Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Latest

ಗುತ್ತಿಗೆ ಪಡೆಯಲು ಭಾರತದಲ್ಲಿ 2,200 ಕೋಟಿ ಲಂಚ – ಅದಾನಿ ವಿರುದ್ಧ ಅಮೆರಿಕ ಕೋರ್ಟ್‌ ಅರೆಸ್ಟ್‌ ವಾರೆಂಟ್‌

Public TV
Last updated: November 21, 2024 12:54 pm
Public TV
Share
3 Min Read
Gautham Adani
SHARE

– 5 ರಾಜ್ಯಗಳಲ್ಲಿ ಗುತ್ತಿಗೆಗಾಗಿ ಅಧಿಕಾರಿಗಳಿಗೆ ಲಂಚ
– ಅಮೆರಿಕದಲ್ಲಿ ಹೂಡಿಕೆ ಸಂಗ್ರಹದಿಂದ ಹಿಂದೆ ಸರದಿ ಅದಾನಿ ಗ್ರೀನ್‌

ವಾಷಿಂಗ್ಟನ್‌: ಕಳೆದ ವರ್ಷ ಭಾರತದಲ್ಲಿ 20,000 ಕೋಟಿ ರೂ. ಮೌಲ್ಯದ ಎಫ್‌ಪಿಒಗೆ (ಮುಂದುವರಿದ ಸಾರ್ವಜನಿಕ ಕೊಡುಗೆ ಅಥವಾ ಹೊಸದಾಗಿ ಷೇರುಗಳನ್ನು ಮಾರುಕಟ್ಟೆ ಬಿಡುಗಡೆ) ಅದಾನಿ ಎಂಟರ್‌ಪ್ರೈಸಸ್‌ ಚಾಲನೆ ನೀಡುವ ಸಂದರ್ಭದಲ್ಲಿ ಹಿಂಡೆನ್‌ಬರ್ಗ್‌ ಸಂಶೋಧನಾ (Hindenburg Research) ವರದಿ ಪ್ರಕಟಗೊಂಡು ಶಾಕ್‌ ನೀಡಿತ್ತು. ಈಗ ಅಮೆರಿಕದಲ್ಲಿ ಅದಾನಿ ಗ್ರೀನ್‌ ಎನರ್ಜಿಗಾಗಿ (Adani Green Energy) 6,000 ಮಿಲಿಯನ್‌ ಅಮೆರಿಕನ್‌ ಡಾಲರ್‌ ಬಾಂಡ್‌ ಬಿಡುಗಡೆ ಮಾಡಿ ಹೂಡಿಕೆ ಸಂಗ್ರಹಿಸಲು ಮುಂದಾಗಿದ್ದ ಗೌತಮ್‌ ಅದಾನಿ ಅವರಿಗೆ ಅಮೆರಿಕ ನ್ಯಾಯಾಂಗ ಇಲಾಖೆ ಶಾಕ್‌ ನೀಡಿದೆ.

ಗೌತಮ್‌ ಅದಾನಿ (Gautam Adani) ಮತ್ತು ಅವರ ಸೋದರಳಿಯ ಸಾಗರ್ ಅದಾನಿ ಸೇರಿದಂತೆ ಇತರ ಏಳು ಅಧಿಕಾರಿಗಳು ಸೌರ ಶಕ್ತಿಯ ಒಪ್ಪಂದಗಳನ್ನು ಪಡೆಯಲು ಭಾರತೀಯ ಸರ್ಕಾರಿ ಅಧಿಕಾರಿಗಳಿಗೆ 265 ಮಿಲಿಯನ್ ಡಾಲರ್‌ಗೂ (ಅಂದಾಜು 2238 ಕೋಟಿ ರೂ.) ಹೆಚ್ಚು ಲಂಚದ (Bribe) ಭರವಸೆ ನೀಡಿದ್ದಾರೆ ಎಂದು ಆರೋಪಿಸಿದೆ.

ನ್ಯೂಯಾರ್ಕ್‌ ಕೋರ್ಟ್‌ ಗೌತಮ್ ಅದಾನಿ ಮತ್ತು ಸಾಗರ್ ಅದಾನಿಗೆ ಬಂಧನ ವಾರೆಂಟ್‌ ಹೊರಡಿಸಿದೆ. ಆ ವಾರೆಟ್‌ಗಳನ್ನು ವಿದೇಶಿ ಕಾನೂನು ಜಾರಿ ಸಂಸ್ಥೆಗಳಿಗೆ ಹಸ್ತಾಂತರಿಸಲು ಪ್ರಾಸಿಕ್ಯೂಟರ್‌ಗಳು ಯೋಜಿಸಿದ್ದಾರೆ ಎಂದು ವರದಿಯಾಗಿದೆ.

ಗೌತಮ್ ಅದಾನಿ, ಸೈರಿಲ್ ಕೆಬನೆಸ್,  ಸಾಗರ್ ಅದಾನಿ, ವಿನೀತ್ ಜೈನ್, ರಂಜಿತ್ ಗುಪ್ತ, ಸೌರಭ್ ಅಗರ್ವಾಲ್, ದೀಪಕ್ ಮಲ್ಹೋತ್ರಾ, ರೂಪೇಶ್ ಅಗರ್ವಾಲ್ ಅವರ ವಿರುದ್ಧ  ವಂಚನೆ ಪಿತೂರಿ  ಆರೋಪ ಮಾಡಲಾಗಿದೆ. ಇದನ್ನೂ ಓದಿ: PUBLiC TV Impact| ಸರ್ಕಾರಕ್ಕೆ ರೇಷನ್ ಕಾರ್ಡ್ ಪರಿಷ್ಕರಣೆ ವರದಿ ಸಲ್ಲಿಕೆ: ರದ್ದಿಗೆ ಮಾನದಂಡ ಏನು?

ಮಹತ್ವದ ಬೆಳವಣಿಗೆಯ ಬೆನ್ನಲ್ಲೇ 6,000 ಮಿಲಿಯನ್‌ ಅಮೆರಿಕನ್‌ ಡಾಲರ್‌ ಬಾಂಡ್‌ ಬಿಡುಗಡೆ ಮಾಡಿ ಹೂಡಿಕೆ ಆಕರ್ಷಿಸಲು ಮುಂದಾಗಿದ್ದ ಅದಾನಿ ಗ್ರೀನ್ ಎನರ್ಜಿ ಕಂಪನಿಯು ತನ್ನ ನಿರ್ಧಾರದಿಂದ ಹಿಂದೆ ಸರಿಯುದಾಗಿ ತಿಳಿಸಿದೆ.

adani green energy

ಆರೋಪ ಏನು?
ಅಧಿಕಾರಿಗಳಿಗೆ ಲಂಚ ನೀಡಿ ಹೂಡಿಕೆದಾರರನ್ನು ವಂಚಿಸಿದ್ದಾರೆ. ಸುಳ್ಳು ಮತ್ತು ತಪ್ಪುದಾರಿಗೆಳೆಯುವ ಹೇಳಿಕೆಗಳ ಮೂಲಕ ಯುಎಸ್ ಹೂಡಿಕೆದಾರರು ಮತ್ತು ಜಾಗತಿಕ ಹಣಕಾಸು ಸಂಸ್ಥೆಗಳಿಂದ ಹಣವನ್ನು ಪಡೆದುಕೊಳ್ಳಲು ಬಹು ಶತಕೋಟಿ ಡಾಲರ್ ಯೋಜನೆಯಲ್ಲಿ ಅವರು ತೊಡಗಿಸಿಕೊಂಡಿದ್ದಾರೆ.

ಅದಾನಿ ಗ್ರೀನ್ ಎನರ್ಜಿ ಮತ್ತು ಅಜುರೆ ಪವರ್ ಸಂಸ್ಥೆಗಳು ಭಾರತದಲ್ಲಿ ಮಾರುಕಟ್ಟೆ ಬೆಲೆಗಿಂತ ಹೆಚ್ಚಿನ ದರದಲ್ಲಿ ಸೌರಶಕ್ತಿ ಗುತ್ತಿಗೆಗಳನ್ನು ಪಡೆಯಲು ಭಾರತೀಯ ಅಧಿಕಾರಿಗಳಿಗೆ 265 ಮಿಲಿಯನ್ ಡಾಲರ್​ಗೂ ಅಧಿಕ ಮೊತ್ತದಷ್ಟು ಲಂಚ ನೀಡಿದೆ. ಮುಂದಿನ ಎರಡು ದಶಕಗಳಲ್ಲಿ 2 ಶತಕೋಟಿ ಲಾಭವನ್ನು ಗಳಿಸಲು ಲಂಚ ನೀಡಲಾಗಿದೆ.

ಅದಾನಿ ಗ್ರೀನ್ ಎನರ್ಜಿಗಾಗಿ 3 ಶತಕೋಟಿ ಡಾಲರ್‌ ಸಾಲ ಮತ್ತು ಬಾಂಡ್‌ಗಳನ್ನು ಪಡೆಯಲು ಅದಾನಿ ಮತ್ತು ಅವರ ಸೋದರಳಿಯ ಸಾಗರ್ ಅದಾನಿ ಮತ್ತು ಕಾರ್ಯನಿರ್ವಾಹಕ ವಿನೀತ್ ಜೈನ್ ಹೂಡಿಕೆದಾರರರಿಗೆ ಹಲವಾರು ವಿಷಯಗಳನ್ನು ಮರೆಮಾಡಿ ವಂಚಿಸಿದ್ದಾರೆ.

ಸೌರಶಕ್ತಿ ಯೋಜನೆಗಾಗಿ 2021ರ ಜುಲೈ ಮತ್ತು 2022ರ ಫೆಬ್ರವರಿ ಸಮಯದಲ್ಲಿ ಆಂಧ್ರಪ್ರದೇಶದಲ್ಲಿ ಅಧಿಕಾರಿಗಳಿಗೆ 1,750 ಕೋಟಿ ರೂ. (228 ಮಿಲಿಯನ್ ಡಾಲರ್‌) ನೀಡಿದೆ. ಛತ್ತೀಸ್‌ಗಢ, ಒಡಿಶಾ, ತಮಿಳುನಾಡು ಮತ್ತು ಜಮ್ಮು ಮತ್ತು ಕಾಶ್ಮೀರದ ರಾಜ್ಯ ವಿದ್ಯುತ್ ಕಂಪನಿಗಳಿಗೆ ಲಂಚವನ್ನು ನೀಡಿದೆ ಎಂದು ಆರೋಪಿಸಿದೆ. ಈ ಆರೋಪಗಳು ವಿದೇಶಿ ಭ್ರಷ್ಟಚಾರ ಕಾಯ್ದೆಯ ಅಡಿಯಲ್ಲಿ ಬರುತ್ತದೆ ಎಂದು ಹೇಳಿದೆ.

adani power

ಆರೋಪ ಪಟ್ಟಿಯಲ್ಲಿರುವ ಆರೋಪಗಳು ಸಾಬೀತಾಗುವವರೆಗೂ ಅವರನ್ನು ನಿರ್ದೋಷಿಗಳೆಂದು ಪರಿಗಣಿಸಲಾಗುವುದು ಎಂದು ನ್ಯಾಯಾಲಯ ಹೇಳಿರುವುದಾಗಿ ಅಮೆರಿಕದ ಅಟಾರ್ನಿ ಕಚೇರಿ ತಿಳಿಸಿದೆ.

ಅದಾನಿಯಿಂದ ಎಫ್‌ಪಿಒ ರದ್ದು:
20,000 ಕೋಟಿ ರೂ. ಮೌಲ್ಯದ ಎಫ್‌ಪಿಒಗೆ (ಮುಂದುವರಿದ ಸಾರ್ವಜನಿಕ ಕೊಡುಗೆ ಅಥವಾ ಹೊಸದಾಗಿ ಷೇರುಗಳನ್ನು ಮಾರುಕಟ್ಟೆ ಬಿಡುಗಡೆ) ಅದಾನಿ ಕಂಪನಿ 2023ರ ಜನವರಿಯಲ್ಲಿ ಚಾಲನೆ ನೀಡಿತ್ತು. ಪ್ರತಿ ಷೇರಿಗೆ 3,112ರಿಂದ 3,276 ರೂ. ಆಫರ್‌ ಮಾಡಲಾಗಿತ್ತು. ಈ ಸಂದರ್ಭದಲ್ಲಿ ಹಿಂಡೆನ್‌ಬರ್ಗ್‌ ಅದಾನಿ ಕಂಪನಿ ವಿರುದ್ಧ ಸಂಶೋಧನಾ ವರದಿ ಬಿಡುಗಡೆ ಮಾಡಿತ್ತು. ವರದಿ ಬಳಿಕ ಅದಾನಿ ಕಂಪನಿಯ ಷೇರಿನ ಮೌಲ್ಯ ಕುಸಿತ ಕಂಡಿದ್ದರೂ ಎಫ್‌ಪಿಒ ಬಿಡ್‌ ಖರೀದಿ ಪ್ರಕ್ರಿಯೆ ಪೂರ್ಣಗೊಂಡಿತ್ತು.

ಷೇರುಗಳ ಮೌಲ್ಯ ಭಾರೀ ಪ್ರಮಾಣದಲ್ಲಿ ಕುಸಿತ ಕಂಡ ನಂತರ 20 ಸಾವಿರ ಕೋಟಿ ಬಂಡವಾಳ ಸಂಗ್ರಹಿಸಲು ಮುಂದಾಗಿದ್ದ ಎಫ್‌ಪಿಒ ಪ್ರಕ್ರಿಯೆಯನ್ನೇ ಅದಾನಿ ಸಮೂಹ ರದ್ದು ಮಾಡಿತ್ತು. ನಮ್ಮ ಷೇರು (Share) ಮೌಲ್ಯ ಕುಸಿದಿದೆ. ಈ ಸಂದರ್ಭದಲ್ಲಿ ಎಫ್‌ಪಿಒನೊಂದಿಗೆ ಮುಂದುವರಿಯುವುದು ನೈತಿಕವಾಗಿ ಸರಿಯಲ್ಲ ಎಂದು ಹೇಳಿ ಹೂಡಿಕೆದಾರರ ಹಣವನ್ನು ಮರಳಿಸಲಾಗುವುದು ಎಂದು ಗೌತಮ್‌ ಅದಾನಿ ತಿಳಿಸಿದ್ದರು.

 

TAGGED:Adani GreenGautam AdaniHindenburg ResearchUSAಅಮೆರಿಕಗೌತಮ್ ಅದಾನಿಭ್ರಷ್ಟಾಚಾರಹಿಂಡನ್‌ಬರ್ಗ್‌
Share This Article
Facebook Whatsapp Whatsapp Telegram

Cinema Updates

pawan kalyan sharmista panoli
ಪುಣೆ ಕಾನೂನು ವಿದ್ಯಾರ್ಥಿನಿ ಪರ ನಿಂತ ಪವನ್‌ ಕಲ್ಯಾಣ್‌ – ದೀದಿ ಹೇಳಿಕೆಗೆ ಖಂಡನೆ
4 hours ago
Mukhyamantri Chandru
ಶಿವಣ್ಣನ ರೀತಿಯಲ್ಲಿ ಇನ್ಯಾರು ಕಮಲ್‌ ಪರವಾಗಿದ್ದಾರೋ ಅವರೆಲ್ಲ ನಾಡದ್ರೋಹಿಗಳು: ಮುಖ್ಯಮಂತ್ರಿ ಚಂದ್ರು
4 hours ago
Kamal Haasan Sudha rani
ಕರ್ನಾಟಕ, ಕನ್ನಡ ಭಾಷೆ ಬಗ್ಗೆ ಯಾರೇ ತಪ್ಪಾಗಿ ಮಾತಾಡಿದ್ರೂ ಒಪ್ಪಲ್ಲ: ಸುಧಾರಾಣಿ
5 hours ago
Rachita Ram
ಫೈನಲ್‌ಗೆ ಲಗ್ಗೆಯಿಟ್ಟ ಆರ್‌ಸಿಬಿ – `ಈ ಸಲ ಕಪ್‌ ನಮ್ದೇʼ ಎಂದ ಡಿಂಪಲ್ ಕ್ವೀನ್
7 hours ago

You Might Also Like

Dinesh Gundu Rao 2
Dakshina Kannada

ದಕ್ಷಿಣ ಕನ್ನಡ ಜಿಲ್ಲೆಯ ಉಸ್ತುವಾರಿ ಬೇಡ ಎಂದಿಲ್ಲ: ದಿನೇಶ್ ಗುಂಡೂರಾವ್

Public TV
By Public TV
7 minutes ago
MI vs PBKS rain
Cricket

ಪಂಜಾಬ್‌ vs ಮುಂಬೈ ಕ್ವಾಲಿಫೈಯರ್ 2 ಪಂದ್ಯಕ್ಕೆ ಮಳೆ ಅಡ್ಡಿ – ಮ್ಯಾಚ್‌ ರದ್ದಾದ್ರೆ ಯಾರಿಗೆ ನಷ್ಟ?

Public TV
By Public TV
12 minutes ago
V Somanna
Bidar

ಡಿಕೆಶಿ ಪಾದಕ್ಕೆ ಕೋಟಿ ನಮಸ್ಕಾರ ಮಾಡ್ತೀನಿ, ಹೇಮಾವತಿ ಕೈ ಬಿಡಿ: ವಿ.ಸೋಮಣ್ಣ

Public TV
By Public TV
35 minutes ago
Ukrainian Drones Strike Airbase In Russia At Least 40 Aircraft Hit
Latest

ರಷ್ಯಾದ ವಾಯುನೆಲೆಗಳ ಮೇಲೆ ಉಕ್ರೇನ್‌ ಡ್ರೋನ್‌ ದಾಳಿ – 40 ವಿಮಾನಗಳು ಧ್ವಂಸ

Public TV
By Public TV
36 minutes ago
health department
Bengaluru City

ಸರ್ಕಾರಿ ಆಸ್ಪತ್ರೆಗಳಲ್ಲಿ ಅವ್ಯವಸ್ಥೆ, ಚಿಕಿತ್ಸೆ ಕೊರತೆ ಇದ್ರೆ ದೂರು ಕೊಡಿ – ಆರೋಗ್ಯ ಇಲಾಖೆಯಿಂದ ವಾಟ್ಸಪ್‌ ನಂಬರ್‌ ರಿಲೀಸ್‌

Public TV
By Public TV
44 minutes ago
rinku singh priya saroj
Cricket

ಸಂಸದೆ ಜೊತೆ ಎಂಗೇಜ್‌ಮೆಂಟ್‌ ಆಗ್ತಿದ್ದಾರೆ ರಿಂಕು ಸಿಂಗ್‌ – ಕ್ರಿಕೆಟಿಗನ ಕೈ ಹಿಡಿಯೋ ಚೆಲುವೆ ಯಾರು?

Public TV
By Public TV
58 minutes ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?