ರಾಮ ಮಂದಿರ ನಿರ್ಮಾಣ ಕುರಿತು ಬಿಜೆಪಿ ಸುಗ್ರೀವಾಜ್ಞೆ ಹೊರಡಿಸಲಿ – ಓವೈಸಿ ಸವಾಲು

Public TV
1 Min Read
Asaduddin Owaisi

ನವದೆಹಲಿ: ರಾಮಮಂದಿರ ನಿರ್ಮಾಣದ ಕುರಿತು ಕೇಂದ್ರದಲ್ಲಿರುವ ಬಿಜೆಪಿ ನೇತೃತ್ವದ ಸರ್ಕಾರ ಯಾಕೆ ಸುಗ್ರೀವಾಜ್ಞೆ ಹೊರಡಿಸಬಾರದು ಎಂದು ಆಲ್ ಇಂಡಿಯನ್ ಮಜ್ಲಿಸೆ ಇತ್ತೆಹದುಲ್ ಮುಸ್ಲಿಂ (ಎಐಎಂಐಎಂ) ಪಕ್ಷದ ಅಧ್ಯಕ್ಷ ಅಸಾದುದ್ದೀನ್ ಓವೈಸಿ ಪ್ರಶ್ನಿಸಿದ್ದಾರೆ.

ಆಯೋಧ್ಯೆ ಕುರಿತು ಸುಪ್ರೀಂ ಕೋರ್ಟ್‍ಗೆ ಸಲ್ಲಿಸಲಾಗಿದ್ದ ಅರ್ಜಿಗಳ ವಿಚಾರಣೆಯನ್ನು ಜನವರಿಗೆ ಮುಂದೂಡಿದ ಆದೇಶದ ಬಳಿಕ ಓವೈಸಿ ಮಾಧ್ಯಮವೊಂದಕ್ಕೆ ಪ್ರತಿಕ್ರಿಯಿಸಿ, ಪ್ರತಿ ಬಾರಿಯೂ ಕೇಂದ್ರ ಸರ್ಕಾರ ಸುಗ್ರೀವಾಜ್ಞೆ ಹೆಸರು ಹೇಳುವ ಮೂಲಕ ಹೆದರಿಸುವ ಕಾರ್ಯ ಮಾಡುತ್ತಿದೆ ಎಂದು ದೂಷಿಸಿದರು.

ಬಿಜೆಪಿ, ಆರ್‍ಎಸ್‍ಎಸ್ ಮತ್ತು ವಿಶ್ವ ಹಿಂದೂ ಪರಿಷತ್ ಗಳನ್ನು ಕಾರ್ಟೂನ್ ಪಾತ್ರಗಳಾದ ಟಾಮ್, ಡಿಕ್ ಮತ್ತು ಹ್ಯಾರಿಗೆ ಹೋಲಿಕೆ ಮಾಡಿರುವ ಓವೈಸಿ, ಸದ್ಯ ನೀವು ಅಧಿಕಾರದಲ್ಲಿದ್ದು, ಆಯೋಧ್ಯೆ ರಾಮ ಮಂದಿರ ನಿರ್ಮಾಣ ಕುರಿತು ಸುಗ್ರೀವಾಜ್ಞೆ ಹೊರಡಿಸಿ ಎಂದು ಸವಾಲು ಎಸೆದರು.

ಪ್ರತಿ 5 ವರ್ಷಕ್ಕೆ ಒಮ್ಮೆ ರಾಮಮಂದಿರ ಕುರಿತ ಈ ಪ್ರಕ್ರಿಯೆ ಸಾಮಾನ್ಯವಾಗಿದೆ. ಬಿಜೆಪಿ ರಾಮಮಂದಿರ ನಿರ್ಮಾಣ ಕುರಿತು ಇರುವ ಜನರ ಭಾವನೆಗಳನ್ನು ಕೇಂದ್ರಿಕರಿಸಲು ಪ್ರಯತ್ನಿಸುತ್ತಿದೆ. ಆದರೆ ರಾಮಮಂದಿರ ವಿವಾದ ಸುಪ್ರೀಂ ಕೋರ್ಟ್ ಮೆಟ್ಟಿಲೇರುವ ಮುನ್ನವೇ ಕಾಂಗ್ರೆಸ್ ಪಕ್ಷ ವಿವಾದದ ಕುರಿತು ಸ್ಪಷ್ಟ ನಿರ್ಣಯ ಕೈಗೊಂಡಿತ್ತು. ಸದ್ಯ ಎಲ್ಲರೂ ಸುಪ್ರೀಂ ಕೋರ್ಟ್ ತೀರ್ಪಿಗೆ ಕಾಯಬೇಕಿದೆ ಎಂದು ಕಾಂಗ್ರೆಸ್ ಮಾಜಿ ಸಚಿವ ಪಿ ಚಿದಂಬರಂ ಹೇಳಿದ್ದಾರೆ.

ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

Share This Article
Leave a Comment

Leave a Reply

Your email address will not be published. Required fields are marked *