Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: IPL 2023: ಧೋನಿಯಿಂದ ಉದ್ದೇಶಪೂರ್ವಕವಾಗಿ ಸಮಯ ವ್ಯರ್ಥ- ಲಾಸ್ಟ್ 5 ಓವರ್‌ಗೂ ಮುನ್ನ ನಡೆದಿದ್ದೇನು?
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Sports | Cricket | IPL 2023: ಧೋನಿಯಿಂದ ಉದ್ದೇಶಪೂರ್ವಕವಾಗಿ ಸಮಯ ವ್ಯರ್ಥ- ಲಾಸ್ಟ್ 5 ಓವರ್‌ಗೂ ಮುನ್ನ ನಡೆದಿದ್ದೇನು?

Cricket

IPL 2023: ಧೋನಿಯಿಂದ ಉದ್ದೇಶಪೂರ್ವಕವಾಗಿ ಸಮಯ ವ್ಯರ್ಥ- ಲಾಸ್ಟ್ 5 ಓವರ್‌ಗೂ ಮುನ್ನ ನಡೆದಿದ್ದೇನು?

Public TV
Last updated: May 25, 2023 3:45 pm
Public TV
Share
3 Min Read
CSK
SHARE

ಚೆನ್ನೈ: 2023ರ ಐಪಿಎಲ್ (IPL 2023) ಆವೃತ್ತಿಯ ಪ್ಲೇ ಆಫ್‌ನಲ್ಲಿ ಹಾಲಿ ಚಾಂಪಿಯನ್ಸ್ ಗುಜರಾತ್ ಟೈಟಾನ್ಸ್ (GT) ತಂಡವನ್ನ ಮಣಿಸಿ ಮಾಜಿ ಚಾಂಪಿಯನ್ಸ್ ಚೆನ್ನೈ ಸೂಪರ್ ಕಿಂಗ್ಸ್ (CSK) 10ನೇ ಬಾರಿಗೆ ಫೈನಲ್ ತಲುಪಿದೆ. ಆದ್ರೆ ಕೊನೆಯ 5 ಓವರ್‌ನಲ್ಲಿ ಟೈಟಾನ್ಸ್ ಗೆಲುವಿಗೆ 71 ರನ್‌ಗಳ ಅಗತ್ಯವಿದ್ದಾಗ ಸಿಎಸ್‌ಕೆ ನಾಯಕ ಎಂ.ಎಸ್ ಧೋನಿ (MS Dhoni) ನಡೆದುಕೊಂಡ ರೀತಿ ಭಾರೀ ಚರ್ಚೆಗೆ ಗ್ರಾಸವಾಗಿದ್ದು ಮ್ಯಾಚ್ ಫಿಕ್ಸಿಂಗ್ ಮಾಡಲಾಗಿದೆ ಎಂದು ಕ್ರಿಕೆಟ್ ಅಭಿಮಾನಿಗಳು ದೂಷಿಸುತ್ತಿದ್ದಾರೆ.

CSK 1

ಈ ಹಿಂದೆ ಸಿಎಸ್‌ಕೆ ತಂಡದ ಪ್ರಮುಖ ಆಟಗಾರರು ಮ್ಯಾಚ್ ಫಿಕ್ಸಿಂಗ್ ಕೇಸ್‌ನಲ್ಲಿ ಸಿಲುಕಿದ್ದರಿಂದ ತಂಡ 2 ವರ್ಷ ಬ್ಯಾನ್ ಆಗಿತ್ತು. ಆಗ ತಂಡದಲ್ಲಿದ್ದ ಆಟಗಾರರು ಇಬ್ಭಾಗವಾಗಿ ಕೆಲ ಆಟಗಾರರು ಗುಜರಾತ್ ಲಯನ್ಸ್ ತಂಡದಲ್ಲಿ, ಇನ್ನೂ ಕೆಲವರು ಮಹಿ ನಾಯಕತ್ವದ ರೈಸಿಂಗ್ ಪುಣೆ ಸೂಪರ್ ಜೈಂಟ್ಸ್ ತಂಡದಲ್ಲಿ ಆಡಿದ್ದರು. ಇದೀಗ ಮಹಿ ಅವರ ನಡೆಯಿಂದ ಕ್ರಿಕೆಟ್ ಅಭಿಮಾನಿಗಳ ನಡುವೆ ಪರ-ವಿರೋಧ ಚರ್ಚೆ ಹುಟ್ಟಿಕೊಂಡಿದೆ. ಇದನ್ನೂ ಓದಿ: IPL 2023 Final: ಗುಜರಾತ್‌ಗೆ ಗುನ್ನ ಕೊಟ್ಟ ಚೆನ್ನೈ – 10ನೇ ಬಾರಿಗೆ ಫೈನಲ್‌ಗೆ CSK ಎಂಟ್ರಿ

CSK 2

ಕೊನೆಯ 5 ಓವರ್‌ನಲ್ಲಿ ನಡೆದಿದ್ದೇನು?
ಗುಜರಾತ್ ಟೈಟಾನ್ಸ್‌ಗೆ ಬೃಹತ್ ಮೊತ್ತದ ಗುರಿ ನೀಡಿದ್ದ ಚೆನ್ನೈ 16ನೇ ಓವರ್ ಬೌಲ್ ಮಾಡಲು ಮಥೀಶ ಪತಿರನ ಸಿದ್ಧಗೊಳ್ಳುತ್ತಿದ್ದಾಗ ಅಂಪೈರ್ ಅನಿಲ್ ಚೌಧು ಪತಿರನ ಅವರನ್ನ ತಡೆದರು. ಆಗ ಲೆಗ್ ಅಂಪೈರ್ ಕ್ರಿಸ್ ಗ್ಯಾನಿ ಬಳಿ ತೆರಳಿದ ಧೋನಿ ಏನೆ0ದು ವಿಚಾರಿಸಿದರು. ಪತಿರನ ತಮ್ಮ ಮೊದಲ ಓವರ್ (ಇನ್ನಿಂಗ್ಸ್ನ 12ನೇ ಓವರ್) ಬೌಲ್ ಮಾಡಿದ ಬಳಿಕ 9 ನಿಮಿಷ ಮೈದಾನದಿಂದ ಹೊರಗುಳಿದಿದ್ದರು. ನಿಯಮದ ಪ್ರಕಾರ ಆಟದ ಮಧ್ಯೆ ಆಟಗಾರ ಮೈದಾನ ತೊರೆದರೆ, ಎಷ್ಟು ಸಮಯ ಹೊರಗಿದ್ದರೋ ಅಷ್ಟು ಸಮಯ ಕಳೆದ ಬಳಿಕವಷ್ಟೇ ಬೌಲ್ ಮಾಡಬಹುದು.

CSKvsGT 4

ಪತಿರನ ಬೌಲ್ ಮಾಡಲು ಇನ್ನೂ 4 ನಿಮಿಷ ಆಗಬೇಕಿತ್ತು. ಇದಕ್ಕೆ ಧೋನಿ ಈಗಾಗಲೇ ಚಹಾರ್, ಜಡೇಜಾ, ತೀಕ್ಷಣ ತಲಾ 4 ಓವರ್ ಮುಗಿಸಿದ್ದಾರೆ. ಉಳಿದಿರುವುದು ತುಷಾರ್ ದೇಶ್‌ಪಾಂಡೆ ಮಾತ್ರ. ಅದರಲ್ಲಿ 2 ಓವರ್ ಪತಿರನ ಅವರದ್ದು 3 ಓವರ್ ಬಾಕಿ ಇದೆ. ತಂಡದಲ್ಲಿರುವ ಮತ್ತೊಂದು ಬೌಲಿಂಗ್ ಆಯ್ಕೆ ಮೋಯಿನ್ ಅಲಿ, 30 ಎಸೆತದಲ್ಲಿ ಟೈಟಾನ್ಸ್ ಗೆ ಗೆಲ್ಲಲು 71 ರನ್ ಬೇಕಿದೆ. ವಿಜಯ್ ಶಂಕರ್, ರಹೀದ್ ಖಾನ್ ಇಬ್ಬರು ಬಲಗೈ ಬ್ಯಾಟರ್‌ಗಳು ಆಡುತ್ತಿರುವಾಗ ಬಲಗೈ ಸ್ಪಿನ್ನರ್‌ನನ್ನ ದಾಳಿಗಿಳಿಸುವ ರಿಸ್ಕ್ ತೆಗೆದುಕೊಳ್ಳಲು ಸಾಧ್ಯವಿಲ್ಲ. ಹಾಗಾಗಿ 4 ನಿಮಿಷ ಮಾತನಾಡುತ್ತಲೇ ಕಳೆಯೋಣ ಎಂದು ಧೋನಿ ಅಂಪೈರ್‌ಗಳಲ್ಲಿ ಮನವರಿಕೆ ಮಾಡಿಕೊಂಡಿದ್ದಾರೆ ಎನ್ನಲಾಗುತ್ತಿದೆ. ಇದನ್ನೂ ಓದಿ: CSKvsGT: ಜಿಯೋಸಿನಿಮಾದಲ್ಲಿ ಏಕಕಾಲಕ್ಕೆ 2.5 ಕೋಟಿ ಜನರಿಂದ ವೀಕ್ಷಣೆ – ಎಲ್ಲಾ ದಾಖಲೆಗಳು ಉಡೀಸ್‌

GTvsCSK 8

ದಂಡದಿಂದ ಸಿಎಸ್‌ಕೆ ಪಾರು:
ಫೀಲ್ಡಿಂಗ್ ಮಾಡುತ್ತಿರುವ ತಂಡ ಉದ್ದೇಶ ಪೂರ್ವಕವಾಗಿ ಸಮಯ ವ್ಯರ್ಥ ಮಾಡಿದರೆ, ನಿಯಮದ ಪ್ರಕಾರ 5 ರನ್ ದಂಡ ಹಾಕಬೇಕು, ಜೊತೆಗೆ ಯಾವ ಬೌಲರ್ ನಿಂದಾಗಿ ಆಟ ವಿಳಂಬವಾಗುತ್ತಿದೆಯೋ ಆತನನ್ನು ಹೊರಹಾಕಬೇಕು. ಇದು ಅಂಪೈರ್‌ಗಳಷ್ಟೇ ತೆಗೆದುಕೊಳ್ಳಬಹುದಾದ ನಿರ್ಧಾರ. ಆದ್ರೆ ಧೋನಿಯ ವಿಚಾರದಲ್ಲಿ ಅಂಪೈರ್ ಗಳು ಮೃದು ಧೋರಣೆ ತೋರಿದ್ದಾರೆ ಎಂಬ ಚರ್ಚೆ ಜಾಲತಾಣದಲ್ಲಿ ನಡೆಯುತ್ತಿದೆ.

CSKvsGT 1

ಮ್ಯಾಚ್ ಫಿಕ್ಸಿಂಗ್ ಸದ್ದು:
ಐಪಿಎಲ್‌ನಲ್ಲಿ ಈ ಹಿಂದೆಯೂ ಮ್ಯಾಚ್ ಫಿಕ್ಸಿಂಗ್ ಪ್ರಕರಣಗಳು ಬೆಳಕಿಗೆ ಬಂದಿದೆ. ಟೀಂ ಇಂಡಿಯಾ ಮಾಜಿ ವೇಗಿ ಎಸ್ ಶ್ರೀಶಾಂತ್, ಅಂಕಿತ್ ಚವಾಣ್ ಹಾಗೂ ಅಜಿತ್ ಚಂಡೀಲಾ ಅವರು ಮ್ಯಾಚ್ ಫಿಕ್ಸಿಂಗ್ ಆರೋಪದಲ್ಲಿ ಸಿಕ್ಕಿ ಬಿದ್ದಿದ್ದರು. ಚೆನ್ನೈ ಸೂಪರ್ ಕಿಂಗ್ಸ್ ತಂಡದ ಅಧಿಕಾರಿ ಗುರುನಾಥ್ ಮೇಯಪ್ಪನ್ ಅವರು ಕೂಡ ಇವರ ಜೊತೆ ಶಿಕ್ಷೆಗೆ ಒಳಗಾಗಿದ್ದರು. ಬಾಂಗ್ಲಾದೇಶ ಮಾಜಿ ನಾಯಕ ಶಕಿಬ್ ಅಲ್ ಹಸನ್ ಅವರು 2021ರಲ್ಲಿ ಭ್ರಷ್ಟಚಾರದ ಕುರಿತು ವರದಿ ಮಾಡುವಲ್ಲಿ ವಿಫಲರಾಗಿದ್ದರಿಂದ ಅವರು ಕೆಲ ತಿಂಗಳ ಕಾಲ ಅಮಾನತು ಶಿಕ್ಷೆಗೆ ಗುರಿಯಾಗಿದ್ದರು.

CSKvsGT 2

BCCI ಭ್ರಷ್ಟಾಚಾರ ನಿಗ್ರಹ ಘಟಕ ಹೇಳುವುದೇನು?
ಭ್ರಷ್ಟಾಚಾರಕ್ಕೆ ಸಂಬಂಧಿಸಿದಂತೆ ಯಾವುದೇ ಆಟಗಾರರು ಹಾಗೂ ಅಧಿಕಾರಿಗಳನ್ನ ಸಂಪರ್ಕಿಸಿದರೆ, ತಕ್ಷಣ ಅವರು ಬಿಸಿಸಿಐ ಭ್ರಷ್ಟಾಚಾರ ನಿಗ್ರಹ ಘಟಕಕ್ಕೆ ಮಾಹಿತಿ ನೀಡಬೇಕು. ಇಲ್ಲದೇ ಇದ್ದಲ್ಲಿ ಅಂತಹ ಆಟಗಾರರು ಅಮಾನತು ಶಿಕ್ಷೆಗೆ ಒಳಗಾಗುವ ಸಾಧ್ಯತೆ ಇದೆ. ಈ ವಿಷಯದಲ್ಲಿ ವಿಳಂಬ ಧೋರಣೆ ಅನುಸರಿಸಿದರೆ, ಬಿಸಿಸಿಐನ ಭ್ರಷ್ಟಾಚಾರ ನಿಗ್ರಹ ಘಟಕದ ಕಾರ್ಯ ಪ್ರಕ್ರಿಯೆಯ ಮೇಲೆ ಗಂಭೀರ ಪರಿಣಾಮ ಬೀರುತ್ತದೆ ಎಂದು ಭ್ರಷ್ಟಚಾರ ನಿಗ್ರಹ ಘಟಕ ಹೇಳಿದೆ.

TAGGED:Chennai Super KingsGTvsCSKGujarat TitansHardik PandyaIPL Match Fixingms dhoniಎಂ ಎಸ್ ಧೋನಿಗುಜರಾತ್ ಟೈಟಾನ್ಸ್ಮ್ಯಾಚ್ ಫಿಕ್ಸಿಂಗ್ಸಿಎಸ್‍ಕೆಹಾರ್ದಿಕ್ ಪಾಂಡ್ಯ
Share This Article
Facebook Whatsapp Whatsapp Telegram

Cinema news

Rajath Kishan and Dog Satish
ಶೌಚಾಲಯದಲ್ಲಿದ್ದ ವಿಡಿಯೋವೊಂದಕ್ಕೆ ಸುದೀಪ್ ಮೂವಿ ಹಾಡು – ಡಾಗ್ ಸತೀಶ್ ವಿರುದ್ಧ ರಜತ್ ದೂರು
Bengaluru City Cinema Karnataka Latest Main Post Sandalwood
Vijay Sangeetha Sornalingam
ನಟಿ ಜೊತೆ ವಿವಾಹೇತರ ಸಂಬಂಧ ಆರೋಪ; ಡಿವೋರ್ಸ್‌ಗೆ ಅರ್ಜಿ ಸಲ್ಲಿಸಿದ ನಟ ವಿಜಯ್‌ ಪತ್ನಿ
Cinema Latest Main Post South cinema
The Kerala Story 2
‘ದಿ ಕೇರಳ ಸ್ಟೋರಿ 2’ ಸಿನಿಮಾಗೆ ಬಿಗ್‌ ರಿಲೀಫ್‌ – ರಿಲೀಸ್‌ಗಿದ್ದ ತಡೆಯಾಜ್ಞೆ ತೆರವುಗೊಳಿಸಿದ ಹೈಕೋರ್ಟ್‌
Cinema Court Latest Main Post South cinema
Rashmika Mandanna Vijay Deverakonda Wedding
Rashmika Mandanna-Vijay Deverakonda Wedding: ಮದುವೆಯ ಫೋಟೊ ಹಂಚಿಕೊಂಡ ರಶ್ಮಿಕಾ ಮಂದಣ್ಣ
Cinema Latest Main Post South cinema

You Might Also Like

Amir Nasirzadeh
Latest

ಇಸ್ರೇಲ್‌ ದಾಳಿಗೆ ಇರಾನ್ ರಕ್ಷಣಾ ಸಚಿವ ಅಮೀರ್ ಬಲಿ?

Public TV
By Public TV
34 minutes ago
P.V.Sindhu stranded at Dubai airport
Latest

ದುಬೈ ಏರ್‌ಪೋರ್ಟ್‌ನಲ್ಲಿ ಸಿಲುಕಿದ ಬ್ಯಾಡ್ಮಿಂಟನ್‌ ತಾರೆ ಪಿ.ವಿ.ಸಿಂಧು

Public TV
By Public TV
47 minutes ago
Whitefield Water Sump Death
Bengaluru City

ನೀರಿನ ಸಂಪ್ ಸ್ವಚ್ಛ ಮಾಡಲು ಇಳಿದ ಮೂವರು ದುರ್ಮರಣ

Public TV
By Public TV
58 minutes ago
pakistan
Cricket

ಟಿ20 ವಿಶ್ವಕಪ್‌ನಿಂದ ಪಾಕ್‌ ಔಟ್‌ – ನ್ಯೂಜಿಲೆಂಡ್‌ ಸೆಮಿಗೆ

Public TV
By Public TV
1 hour ago
Srisailam Ugadi Mahotsav
Latest

ಮಾ.16ರಿಂದ 20ರವರೆಗೆ ಶ್ರೀಶೈಲ ಯುಗಾದಿ ಉತ್ಸವ – 10 ದಿನ 4 ಹಂತಗಳಲ್ಲಿ ಸ್ಪರ್ಶ ದರ್ಶನಕ್ಕೆ ಅವಕಾಶ

Public TV
By Public TV
2 hours ago
vinay kulkarni
Bengaluru City

ಜೈಲಿನಿಂದ ರಿಲೀಸ್ ಆದ ಶಾಸಕ ವಿನಯ್ ಕುಲಕರ್ಣಿ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?