Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Latest

ಇಂದು ಎನ್‍ಡಿಎ ಮಿತ್ರಪಕ್ಷಗಳ ಜೊತೆ ಮೋದಿ, ಷಾ ಸಭೆ- ರಾಷ್ಟ್ರಪತಿ ಆಯ್ಕೆಗೆ ಚರ್ಚೆ

Public TV
Last updated: April 10, 2017 3:48 pm
Public TV
Share
3 Min Read
bjp
SHARE

– ಎಸ್‍ಎಂ ಕೃಷ್ಣ ಆಗ್ತಾರಾ ಉಪರಾಷ್ಟ್ರಪತಿ?

ನವದೆಹಲಿ: ಪ್ರಧಾನಿ ಮೋದಿ ಹಾಗೂ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಷಾ ಇಂದು ಸಂಜೆ ಎನ್‍ಡಿಎ ಮೈತ್ರಿಕೂಟದ ಎಲ್ಲಾ 32 ಮಿತ್ರಪಕ್ಷಗಳ ಮುಖ್ಯಸ್ಥರು ಹಾಗೂ ಪ್ರತಿನಿಧಿಗಳನ್ನ ಭೇಟಿ ಮಾಡಲಿದ್ದಾರೆ.

ಮೋದಿ 2014ರಲ್ಲಿ ಅಧಿಕಾರ ವಹಿಸಿಕೊಂಡ ನಂತರ ಇದು ಎರಡನೇ ಸಭೆಯಾಗಿದ್ದು, ಸರ್ಕಾರದ ಮುಂದಿನ ತಂತ್ರಗಾರಿಕೆ ಬಗ್ಗೆ ನಿರ್ಧರಿಸಲು ಈ ಸಭೆ ಕರೆಯಲಾಗಿದೆ ಎಂದು ಮೂಲಗಳು ತಿಳಿಸಿರುವುದಾಗಿ ರಾಷ್ಟ್ರೀಯ ಪತ್ರಿಕೆಯೊಂದು ವರದಿ ಮಾಡಿದೆ. ಆದರೆ ಮುಂದಿನ ರಾಷ್ಟ್ರಪತಿ ಯಾರಾಗಬೇಕೆಂಬ ಬಗ್ಗೆಯೇ ಸಭೆಯಲ್ಲಿ ಹೆಚ್ಚಿನ ಚರ್ಚೆಯಾಗಲಿದೆ ಎಂದು ಹೇಳಲಾಗಿದೆ.

ಇತ್ತೀಚೆಗೆ ಶಿವಸೇನೆ ಹಾಗೂ ಬಿಜೆಪಿ ಮಧ್ಯೆ ಆಗಾಗ ವೈಮನಸ್ಸು ಕಾಣಿಸಿಕೊಂಡಿದ್ದರೂ ಶಿವಸೇನೆ ಮುಖ್ಯಸ್ಥರಾದ ಉದ್ಧವ್ ಠಾಕ್ರೆ ಸಭೆಯಲ್ಲಿ ಭಾಗವಹಿಸಲಿದ್ದಾರೆಂದು ವರದಿಯಾಗಿದೆ. ಅಲ್ಲದೆ ತೆಲುಗುದೇಶಂ ಪಕ್ಷದ ಮುಖ್ಯಸ್ಥರು ಹಾಗೂ ಆಂಧ್ರಪ್ರದೇಶದ ಮುಖ್ಯಮಂತ್ರಿಗಳಾದ ಚಂದ್ರಬಾಬು ನಾಯ್ಡು ಮತ್ತು ಜಮ್ಮು ಕಾಶ್ಮೀರ ಮುಖ್ಯಮಂತ್ರಿ ಮೆಹಬೂಬಾ ಮುಫ್ತಿ ಕೂಡ ಸಭೆಯಲ್ಲಿ ಹಾಜರಿರಲಿದ್ದಾರೆ.

ಪ್ರಧಾನಿ ಮೋದಿ ಬಯಸಿದ ವ್ಯಕ್ತಿ ರಾಷ್ಟ್ರಪತಿ ಕುರ್ಚಿಯ ಮೇಲೆ ಕೂರಬೇಕಾದ್ರೆ, ಎಲ್ಲಾ ಪಕ್ಷಗಳ ಬೆಂಬಲ ಅಗತ್ಯ ಎಂಬುದು ಎನ್‍ಡಿಎ ನಾಯಕರಿಗೆ ತಿಳಿದಿದೆ. ಜುಲೈ 25ರ ಒಳಗೆ ದೇಶದ ಮುಂದಿನ ರಾಷ್ಟ್ರಪತಿಯನ್ನು ಆಯ್ಕೆ ಮಾಡಬೇಕಿದ್ದು, ಬಿಜೆಪಿ ಈಗಾಗಲೇ ಅಭ್ಯರ್ಥಿಯನ್ನು ಆಯ್ಕೆ ಮಾಡುವ ಕಾರ್ಯದಲ್ಲಿ ತೊಡಗಿದೆ ಎಂದು ವರದಿಯಾಗಿದೆ.

ಸಂಭಾವ್ಯ ಸ್ಪರ್ಧಿಗಳು ಯಾರು?

1. ಎಲ್‍ಕೆ ಅಡ್ವಾಣಿ
ರಾಜಕೀಯ ವಲಯದ ಮಾತುಗಳ ಪ್ರಕಾರ ಬಿಜೆಪಿಯ ಹಿರಿಯ ನಾಯಕರಾದ ಎಲ್‍ಕೆ ಅಡ್ವಾಣಿ ಅವರು ಮುಂದಿನ ರಾಷ್ಟ್ರಪತಿ ಆಗಬೇಕೆಂಬುದು ಪ್ರಧಾನಿ ಮೋದಿ ಅವರ ಆಶಯ ಎಂದು ಹೇಳಲಾಗಿದೆ. ಗುಜರಾತ್‍ನ ಸೋಮನಾಥ್‍ನಲ್ಲಿ ನಡೆದ ಸಭೆಯಲ್ಲಿ ಮೋದಿ, ಅಡ್ವಾಣಿ ಅವರ ಹೆಸರನ್ನು ಸೂಚಿಸಿದ್ದಾರೆ ಎಂದು ಕೆಲವು ಮಾಧ್ಯಮಗಳು ವರದಿ ಮಾಡಿವೆ. ಅಡ್ವಾಣಿ ಅವರನ್ನು ರಾಷ್ಟ್ರಪತಿ ಸ್ಥಾನಕ್ಕೆ ಆಯ್ಕೆ ಮಾಡುವುದು ಅವರಿಗೆ ನಾವು ಗುರು ದಕ್ಷಿಣೆ ನೀಡಿದಂತೆ ಎಂದು ಮೋದಿ ಹೇಳಿದ್ದರು ಎನ್ನಲಾಗಿದೆ.

2. ಮೋಹನ್ ಭಾಗವತ್
ಆರ್‍ಎಸ್‍ಎಸ್ ಮುಖ್ಯಸ್ಥರಾದ ಮೋಹನ್ ಭಾಗವತ್, ರಾಷ್ಟ್ರಪತಿ ಹುದ್ದೆಯ ರೇಸ್‍ನಲ್ಲಿರುವ ಬಗ್ಗೆ ವರದಿಗಳನ್ನ ತಳ್ಳಿಹಾಕಿದ್ದರೂ ಕೂಡ ಇವರ ಹೆಸರು ಸಂಭಾವ್ಯ ರಾಷ್ಟ್ರಪತಿಗಳ ಪಟ್ಟಿಯಲ್ಲಿ ಕೇಳಿಬರುತ್ತಿದೆ. ಭಾರತವನ್ನ ಹಿಂದೂ ರಾಷ್ಟ್ರ ಮಾಡಬೇಕಿದ್ದರೆ ರಾಷ್ಟ್ರಪತಿ ಸ್ಥಾನಕ್ಕೆ ಭಾಗವತ್ ಅವರೇ ಸೂಕ್ತ ಆಯ್ಕೆ. ಆದರೆ ಈ ನಿರ್ಧಾರವನ್ನು ಉದ್ಧವ್ ಠಾಕ್ರೆ ತೆಗೆದುಕೊಳ್ಳಲಿದ್ದಾರೆ ಎಂದು ಶಿವಸೇನಾ ಮುಖಂಡರಾದ ಸಂಜಯ್ ರೌತ್ ಹೇಳಿದ್ದರು. ಇದಕ್ಕೆ ಪ್ರತಿಕ್ರಿಯಿಸಿದ್ದ ಭಾಗವತ್, ನಾವು ಸಂಘ ಹಾಗೂ ಸಮಾಜಕ್ಕಾಗಿ ಮಾತ್ರ ಕೆಲಸ ಮಾಡುತ್ತೇವೆ. ರಾಷ್ಟ್ರಪತಿ ಹುದ್ದೆಗೆ ನನ್ನ ಹೆಸರು ಬರುವುದಿಲ್ಲ. ಒಂದು ವೇಳೆ ನನ್ನ ಹೆಸರನ್ನು ಸೂಚಿಸಿದ್ರೂ ನಾನು ಅದನ್ನು ಒಪ್ಪಿಕೊಳ್ಳುವುದಿಲ್ಲ ಎಂದು ಹೇಳಿ ರೌತ್ ಅವರ ಸಲಹೆಯನ್ನು ತಿರಸ್ಕರಿಸಿದ್ದರು.

3. ಸುಮಿತ್ರಾ ಮಹಾಜನ್
ಲೋಕಸಭಾ ಸ್ಪೀಕರ್ ಸುಮಿತ್ರಾ ಮಹಾಜನ್ ಅವರನ್ನೂ ಕೂಡ ರಾಷ್ಟ್ರಪತಿ ಹುದ್ದೆಗೆ ಬಿಜೆಪಿ ಪರಿಗಣಿಸಲಿದೆ ಎಂದು ಹೇಳಲಾಗಿದೆ. ಆಡಳಿತ ಪಕ್ಷ ಬಿಜೆಪಿಯೊಂದಿಗಿನ ಸುಮಿತ್ರಾ ಮಹಾಜನ್ ಅವರ ಉತ್ತಮ ಸಂಬಂಧ ಹಾಗೂ ಅವರು ಲೋಕಸಭೆಯನ್ನು ಸಮರ್ಪಕವಾಗಿ ನಿರ್ವಹಿಸುವ ರೀತಿ ಮಹಾಜನ್ ಪರವಾಗಿ ಕಲಸ ಮಾಡಬಹುದು ಎಂದು ಅಭಿಪ್ರಾಯಿಸಲಾಗಿದೆ.

daraupadi murmu

4. ದ್ರೌಪದಿ ಮುರ್ಮು
ಉತ್ತರಪ್ರದೇಶ ಹಾಗೂ ಗುಜರಾತ್‍ನಲ್ಲಿ ಸಿಎಂ ಸ್ಥಾನಕ್ಕೆ ಯಾರನ್ನು ಆಯ್ಕೆ ಮಾಡಬೇಕೆಂಬ ಪ್ರಶ್ನೆ ಬಂದಾಗ ಹಲವರ ಹೆಸರು ಕೇಳಿ ಬಂದಿತ್ತು. ಆದ್ರೆ ಉತ್ತರಪ್ರದೇಶಕ್ಕೆ ಯೋಗಿ ಆದಿತ್ಯನಾಥ್ ಅವರನ್ನ ಹಾಗೂ ಗುಜರಾತ್‍ಗೆ ವಿಜಯ್ ರುಪಾನಿ ಅವರನ್ನ ಸಿಎಂ ಆಗಿ ಆಯ್ಕೆ ಮಾಡಿದ್ದು ಆಶ್ಚರ್ಯ ತಂದಿತ್ತು. ಇದೇ ರೀತಿ ಜಾರ್ಖಂಡ್ ರಾಜ್ಯಪಾಲರಾದ ದ್ರೌಪದಿ ಮುರ್ಮು ಅವರನ್ನು ರಾಷ್ಟ್ರಪತಿ ಸ್ಥಾನಕ್ಕೆ ಬಿಜೆಪಿ ಆಯ್ಕೆ ಮಾಡಲೂಬಹುದು ಎಂದು ಹೇಳಲಾಗಿದೆ. ಮುರ್ಮು ಅವರು ಒಡಿಶಾದಿಂದ ಎರಡು ಬಾರಿ ಬಿಜೆಪಿ ಶಾಸಕಿಯಾಗಿದ್ದರು. ಅಲ್ಲದೆ ನವೀನ್ ಪಟ್ನಾಯಕ್ ಅವರ ಸಂಪುಟದಲ್ಲಿ ಸಚಿವೆ ಕೂಡ ಆಗಿದ್ದರು.

5. ಸುಷ್ಮಾ ಸ್ವರಾಜ್, ವೆಂಕಯ್ಯ ನಾಯ್ಡು, ಎಸ್‍ಎಂ ಕೃಷ್ಣ
ವಿದೇಶಾಂಗ ವ್ಯವಹಾರಗಳ ಸಚಿವೆ ಸುಷ್ಮಾ ಸ್ವರಾಜ್ ತಮ್ಮ ಕಾರ್ಯ ವೈಖರಿ ಮೂಲಕವೇ ವಿರೋಧ ಪಕ್ಷಗಳಿಂದಲೂ ಪ್ರಶಂಸೆ ಗಳಿಸಿದ್ದಾರೆ. ಈ ನಡುವೆ ಅವರ ಆರೋಗ್ಯ ಸರಿಯಿಲ್ಲದ ಕಾರಣವನ್ನು ಪರಿಗಣಿಸಿ ಬಿಜೆಪಿ, ಸುಷ್ಮಾ ಅವರ ಕೆಲಸದ ಭಾರವನ್ನ ಕಡಿಮೆ ಮಾಡಲು ಅವರನ್ನ ಉನ್ನತ ಹುದ್ದೆಗೆ ಆಯ್ಕೆ ಮಾಡಲೂಬಹುದು ಎನ್ನಲಾಗಿದೆ.

ಅಲ್ಲದೆ ಉಪ ರಾಷ್ಟ್ರಪತಿ ಹುದ್ದೆಗೆ ಹಿರಿಯ ಸಚಿವ ವೆಂಕಯ್ಯ ನಾಯ್ಡು ಹಾಗೂ ಇತ್ತೀಚೆಗೆ ಬಿಜೆಪಿ ಸೇರಿದ ಕರ್ನಾಟಕದ ಮಾಜಿ ಸಿಎಂ ಎಸ್‍ಎಂ ಕೃಷ್ಣ ಅವರ ಹೆಸರುಗಳು ಕೇಳಿಬರುತ್ತಿವೆ. ದಕ್ಷಿಣ ಭಾರತದಲ್ಲಿ ಪಕ್ಷವನ್ನ ವಿಸ್ತರಿಸಬೇಕು ಎಂದುಕೊಂಡಿರುವ ಬಿಜೆಪಿ, ಈ ಇಬ್ಬರಿಗೆ ಉಪ ರಾಷ್ಟ್ರಪತಿ ಹುದ್ದೆ ನೀಡಿದ್ರೆ ಆಂಧ್ರಪ್ರದೇಶ ಹಾಗೂ ಕರ್ನಾಟಕದಲ್ಲಿ ಮತದಾರರನ್ನ ಸೆಳೆಯಬಹುದು ಎಂದು ಉದ್ದೇಶಿಸಿದೆ ಎನ್ನಲಾಗಿದೆ.

TAGGED:Amit ShahbjpLK AdvanimodipresidentPublic TVSM KrishnaSushma swarajಎಲ್‍ಕೆ ಅಡ್ವಾಣಿಎಸ್‍ಎಂ ಕೃಷ್ಣಪಬ್ಲಿಕ್ ಟಿವಿಬಿಜೆಪಿರಾಷ್ಟ್ರಪತಿಸಭೆಸುಷ್ಮಾ ಸ್ವರಾಜ್
Share This Article
Facebook Whatsapp Whatsapp Telegram
Leave a Comment

Leave a Reply

Your email address will not be published. Required fields are marked *

Cinema News

vijay raghavendra 2
ವಿಷ್ಣುವರ್ಧನ್ ಸ್ಮಾರಕ ನೆಲಸಮ: ವಿಜಯ್ ರಾಘವೇಂದ್ರ ಬೇಸರ
Cinema Latest Top Stories
Dvitva Web Series Pawan Kumar
ಅಪ್ಪುಗೆ ಮಾಡಿದ ದ್ವಿತ್ವ ಕಥೆ ವೆಬ್ ಸಿರೀಸ್ ಆಗಲಿದೆ: ಪವನ್‌ಕುಮಾರ್
Cinema Latest Top Stories
Vishnuvardhan Memorial 1
ವಿಷ್ಣು ಸಮಾಧಿ ತೆರವು; ಹೈಕೋರ್ಟ್‌ಗೆ ಪುನರ್‌ ಪರಿಶೀಲನಾ ಅರ್ಜಿ ಸಲ್ಲಿಕೆ
Cinema Court Latest Sandalwood Top Stories
Gulshan Devaiah kantara chapter 1
ಹೊಂಬಾಳೆ ಫಿಲಮ್ಸ್‌ನ ‘ಕಾಂತಾರ ಚಾಪ್ಟರ್ 1’ ನಲ್ಲಿ ಕುಲಶೇಖರನ ಪಾತ್ರದಲ್ಲಿ ಗುಲ್ಶನ್ ದೇವಯ್ಯ
Cinema Latest Top Stories
Darshan 8
ಸೆಲ್‌ನಲ್ಲೇ ವಾಕಿಂಗ್, ತೆಳುವಾದ ಬೆಡ್ ಮೇಲೆ ಸ್ಲೀಪಿಂಗ್ – ರಾಜಾತಿಥ್ಯ ಇಲ್ದೇ `ಡಿ’ ಗ್ಯಾಂಗ್ ಫುಲ್ ಸೈಲೆಂಟ್
Bengaluru City Cinema Karnataka Latest Top Stories

You Might Also Like

Sujatha Bhat 1
Bengaluru City

ಧರ್ಮಸ್ಥಳ ಕೇಸಲ್ಲಿ ಅನನ್ಯಾ ಭಟ್ ಪಾತ್ರ ಕಟ್ಟುಕಥೆನಾ? – ಸುಜಾತಾ ಭಟ್ ಸುಳ್ಳು ಹೇಳಿ ಯಾಮಾರಿಸಿದ್ರಾ?

Public TV
By Public TV
6 minutes ago
Luggage Bags
Latest

ರೈಲಿಗೂ ಲಗೇಜ್ ಪಾಲಿಸಿ – ಲಗೇಜ್‌ ಮಿತಿ ಎಷ್ಟು? ಪಾವತಿ ಮಾಡಬೇಕಾದ ಹಣ ಎಷ್ಟು?

Public TV
By Public TV
15 minutes ago
daily horoscope dina bhavishya
Astrology

ದಿನ ಭವಿಷ್ಯ 20-08-2025

Public TV
By Public TV
47 minutes ago
PM Modi Wang Yi
Latest

ಪ್ರಧಾನಿ ಮೋದಿ ಭೇಟಿಯಾದ ಚೀನಾ ವಿದೇಶಾಂಗ ಸಚಿವ ವಾಂಗ್ ಯಿ

Public TV
By Public TV
8 hours ago
kiadb farmers protest
Bengaluru Rural

KIADB ಭೂಸ್ವಾಧೀನ ವಿರೋಧಿಸಿ ಆನೇಕಲ್‌ನಲ್ಲಿ ರೈತರಿಂದ ಬೃಹತ್ ಪ್ರತಿಭಟನೆ

Public TV
By Public TV
8 hours ago
big bulletin 19 August 2025 part 1
Big Bulletin

ಬಿಗ್‌ ಬುಲೆಟಿನ್‌ 21 August 2025 ಭಾಗ-1

Public TV
By Public TV
8 hours ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?