Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Explainer

PublicTV Explainer: ಮತ ಪ್ರಮಾಣ ಹೆಚ್ಚಿದ್ದರೂ ಕರ್ನಾಟಕದಲ್ಲಿ ಕಾಂಗ್ರೆಸ್‌ ಏಕಾಂಗಿಯಾಗಿ ಅಧಿಕಾರಕ್ಕೆ ಏರಿಲ್ಲ ಯಾಕೆ?

Public TV
Last updated: May 2, 2023 12:40 pm
Public TV
Share
4 Min Read
congress bjp jds
SHARE

ಕರ್ನಾಟಕ ವಿಧಾನಸಭೆಗೆ ಚುನಾವಣೆ (Karnataka Election 2023) ಮತದಾನಕ್ಕೆ ದಿನಗಣನೆ ಆರಂಭವಾಗಿದೆ. ಇದೇ ಹೊತ್ತಿನಲ್ಲಿ ಅತಿ ಹೆಚ್ಚು ಕ್ಷೇತ್ರಗಳಲ್ಲಿ ಗೆಲ್ಲುವ ಹಂಬಲದೊಂದಿಗೆ ಪ್ರಮುಖ ರಾಜಕೀಯ ಪಕ್ಷಗಳು ನಾನಾ ಕಾರ್ಯತಂತ್ರಗಳನ್ನು ರೂಪಿಸುತ್ತಿವೆ. ಆದರೆ ಮತದಾರ ಮಾತ್ರ ಪ್ರತಿ ಚುನಾವಣೆಯಲ್ಲೂ ಅನಿರೀಕ್ಷಿತ ಎಂಬಂತೆ ಫಲಿತಾಂಶವನ್ನ ನೀಡುತ್ತಾ ಬಂದಿದ್ದಾನೆ. ಯಾವ ಪಕ್ಷಗಳ ಅಥವಾ ರಾಜಕೀಯ ವಿಶ್ಲೇಷಕರ ಊಹೆಗೆ ನಿಲುಕದಂತೆ ಪ್ರತಿ ಬಾರಿ ಫಲಿತಾಂಶ ಬರುತ್ತಿದೆ. ಈಗ ಮತ್ತೆ ರಾಜ್ಯ ವಿಧಾನಸಭಾ ಚುನಾವಣೆ ಬಂದಿದ್ದು, ಅಂತಿಮ ರಿಸಲ್ಟ್ ಏನಿರಲಿದೆ? ಯಾವ ಪಕ್ಷ ಸರ್ಕಾರ ರಚಿಸುತ್ತೆ? ಈ ಬಾರಿಯೂ ಅತಂತ್ರವೋ ಅಥವಾ ಸ್ವತಂತ್ರ ಸರ್ಕಾರವೋ ಎಂಬ ನಾನಾ ಪ್ರಶ್ನೆಗಳು ಮೂಡಿವೆ.

ಕರ್ನಾಟಕ ವಿಧಾನಸಭಾ ಚುನಾವಣೆಗಳ ಇತಿಹಾಸವನ್ನು ಗಮನಿಸಿದರೆ ಅನೇಕ ಅಚ್ಚರಿದಾಯಕ ಬೆಳವಣಿಗೆಗಳಾಗಿವೆ. ರಾಷ್ಟ್ರೀಯ ಪಕ್ಷಗಳಲ್ಲೊಂದು ಹೆಚ್ಚು ಸೀಟುಗಳನ್ನು ಗೆದ್ದರೂ ಒಟ್ಟು ಮತಗಳ ಸಂಖ್ಯೆಯಲ್ಲಿ ಕುಸಿತ ಕಂಡಿರುತ್ತೆ. ಅಂತೆಯೇ ಒಟ್ಟು ಮತಗಳಲ್ಲಿ ಹೆಚ್ಚು ಮತಗಳನ್ನು ಪಡೆದ ಮತ್ತೊಂದು ರಾಷ್ಟ್ರೀಯ ಪಕ್ಷ, ಕಡಿಮೆ ಸೀಟುಗಳನ್ನು ಗೆದ್ದಿರುತ್ತೆ. ಕಳೆದ ನಾಲ್ಕು ಚುನಾವಣೆಗಳ ಇತಿಹಾಸ ಗಮನಿಸಿದಾಗ ಈ ಅಂಶ ಬೆಳಕಿಗೆ ಬಂದಿದೆ. ಇದನ್ನೂ ಓದಿ: Public TV Explainer – ಮೋದಿಯನ್ನು ಫಾಲೋ ಮಾಡಿದ ಮಸ್ಕ್‌: ಟೆಸ್ಲಾ ಕಾರು ಇನ್ನೂ ಭಾರತಕ್ಕೆ ಬಂದಿಲ್ಲ ಯಾಕೆ?

hdk siddu bsy

ಕಾಂಗ್ರೆಸ್‌ಗೇ ಹೆಚ್ಚು ಮತ. ಆದ್ರೆ!
ರಾಜ್ಯ ವಿಧಾನಸಭೆ 2004ರಿಂದ ನಡೆದ ಒಟ್ಟು 4 ಚುನಾವಣೆಗಳಲ್ಲಿ ಚಲಾವಣೆಯಾದ ಒಟ್ಟು ಮತಗಳಲ್ಲಿ ಹೆಚ್ಚು ಮತಗಳನ್ನು ಪಡೆದದ್ದು ಕಾಂಗ್ರೆಸ್ (Congress). ಹೆಚ್ಚು ಮತಗಳನ್ನು ಪಡೆದ ಸ್ಥಾನದಲ್ಲಿ ಕಾಂಗ್ರೆಸ್ ಮೊದಲ ಸ್ಥಾನದಲ್ಲಿದ್ದರೆ, ಬಿಜೆಪಿ (BJP) 2 ಹಾಗೂ ಜೆಡಿಎಸ್ (JDS) 3ನೇ ಸ್ಥಾನದಲ್ಲಿದೆ. ಕಳೆದ 4 ಚುನಾವಣೆಗಳಲ್ಲೂ ಕಾಂಗ್ರೆಸ್ ಹೆಚ್ಚು ಮತಗಳನ್ನು ಪಡೆದುಕೊಂಡಿದ್ದರೂ, ಮತಗಳೆಲ್ಲ ಗೆಲುವಾಗಿ ಮಾರ್ಪಡಾಗಿಲ್ಲ. ಹಾಗಾದ್ರೆ ಈ ಅವಧಿಯಲ್ಲಿ ಕಾಂಗ್ರೆಸ್, ಬಿಜೆಪಿ, ಜೆಡಿಎಸ್ ಪಕ್ಷಗಳು ಪಡೆದ ಒಟ್ಟು ಮತಗಳೆಷ್ಟು, ಸೀಟುಗಳೆಷ್ಟು ಮತ್ತು ಎಷ್ಟನೇ ಸ್ಥಾನದಲ್ಲಿದ್ದವು ಎಂಬುದನ್ನು ವಿವರವಾಗಿ ತಿಳಿಯೋಣ.

karnataka election 2004 graphics

2004ರ ಚುನಾವಣೆ
ಈ ಚುನಾವಣೆಯಲ್ಲಿ ಚಲಾವಣೆಯಾದ ಒಟ್ಟು ಮತಗಳಲ್ಲಿ ಶೇ. 35.3 ರಷ್ಟು ಮತಗಳನ್ನು ಪಡೆದುಕೊಂಡಿದ್ದರೂ, ಕಾಂಗ್ರೆಸ್ ಗೆದ್ದಿದ್ದು 65 ಕ್ಷೇತ್ರಗಳಲ್ಲಿ ಮಾತ್ರ. ಆದರೆ ಶೇ. 28.3 ರಷ್ಟು ಮತಗಳನ್ನು ಪಡೆದುಕೊಂಡಿದ್ದ ಬಿಜೆಪಿ 79 ಕ್ಷೇತ್ರಗಳಲ್ಲಿ ಗೆಲುವು ಸಾಧಿಸಿತ್ತು. ಇನ್ನು ಶೇ.20.8 ರಷ್ಟು ಮತಗಳನ್ನು ಪಡೆದಿದ್ದ ಜೆಡಿಎಸ್ 58 ಕ್ಷೇತ್ರಗಳಲ್ಲಿ ಜಯಭೇರಿ ಭಾರಿಸಿತ್ತು. ಈ ಚುನಾವಣೆಯ ಫಲಿತಾಂಶದ ಅಂಕಿಅಂಶವನ್ನು ಗಮನಿಸಿದರೆ, ಕಾಂಗ್ರೆಸ್ ಮತ ಪ್ರಮಾಣದಲ್ಲಿ ಗಣನೀಯ ಬದಲಾವಣೆ ಏನೂ ಆಗಿಲ್ಲ. ಆದರೆ ಪಕ್ಷವು ಗೆದ್ದ ಕ್ಷೇತ್ರಗಳಲ್ಲಿ ಮಾತ್ರ ಭಾರೀ ಏರಿಳಿತವಾಗಿದೆ. ಅಂತೆಯೇ ಬಿಜೆಪಿ ಪಡೆದ ಮತ ಪ್ರಮಾಣ ಕಡಿಮೆಯಾದರೂ ಹೆಚ್ಚು ಕ್ಷೇತ್ರಗಳು ದಕ್ಕಿವೆ. ನಂತರ ನಡೆದ ಚುನಾವಣೆಗಳಲ್ಲೂ (2013ರ ಚುನಾವಣೆ ಹೊರತುಪಡಿಸಿ) ಇದೇ ಮಾದರಿಯ ಚಿತ್ರಣ ಗೋಚರಿಸುತ್ತದೆ. ಇದನ್ನೂ ಓದಿ: PublicTV Explainer: ಭೂಮಿ ಆಯ್ತು.. ಇನ್ಮುಂದೆ ಸಮುದ್ರದಾಳದಲ್ಲಿ ಶುರುವಾಗುತ್ತಂತೆ ಗಣಿಗಾರಿಕೆ!

karnataka election 2008 graphics

2008ರ ಚುನಾವಣೆ
ಇಲ್ಲೂ ಅಷ್ಟೆ, ಚಲಾವಣೆಯಾದ ಒಟ್ಟು ಮತಗಳಲ್ಲಿ ಕಾಂಗ್ರೆಸ್ ಶೇ. 34.8 ರಷ್ಟು ಮತಗಳನ್ನು ಪಡೆದಿತ್ತು. ಆದರೂ ಗೆದ್ದಿದ್ದು ಮಾತ್ರ 80 ಕ್ಷೇತ್ರಗಳಲ್ಲಿ. ಇನ್ನು ಬಿಜೆಪಿ ಶೇ. 33.9 ಮತಗಳನ್ನಷ್ಟೇ ಪಡೆದಿದ್ದರೂ, ಗೆದ್ದಿದ್ದು 110 ಕ್ಷೇತ್ರಗಳಲ್ಲಿ. ಜೆಡಿಎಸ್ ಶೇ. 19 ರಷ್ಟು ಮತಗಳನ್ನು ಪಡೆದು 28 ಕ್ಷೇತ್ರಗಳಲ್ಲಿ ಗೆಲುವು ಸಾಧಿಸಿತ್ತು.

karnataka election 2013 graphics

2013ರ ಚುನಾವಣೆ
ರಾಜ್ಯ ರಾಜಕೀಯದಲ್ಲಾದ ಅಚ್ಚರಿದಾಯಕ ಬೆಳವಣಿಗೆಯಿಂದಾಗಿ 2013ರ ಚುನಾವಣೆಯಲ್ಲಿ ಕಾಂಗ್ರೆಸ್ ಸ್ಪಷ್ಟ ಬಹುಮತದೊಂದಿಗೆ ಗೆಲುವು ದಾಖಲಿಸಿತ್ತು. ಸಿದ್ದರಾಮಯ್ಯ ಅವರ ನೇತೃತ್ವದಲ್ಲಿ ಸರ್ಕಾರ ರಚಿಸಿ ಕಾಂಗ್ರೆಸ್ ಪೂರ್ಣಾವಧಿ ಆಡಳಿತ ನಡೆಸಿತ್ತು. ಬಿಜೆಪಿಯಲ್ಲಿನ ಆಂತರಿಕ ಭಿನ್ನಾಭಿಪ್ರಾಯದಿಂದಾಗಿ ಯಡಿಯೂರಪ್ಪ ಅವರು ಪಕ್ಷ ತೊರೆದು ಕೆಜೆಪಿ ಕಟ್ಟಿದರು. ಅಂತೆಯೇ ಬಿ.ಶ್ರೀರಾಮುಲು ಅವರು ಬಿಎಸ್‌ಆರ್ ಪಕ್ಷ ಸ್ಥಾಪಿಸಿದರು. ಇದರಿಂದ 2013ರ ಚುನಾವಣೆಯಲ್ಲಿ ಬಿಜೆಪಿ ದೊಡ್ಡ ಪೆಟ್ಟನ್ನೇ ತಿಂದಿತು. ಈ ಎಲೆಕ್ಷನ್‌ನಲ್ಲಿ ಕಾಂಗ್ರೆಸ್‌ ಶೇ. 36.6 ರಷ್ಟು ಮತಗಳನ್ನು ಪಡೆದು, 112 ಕ್ಷೇತ್ರಗಳಲ್ಲಿ ಗೆದ್ದಿತು. ಬಿಜೆಪಿ ಶೇ. 19.9 ರಷ್ಟು ಮತಗಳನ್ನಷ್ಟೇ ಪಡೆದು, 40 ಕ್ಷೇತ್ರಗಳನ್ನು ಮಾತ್ರ ತನ್ನದಾಗಿಸಿಕೊಂಡಿತು. ಇನ್ನು ಜೆಡಿಎಸ್ ಶೇ. 20.2 ರಷ್ಟು ಮತಗಳನ್ನು ಪಡೆದು, 40 ಕ್ಷೇತ್ರಗಳಲ್ಲಿ ಜಯ ಸಾಧಿಸಿತು. ಯಡಿಯೂರಪ್ಪ ಅವರ ಹೊಸ ಪಕ್ಷವಾಗಿದ್ದ ಕೆಜೆಪಿ ಶೇ. 9.8 ರಷ್ಟು ಮತ ಪಡೆದು, 6 ಕ್ಷೇತ್ರಗಳಲ್ಲಿ ಗೆದ್ದಿತ್ತು. ಇದರಿಂದ ಬಿಜೆಪಿಗೆ ಬಹುದೊಡ್ಡ ಹಿನ್ನಡೆಯಾಯಿತು. ಈ ಕಾರಣಕ್ಕಾಗಿ 2014ರ ಲೋಕಸಭಾ ಚುನಾವಣೆಗೂ ಮೊದಲು ಯಡಿಯೂರಪ್ಪ ಅವರನ್ನು ಮನವೊಲಿಸಿ ಬಿಜೆಪಿಗೆ ಮತ್ತೆ ಸೇರ್ಪಡೆಗೊಳಿಸಲಾಯಿತು.

karnataka election 2018 graphics

2018ರ ಚುನಾವಣೆ
ಕಳೆದ ಚುನಾವಣೆಯಲ್ಲಿ ಕಾಂಗ್ರೆಸ್ ಶೇ. 39 ರಷ್ಟು ಮತಗಳನ್ನು ಪಡೆದಿದ್ದರೂ ಸಹ, 80 ಕ್ಷೇತ್ರಗಳನ್ನಷ್ಟೇ ಗೆಲ್ಲಲು ಶಕ್ತವಾಯಿತು. ಬಿಜೆಪಿ ಶೇ. 36.2 ರಷ್ಟು ಮತಗಳನ್ನಷ್ಟೇ ಪಡೆದಿದ್ದರೂ, 104 ಕ್ಷೇತ್ರಗಳಲ್ಲಿ ಗೆದ್ದು ದೊಡ್ಡ ಪಕ್ಷವಾಗಿ ಹೊರಹೊಮ್ಮಿತು. ಇನ್ನು ಜೆಡಿಎಸ್ ಶೇ. 18.3 ರಷ್ಟು ಮತ ಪಡೆದು 37 ಕ್ಷೇತ್ರಗಳನ್ನು ಗೆದ್ದಿತ್ತು. ಇದನ್ನೂ ಓದಿ: PublicTV Explainer: ಲ್ಯಾಬ್‌ನಲ್ಲಿ DNA ಇಟ್ರೆ ಸಾಕು ನಿಮ್ಗೆ ಸಿಗುತ್ತೆ ಚಿಕನ್‌, ಮಟನ್‌, ಬೀಫ್‌, ಫೋರ್ಕ್‌ ಮಾಂಸ!

ಕಾರಣ ಏನು?
ಹಳೇ ಮೈಸೂರು ಭಾಗದಲ್ಲಿ ಪ್ರತಿ ಚುನಾವಣೆಯಲ್ಲೂ ಕಾಂಗ್ರೆಸ್‌ ಮತ್ತು ಜೆಡಿಎಸ್‌ ನಡುವೆ ಪ್ರಬಲ ಪೈಪೋಟಿ ಇರುತ್ತದೆ. ಈ ಭಾಗದಲ್ಲಿ ಬಿಜೆಪಿ ಪ್ರಭಾವ ತುಂಬಾ ಕಡಿಮೆ. ಇದರಿಂದ ಬಿಜೆಪಿ ಒಟ್ಟು ಮತಪ್ರಮಾಣದಲ್ಲಿ ಎರಡನೇ ಸ್ಥಾನದಲ್ಲಿರುತ್ತದೆ. ಕರಾವಳಿ ಭಾಗದಲ್ಲಿ ಕಾಂಗ್ರೆಸ್‌ ಮತ್ತು ಬಿಜೆಪಿ ನಡುವೆ ಪೈಪೋಟಿ ಇರುತ್ತದೆ. ಈ ಭಾಗದಲ್ಲಿ ಕೆಲವು ಕಡೆ ಜೆಡಿಎಸ್‌ ಅಭ್ಯರ್ಥಿಗಳನ್ನೇ ಹಾಕುವುದಿಲ್ಲ. ಹೀಗಾಗಿ ಚುನಾವಣೆಗಳಲ್ಲಿ ಚಲಾವಣೆಯಾದ ಒಟ್ಟು ಮತಗಳಲ್ಲಿ ಕಾಂಗ್ರೆಸ್‌ ಮುಂದಿರುತ್ತದೆ.

TAGGED:bjpcongressjdsKarnataka Election 2023ಕರ್ನಾಟಕ ಚುನಾವಣೆ 2023ಕಾಂಗ್ರೆಸ್ಜೆಡಿಎಸ್ಬಿಜೆಪಿ
Share This Article
Facebook Whatsapp Whatsapp Telegram

Cinema Updates

rakshak bullet
ಸತ್ಯ ಒಪ್ಪಿಕೊಂಡ ರಕ್ಷಕ್: ಆಡಿಯೋ ವೈರಲ್ ಬಗ್ಗೆ ಹೇಳಿದ್ದೇನು?
Bengaluru City Cinema Districts Latest Top Stories
ramya 5 2
ನಿಮ್ಮಿಂದಲೇ ಹೆಣ್ಮಕ್ಕಳಿಗೆ ದೌರ್ಜನ್ಯ – ದರ್ಶನ್‌ ಫ್ಯಾನ್ಸ್‌ ವಿರುದ್ಧ ರಮ್ಯಾ ಕೆಂಡಾಮಂಡಲ
Bengaluru City Cinema Latest Main Post
Rashmika Mandannas New Film Mysaa Launched with a Traditional Pooja Muhurta program 2
ರಶ್ಮಿಕಾ ಮಂದಣ್ಣ ನಟನೆಯ ಮೈಸಾ ಚಿತ್ರಕ್ಕೆ ಮುಹೂರ್ತ- ಗೋಂಡ್ ಹಾಡಿಗೆ ಡಾನ್ಸ್
Cinema Latest South cinema
Darshan The Devil
ʼದಿ ಡೆವಿಲ್ʼ ಶೂಟಿಂಗ್ ಮುಕ್ತಾಯ : ಪೋಸ್ಟ್ ಪ್ರೊಡಕ್ಷನ್ ವರ್ಕ್ ಶುರು
Cinema Latest Sandalwood Top Stories
just married
ಶೈನ್ ಶೆಟ್ಟಿಯ ಜಸ್ಟ್ ಮ್ಯಾರೀಡ್‌ಗೆ ಡೇಟ್ ಫಿಕ್ಸ್
Cinema Latest Sandalwood Top Stories

You Might Also Like

IND vs ENG 4th test Ben Stokes offers a draw India denies and continues to bat
Cricket

ಬೆನ್‌ ಸ್ಟೋಕ್ಸ್‌ ಡ್ರಾ ಆಫರ್‌ ರಿಜೆಕ್ಟ್‌ – ಬ್ಯಾಟಿಂಗ್‌ ಮುಂದುವರಿಸಿ ಚಮಕ್‌ ಕೊಟ್ಟ ಜಡೇಜಾ, ಸುಂದರ್‌

Public TV
By Public TV
7 hours ago
Mallikarjun Kharge 3
Districts

ಕಷ್ಟ ಪಟ್ಟಿದ್ದು ನಾನು, ಕೃಷ್ಣ ಸಿಎಂ ಆದ್ರು – ಮುಖ್ಯಮಂತ್ರಿ ಸ್ಥಾನ ಸಿಗದಿದ್ದಕ್ಕೆ ಖರ್ಗೆ ಬಹಿರಂಗ ಬೇಸರ

Public TV
By Public TV
7 hours ago
Ravindra Jadeja Washington Sundar
Cricket

ಜಡೇಜಾ, ಸುಂದರ್‌ ಅಜೇಯ ಶತಕ – ಡ್ರಾದಲ್ಲಿ ಟೆಸ್ಟ್‌ ಅಂತ್ಯ

Public TV
By Public TV
7 hours ago
Chikkamagaluru Elephant Attack
Chikkamagaluru

ಚಿಕ್ಕಮಗಳೂರು | ಆನೆ ದಾಳಿಗೆ ವೃದ್ಧ ಬಲಿ – 4 ದಿನಗಳ ಅಂತರದಲ್ಲಿ ಇಬ್ಬರು ಸಾವು

Public TV
By Public TV
8 hours ago
Lakshmi Hebbalkar
Belgaum

ರಾಹುಲ್‌ ಗಾಂಧಿ ಜೊತೆ ಯುವಕರು ಸೈನಿಕರಾಗಿ ಕೆಲಸ ಮಾಡಬೇಕು: ಲಕ್ಷ್ಮಿ ಹೆಬ್ಬಾಳ್ಕರ್

Public TV
By Public TV
8 hours ago
American Airlines 1
Latest

ಟೇಕಾಫ್‌ ವೇಳೆ ಕೈಕೊಟ್ಟ ಲ್ಯಾಂಡಿಂಗ್‌ ಗೇರ್‌ – ಬೋಯಿಂಗ್ ವಿಮಾನದಲ್ಲಿ ಕಾಣಿಸಿಕೊಂಡ ಬೆಂಕಿ

Public TV
By Public TV
9 hours ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?