Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಮೈಸೂರು ಮೇಯರ್ ಸ್ಥಾನ ಕಾಂಗ್ರೆಸ್ಸಿಗೆ ಯಾಕೆ ನೀಡ್ಬೇಕು- ಸಿದ್ದರಾಮಯ್ಯ ಖಡಕ್ ಸ್ಪಷ್ಟನೆ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | ಮೈಸೂರು ಮೇಯರ್ ಸ್ಥಾನ ಕಾಂಗ್ರೆಸ್ಸಿಗೆ ಯಾಕೆ ನೀಡ್ಬೇಕು- ಸಿದ್ದರಾಮಯ್ಯ ಖಡಕ್ ಸ್ಪಷ್ಟನೆ

Districts

ಮೈಸೂರು ಮೇಯರ್ ಸ್ಥಾನ ಕಾಂಗ್ರೆಸ್ಸಿಗೆ ಯಾಕೆ ನೀಡ್ಬೇಕು- ಸಿದ್ದರಾಮಯ್ಯ ಖಡಕ್ ಸ್ಪಷ್ಟನೆ

Public TV
Last updated: November 16, 2018 5:38 pm
Public TV
Share
2 Min Read
siddaramaiah
SHARE

ಮೈಸೂರು: ಮಹಾನಗರ ಪಾಲಿಕೆ ಮೇಯರ್ ಸ್ಥಾನ ಕಾಂಗ್ರೆಸ್‍ಗೆ ಯಾಕೆ ಬೇಕು ಎನ್ನುವುದಕ್ಕೆ ಮಾಜಿ ಸಿಎಂ ಸಿದ್ದರಾಮಯ್ಯ ಅವರು ಟ್ವೀಟ್ ಮೂಲಕ ಸ್ಪಷ್ಟನೆ ನೀಡಿದ್ದಾರೆ.

ಮೈಸೂರು ಜಿಲ್ಲಾ ಉಸ್ತುವಾರಿ ಸಚಿವರಾಗಿ ಜೆಡಿಎಸ್‍ನ ಜಿ.ಟಿ.ದೇವೇಗೌಡ ಹಾಗೂ ಸಂಪುಟದ ಸಚಿವರಾಗಿ ಸಾ.ರಾ.ಮಹೇಶ್ ಅವರಿದ್ದಾರೆ. ಹೀಗಾಗಿ ಜಿಲ್ಲೆಯಲ್ಲಿ ಕಾಂಗ್ರೆಸ್ ಪಕ್ಷಕ್ಕೂ ಧ್ವನಿಯ ಅಗತ್ಯವಿದೆ. ಈ ಉದ್ದೇಶಕ್ಕಾಗಿ ಮೈಸೂರು ಮಹಾನಗರ ಪಾಲಿಕೆಯ ಮೇಯರ್ ಸ್ಥಾನವನ್ನು ನಮ್ಮ ಪಕ್ಷಕ್ಕೆ ನೀಡುವಂತೆ ಕೇಳಿದ್ದೇವೆ. ಇದು ನ್ಯಾಯಯುತವಾದ ಬೇಡಿಕೆಯೂ ಹೌದು ಎಂದು ಖಡಕ್ ಪ್ರತಿಕ್ರಿಯೆ ನೀಡಿದ್ದಾರೆ.

ನಾನು ರಾಜಕೀಯ ಜೀವನದಲ್ಲಿರುವವರೆಗೂ ಅಹಿಂದ ವರ್ಗದ ಹಿತರಕ್ಷಣೆಗೆ ಬದ್ಧನಿದ್ದೇನೆ. ಅಹಿಂದ ಒಂದು ಸಂಘಟನೆಯಷ್ಟೇ ಅಲ್ಲ, ಅದೊಂದು ಚಳವಳಿ. ಅವರ ಬೇಡಿಕೆಗಳು ಪರಿಪೂರ್ಣ ಈಡೇರುವವರೆಗೂ ಚಳವಳಿ ನಿರಂತರವಾಗಿರುತ್ತದೆ, ಅದಕ್ಕೆ ನನ್ನ ಸಂಪೂರ್ಣ ಬೆಂಬಲ‌ ಕೂಡ ಇದೆ. ಈಗ ಕೂಡ ನಾನು ಅವರ ಧ್ವನಿಯಾಗಿ ನಿಂತಿದ್ದೇನೆ.

— Siddaramaiah (@siddaramaiah) November 16, 2018

ಇದಕ್ಕೂ ಮುನ್ನ ಮಾಧ್ಯಮಗಳ ಜೊತೆಗೆ ಮಾತನಾಡಿದ್ದ ಮಾಜಿ ಸಿಎಂ, ಮೇಯರ್ ಆಯ್ಕೆ ವಿಚಾರದಲ್ಲಿ ಕೆಪಿಸಿಸಿ ಅಧ್ಯಕ್ಷರದ ದಿನೇಶ್ ಗುಂಡೂರಾವ್ ಅವರಿಗೆ ಹೇಳಿದ್ದೇನೆ. ನಾನು ಈ ವಿಚಾರದಲ್ಲಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ, ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ, ಸಚಿವ ಸಾ.ರಾ. ಮಹೇಶ್ ಅವರೊಂದಿಗೂ ಮಾತನಾಡಿಲ್ಲ. ದಿನೇಶ್ ಗುಂಡೂರಾವ್ ಅವರೇ ಎಲ್ಲರೊಂದಿಗೂ ಚರ್ಚೆ ನಡೆಸುತ್ತಾರೆ ಎಂದಿದ್ದರು. ಇದನ್ನು ಓದಿ: ಪಾಲಿಕೆ ಮೇಯರ್ ಗಿರಿಗಾಗಿ ರಾಷ್ಟ್ರಮಟ್ಟದಲ್ಲಿ ನನ್ನ ಮರ್ಯಾದೆ ತೆಗಿಬೇಡಿ: ಎಚ್‍ಡಿಡಿ ಎಚ್ಚರಿಕೆ

g.t.devegowda sa ra rmahesh

ಪಾಲಿಕೆ ಸದಸ್ಯರು ಈ ಹಿಂದೆ ನಾನು ಭೇಟಿ ನೀಡಿದ ಸಂದರ್ಭದಲ್ಲಿ ಮೇಯರ್ ಸ್ಥಾನ ನಮ್ಮ ಪಕ್ಷಕ್ಕೆ ಬೇಕು ಎಂದು ಹೇಳಿದ್ದಾರೆ. ಅದರಂತೆ ನಾನು ದಿನೇಶ್ ಗುಂಡೂರಾವ್ ಅವರಿಗೆ ಮಾಹಿತಿ ನೀಡಿದ್ದೇನೆ. ಆದರೆ ಜೆಡಿಎಸ್ ಪಾಲಿಕೆ ಸದಸ್ಯರು ರೆಸಾರ್ಟ್ ಗೆ ಹೋಗಿರುವ ಬಗ್ಗೆ ಮಾಹಿತಿ ಇಲ್ಲ. ಅವರ ಪಕ್ಷದ ಸದಸ್ಯರನ್ನು ರಕ್ಷಣೆ ಮಾಡಿಕೊಳ್ಳುವುದಕ್ಕೆ ಅವರು ಹೋಗಿರಬೇಕು ಅಷ್ಟೇ ಎಂದರು. ಇದನ್ನು ಓದಿ: ಮೈಸೂರಿನಲ್ಲಿ ಬಿಜೆಪಿ, ಜೆಡಿಎಸ್ ಮೈತ್ರಿ – ಸುಳಿವು ಬಿಟ್ಟುಕೊಟ್ಟ ಸಚಿವ ಸಾರಾ ಮಹೇಶ್

ಮಾಜಿ ಸಿಎಂ ಅಹಿಂದ:
ನಾನು ರಾಜಕೀಯ ಜೀವನದಲ್ಲಿ ಇರುವರೆಗೂ ಅಹಿಂದ ವರ್ಗದ ಹಿತರಕ್ಷಣೆಗೆ ಬದ್ಧನಿದ್ದೇನೆ. ಅಹಿಂದ ಒಂದು ಸಂಘಟನೆಯಷ್ಟೇ ಅಲ್ಲ, ಅದೊಂದು ಚಳವಳಿ. ಈ ವರ್ಗದ ಜನರ ಬೇಡಿಕೆಗಳು ಪರಿಪೂರ್ಣ ಈಡೇರುವವರೆಗೂ ಚಳವಳಿ ನಿರಂತರವಾಗಿರುತ್ತದೆ. ಅದಕ್ಕೆ ನನ್ನ ಸಂಪೂರ್ಣ ಬೆಂಬಲವಿದೆ ಎಂದು ಟ್ವೀಟ್ ಮಾಡಿದ್ದಾರೆ.

ಬಿಜೆಪಿಗೆ ಅಯೋಧ್ಯೆಯ ವಿವಾದ ಜೀವಂತವಾಗಿರುವುದು ಬೇಕಿದೆಯೇ ವಿನಃ ರಾಮಮಂದಿರ ನಿರ್ಮಾಣವಲ್ಲ. ಚುನಾವಣೆ ಸಮೀಪಿಸುತ್ತಿರುವ ಈ ವೇಳೆಯಲ್ಲಿ ರಾಮಜನ್ಮಭೂಮಿ ವಿವಾದ ಮತ್ತೆ ಜೀವ ಪಡೆದಿರುವುದು ಬಿಜೆಪಿ ಜನರನ್ನು ಭಾವನಾತ್ಮಕವಾಗಿ ತಮ್ಮತ್ತ ಹಿಡಿದಿಡುವ ಪ್ರಯತ್ನದ ಒಂದು ಭಾಗವಷ್ಟೆ. ಇದು ಜನರಿಗೂ ಗೊತ್ತಿದೆ.

— Siddaramaiah (@siddaramaiah) November 16, 2018

BJP Siddaramaiah

ಬಿಜೆಪಿಗೆ ಟಾಂಗ್:
ಕರ್ನಾಟಕದ ಕರಾವಳಿಯನ್ನು ಬಿಜೆಪಿ ಕೋಮುವಾದದ ಪ್ರಯೋಗ ಶಾಲೆಯನ್ನಾಗಿ ಮಾಡಿಕೊಂಡಿದೆ. ಇದರಿಂದಾಗಿಯೇ ಬಿಜೆಪಿ ರಾಷ್ಟ್ರೀಯ ನಾಯಕರು ಆಗಾಗ ಕರಾವಳಿಗೆ ಭೇಟಿ ನೀಡುತ್ತಾರೆ. ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ಮತ್ತು ಪ್ರಧಾನಿ ನರೇಂದ್ರ ಮೋದಿ ಅವರು ಕರ್ನಾಟಕದಲ್ಲಿಯೇ ಬಂದು ಮನೆ ಮಾಡಿದರೂ ಈ ಬಾರಿಯ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿಗೆ ರಾಜ್ಯದ ಜನ ಬೆಂಬಲ ನೀಡುವುದಿಲ್ಲ ಎಂದು ಟಾಂಗ್ ಕೊಟ್ಟಿದ್ದಾರೆ.

ಬಿಜೆಪಿಗೆ ಅಯೋಧ್ಯೆ ವಿವಾದ ಜೀವಂತವಾಗಿರುವುದು ಬೇಕಿದೆಯೇ ವಿನಃ, ರಾಮಮಂದಿರ ನಿರ್ಮಾಣವಲ್ಲ. ಚುನಾವಣೆ ಸಮೀಪಿಸುತ್ತಿರುವ ಈ ವೇಳೆಯಲ್ಲಿ ರಾಮ ಜನ್ಮಭೂಮಿ ವಿವಾದ ಮತ್ತೆ ಜೀವ ಪಡೆದಿದೆ. ಜನರನ್ನು ಭಾವನಾತ್ಮಕವಾಗಿ ತಮ್ಮತ್ತ ಹಿಡಿದಿಡುವಲ್ಲಿ ಇದು ಬಿಜೆಪಿ ಪ್ರಯತ್ನದ ಒಂದು ಭಾಗವಷ್ಟೇ. ಇದು ಜನರಿಗೂ ಗೊತ್ತಿದೆ ಎಂದು ದೂರಿದ್ದಾರೆ.

MYS Siddaramaiah

ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv
ಪಬ್ಲಿಕ್ ಟಿವಿ ಆಪ್ ಡೌನ್ ಲೋಡ್ ಮಾಡಿ: play.google.com/publictv
ಯೂ ಟ್ಯೂಬ್‍ನಲ್ಲಿ ಪಬ್ಲಿಕ್ ಟಿವಿಯನ್ನು ಸಬ್ ಸ್ಕ್ರೈಬ್ ಮಾಡಿ: youtube.com/publictvnewskannada
ಫೇಸ್‍ಬುಕ್‍ನಲ್ಲಿ ಪಬ್ಲಿಕ್ ಟಿವಿಯನ್ನು ಲೈಕ್ ಮಾಡಿ: facebook.com/publictv
ಟ್ವಿಟ್ಟರ್‌ನಲ್ಲಿ ಪಬ್ಲಿಕ್ ಟಿವಿಯನ್ನು ಫಾಲೋ ಮಾಡಿ: twitter.com/publictvnews

TAGGED:congressjdsMunicipal CorporationmysuruPublic TVsiddaramaiahಕಾಂಗ್ರೆಸ್ಜೆಡಿಎಸ್ಪಬ್ಲಿಕ್ ಟಿವಿಬಿಜೆಪಿಮಹಾನಗರ ಪಾಲಿಕೆಮಾಜಿ ಸಿಎಂ ಸಿದ್ದರಾಮಯ್ಯಮೈಸೂರು
Share This Article
Facebook Whatsapp Whatsapp Telegram

Cinema news

Toxic
ʻಟಾಕ್ಸಿಕ್‌ʼ ಚಿತ್ರತಂಡಕ್ಕೆ ಮತ್ತೊಂದು ಸಂಕಷ್ಟ – ಸಿನಿಮಾ ವಿರುದ್ಧ ಕ್ರೈಸ್ತರ ಒಕ್ಕೂಟ ದೂರು
Bengaluru City Cinema Latest Main Post Sandalwood
nandini milk sudha rani
ನಂದಿನಿ ಉತ್ಪನ್ನಗಳ ಪ್ರಚಾರ ರಾಯಭಾರಿಯಾಗಿ ನಟಿ ಸುಧಾರಾಣಿ ಆಯ್ಕೆ
Bengaluru City Cinema Latest Main Post Sandalwood
ranveer singh deepika padukone 2
ಬಿಷ್ಣೋಯ್ ಗ್ಯಾಂಗ್‌ ಹೆಸರಲ್ಲಿ ರಣವೀರ್ ಸಿಂಗ್‌ಗೆ ಬೆದರಿಕೆ – ವಾಯ್ಸ್‌ ಮೆಸೇಜ್‌ನಲ್ಲಿ ಕೋಟಿ ಕೋಟಿ ಡಿಮ್ಯಾಂಡ್‌
Bollywood Cinema Crime Latest Top Stories
Gilli
ಗಿಲ್ಲಿ ನಾಯಕನಾಗಿ ನಟಿಸಿರೋ `ಸೂಪರ್ ಹಿಟ್’ ಚಿತ್ರ ಫೆ.27 ರಂದು ತೆರೆಗೆ
Cinema Latest Sandalwood Top Stories

You Might Also Like

Public TV celebrates 14th anniversary
Bengaluru City

ಪಬ್ಲಿಕ್‌ ಟಿವಿಗೆ 14ರ ಸಂಭ್ರಮ – ವೀರ ಸೈನಿಕರಿಗೆ ವಾರ್ಷಿಕೋತ್ಸವ ಅರ್ಪಣೆ

Public TV
By Public TV
40 minutes ago
Hassan Heart Attack
Districts

ಧರ್ಮಸ್ಥಳಕ್ಕೆ ಪಾದಯಾತ್ರೆ ತೆರಳುತ್ತಿದ್ದ ವ್ಯಕ್ತಿ ಹೃದಯಾಘಾತದಿಂದ ಸಾವು

Public TV
By Public TV
40 minutes ago
Sindhura Sammana
Bagalkot

ಪಬ್ಲಿಕ್‌ ಟಿವಿಗೆ 14ರ ಸಂಭ್ರಮ – ವೀರ ಯೋಧರಿಗೆ ಸಿಂಧೂರ ಸಮ್ಮಾನ

Public TV
By Public TV
1 hour ago
Bengaluru Kempegowda International Airport 4
Bengaluru City

ಬೆಂಗ್ಳೂರು ಏರ್‌ಪೋರ್ಟ್‌ನಲ್ಲಿ 3.39 ಕೋಟಿ ಮೌಲ್ಯದ ಗಾಂಜಾ ಸೀಜ್‌

Public TV
By Public TV
1 hour ago
Metro Redline
Bengaluru City

ರಾಜ್ಯಕ್ಕೆ ಕೇಂದ್ರದ ಶಾಕ್‌ – ರೆಡ್ ಲೈನ್‌ ಮೆಟ್ರೋ, ಡಬಲ್ ಡೆಕ್ಕರ್ ಪ್ಲ್ಯಾನ್‌ಗೆ ಬ್ರೇಕ್‌

Public TV
By Public TV
2 hours ago
Public TV 1
Bengaluru City

ನಿಮ್ಮ ʻಪಬ್ಲಿಕ್‌ ಟಿವಿʼ 14ನೇ ವಾರ್ಷಿಕೋತ್ಸವ ಸಂಪನ್ನ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?