ಭೀಕರ ಅಪಘಾತವಾದರೂ ಆಡಿ ಕಾರಿನ ಏರ್ ಬ್ಯಾಗ್ ಓಪನ್ ಆಗಿಲ್ಲ ಯಾಕೆ?

Public TV
1 Min Read
bengaluru Koramangala Accident Audi q 3

ಬೆಂಗಳೂರು: ಕೋರಮಂಗಲದಲ್ಲಿ ತಡರಾತ್ರಿ ನಡೆದ ಭೀಕರ ರಸ್ತೆ ಅಪಘಾತಕ್ಕೆ 7 ಮಂದಿಯ ಸಾವನ್ನಪ್ಪಿದ್ದು ಆಡಿ ಕಾರಿನ ಏರ್ ಬ್ಯಾಗ್ ಯಾಕೆ ತರೆಯಲಿಲ್ಲ ಎಂಬ ಪ್ರಶ್ನೆಗೆ ಉತ್ತರ ಸಿಕ್ಕಿದೆ.

ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಗುದ್ದಿದ ರಭಸಕ್ಕೆ ಆಡಿ ಕ್ಯೂ 3 ಕಾರು ಮುಂಭಾಗ ಸಂಪೂರ್ಣ ನಜ್ಜುಗುಜ್ಜಾಗಿದೆ. ಗುದ್ದಿದ ರಭಸಕ್ಕೆ ಏರ್ ಬ್ಯಾಗ್ ಓಪನ್ ಆಗಬೇಕಿತ್ತು. ಆದರೆ ಈ ಅಪಘಾತದ ವೇಳೆ ಏರ್ ಬ್ಯಾಗ್ ಓಪನ್ ಆಗಿಲ್ಲ ಯಾಕೆ ಎಂಬ ಪ್ರಶ್ನೆಗೆ ಉತ್ತರ ಸಿಕ್ಕಿದೆ. ಇದನ್ನೂ ಓದಿ : ಕೋರಮಂಗಲದಲ್ಲಿ ಭೀಕರ ರಸ್ತೆ ಅಪಘಾತಕ್ಕೆ 7 ಮಂದಿ ಬಲಿ 

7 killed after speeding Car hits electric pole koramangala Bengaluru Accident 2

ಸಂಚಾರಿ ಪೊಲೀಸ್ ಆಯುಕ್ತ ರವಿಕಾಂತೇಗೌಡ ಪ್ರತಿಕ್ರಿಯಿಸಿ, ಆಡಿ ಕಾರು ನೇರವಾಗಿ ಫುಟ್ ಪಾತ್ ಮೇಲೆ ಹತ್ತಿ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದಿದ್ದು, ಕಾರು ನಜ್ಜುಗುಜ್ಜಾಗಿದೆ. ಯಾರು ಕೂಡ ಸೀಟ್ ಬೆಲ್ಟ್ ಹಾಕದ ಹಿನ್ನೆಲೆಯಲ್ಲಿ ಏರ್ ಬ್ಯಾಗ್ ಓಪನ್ ಆಗದ ಕಾರಣ ಎಲ್ಲರೂ ಸಾವನ್ನಪ್ಪಿದ್ದಾರೆ ಎಂದು ತಿಳಿಸಿದ್ದಾರೆ.

ಮೇಲ್ನೋಟಕ್ಕೆ ನಿರ್ಲಕ್ಷ್ಯದ ಚಾಲನೆ ಘಟನೆ ಕಾರಣವಾಗಿದೆ. ನಿರ್ಲಕ್ಷ್ಯದ ಚಾಲನೆ ಸಂಬಂಧ ಪ್ರಕರಣ ದಾಖಲಿಸಿಕೊಳ್ಳಲಾಗಿದೆ. ಸಂಚಾರಿ ನಿಯಮ ಸಂಪೂರ್ಣವಾಗಿ ಮೇಲ್ನೋಟಕ್ಕೆ ಉಲ್ಲಂಘನೆ ಆಗಿದೆ ಎಂದು ಹೇಳಿದರು.

ಕೆಎ 03 ಎಂವೈ 6666 ನೋಂದಣಿ ಸಂಖ್ಯೆ ಕಾರು ಡೀಸೆಲ್ ಮಾಡೆಲ್ ಆಗಿದ್ದು  2015ರಲ್ಲಿ ಇಂದಿರಾನಗರದಲ್ಲಿ ನೋಂದಣಿ ಆಗಿತ್ತು. ಸಂಜಿವಿನಿ ಬ್ಲೂ ಮೆಟಲ್ಸ್ ಕಂಪನಿಗೆ ಸೇರಿದ ಕಾರು ಇದಾಗಿದೆ.  ಇದನ್ನೂ ಓದಿ : ಮುಖ್ಯಮಂತ್ರಿ ಆಗುವ ಕಾಲ ಬಂದೇ ಬರುತ್ತೆ- ಯತ್ನಾಳ್ ಸಿಎಂ ಆಗುವ ಇಂಗಿತ

ಜರ್ಮನಿ ಮೂಲದ ಆಡಿ ಕಂಪನಿ ಸುರಕ್ಷತೆಗೆ ಹೆಚ್ಚು ಒತ್ತು ನೀಡುತ್ತದೆ. ಸಂಚಾರದ ಸಮಯದಲ್ಲಿ ಸೀಟ್ ಬೆಲ್ಟ್ ಹಾಕುವುದು ಕಡ್ಡಾಯ ಮಾಡಲಾಗಿದೆ. ಸೀಟ್ ಬೆಲ್ಟ್ ಹಾಕದೇ ಸಂಚರಿಸಿದರೆ ದಂಡ ವಿಧಿಸಲಾಗುತ್ತದೆ.

Share This Article
Leave a Comment

Leave a Reply

Your email address will not be published. Required fields are marked *