಯಿತು. ಟಿಪ್ಪು ಸುಲ್ತಾನ್ ಮಹಾ ಗಣಪತಿ ದೇವಸ್ಥಾನವನ್ನು ತನ್ನ ಶಸ್ತ್ರಾಸ್ತವನ್ನು ಇರಿಸುವ ಜಾಗವನ್ನಾಗಿ ಬದಲಾಯಿಸಿದ್ದ ಎಂದು ಇತಿಹಾಸದಲ್ಲಿ ಉಲ್ಲೇಖವಿದೆ.

 

TAGGED:K.surendrankeralaLok Sabha electionSultan Batheryಕೇರಳಲೋಕಸಭಾ ಚುನಾವಣೆವಯನಾಡುಸುರೇಂದ್ರನ್‌
Share This Article
Facebook Whatsapp Whatsapp Telegram

Cinema news

nikhil kumaraswamy actor chetan
ಡಾ.ರಾಜ್‌ಕುಮಾರ್ ಎಂದರೆ ಆರು ಕೋಟಿ ಕನ್ನಡಿಗರ ಭಾವನೆ: ನಟ ಚೇತನ್‌ಗೆ ನಿಖಿಲ್ ಕುಮಾರಸ್ವಾಮಿ ಕಿಡಿ
Bengaluru City Cinema Latest Sandalwood Top Stories
Sanjay Dutt
ಸರ್ಸೆ ಸೆರಗ ಸರ್ಸೆ ಹಾಡಿನ ವಿವಾದ – ಕ್ಷಮೆಯಾಚಿಸಿದ ಸಂಜಯ್ ದತ್, ಬುಡಕಟ್ಟು ಜನಾಂಗದ 50 ಹುಡುಗಿಯರ ಶಿಕ್ಷಣಕ್ಕೆ ಹಣದ ಭರವಸೆ
Bollywood Cinema Latest National Sandalwood Top Stories
ChetanKumar Ahimsa
ರಾಜ್‌ಕುಮಾರ್‌ ಸಮಾಧಿ ಬಗ್ಗೆ ವಿವಾದಾತ್ಮಕ ಪೋಸ್ಟ್‌ – ಅಭಿಮಾನಿಗಳು ಮುತ್ತಿಗೆ ಹಾಕುತ್ತಿದ್ದಂತೆ ಕ್ಷಮೆಯಾಚಿಸಿದ ಚೇತನ್‌
Cinema Karnataka Latest Top Stories
chetan 13 5
ರಾಜ್‌ಕುಮಾರ್‌ ಸಮಾಧಿಗೆ 2.5 ಎಕರೆ ಜಾಗ ನೀಡಿದ್ದು ಸರಿಯೇ? – ನಟ‌ ಚೇತನ್ ವಿರುದ್ಧ ಡಾಕ್ಟರ್ ರಾಜ್‌ ಅಭಿಮಾನಿಗಳಿಂದ ದೂರು
Bengaluru City Cinema Latest Sandalwood Top Stories

You Might Also Like

S 400 missile system
Latest

ಆಪರೇಷನ್ ಸಿಂಧೂರ ಆ್ಯನಿವರ್ಸರಿ ಹೊತ್ತಲ್ಲೇ ಭಾರತಕ್ಕೆ ಬರುತ್ತಿದೆ 4ನೇ ಸುದರ್ಶನ

Public TV
By Public TV
17 minutes ago
visl worker dies after falling iron billet 8 lakh compensation before funeral job guarantee letter for wife
Districts

ಕಬ್ಬಿಣದ ಬಿಲ್ಲೆಟ್ ಬಿದ್ದು VISL ಕಾರ್ಮಿಕ ಸಾವು – ಅಂತ್ಯಸಂಸ್ಕಾರಕ್ಕೂ ಮುನ್ನವೇ 8 ಲಕ್ಷ ಪರಿಹಾರ, ಪತ್ನಿಗೆ ಉದ್ಯೋಗ ಭರವಸೆ

Public TV
By Public TV
35 minutes ago
Weather
Bengaluru City

ಬೆಂಗಳೂರಿನ ಹಲವೆಡೆ ತಂಪೆರೆದ ವರುಣ – ರಾಜ್ಯದಲ್ಲಿ ಏ.30ರವರೆಗೆ ಮಳೆ ಸಾಧ್ಯತೆ: ಹವಾಮಾನ ಇಲಾಖೆ

Public TV
By Public TV
51 minutes ago
Nitin Gadkari
Latest

ಪೆಟ್ರೋಲ್, ಡೀಸೆಲ್ ವಾಹನಗಳಿಗೆ ಭವಿಷ್ಯವಿಲ್ಲ: ನಿತಿನ್ ಗಡ್ಕರಿ

Public TV
By Public TV
59 minutes ago
Vaibhav Sooryavanshi 4
Cricket

ನನ್ನ ಜೊತೆ ಸೆಲ್ಫಿ ಬೇಕಾ? ಹಾಗಾದ್ರೆ 100 ರೂಪಾಯಿ ಕೊಡಿ – ಪುಟಾಣಿಗಳ ಜೊತೆ ವೈಭವ್ ಸೂರ್ಯವಂಶಿ ತುಂಟಾಟ!

Public TV
By Public TV
2 hours ago
k.h.muniyappa delhi
Latest

ದೆಹಲಿಗೆ ಸಚಿವರ ದಂಡು – ಮುಖ್ಯಮಂತ್ರಿ ಗೊಂದಲ ಇತ್ಯರ್ಥಪಡಿಸಲು ಸಚಿವರ ಒತ್ತಡ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?