Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಗಣೇಶ ಹಬ್ಬದಂದು ಚಂದ್ರನ ನೋಡಬಾರದು ಯಾಕೆ?
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | States | Karnataka | ಗಣೇಶ ಹಬ್ಬದಂದು ಚಂದ್ರನ ನೋಡಬಾರದು ಯಾಕೆ?

Karnataka

ಗಣೇಶ ಹಬ್ಬದಂದು ಚಂದ್ರನ ನೋಡಬಾರದು ಯಾಕೆ?

Public TV
Last updated: August 30, 2022 7:51 pm
Public TV
Share
3 Min Read
moon ganesha
SHARE

ಭಾರತೀಯ ಸಂಸ್ಕೃತಿಯಲ್ಲಿ ಹಬ್ಬಗಳಿಗೆ ತನ್ನದೇ ಆದ ಮಹತ್ವವಿದೆ. ಒಂದೊಂದು ಹಬ್ಬಗಳ ಹಿಂದೆಯೂ ಅದರದ್ದೇ ಆದ ಕಥೆಗಳಿವೆ. ಅಂತೆಯೇ ಗಣೇಶ ಹಬ್ಬಕ್ಕೂ ರೋಚಕ ಕಥೆಯಿದೆ. ಈ ದಿನದಂದು ಚಂದ್ರನನ್ನು ನೋಡಬಾರದೆಂಬ ನಂಬಿಕೆ ಇದೆ.

ಸಾಮಾನ್ಯವಾಗಿ ಚಂದ್ರನನ್ನು ಪ್ರತಿ ದಿನ ನಾವು ಗಮನಿಸುವುದಿಲ್ಲ. ಆದ್ರೆ ಭಾದ್ರಪದ ಶುಕ್ಲದ ಚೌತಿಯ ದಿನದಂದು ಮಾತ್ರ ನೋಡಬಾರದೆನಿಸಿದರೂ, ಆಕಸ್ಮಿಕವಾಗಿ ಚಂದ್ರನನ್ನು ನೋಡಿಯೇ ಬಿಡುತ್ತೇವೆ. ಅಂದು ಚಂದ್ರನನ್ನು ನೋಡಿದವರಿಗೆ ಅಪವಾದ ಬರುತ್ತದೆ. ಆದ್ರೆ ಕೃಷ್ಣ ಪಕ್ಷದ ಚೌತಿಯ ಚಂದ್ರನನ್ನು ನೋಡಿದರೆ ಆ ಅಪವಾದ ದೂರವಾಗುತ್ತದೆ ಎಂಬ ನಂಬಿಕೆ ಇಂದಿಗೂ ಕೆಲವೆಡೆ ಚಾಲ್ತಿಯಲ್ಲಿದೆ.

moon ganesha 1

ಚಂದ್ರನನ್ನು ಯಾಕೆ ನೋಡಬಾರದು?:
ಮೊದಲ ದಿನ ತಾಯಿ ಸ್ವರ್ಣಗೌರಿಯ ಹಬ್ಬ. ಮಾರನೆ ದಿನವೇ ಗಣೇಶನ ಹಬ್ಬ. ತಾಯಿಯನ್ನು ಮರಳಿ ಕರೆದುಕೊಂಡು ಹೋಗುವ ಕೆಲಸ ಗಣಪನದಾಗಿರುವುದರಿಂದ, ತಾಯಿ ಭೂಲೋಕಕ್ಕೆ ಬಂದ ಮಾರನೆ ದಿನವೇ ಅಜ್ಜಿ ಮನೆಗೆ ಬಂದು, ಅಜ್ಜಿ ಮನೆಯಲ್ಲಿ ಮಾಡಿದ ವಿವಿಧ ಭಕ್ಷ್ಯ ಭೋಜನಗಳನ್ನು ಭಕ್ಷಿಸಿ ತಾಯಿಯೊಂದಿಗೆ ಹಿಂದಿರುಗುತ್ತಾನೆ. ಗಣಪತಿ ತನ್ನ ವಾಹನವಾದ ಇಲಿಯ ಮೇಲೆ ಕುಳಿತುಕೊಂಡು ಚಂದ್ರಲೋಕಕ್ಕೆ ಬಂದನು. ಈ ವೇಳೆ ಚಂದ್ರನು ಗಣೇಶನನ್ನು ನೋಡುತ್ತಾನೆ. ಸರ್ವಾಂಗ ಸುಂದರನಾಗಿರುವ ಚಂದ್ರ, ಗಣಪತಿಯ ಆನೆ ಮುಖ, ಡೊಳ್ಳುಹೊಟ್ಟೆ ಮತ್ತು ವಾಹನ ಇಲಿಯನ್ನು ನೋಡಿ ಹಾಸ್ಯ ಮಾಡಿ ನಕ್ಕು ಬಿಡುತ್ತಾನೆ. ಇದನ್ನು ಕಂಡ ಗಣಪತಿಗೆ ಸಿಟ್ಟು ನೆತ್ತಿಗೇರುತ್ತೆ. ಇದನ್ನೂ ಓದಿ: ಗಣೇಶ ಚತುರ್ಥಿಗೆ ಸಂಬಂಧಿಸಿದ ಸುದ್ದಿ ಓದಲು ಕ್ಲಿಕ್ ಮಾಡಿ

ಅಲ್ಲದೇ `ಎಲೈ ಚಂದ್ರನೇ ನಿನಗೆ ನಿನ್ನ ಸೌಂದರ್ಯದ ಮದ ಹೆಚ್ಚಾಗಿದೆ. ಎಲ್ಲ ಲೋಕಗಳಲ್ಲೂ ಪೂಜಿಸುತ್ತಿರುವ ನನ್ನನ್ನು ನೀನು ಮಾತ್ರ ಹಾಸ್ಯ ಮಾಡಿ ನಗುತ್ತಿರುವೆಯಾ? ಮೂರ್ಖ.. ಇದೋ.. ನಿನ್ನ ಅಹಂಕಾರಕ್ಕೆ ತಕ್ಕ ಪ್ರತಿಫಲ ಅನುಭವಿಸು.. ನಿನ್ನ ಅಹಂಕಾರಕ್ಕೂ ಅಜ್ಞಾನಕ್ಕೂ ಕಾರಣವಾಗಿರುವ ನಿನ್ನ ಸೌಂದರ್ಯ ಕುಗ್ಗಿ ಹೋಗಲಿ. ಇನ್ನು ಮುಂದೆ ನನ್ನ ಹುಟ್ಟಿದ ದಿನವಾದ ಭಾದ್ರಪದ ಚೌತಿಯಂದು ನಿನ್ನನ್ನು ನೋಡುವವರು ಸುಳ್ಳು ಅಪವಾದಾಕ್ಕೆ ಗುರಿಯಾಗಲಿ’ ಅಂತ ಗಣಪತಿ ಚಂದ್ರನಿಗೆ ಶಾಪ ಹಾಕುತ್ತಾನೆ.

moon ganesha 2

ಗಣಪತಿಯ ಶಾಪದಿಂದ ಚಂದ್ರನ ಅಹಂಕಾರವೆಲ್ಲ ಕೆಲವೇ ಕ್ಷಣಗಳಲ್ಲಿ ಇಳಿದು ಹೋಯಿತು. ತನ್ನ ತಪ್ಪಿನ ಅರಿವಾಗಿ ಪಶ್ಚತ್ತಾಪ ಪಡುತ್ತಾ ಗಣಪತಿ ಮುಂದೆ ಕೈ ಮುಗಿದು ಕ್ಷಮೆ ಕೇಳುತ್ತಾನೆ. `ಸ್ವಾಮಿ ನನ್ನ ಅಜ್ಞಾನವನ್ನು ಮನ್ನಿಸು. ನನಗೆ ಕೊಟ್ಟ ಶಾಪವನನ್ನು ವಾಪಸ್ ತೆಗೆದುಕೊ’ ಅಂತ ಗಣಪತಿ ಮುಂದೆ ಚಂದ್ರ ಅಂಗಲಾಚಿಕೊಳ್ಳುತ್ತಾನೆ. ಇದನ್ನೂ ಓದಿ: ಗಣೇಶ ಮೋದಕ ಪ್ರಿಯ ಯಾಕೆ?

ಚಂದ್ರನ ಮೊರೆಗೆ ಗಣಪತಿ ಮನಸ್ಸು ಕರಗಿ ಶಾಂತನಾಗುತ್ತಾನೆ. ಹೀಗಾಗಿ ಚಂದ್ರನನ್ನು ಸಂತೈಸಿ `ನಿನಗೆ ನಿನ್ನ ತಪ್ಪಿನ ಅರಿವಾಗಿದೆ. ನಿನ್ನ ಅಹಂಕಾರ ಇಳಿಸುವುದೇ ನನಗೆ ಮುಖ್ಯವಾಗಿತ್ತು. ಆದ್ರೆ ಈವಾಗ ಏನ್ ಮಾಡಿದ್ರೂ ನನ್ನ ಶಾಪ ಯಾವತ್ತಿಗೂ ಸುಳ್ಳಾಗದು. ಆದ್ರೆ ಚೌತಿಯಂದು ನಿನ್ನನ್ನು ನೋಡಿ ಅಪವಾದಕ್ಕೆ ಗುರಿಯಾದವರು ಇತರ ತಿಂಗಳುಗಳ ಕೃಷ್ಣಪಕ್ಷದ ಚತುರ್ಥಿಯಂದು ನಿನ್ನನ್ನು ನೋಡಿದ ನಂತರವೇ ಎಲ್ಲರೂ ಊಟಮಾಡಲಿ. ಸಂಕಷ್ಟ ಚತುರ್ಥಿಯಂದು ನಿನ್ನ ದರ್ಶನವಾಗದೆ ಯಾರೂ ಭೋಜನವನ್ನು ಸ್ವೀಕರಿಸುವುದಿಲ್ಲ’ ಅಂತ ಗಣಪತಿ ಹೇಳುತ್ತಾನೆ. ಗಣಪತಿಯ ಮಾತು ಕೇಳಿ ಚಂದ್ರ ಸಂತಸ ವ್ಯಕ್ತಪಡುತ್ತಾನೆ.

ganesha 1 1 large

ಈ ಕಾರಣದಿಂದ ಚೌತಿಯಂದು ಚಂದ್ರನನ್ನು ನೋಡಬಾರದು ಅಂತ ಹಿರಿಯರು ಹೇಳುತ್ತಾರೆ. ಈ ನಂಬಿಕೆ ಇಂದಿಗೂ ಕೆಲವು ಕಡೆಗಳಲ್ಲಿ ಇದ್ದು, ರಾತ್ರಿಯಾಗುತ್ತಿದ್ದಂತೆಯೇ ಹೊರಗಡೆ ತೆರಳುವ ತಮ್ಮ ಮಕ್ಕಳಿಗೆ ಹಿರಿಯರು ತಪ್ಪಿಯೂ ಇಂದು ಆಕಾಶ ನೋಡಬೇಡ ಅಂತ ಹೇಳುತ್ತಾರೆ. ಒಟ್ಟಿನಲ್ಲಿ ದೇಶದಾದ್ಯಂತ ಗಣೇಶ ಹಬ್ಬವನ್ನು ಬಹಳ ವಿಜೃಂಭಣೆಯಿಂದ ಆಚರಿಸಲಾಗುತ್ತಿದ್ದು, ಬೆಳ್ಳಿ ಅಥವಾ ಮ‌ಣ್ಣಿನಿಂದ ಮಾಡಿದ ಗಣಪತಿಯ ಮೂರ್ತಿಯನ್ನು ವಿಧ್ಯುಕ್ತವಾಗಿ ಪೂಜಿಸಿ, ವೃತವೆಂದು ಆಚರಿಸಲಾಗುತ್ತದೆ. ಹಬ್ಬದ ದಿನ ಮೋದಕ, ಕಡುಬು ಮೊದಲಾದ ಸಿಹಿತಿಂಡಿ ಮಾಡಿ ಗಣಪತಿಗೆ ನೈವೇದ್ಯ ಮಾಡಲಾಗುತ್ತದೆ. ಅಲ್ಲದೇ ದೇಗುಲಗಳಲ್ಲಿ ವಿಶೇಷ ಪೂಜೆಗಳನ್ನು ಮಾಡಲಾಗುತ್ತದೆ.

Live Tv
[brid partner=56869869 player=32851 video=960834 autoplay=true]

TAGGED:bengalurucurseganesh chaturthimoonPublic TVಗಣೇಶಗಣೇಶ ಚತುರ್ಥಿಗಣೇಶ ಹಬ್ಬಚಂದ್ರಪಬ್ಲಿಕ್ ಟಿವಿಬೆಂಗಳೂರುಶಾಪ
Share This Article
Facebook Whatsapp Whatsapp Telegram

Cinema news

Harshil Kalia jaipur accident
ಡಿವೈಡರ್‌ಗೆ ಕಾರು ಡಿಕ್ಕಿ – ಭೀಕರ ಅಪಘಾತದಲ್ಲಿ ನಟಿ ಸಾವು
Cinema Latest Main Post National
Ranveer Singh Rishab Shetty Kantara
ʻಕಾಂತಾರʼ ದೈವ ನಿಂದಿಸಿದ್ದ ರಣವೀರ್‌ಗೆ ಪಾಪಪ್ರಜ್ಞೆ – ಚಾಮುಂಡಿ ದೇಗುಲದಲ್ಲೇ ಕ್ಷಮೆ ಕೇಳಲು ನಿರ್ಧಾರ
Cinema Districts Karnataka Latest National Sandalwood South cinema Top Stories
Badshah Isha Rikhi Marriage
ಡಿವೋರ್ಸ್ ಪಡೆದು 6 ವರ್ಷಗಳ ಬಳಿಕ ರ‍್ಯಾಪರ್ ಬಾದ್‌ಶಾ ಎರಡನೇ ಮದುವೆ
Cinema Latest Top Stories
Dhurandhar 2 1
ಗಲ್ಲಾಪೆಟ್ಟಿಗೆಯಲ್ಲಿ ಸದ್ದು ಮಾಡ್ತಿದೆ ‘ಧುರಂಧರ್‌ 2’; 800 ಕೋಟಿ ಕ್ಲಬ್‌ ಸೇರುವತ್ತ ಓಟ
Bollywood Cinema Latest Top Stories

You Might Also Like

all party meeting
Latest

ಪಾಕ್‌ನಂತೆ ದಲ್ಲಾಳಿ ಕೆಲಸ ಮಾಡುವ ದೇಶ ನಮ್ಮದಲ್ಲ – ವಿಪಕ್ಷಗಳಿಗೆ ಜೈಶಂಕ‌ರ್ ತಿರುಗೇಟು

Public TV
By Public TV
6 hours ago
big bulletin 25 March 2026 part 1
Big Bulletin

ಬಿಗ್‌ ಬುಲೆಟಿನ್‌ 25 March 2026 ಭಾಗ-1

Public TV
By Public TV
6 hours ago
big bulletin 25 March 2026 part 2
Big Bulletin

ಬಿಗ್‌ ಬುಲೆಟಿನ್‌ 25 March 2026 ಭಾಗ-2

Public TV
By Public TV
7 hours ago
big bulletin 25 March 2026 part 3
Big Bulletin

ಬಿಗ್‌ ಬುಲೆಟಿನ್‌ 25 March 2026 ಭಾಗ-3

Public TV
By Public TV
7 hours ago
Money Zeize
Davanagere

ಉಪ ಚುನಾವಣೆ ಹೊತ್ತಿನಲ್ಲೇ ದಾಖಲೆಗಳಿಲ್ಲದೇ ಸಾಗಿಸ್ತಿದ್ದ 6.17 ಲಕ್ಷ ರೂ. ಜಪ್ತಿ

Public TV
By Public TV
7 hours ago
Ashwini Vaishnaw HD Kumaraswamy
Districts

ರಾಮನಗರದಲ್ಲಿ ಒಡೆಯರ್ ಎಕ್ಸ್‌ಪ್ರೆಸ್‌ ರೈಲು ನಿಲುಗಡೆಗೆ ಕೇಂದ್ರ ಅಸ್ತು

Public TV
By Public TV
7 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?