Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಬಿಹಾರದಲ್ಲಿ ಮತಪಟ್ಟಿ ವಿಶೇಷ ಪರಿಷ್ಕರಣೆಗೆ ವಿರೋಧವೇಕೆ?- ಕಾಂಗ್ರೆಸ್ಸಿಗರಿಗೆ ಬಿ.ವೈ.ವಿಜಯೇಂದ್ರ ಪ್ರಶ್ನೆ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಬಿಹಾರದಲ್ಲಿ ಮತಪಟ್ಟಿ ವಿಶೇಷ ಪರಿಷ್ಕರಣೆಗೆ ವಿರೋಧವೇಕೆ?- ಕಾಂಗ್ರೆಸ್ಸಿಗರಿಗೆ ಬಿ.ವೈ.ವಿಜಯೇಂದ್ರ ಪ್ರಶ್ನೆ

Bengaluru City

ಬಿಹಾರದಲ್ಲಿ ಮತಪಟ್ಟಿ ವಿಶೇಷ ಪರಿಷ್ಕರಣೆಗೆ ವಿರೋಧವೇಕೆ?- ಕಾಂಗ್ರೆಸ್ಸಿಗರಿಗೆ ಬಿ.ವೈ.ವಿಜಯೇಂದ್ರ ಪ್ರಶ್ನೆ

Public TV
Last updated: August 8, 2025 11:21 pm
Public TV
Share
3 Min Read
BY Vijayendra
SHARE

ಬೆಂಗಳೂರು: ಮತದಾನದಲ್ಲಿ ಅಕ್ರಮದ ಆರೋಪ ಮಾಡುವ ರಾಹುಲ್ ಗಾಂಧಿ ಮತ್ತು ಕಾಂಗ್ರೆಸ್ಸಿನವರು (Congress) ಬಿಹಾರದಲ್ಲಿ (Bihar) ಮತದಾರರಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆಯನ್ನು ಯಾಕೆ ವಿರೋಧಿಸುತ್ತಾರೆ ಎಂದು ಬಿಜೆಪಿ (BJP) ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ (B.Y Vijayendra) ಅವರು ಪ್ರಶ್ನಿಸಿದ್ದಾರೆ.

ಬಿಜೆಪಿ ರಾಜ್ಯ ಕಾರ್ಯಾಲಯ ಜಗನ್ನಾಥ ಭವನದಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಕಳೆದ ಲೋಕಸಭಾ ಚುನಾವಣೆಯಲ್ಲಿ ದೇಶ- ರಾಜ್ಯದಲ್ಲಿ ಅಕ್ರಮಗಳು ನಡೆದಿವೆ. ಮತದಾರರ ಪಟ್ಟಿಯಲ್ಲಿ ಅಕ್ರಮ ನಡೆದಿದೆ; ನಕಲಿ ಮತದಾರರು ಆ ಪಟ್ಟಿಯಲ್ಲಿದ್ದರು ಎಂದು ಅನೇಕ ವಿಷಯಗಳನ್ನು ರಾಹುಲ್ ಗಾಂಧಿಯವರು ದೇಶದ ಜನತೆಯ ಮುಂದೆ ತೆರೆದಿಟ್ಟಿದ್ದಾರೆ. ರಾಹುಲ್ ಗಾಂಧಿಯವರ ಹೇಳಿಕೆಯ ನಂತರದಲ್ಲಿ ನಮ್ಮ ರಾಜ್ಯದಲ್ಲೂ ಕಾಂಗ್ರೆಸ್ಸಿನ ಹಿರಿಯ ನಾಯಕರು ಮೂರ್ಖರಂತೆ ಮಾತನಾಡಿದ್ದಾರೆ. ನರೇಂದ್ರ ಮೋದಿಯವರು ಪ್ರಧಾನಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಬೇಕು. ಲೋಕಸಭೆಯನ್ನು ವಿಸರ್ಜನೆ ಮಾಡಬೇಕು ಎಂದು ಮನಬಂದಂತೆ ಮೂರ್ಖರಂತೆ ಮಾತನಾಡಿದ್ದಾರೆ ಎಂದರು. ಇದನ್ನೂ ಓದಿ: ʻಕುಣಿಯಲು ಬಾರದೇ ನೆಲ ಡೊಂಕುʼ ರಾಹುಲ್‌ ಗಾಂಧಿ ಮತಗಳ್ಳತನ ಆರೋಪಕ್ಕೆ ಪ್ರಹ್ಲಾದ್ ಜೋಶಿ‌ ವ್ಯಂಗ್ಯ

ಮಹದೇವಪುರ ವಿಧಾನಸಭಾ ಕ್ಷೇತ್ರದಲ್ಲಿ ಸಾಕಷ್ಟು ಚುನಾವಣಾ ಅಕ್ರಮಗಳಾಗಿವೆ ಎಂದು ಆರೋಪಿಸಿದ್ದು, ಈ ವಿಷಯದಲ್ಲಿ ಈಗಾಗಲೇ ಅರವಿಂದ ಲಿಂಬಾವಳಿಯವರಿಗೆ ತಿಳಿಸಿದ್ದೇವೆ. ಅವರು ಪತ್ರಿಕಾಗೋಷ್ಠಿ ಮೂಲಕ ಸಂಪೂರ್ಣ ಮಾಹಿತಿ ನೀಡುತ್ತಾರೆ. ಅಕ್ರಮ ಮತದಾರರು, ನಕಲಿ ಮತದಾರರ ವಿಷಯ ಇಟ್ಟುಕೊಂಡೇ ಚುನಾವಣಾ ಆಯೋಗ ಮತಪಟ್ಟಿ ವಿಶೇಷ ಪರಿಷ್ಕರಣೆ ಮಾಡುತ್ತದೆ. ಅಕ್ರಮದ ಆರೋಪ ಮಾಡುವ ರಾಹುಲ್ ಗಾಂಧಿಯವರು, ಕಾಂಗ್ರೆಸ್ಸಿನವರು ಬಿಹಾರದಲ್ಲಿ ಅದನ್ನು ಯಾಕೆ ವಿರೋಧಿಸುತ್ತಾರೆ ಎಂದು ಪ್ರಶ್ನಿಸಿದರು.

rahul gandhi 2

ರಾಹುಲ್ ಗಾಂಧಿಯವರಿಗೆ ಕಾಂಗ್ರೆಸ್ಸಿನ ಮೂರ್ಖರು ಹೇಳಿರಬೇಕು
2005ರಲ್ಲಿ ಡಾ.ಮನಮೋಹನ್ ಸಿಂಗ್ ಅವರು ದೇಶದ ಪ್ರಧಾನಿಯಾಗಿದ್ದಾಗ, ಮಮತಾ ಬ್ಯಾನರ್ಜಿ ಅವರು ಸಂಸದರಾಗಿದ್ದು, ಎನ್‍ಡಿಎಯಲ್ಲಿದ್ದರು. ಆಗ ಲೋಕಸಭೆಯಲ್ಲಿ ಮಮತಾ ಬ್ಯಾನರ್ಜಿ ಅವರು ಪಶ್ಚಿಮ ಬಂಗಾಲದಲ್ಲಿ ಬಾಂಗ್ಲಾ ದೇಶದಿಂದ ಬಂದ ಅಕ್ರಮ ವಲಸಿಗರು ಆ ರಾಜ್ಯದ ಮತದಾರರ ಪಟ್ಟಿಯಲ್ಲಿ ಸೇರಿದ್ದಾರೆ. ಇದರ ಕುರಿತು ಚರ್ಚೆ ಆಗಲಿ ಎಂದು ಪ್ರಸ್ತಾಪಿಸಿದ್ದರು. ಸ್ಪೀಕರ್ ಸೋಮನಾಥ ಚಟರ್ಜಿ ಅವರು, ಮಮತಾ ಬ್ಯಾನರ್ಜಿ ಅವರ ಮುಖದ ಮೇಲೆ ಪೇಪರ್ ಬಿಸಾಡಿ, ಅವರನ್ನು ಅಮಾನತು ಮಾಡಿದ್ದರು. ರಾಹುಲ್ ಗಾಂಧಿಯವರಿಗೆ ಇದು ಮರೆತು ಹೋಗಿದೆಯೇ ಎಂದು ಪ್ರಶ್ನಿಸಿದರು.

ಕರ್ನಾಟಕದ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ 16 ಸೀಟ್ ಪಡೆಯಲಿದೆ ಎಂದು ಎಲ್ಲ ಸರ್ವೇಗಳು ಹೇಳಿದ್ದವು ಎಂದು ರಾಹುಲ್ ಗಾಂಧಿಯವರು ತಿಳಿಸಿದ್ದಾರೆ. ಕರ್ನಾಟಕದಲ್ಲಿ ಕಾಂಗ್ರೆಸ್ 16 ಸ್ಥಾನ ಪಡೆಯಲಿದೆ ಎಂದು ಯಾವ ಸರ್ವೇಗಳೂ ಹೇಳಿಲ್ಲ ಎಂದು ತಿಳಿಸಿದರು. 16 ಸೀಟು ಗೆಲ್ಲಲಿದೆ ಎಂದು ರಾಹುಲ್ ಗಾಂಧಿಯವರಿಗೆ ಕಾಂಗ್ರೆಸ್ಸಿನ ಮೂರ್ಖರು ಹೇಳಿರಬೇಕು ಎಂದು ವ್ಯಂಗ್ಯವಾಡಿದ್ದಾರೆ.

ಹಿಂದೆ ಬಿಜೆಪಿ 2019ರಲ್ಲಿ ಯಡಿಯೂರಪ್ಪನವರು ರಾಜ್ಯಾಧ್ಯಕ್ಷರಿದ್ದಾಗ ರಾಜ್ಯದಿಂದ 25 ಸಂಸದರನ್ನು ಬಿಜೆಪಿ ಕಳಿಸಿಕೊಟ್ಟಿತ್ತು. ಈ ಬಾರಿ ಬಿಜೆಪಿ- ಜೆಡಿಎಸ್ ಸೇರಿ ಕಡಿಮೆ ಸ್ಥಾನ ಪಡೆದಿವೆ. ಹಾಗಿದ್ದರೆ ಅಕ್ರಮ ಆಗಿದೆ ಎಂದು ಬಿಜೆಪಿ ಹೇಳಬೇಕೇ ಎಂದು ಕೇಳಿದರು. ಸಂಜೆ 5ರಿಂದ 6 ಗಂಟೆವರೆಗೆ ಅತಿ ಹೆಚ್ಚು ಮತದಾನದ ಕುರಿತು ರಾಹುಲ್ ಗಾಂಧಿ ಹೇಳಿದ್ದಾರೆ. ಹಾಗಿದ್ದರೆ ಅವರೇನು ಮೊದಲ ಬಾರಿ ಸಂಸದರಾಗಿದ್ದಾರಾ? ಬಿಸಿಲು ಕಡಿಮೆ ಇರುವ ಕಾರಣ ದೇಶಾದ್ಯಂತ ಸಂಜೆ 5ರಿಂದ 6 ಗಂಟೆವರೆಗೆ ಬಿರುಸಿನ ಮತದಾನ ನಡೆಯುವುದು ಸಹಜ. ಎಲ್ಲ ಪಕ್ಷದವರು ಮತದಾರರ ಮನೆಗೆ ಹೋಗಿ ಮತ ಹಾಕಿಸಲು ಶ್ರಮಿಸುತ್ತಾರೆ ಎಂದರು.

ಕಾಂಗ್ರೆಸ್ ಇವತ್ತು ಮೂರ್ಖರ ಪಕ್ಷ
ರಾಹುಲ್ ಗಾಂಧಿ, ಕಾಂಗ್ರೆಸ್ ಪಕ್ಷದವರು, ಸೋಲಿನ ಹತಾಶೆಯಿಂದ ಮಾತನಾಡಿದ್ದಾರೆ. ಇವತ್ತು ರಾಹುಲ್ ಗಾಂಧಿಯವರು ಬೆಂಗಳೂರಿಗೆ ಬಂದು ಆರ್ಭಟ ಮಾಡಿ ಹೋಗಲಿದ್ದಾರೆ. ಇದು ಸೋಲಿನ ಹತಾಶೆಯಿಂದ ಮತದಾರರಿಗೆ ಮಾಡುವ ಅಪಮಾನವೇ ಹೊರತು ಇದರಲ್ಲಿ ಯಾವುದೇ ಸತ್ಯಾಂಶವಿಲ್ಲ. ಚುನಾವಣೆ ಮುಗಿದು ಫಲಿತಾಂಶ ಬಂದು 45 ದಿನಗಳೊಳಗೆ ಲಿಖಿತವಾಗಿ ಆಕ್ಷೇಪ ಸಲ್ಲಿಸಬೇಕಿತ್ತು. ಬೆಂಗಳೂರು ಸೆಂಟ್ರಲ್‍ನ ಸೋತ ಕಾಂಗ್ರೆಸ್ ಅಭ್ಯರ್ಥಿ ಪ್ರಶ್ನೆ ಮಾಡಬೇಕಿತ್ತು. ಕಾಂಗ್ರೆಸ್ ಪಕ್ಷವು ಇವತ್ತು ಮೂರ್ಖರ ಪಕ್ಷವಾಗಿದೆ.

ಮಹದೇವಪುರದ ಕುರಿತು ಮಾತನಾಡುವ ರಾಹುಲ್ ಗಾಂಧಿ, ಸಿದ್ದರಾಮಯ್ಯ, ಡಿ.ಕೆ.ಶಿವಕುಮಾರ್ ಅವರು ಗರಿಷ್ಠ ಅಲ್ಪಸಂಖ್ಯಾತರಿರುವ ಚಾಮರಾಜಪೇಟೆ, ಶಿವಾಜಿನಗರ ವಿಧಾನಸಭಾ ಕ್ಷೇತ್ರಗಳಲ್ಲಿ ಎಷ್ಟು ನಕಲಿ ಮತದಾರರಿದ್ದಾರೆ ಎಂದು ಪರಿಶೀಲಿಸಲಿ; ಆ ಕುರಿತು ಚರ್ಚೆಗೆ ಬರಲಿ. ಸಂಸತ್ತಿನಲ್ಲಿ ಎದುರಿಸಲು ತಾಕತ್ತಿಲ್ಲ; ಜ್ವಲಂತ ಸಮಸ್ಯೆ ಕುರಿತು ಇವರು ಮಾತನಾಡುವುದಿಲ್ಲ ಎಂದು ಟೀಕಿಸಿದರು. ಪ್ರಧಾನಿ ಆಗುವ ರಾಹುಲ್ ಗಾಂಧಿಯವರ ಕನಸು ಕನಸಾಗಿಯೇ ಇರಲಿದೆ. ಇವರ ಹೇಳಿಕೆಯಲ್ಲಿ, ನಿಲುವಿನಲ್ಲಿ ದ್ವಂದ್ವ ಇದೆ ಎಂದು ಹೇಳಿದರು. ಇದನ್ನೂ ಓದಿ: ವಿಪಕ್ಷದ ನಾಯಕರಿಗೆ ಕಿರುಕುಳ ನೀಡಲು ಪೊಲೀಸರ ಬಳಕೆ, ಸಂಸದ ಸುಧಾಕರ್‌ ಗುರಿಯಾಗಿಸಿ FIR: ಆರ್‌.ಅಶೋಕ್‌ ಕಿಡಿ

TAGGED:B.Y vijayendrabjpcongressECIRahul Gandhi
Share This Article
Facebook Whatsapp Whatsapp Telegram

Cinema news

Delhi Rain
ದೆಹಲಿ-ಎನ್‌ಸಿಆರ್‌ನ ಹಲವೆಡೆ ಭಾರೀ ಮಳೆ – ಯೆಲ್ಲೋ ಅಲರ್ಟ್ ಜಾರಿ
Cinema Latest National Top Stories
Rishabh Shetty
Chandanavana Film Critics Awards 2026 | ರಿಷಬ್ ಅತ್ಯುತ್ತಮ ನಟ, ಆಶಿಕಾ ರಂಗನಾಥ್ ಅತ್ಯುತ್ತಮ ನಟಿ
Bengaluru City Cinema Latest Sandalwood Top Stories
lyari in pakistan dhurandhar
ಧುರಂಧರ್‌ ಸಿನಿಮಾದಲ್ಲಿ ನಮಗೆ 500 ಕೋಟಿ ಕೊಡಿ – ಹಿಟ್‌ ಬೆನ್ನಲ್ಲೇ ಪಾಲು ಕೇಳಿದ ಪಾಕ್‌
Cinema Latest Top Stories
Vijay Deverakonda Rashmika Mandanna
ಮದ್ವೆ ಬಳಿಕ ಬಳಿಕ ಒಟ್ಟಿಗೆ ಶೂಟಿಂಗ್‌ಗೆ ತೆರಳಿದ ವಿರೋಶ್ ಜೋಡಿಗೆ ಅದ್ಧೂರಿ ಸ್ವಾಗತ
Cinema Latest Sandalwood South cinema Top Stories

You Might Also Like

Hormuz Toll
Latest

ಹಾರ್ಮುಜ್‌ ಜಲಸಂಧಿಯಲ್ಲಿ ಟೋಲ್‌ ಸಂಗ್ರಹಿಸುವ ಯೋಜನೆಗೆ ಇರಾನ್‌ ಒಪ್ಪಿಗೆ – ಅಮೆರಿಕ, ಇಸ್ರೇಲ್‌ ಹಡಗುಗಳಿಗೆ ನಿಷೇಧ

Public TV
By Public TV
7 minutes ago
Leander Paes joins BJP
Latest

ಟೆನಿಸ್ ದಂತಕಥೆ ಲಿಯಾಂಡರ್ ಪೇಸ್ ಬಿಜೆಪಿ ಸೇರ್ಪಡೆ

Public TV
By Public TV
57 minutes ago
Bidar Youth Farmer Death
Bidar

ಬೀದರ್‌ನಲ್ಲಿ ಸಿಡಿಲು ಬಡಿದು ಯುವರೈತ ಸ್ಥಳದಲ್ಲೇ ಸಾವು

Public TV
By Public TV
1 hour ago
CRIME
Bengaluru City

ಉತ್ತರ ಪ್ರದೇಶದಲ್ಲಿ ಪೂಜಾರಿ, ಬೆಂಗಳೂರಲ್ಲಿ ಪೆಡ್ಲರ್ – ಹೆರಾಯಿನ್‌ ಸಪ್ಲೈ ಮಾಡುತ್ತಿದ್ದ ಇಬ್ಬರ ಬಂಧನ

Public TV
By Public TV
1 hour ago
LPG 2
Bellary

ದುಪ್ಪಟ್ಟು ದರಕ್ಕೆ ಸಿಲಿಂಡರ್‌ ಮಾರುತ್ತಿದ್ದ ಅಡ್ಡೆ ಮೇಲೆ ಪೊಲೀಸರಿಂದ ದಾಳಿ – 9 ಸಿಲಿಂಡರ್‌ ಜಪ್ತಿ

Public TV
By Public TV
2 hours ago
Tiger
Districts

ಮಾಲ್ತಾರೆ ಅರಣ್ಯ ಮಾರ್ಗದಲ್ಲಿ ಹುಲಿ ದರ್ಶನ – ಪ್ರವಾಸಿಗರು ಫುಲ್‌ ಖುಷ್‌

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?