Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ನನ್ನನ್ನು ಯಾಕೆ ದೂಷಿಸುತ್ತೀರಾ, ಉಳಿದ ಮಕ್ಕಳನ್ನು ಯಾಕೆ ಪ್ರಶ್ನಿಸಲ್ಲ: ರಾನು ಪುತ್ರಿ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Cinema | Bollywood | ನನ್ನನ್ನು ಯಾಕೆ ದೂಷಿಸುತ್ತೀರಾ, ಉಳಿದ ಮಕ್ಕಳನ್ನು ಯಾಕೆ ಪ್ರಶ್ನಿಸಲ್ಲ: ರಾನು ಪುತ್ರಿ

Bollywood

ನನ್ನನ್ನು ಯಾಕೆ ದೂಷಿಸುತ್ತೀರಾ, ಉಳಿದ ಮಕ್ಕಳನ್ನು ಯಾಕೆ ಪ್ರಶ್ನಿಸಲ್ಲ: ರಾನು ಪುತ್ರಿ

Public TV
Last updated: September 3, 2019 5:19 pm
Public TV
Share
3 Min Read
ranu mondal
SHARE

ನವದೆಹಲಿ: ರೈಲ್ವೆ ನಿಲ್ದಾಣದಿಂದ ಬಾಲಿವುಡ್ ಅಂಗಳಕ್ಕೆ ಹಾರಿದ ವೈರಲ್ ಸಿಂಗರ್ ರಾನು ಮೊಂಡಲ್ ಈಗ ಸಖತ್ ಫೇಮಸ್. ಇಷ್ಟು ದಿನ ಒಂಟಿಯಾಗಿದ್ದ ರಾನು ಅವರು ವೈರಲ್ ಆಗುತ್ತಿದ್ದಂತೆ ಮಗಳು ಅವರನ್ನು ಭೇಟಿಯಾಗಿದ್ದ ವಿಚಾರ ಎಲ್ಲರಿಗೂ ತಿಳಿದಿದೆ. ಆದರೆ ತಾಯಿ ಹೆಸರು ಗಳಿಸಿದ ಬಳಿಕ ಅವರ ಬಳಿಗೆ ಮಗಳು ಬಂದಿದ್ದಾಳೆ ಎಂದವರಿಗೆ ರಾನು ಪುತ್ರಿ ತಿರುಗೇಟು ನೀಡಿದ್ದಾರೆ.

ಮಾಧ್ಯಮವೊಂದು ರಾನು ಪುತ್ರಿ ಎಲಿಜಬೆತ್ ಸಾಥಿ ರಾಯ್ ಅವರ ಸಂದರ್ಶನ ಮಾಡಿದಾಗ ತಾಯಿ ಬಗ್ಗೆ ಮಾತನಾಡಿ, ನನ್ನ ತಾಯಿ ರೈಲ್ವೇ ನಿಲ್ದಾಣದಲ್ಲಿ ಹಾಡು ಹೇಳುತ್ತಿದ್ದ ವಿಚಾರ ನನಗೆ ತಿಳಿದಿರಲಿಲ್ಲ. ಈ ಹಿಂದೆ ಸಾಕಷ್ಟು ಬಾರಿ ನಾನು ಆಕೆಯನ್ನು ಭೇಟಿ ಮಾಡಲು ಪ್ರಯತ್ನಿಸಿದ್ದೆ. ಆದರೆ ಸಾಧ್ಯವಾಗಿರಲಿಲ್ಲ. ನನ್ನ ಪತಿ ನನ್ನ ಜೊತೆ ಇಲ್ಲ. ನಾನು ಚಿಕ್ಕ ಅಂಗಡಿ ಇಟ್ಟುಕೊಂಡು ಮಗುವೊಂದಿಗೆ ಜೀವನ ನಡೆಸುತ್ತಿದ್ದೇನೆ. ನನ್ನ ಬದುಕು ಸಾಗಿಸುವುದೆ ಕಷ್ಟವಿದೆ. ಆದರಲ್ಲೂ ನಾನು ನನ್ನ ತಾಯಿಯನ್ನು ಆಗಾಗ ನೋಡಲು ಬರುತ್ತಿದ್ದೆ. ಸಾಕಷ್ಟು ಬಾರಿ ನನ್ನ ಜೊತೆಯೇ ಇರು ಎಂದು ಅಮ್ಮನಿಗೆ ಹೇಳಿದ್ದೆ. ಆದರೆ ಅವರು ನನ್ನ ಮಾತನ್ನು ಕೇಳಿರಲಿಲ್ಲ. ಆಗಾಗ ನಾನು ತಾಯಿಗೆ ಹಣವನ್ನು ಹಾಗೂ ತಿನ್ನಲು ಆಹಾರವನ್ನು ಕೊಂಡೊಯ್ಯುತ್ತಿದ್ದೆ ಎಂದರು. ಇದನ್ನು ಓದಿ:ನಾನು ಫುಟ್‍ಪಾತ್‍ನಲ್ಲಿ ಹುಟ್ಟಿದವಳಲ್ಲ- ಕುಟುಂಬದ ಕಹಾನಿ ಬಿಚ್ಚಿಟ್ಟ ರಾನು

ranu mandal

ನನ್ನ ತಾಯಿ ಎರಡು ಮದುವೆಯಾಗಿದ್ದಾರೆ. ನಾನು ಅವರ ಮೊದಲ ಪತಿಯ ಮಗಳು, ನನಗೆ ಓರ್ವ ಸಹೋದರ ಕೂಡ ಇದ್ದಾನೆ. ಅವರ ಎರಡನೇ ಗಂಡನಿಗೆ ಎರಡು ಮಕ್ಕಳಿದ್ದಾರೆ. ಒಟ್ಟು 4 ಮಕ್ಕಳಿದ್ದೇವೆ. ಆದರೆ ಎಲ್ಲರೂ ಕೂಡ ನನ್ನನ್ನು ಮಾತ್ರ ದೂಷಿಸುತ್ತಿದ್ದಾರೆ. ಉಳಿದ ಮಕ್ಕಳನ್ನು ಯಾಕೆ ಯಾರು ಕೇಳುತ್ತಿಲ್ಲ ಎಂದು ಪ್ರಶ್ನಿಸಿದರು. ಕೆಲವು ವರ್ಷಗಳ ಹಿಂದೆಯಷ್ಟೆ ನನ್ನ ತಂದೆ ತೀರಿಹೋದರು. ಆದರೆ ಅಮ್ಮನ ಎರಡನೇ ಪತಿ ಬದುಕಿದ್ದಾರೋ ಇಲ್ಲವೋ ಗೊತ್ತಿಲ್ಲ. ಅವರ ಎರಡನೇ ಪತಿಯ ಮಕ್ಕಳು ಮುಂಬೈನಲ್ಲಿ ವಾಸವಿದ್ದಾರೆ. ಅವರು ಯಾಕೆ ಅಮ್ಮನನ್ನು ನೋಡಲು ಬಂದಿಲ್ಲ ಎನ್ನುವ ಬಗ್ಗೆ ನನಗೆ ತಿಳಿದಿಲ್ಲ ಎಂದು ಕಿಡಿಕಾರಿದರು. ಇದನ್ನು ಓದಿ:ರಾನು ಕಂಠದಲ್ಲಿ ಮತ್ತೊಂದು ಹೊಸ ಹಾಡು ತಂದ ಹಿಮೇಶ್

ಅವರು ಬೀದಿಯಲ್ಲಿ ಹಾಡಿ, ಜೀವನ ನಡೆಸುತ್ತಿದ್ದ ಬಗ್ಗೆ ನನಗೆ ತಿಳಿದಿರಲಿಲ್ಲ. ಅವರನ್ನು ರಣಘಾಟ್‍ನ ಅಮ್ರಾ ಶೋಬಾಯಿ ಶೊಯ್ತಾನ್ ಕ್ಲಬ್ ಅವರು ನೋಡಿಕೊಳ್ಳುತ್ತಿದ್ದರು. ನನ್ನ ಸಹೋದರರು ಕೂಡ ಈ ಕ್ಲಬ್ ಸದಸ್ಯರಾಗಿದ್ದರು. ಅವರೇ ಅಮ್ಮನನ್ನು ಕ್ಲಬ್‍ನಲ್ಲಿ ನೋಡಿಕೊಳ್ಳುತ್ತಿದ್ದರು. ಅವರು ನನಗೆ ಅಮ್ಮನನ್ನು ಭೇಟಿಯಾಗಲು ಬಿಡುತ್ತಿರಲಿಲ್ಲ. ಫೋನ್ ಮಾಡಿದ್ದರು ಕೂಡ ಮಾತನಾಡಲು ಕೊಡುತ್ತಿರಲಿಲ್ಲ. ಅಮ್ಮನ ಜೊತೆ ಮಾತನಾಡಲು ಪ್ರಯತ್ನಿಸಿದಾಗ ನನ್ನ ಮೇಲೆ ಹಲ್ಲೆ ಮಾಡಿದ್ದರು. ಆದ್ದರಿಂದ ನಾನು ಅಮ್ಮನಿಂದ ದೂರವಿದ್ದೆ. ಬಳಿಕ ಅಮ್ಮ ಬಗ್ಗೆ ಏನು ಮಾಹಿತಿ ಇರಲಿಲ್ಲ ಎಂದು ಆರೋಪಿಸಿದರು.

ranu mondal new 1

ಈಗ ಅಮ್ಮನಿಗೆ ಹಣ, ಹೆಸರು ಬರುತ್ತಿರುವುದಕ್ಕೆ ಅವರು ನನ್ನನ್ನು ಮತ್ತೆ ಅಮ್ಮನಿಂದ ದೂರ ಮಾಡುತ್ತಿದ್ದಾರೆ. ಅಮ್ಮನಿಗೆ ನನ್ನ ಬಗ್ಗೆ ತಪ್ಪಾಗಿ ಹೇಳಿ ತಲೆಕೆಡಿಸುತ್ತಿದ್ದಾರೆ. ಇಬ್ಬರು ಸೇರಿ ಇತ್ತೀಚೆಗೆ ತಾಯಿಯ ಬ್ಯಾಂಕ್ ಖಾತೆಯಿಂದ 10 ಸಾವಿರ ತೆಗೆದುಕೊಂಡಿದ್ದಾರೆ. ಮನೆಗೆ ಸಾಮಾಗ್ರಿ ತಂದು ಕೊಡುವುದಾಗಿ ಅಮ್ಮನ ಬಳಿ ಹಣ ಪಡೆದು, ಆಕೆಗೆ 4 ಜೊತೆ ಬಟ್ಟೆ, ಬ್ಯಾಗ್ ತಂದು ಕೊಟ್ಟು, ಉಳಿದ ಹಣವನ್ನು ತಾವೇ ಖಾಲಿ ಮಾಡಿದ್ದಾರೆ. ಎಲ್ಲರು ನನ್ನನ್ನೇ ದೂಷಿಸುತ್ತಿದ್ದಾರೆ. ಆದರು ಕೂಡ ನಾನು ಅಮ್ಮನಿಗೆ ಬೆಂಬಲ ನೀಡುತ್ತೇನೆ. ಅವರ ಮಧುರ ಧ್ವನಿಯ ಮೂಲಕ ಅವಕಾಶವನ್ನು ಅವರೇ ಗಿಟ್ಟಿಸಿಕೊಂಡಿದ್ದಾರೆ. ಅವರ ಮಗಳೆಂದು ಹೇಳಿಕೊಳ್ಳಲು ನನಗೆ ಹೆಮ್ಮೆಯಾಗುತ್ತೆ ಎಂದರು.

ಈಗಲೂ ನಾನು ನಮ್ಮ ಮನೆಗೆ ಬಾ, ನನ್ನ ಜೊತೆ ಇರು ಎಂದು ಅಮ್ಮನಿಗೆ ಹೇಳುತ್ತಿದ್ದೇನೆ ಆದರೆ ಅವರು ನನ್ನ ಮಾತನ್ನು ಕೇಳುತ್ತಿಲ್ಲ. ಅವರನ್ನು ನಾನು ಒತ್ತಾಯ ಮಾಡಲ್ಲ. ಅವರಿಗೆ ಇಷ್ಟವಿದ್ದರೆ ನನ್ನ ಜೊತೆಯಲ್ಲಿ ಇರಲಿ ನಾನು ನೋಡಿಕೊಳ್ಳುತ್ತೇನೆ ಎಂದು ಎಲಿಜಬೆತ್ ತಿಳಿಸಿದರು.

TAGGED:childrendaughterfamilyNew DelhiPublic TVRanu MondalStoryಕಥೆಕುಟುಂಬನವದೆಹಲಿಪಬ್ಲಿಕ್ ಟಿವಿಮಕ್ಕಳುಮಗಳುರಾನು ಮೊಂಡಲ್
Share This Article
Facebook Whatsapp Whatsapp Telegram

Cinema news

trisha krishnan
ಶ್ರೀಮಂತ ಉದ್ಯಮಿಯನ್ನ ಮದ್ವೆಯಾಗಿ, 4 ಮಕ್ಕಳನ್ನು ಬೆಳೆಸುತ್ತಿದ್ದೇನೆ – ಸಿನಿಮಾ ನಿವೃತ್ತಿ ವದಂತಿಗೆ ನಟಿ ತ್ರಿಶಾ ಕೌಂಟರ್
Cinema Latest South cinema Top Stories
Rashmika Mandanna
ಕೊಡಗಿನಲ್ಲಿ ರಶ್ಮಿಕಾ – ವಿಜಯ್‌ ಡಿನ್ನರ್‌ ಪಾರ್ಟಿ; ಕೊಡವ ಶೈಲಿಯ ಭರ್ಜರಿ ಆತಿಥ್ಯ!
Cinema Kodagu Latest Main Post Sandalwood South cinema
Rashmika Mandanna Father
ರಶ್ಮಿಕಾಗೆ ಮದುವೆಯ ಉಡುಗೊರೆಯಾಗಿ ತಮ್ಮ ಮನೆಯನ್ನೇ ನೀಡಿದ ತಂದೆ ಮದನ್‌ ಮಂದಣ್ಣ
Cinema Districts Karnataka Kodagu Latest South cinema Top Stories
DARSHAN RENUKASWAMY
ರೇಣುಕಾಸ್ವಾಮಿ ಕೊಲೆ ಕೇಸ್‌ ಆಧರಿತ ಸಿನಿಮಾ ‘ಬಾಸ್’‌ ರಿಲೀಸ್‌ಗೆ ಕೋರ್ಟ್‌ ತಡೆಯಾಜ್ಞೆ
Bengaluru City Cinema Court Latest Sandalwood Top Stories

You Might Also Like

Jio Mart Nelamangala Fire Accident
Bengaluru Rural

ಜಿಯೋ ಮಾರ್ಟ್‌ ಗೋಡೌನ್‌ನಲ್ಲಿ ಅಗ್ನಿ ಅವಘಡ – ಬೃಹತ್‌ ಕಟ್ಟಡ, ಕೊಟ್ಯಂತರ ರೂ. ಮೌಲ್ಯದ ವಸ್ತುಗಳು ಭಸ್ಮ

Public TV
By Public TV
22 minutes ago
Strait of Hormuz 1
Latest

US-Iran Ceasefire| ಹಾರ್ಮುಜ್‌ನಲ್ಲಿ ಸಂಚಾರಕ್ಕೆ 2 ಹೊಸ ಪರ್ಯಾಯ ಮಾರ್ಗ ಪ್ರಕಟಿಸಿದ IRGC

Public TV
By Public TV
34 minutes ago
KKR
Cricket

ಹ್ಯಾಟ್ರಿಕ್‌ ಸೋಲುಂಡ ಕೋಲ್ಕತ್ತಾ ಇಂದಾದ್ರೂ ಗೆಲ್ಲುತ್ತಾ?

Public TV
By Public TV
1 hour ago
Israel Strikes Lebanon With 100 Missiles In 10 Minutes
Latest

ಕದನ ವಿರಾಮ ಘೋಷಣೆ ಬೆನ್ನಲ್ಲೇ 10 ನಿಮಿಷದಲ್ಲಿ ಲೆಬನಾನ್‌ ಮೇಲೆ ಇಸ್ರೇಲ್‌ನಿಂದ 100 ಕ್ಷಿಪಣಿ ದಾಳಿ

Public TV
By Public TV
1 hour ago
Vinay Kulkarni 2
Bengaluru City

ಯೋಗೇಶ್‌ ಗೌಡ ಕೊಲೆ ಕೇಸ್‌ – ಕಾಂಗ್ರೆಸ್‌ ಶಾಸಕ ವಿನಯ್‌ ಕುಲಕರ್ಣಿ ಭವಿಷ್ಯ ಇಂದು ನಿರ್ಧಾರ

Public TV
By Public TV
2 hours ago
Voting begins in Davanagere South Bagalkote by Elections 1
Bagalkot

ದಾವಣಗೆರೆ, ಬಾಗಲಕೋಟೆ ಉಪಚುನಾವಣೆ ಮತದಾನ ಆರಂಭ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?