Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Bengaluru City

ಕನ್ನಡ ಶಾಲೆಗಳ ಮುಚ್ಚುತ್ತಿರುವುದು ಯಾಕೆ? ನಮ್ಮ ನಿಮ್ಮೆಲ್ಲರ ಕರ್ತವ್ಯ ಏನು?

Public TV
Last updated: November 14, 2021 9:58 pm
Public TV
Share
3 Min Read
Kannda School
SHARE

ಇಂದು ನವೆಂಬರ್ 1 ಕನ್ನಡ ರಾಜ್ಯೋತ್ಸವ. ನಾಡಿನಾದ್ಯಂತ ಆಚರಣೆ ಭರ್ಜರಿ ಸಂಭ್ರಮದಿಂದ ಆಚರಿಸಲಾಗುತ್ತದೆ. ಆದರೆ ಕನ್ನಡದ ಹುಟ್ಟು ಕನ್ನಡ ಮಾಧ್ಯಮ ಶಾಲೆಗಳು ಕಣ್ಮರೆ ಆಗುತ್ತಿರೋದು ಮಾತ್ರ ಕಾಣುತ್ತಿಲ್ಲ. ಕೆಲವರು ಕಂಡರೂ ಕಾಣದಂತೆಯೂ ಇದ್ದಾರೆ. ನವೆಂಬರ್ 1 ರಂದು ಕೇವಲ ಕನ್ನಡ ರಾಜ್ಯೋತ್ಸವ ಆಚರಿಸದೇ ಮಾತ್ರ ಅದು ಕನ್ನಡಾಭಿಮಾನ ಆಗಲಾರದು. ಇಂದು ನಮ್ಮ ನಾಡಿನಲ್ಲಿಯೇ ಕನ್ನಡ ಉಳುವಿಕೆಗಾಗಿ ಹೋರಾಡುವ ಸ್ಥಿತಿ ನಮಗೆ ಬಂದಿದೆ. ಕನ್ನಡ ಉಳಿಯಬೇಕೆಂದರೆ ಸರ್ಕಾರಿ ಕನ್ನಡ ಶಾಲೆಗಳು ಉಳಿಯಬೇಕಿದೆ.

ಕನ್ನಡ ಎಂದರೆ ಬದುಕು, ಜೀವನ ಕ್ರಮ, ಉಸಿರು ಇಂದಿನ ದಿನದಲ್ಲಿ ಕೇವಲ ತೋರಿಕೆಯಾಗಿದೆ. ಕನ್ನಡ ನಂಬಿದರೆ ಬದುಕು ಕಟ್ಟಿಕೊಳ್ಳುವುದು ಅಸಾಧ್ಯ ಎಂಬ ಪರಿಸ್ಥಿತಿಯಲ್ಲಿದ್ದೇವೆ. ಈ ಎಲ್ಲದರ ಪರಿಣಾಮ ಗ್ರಾಮೀಣ ಭಾಗಗಳಲ್ಲಿಯೂ ಕನ್ನಡ ಶಾಲೆಗಳು ಮುಚ್ಚಿಹೋಗುತ್ತಿವೆ. ಪೋಷಕರು ಸಹ ತಮ್ಮ ಮಕ್ಕಳು ಇಂಗ್ಲಿಷ್ ಕಲಿತರೆ ಮಾತ್ರ ಜಾಣರಾಗುತ್ತಾರೆ. ಭವಿಷ್ಯದಲ್ಲಿ ಉತ್ತಮ ಬದಕುಕಟ್ಟಿಕೊಳ್ಳಲು ಇದು ಸಹಕಾರಿ ಎಂಬ ಆಲೋಚನೆಯಿಂದ ಕಷ್ಟವಾದರೂ ಸರಿಯೇ ದುಬಾರಿ ಶುಲ್ಕ ನೀಡಿ ಆಂಗ್ಲ ಮಾಧ್ಯಮ ಶಾಲೆಗಳಿಗೆ ಸೇರಿಸುತ್ತಾರೆ. ಈ ಹಿನ್ನೆಲೆಯಲ್ಲಿ ಇಂದು ಗ್ರಾಮೀಣ ಭಾಗಗಳಲ್ಲಿಯೂ ಖಾಸಗಿ ಶಾಲೆಗಳು ಹುಟ್ಟಿಕೊಂಡಿವೆ.

Kannda School 4

ಬೆಂಗಳೂರು ಸೇರಿದಂತೆ ರಾಜ್ಯದಲ್ಲಿ ನಗರಗಳಲ್ಲಿ ಖಾಸಗಿ ವಲಯದಲ್ಲಿ ಅನ್ಯ ಭಾಷಿಕರ ಧ್ವನಿ ಮಾರ್ದನಿಸುತ್ತಿದೆ. ಹಾಗಾಗಿ ರಾಜಧಾನಿ ಕನ್ನಡ ಅವಿನಾಶದ ಅಂಚಿಗೆ ತಲುಪಿ ಪರಭಾಷೆಗಳು ಸ್ಥಿರವಾಗುತ್ತಿವೆ. ಕನ್ನಡ ಎನೆ ಕುಣಿದಾಡುವುದೆನ್ನೆದೆಯು, ಕನ್ನಡ ಎನೆ ಕಿವಿ ನಿಮಿರುವುದು ಎನ್ನುವ ಕುವೆಂಪು ಅವರ ಸಾಲುಗಳು ಪುಸ್ತಕದಲ್ಲಿಯೇ ಮಾತ್ರ ಉಳಿದುಕೊಂಡಿವೆ. ಬೆಂಗಳೂರು ಎಂಬ ಮಹಾನಗರದಲ್ಲಿ ಕನ್ನಡ ಮಾತನಾಡುವವರೇ ವಿರಳ ಆಗುತ್ತಿರೋದು ಇಂದು ನಾವೆಲ್ಲ ಕಾಣುತ್ತಿದ್ದೇವೆ. ನಮ್ಮ ಉದಾರತೆ, ಹೃದಯ ವೈಶಾಲ್ಯತೆ ನಮಗೆ ಮುಳುವಾಗುತ್ತಿರುವುದು ಆತಂಕ. ಇಂದಿನ ಕನ್ನಡ ದುಸ್ಥಿತಿಗೆ ಕೇವಲ ಇಷ್ಟು ಮಾತ್ರ ಕಾರಣವಲ್ಲ. ಸಾರ್ವಜನಿಕವಾಗಿ ಕನ್ನಡ ಮಾತನಾಡಲು ಹಿಂಜರಿಕೆ, ಕೀಳರಿಮೆ, ಅನ್ಯಭಾಷಾ ವ್ಯಾಮೋಹವು ಕಾರಣವಾಗಿದೆ.

ಶಿಕ್ಷಣ ಸೇರಿದಂತೆ ಇತರೆ ಹಲವಾರು ಕ್ಷೇತ್ರಗಳಲ್ಲಿ ಕನ್ನಡವನ್ನು ಸುಧಾರಿಸುವ ಸಾಧ್ಯತೆಗಳಿವೆ. ಆದ್ರೆ ಸರ್ಕಾರದ ಇಚ್ಛಾಶಕ್ತಿ ಕೊರತೆಯಿಂದಾಗಿ ನಮ್ಮಯ ನಾಡಿನಲ್ಲಿ ಕನ್ನಡಕ್ಕಾಗಿ ಹೋರಾಡುವ ಸ್ಥಿತಿ ಎದುರಾಗಿದೆ. ಪಕ್ಕದ ತಮಿಳುನಾಡಿನಲ್ಲಿ ಎಲ್ಲವೂ ತಮಿಳು. ವ್ಯಾವಹಾರಿಕ ಮತ್ತು ಸರ್ಕಾರಿ ಬಳಕೆಯಲ್ಲಿ ತಮಿಳು ಭಾಷೆಗೆ ಆದ್ಯತೆ ನೀಡಲಾಗಿದೆ.

Kannda School 5

ಕನ್ನಡ ಭಾಷೆ ಮತ್ತು ಸಾಹಿತ್ಯದ ದುಸ್ಥಿತಿಯ ಬಗ್ಗೆ ಏನೆಲ್ಲ ಕನ್ನಡ ಕಾರ್ಯಗಾರ ಮತ್ತು ಪುಸ್ತಕಗಳನ್ನು ಪ್ರಕಟಿಸಿದರೆ ಇಂದು ಅವುಗಳನ್ನು ಓದುವುದಕ್ಕೆ ಯಾರು ಮುಂದಾಗುತ್ತಿಲ್ಲ. ಕನ್ನಡ ಮಾಧ್ಯಮದಲ್ಲಿ ಕಲಿತವನ ಜೀವನ ಕೇವಲ ನಾಲ್ಕಂಕಿಯ ಸಂಬಳಕ್ಕೆ ಸೀಮಿತ ಎಂದು ಕನ್ನಡಿಗರು ಹೇಳಿಕೊಂಡು ಕುಹಕವಾಡುವುದರಿಂದಲೂ ಸಮಸ್ಯೆ ಹೆಚ್ಚಾಗಿದೆ. ಇತ್ತ ಕನ್ನಡಕ್ಕಾಗಿ ಹೋರಾಟ ಮಾಡಬೇಕಿದ್ದ ಬಹುತೇಕ ರಾಜಕಾರಣಿಗಳು ತಮ್ಮದೇ ಸ್ವಂತ ಆಂಗ್ಲ ಮಾಧ್ಯಮಗಳನ್ನು ತೆರೆಯುತ್ತಿದ್ದಾರೆ. ಅಲ್ಲಿ ಕನ್ನಡ ಕೇವಲ ಭಾಷೆಯಾಗಿಯೇ ಉಳಿದುಕೊಂಡಿದೆ. ಕೇವಲ ನವೆಂಬರ್ 1ರಂದು ಮಾತ್ರ ಕನ್ನಡ. ಕನ್ನಡ ಎಂದ್ರೆ ಸಾಲದು. ಅದಕ್ಕಾಗಿ ಹೋರಾಡುವ ಇಚ್ಛಾಶಕ್ತಿ ನಮ್ಮಲ್ಲಿರಬೇಕು. ಕನ್ನಡ ಮಾಧ್ಯಮದಲ್ಲಿ ಕಲಿತವರಿಗೆ ಮಾತ್ರ ಸರ್ಕಾರಿ ಉದ್ಯೋಗ, ಎಲ್ಲ ರಾಜಕೀಯ ನಾಯಕರು ತಮ್ಮ ಮಕ್ಕಳನ್ನು ಕನ್ನಡ ಶಾಲೆಗಳಲ್ಲಿಯೇ ಓದಿಸಬೇಕೆಂಬ ಕಟ್ಟುನಿಟ್ಟಿನ ಕಾನೂನುಗಳು ಜಾರಿಯಾಗಬೇಕಿದೆ.

ಈ ಹಿಂದೆ ಅಲಹಬಾದ್ ಹೈಕೋರ್ಟ್ ಹಿಂದಿ ಮಾಧ್ಯಮ ದುಸ್ಥಿತಿಯ ಬಗ್ಗೆ ಸಲ್ಲಿಸಿದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯ ವಿಚಾರಣೆ ನಡೆಸಿತ್ತು. ಅಂದು ರಾಜ್ಯ ಸರ್ಕಾರದ ಪ್ರತಿಯೊಬ್ಬ ಅಧಿಕಾರಿಯಿಂದ ಕೆಳದರ್ಜೆಯ ನೌಕರರು ತಮ್ಮ ಮಕ್ಕಳಿಗೆ ಹಿಂದಿ ಮಾಧ್ಯಮದಲ್ಲಿ ಶಿಕ್ಷಣ ಕೊಡಿಸಬೇಕು. ಎಲ್ಲ ಚುನಾಯಿತ ಅಭ್ಯರ್ಥಿಗಳು ಮಕ್ಕಳು ಸಹ ಸರ್ಕಾರಿ ಶಾಲಾ-ಕಾಲೇಜುಗಳಲ್ಲಿ ಶಿಕ್ಷಣ ಪಡೆಯಬೇಕು. ಅಂದಾಗ ಮಾತ್ರ ಪ್ರಾದೇಶಿಕ ಭಾಷೆಯ ಶಾಲೆ-ಕಾಲೇಜುಗಳು, ಶಿಕ್ಷಣದ ಗುಣಮಟ್ಟ ಹೆಚ್ಚಾಗಲು ಸಾಧ್ಯ ಎಂಬ ಸಲಹೆಯನ್ನು ರಾಜ್ಯ ಸರ್ಕಾರಕ್ಕೆ ನೀಡಿತ್ತು. ಅಲಹಬಾದ್ ಹೈ ಕೋರ್ಟ್ ಸಲಹೆ ಪ್ರಾದೇಶಿಕ ಭಾಷೆಗಳಲ್ಲಿ ಆಶಾಕಿರಣವನ್ನು ಮೂಡಿಸಿತ್ತು.

Kannda School 7

ಎಲ್ಲವನ್ನು ನ್ಯಾಯಾಲಯದಿಂದ ಹೇಳಿಸಿಕೊಂಡು ಮಾಡದೇ ನಾವೇ ಕನ್ನಡತನ ಉಳಿಸಲು ಪ್ರಯತ್ನ ನಡೆಸಬೇಕು. ರಾಜ್ಯೋತ್ಸವ ಉತ್ಸವ ಕೇವಲ ಆಚರಣೆಗೆ ಮಾತ್ರ ಸೀಮಿತವಾಗಬಾರದು. ಕನ್ನಡ ಬದುಕು-ಜೀವನ ಕ್ರಮವಾಗಿ ಮರುಹುಟ್ಟು ಪಡೆಯಬೇಕಿದೆ. ಶಾಲಾ ವಿದ್ಯಾರ್ಥಿಗಳನ್ನು ಸೆಳೆಯಲು ಸರ್ಕಾರ ಮತ್ತು ಇತರೆ ಕನ್ನಡ ಪರ ಸಂಘಟನೆಗಳು ವಿವಿಧ ಸಾಹಿತ್ಯ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಬೇಕಿದೆ.

ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

Kannda School 2

TAGGED:kannadaKannada BookKannada RajyotsavaKannada Rajyotsava 2018Kannada SchoolkannadigakarnatakaPublic TVಕನ್ನಡಕನ್ನಡ ಪುಸ್ತಕಕನ್ನಡ ರಾಜ್ಯೋತ್ಸವಕನ್ನಡ ರಾಜ್ಯೋತ್ಸವ 2018ಕನ್ನಡ ಶಾಲೆಕನ್ನಡಿಗಕರ್ನಾಟಕಪಬ್ಲಿಕ್ ಟಿವಿ
Share This Article
Facebook Whatsapp Whatsapp Telegram

Cinema Updates

Chitradurga Renukaswamy Father
ಮಗನ ಸಾವಿನ ನೋವು ನಿರಂತರವಾಗಿ ಕಾಡ್ತಿದೆ – ಮೃತ ರೇಣುಕಾಸ್ವಾಮಿ ತಂದೆ
17 hours ago
virat kohli sumalatha ambareesh
ಕಾಲ್ತುಳಿತ ಪ್ರಕರಣದಲ್ಲಿ ಕೊಹ್ಲಿ ವಿರುದ್ಧ ಮಾತನಾಡುವುದು ಮೂರ್ಖತನ: ಸುಮಲತಾ ಬೇಸರ
18 hours ago
madenur manu
ಮಡೆನೂರು ಮನು ಪರಪ್ಪನ ಅಗ್ರಹಾರ ಜೈಲಿನಿಂದ ರಿಲೀಸ್
2 days ago
Akhil Akkineni Zainab Ravdjee
ಗರ್ಲ್ ಫ್ರೆಂಡ್ ಝೈನಬ್ ಮದ್ವೆಯಾದ ನಾಗಾರ್ಜುನ ಪುತ್ರ ಅಖಿಲ್
3 days ago

You Might Also Like

Meghalaya Honeymoon
Crime

Indore Couple | ಹನಿಮೂನ್ ಮರ್ಡರ್: ‘ರಾಜಾ’ಗೆ ‘ರಾಜ್’ ಮುಹೂರ್ತ!

Public TV
By Public TV
13 minutes ago
G Parameshwar 1
Bengaluru City

ಎನ್‌ಐಎಗೆ ಸುಹಾಸ್ ಶೆಟ್ಟಿ ಕೊಲೆ ಕೇಸ್ – ಚರ್ಚೆ ಮಾಡಿ ತೀರ್ಮಾನ: ಪರಮೇಶ್ವರ್

Public TV
By Public TV
25 minutes ago
G Parameshwar
Bengaluru City

ನನ್ನ ಖಾತೆ ಬದಲಾವಣೆ ಮಾಡಿ ಅಂತ ಮುಖ್ಯಮಂತ್ರಿಗಳ ಬಳಿ ಕೇಳಿಲ್ಲ: ಪರಮೇಶ್ವರ್

Public TV
By Public TV
42 minutes ago
Lovers
Bengaluru City

ಅನೈತಿಕ ಸಂಬಂಧ ಆರೋಪ – ಓಯೋ ರೂಮಿನಲ್ಲಿ ಪ್ರಿಯತಮೆ ಹತ್ಯೆಗೈದ ಟೆಕ್ಕಿ

Public TV
By Public TV
1 hour ago
Mumbai Train
Latest

ಮುಂಬೈ| ರೈಲಿನಿಂದ ಹಳಿಗೆ ಬಿದ್ದು ಐವರು ಸಾವು ಶಂಕೆ

Public TV
By Public TV
1 hour ago
Tumakuru Manoj Ajji Death
Districts

ಕಾಲ್ತುಳಿತಕ್ಕೆ ಮನೋಜ್ ಬಲಿ – ಮೊಮ್ಮಗನ ಅಗಲಿಕೆ ನೋವಲ್ಲೇ ಅಜ್ಜಿ ಕೊನೆಯುಸಿರು

Public TV
By Public TV
1 hour ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?