ಅನ್ಯಾಯವನ್ನ ಪ್ರಶ್ನಿಸಿದರೆ ದೇಶದ್ರೋಹದ ಪಟ್ಟ ಕಟ್ಟುತ್ತಾರೆ: ನಟ ಚೇತನ್

Public TV
2 Min Read
chetan

-ಇತಿಹಾಸ ಹೊಂದಿರುವ ಹೆಮ್ಮೆಯ ಕನ್ನಡಿಗ ಟಿಪ್ಪು

ಕೋಲಾರ: ಸಮಾಜದಲ್ಲಿ ಅನ್ಯಾಯವನ್ನ ಪ್ರಶ್ನಿಸಿದರೆ ದೇಶದ್ರೋಹದ ಪಟ್ಟ ಕಟ್ಟುತ್ತಾರೆ ಎಂದು ಜಿಲ್ಲೆಯಲ್ಲಿ ನಡೆದ ಅಂಬೇಡ್ಕರ್ ಸೇವಾ ಸಮಿತಿ ಕಾರ್ಯಕ್ರಮದಲ್ಲಿ ನಟ ಚೇತನ್ ಬೇಸರ ವ್ಯಕ್ತಪಡಿಸಿದ್ದಾರೆ.

ಅಂಬೇಡ್ಕರ್ ಸೇವಾ ಸಮಿತಿ 2ನೇ ವರ್ಷದ ಸಂಸ್ಥಾಪನಾ ದಿನಾಚರಣೆ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಸಮಾಜದ ಒಳತಿಗಾಗಿ ಯಾರು ಅನ್ಯಾಯವನ್ನು ಪ್ರಶ್ನಿಸುತ್ತಾರೋ ಅವರಿಗೆ ದೇಶ ದ್ರೋಹದ ಪಟ್ಟ ಕಟ್ಟುತ್ತಾರೆ. ಅನ್ಯಾಯದ ವಿರುದ್ಧ ಹೋರಾಟ ಮಾಡಿದವರನ್ನ ಕೊಲ್ಲುವುದು, ಬಂಧಿಸುವ ಸ್ಥಿತಿ ಇದೆ. ಸಾಹಿತಿ ಎಂ.ಎಂ ಕಲಬುರ್ಗಿ ಎಂತಹ ವ್ಯಕ್ತಿಗಳು ಅನ್ಯಾಯದ ವಿರುದ್ಧ ಹೋದಾಗ ಧಾರ್ಮಿಕ ವಾದಿಗಳು ಹತ್ಯೆಗೈದಿದ್ದಾರೆ. ಆದರೆ ಅನ್ಯಾಯದ ವಿರುದ್ಧ ಹೋರಾಡಲು ಅಂಬೇಡ್ಕರ್ ಸಂವಿಧಾನ ರಚಿಸಿದರು. ಹೀಗಾಗಿ ಬುದ್ಧ ಹಾಗೂ ಅಂಬೇಡ್ಕರ್ ಅವರ ಸಿದ್ಧಾಂತಗಳು ನಮ್ಮ ದೇಶದ ಹೆಮ್ಮೆ ಎಂದು ಹೇಳಿದರು.

chetan 1

ಸಂವಿಧಾನ ವಿರೋಧಿಗಳು ಧರ್ಮಗಳನ್ನ ಒಡೆಯುತ್ತಿದ್ದಾರೆ. 300 ವರ್ಷಗಳ ಇತಿಹಾಸ ಹೊಂದಿರುವ ಹೆಮ್ಮೆಯ ಕನ್ನಡಿಗ ಟಿಪ್ಪು ಸುಲ್ತಾನ. ಅಂತಹ ಟಿಪ್ಪು ದೇಶ ರಕ್ಷಣೆ ಮಾಡಿ, ಮಠ ಮಾನ್ಯಗಳನ್ನ ರಕ್ಷಣೆ ಮಾಡಿದ್ದಾರೆ. ಆದ್ರೆ ಇಂದು ಅವರನ್ನು ದೇಶದ್ರೋಹಿಯಂತೆ ಬಿಂಬಿಸುತ್ತಿದ್ದಾರೆ. ಟಿಪ್ಪುವಿಗೆ ದೇಶದ್ರೋಹದ ಪಟ್ಟ ಕಟ್ಟುವವರು ನಿಜಕ್ಕೂ ಇತಿಹಾಸವನ್ನೂ ಅರಿತಿಲ್ಲ ಎಂದು ಕಿಡಿಕಾರಿದರು.

ಹಾಗೆಯೇ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದ ಸಾಹಿತಿ ಭಗವಾನ್ ಅವರು ಮಾತನಾಡಿ, ಬಾಬಾ ಸಾಹೇಬ್ ಅಂಬೇಡ್ಕರ್ ಅವರ ಸಂವಿಧಾನದಲ್ಲಿ ಸಮಾನತೆ ಇದೆ, ಆದ್ರೆ ಮನುಸ್ಮೃತಿಯಲ್ಲಿ ಸಮಾನತೆ ಇಲ್ಲ. ಮನುಸ್ಮೃತಿ ಇರುವುದು ಬ್ರಾಹ್ಮಣರು ಶೂದ್ರರ ಮೇಲೆ ದಾಸ್ಯ ಹೇರಲು ಮಾತ್ರ ಇದೆ. ಆದರೆ ಅಂಬೇಡ್ಕರ್ ಅವರು ಮನುಸ್ಮೃತಿಯನ್ನು ಬದಿಗೆ ಸರಿಸಿ ಸಂವಿಧಾನವನ್ನು ತಂದರು ಎಂದು ಸಾಹಿತಿ ಭಗವಾನ್ ತಿಳಿಸಿದರು.

bhagavan

ಸಂವಿಧಾನವನ್ನ ಯಾರೂ ಓದಿ ಅರ್ಥ ಮಾಡಿಕೊಂಡಿಲ್ಲ, ಸಂವಿಧಾನದಲ್ಲಿ ಸಮಾನತೆ ಇದೆ ದಾಸ್ಯ ಇಲ್ಲ. ಬ್ರಾಹ್ಮಣರು ಬಿಟ್ಟು ಉಳಿದವರೆಲ್ಲಾ ಗುಲಾಮರು ಎಂಬುದು ಮನುಸ್ಮೃತಿ. ಆದ್ದರಿಂದ ಸಂವಿಧಾನವನ್ನ ತೆಗೆಯಲು ಹೊರಟಿದ್ದಾರೆ ಎಂದರು. ಬಳಿಕ ಬ್ರಿಟಿಷರು ಬಂದ ಮೇಲೆ ನಮಗೆಲ್ಲಾ ಶಿಕ್ಷಣ ಸಿಕ್ಕಿತು. ಅಲ್ಲಿಯವರೆಗೂ ಎಲ್ಲರೂ ಹೆಬ್ಬಟ್ಟುಗಳೆ ಆಗಿದ್ದರು. ಕೆಲಸಕ್ಕೆ ಬಾರದ ತುಳಿಯುವ, ಕಡಿಯುವ ಇಲ್ಲಸಲ್ಲದ ದೇವರುಗಳನ್ನ ತಂದು ನಮ್ಮ ಮೇಲೆ ಹೇರಿದ್ದಾರೆ. ಇದರಿಂದ ನಾವು ಹೊರಗೆ ಬರಬೇಕು, ಸಂವಿಧಾನವನ್ನು ಅಧ್ಯಯನ ಮಾಡಿ ಅರಿವು ಪಡೆಯಬೇಕು ಎಂದು ಕಿವಿ ಮಾತನ್ನು ಹೇಳಿದರು.

Share This Article
Leave a Comment

Leave a Reply

Your email address will not be published. Required fields are marked *