Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ರಾತ್ರಿ 11 ಗಂಟೆಗೆ ನಿರ್ಧಾರ – ತಡವಾಗಿದ್ದಕ್ಕೆ ಕಾರಣ ತಿಳಿಸಿದ ಮಾಧುಸ್ವಾಮಿ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | States | Karnataka | ರಾತ್ರಿ 11 ಗಂಟೆಗೆ ನಿರ್ಧಾರ – ತಡವಾಗಿದ್ದಕ್ಕೆ ಕಾರಣ ತಿಳಿಸಿದ ಮಾಧುಸ್ವಾಮಿ

Karnataka

ರಾತ್ರಿ 11 ಗಂಟೆಗೆ ನಿರ್ಧಾರ – ತಡವಾಗಿದ್ದಕ್ಕೆ ಕಾರಣ ತಿಳಿಸಿದ ಮಾಧುಸ್ವಾಮಿ

Public TV
Last updated: July 26, 2019 12:40 pm
Public TV
Share
2 Min Read
MADHUSWAMY
SHARE

ನವದೆಹಲಿ: ಯಡಿಯೂರಪ್ಪನವರು ಅಧಿಕಾರದ ಚುಕ್ಕಾಣಿ ಹಿಡಿಯಬೇಕೆಂಬುದು ತುಂಬಾ ದಿನಗಳ ಬಯಕೆಯಾಗಿತ್ತು ಅದೀಗ ಈಡೇರಿದೆ. ರಾಜ್ಯಕ್ಕೆ ಏನೇನು ಒಳ್ಳೆಯ ಕೆಲಸಗಳಾಗಬೇಕೋ ಅದೆಲ್ಲವನ್ನು ಯಡಿಯೂರಪ್ಪನವರು ಮಾಡುತ್ತಾರೆ ಎಂದು ಮಾಧುಸ್ವಾಮಿ ಅಭಿಪ್ರಾಯ ಪಟ್ಟಿದ್ದಾರೆ.

ದೆಹಲಿಯಲ್ಲಿ ಪಬ್ಲಿಕ್ ಟಿವಿ ಜೊತೆ ಮಾತನಾಡಿದ ಅವರು, ಮೈತ್ರಿ ಸರ್ಕಾರ ಅಸ್ತಿತ್ವದ ನಂತರ ತುಂಬಾ ಸಂಕಟವಾಗಿತ್ತು. ಯಡಿಯೂರಪ್ಪನವರಿಗೂ ಸಹ ತುಂಬಾ ದಿನಗಳಿಂದ ಒಂದು ರೀತಿಯ ಬೇಸರ ಕಾಡುತ್ತಿತ್ತು. ಇದೀಗ ಮರಳಿ ಅಧಿಕಾರಕ್ಕೇರುತ್ತಿರುವುದು ಹಾಗೂ ಯಡಿಯೂರಪ್ಪನವರನ್ನು ಮುಖ್ಯಮಂತ್ರಿಯಾಗುತ್ತಿರುವುದು ತುಂಬಾ ಸಂತಸ ತಂದಿದೆ. ರಾಜ್ಯಕ್ಕೆ ಏನೇನು ಒಳ್ಳೆಯ ಕೆಲಸ ಮಾಡಬೇಕೋ ಅದನ್ನು ಅವರು ಮಾಡುತ್ತಾರೆ ಎಂದು ಅಭಿಪ್ರಾಯಪಟ್ಟರು.

yeddy aa

ವಿಧಾನಸಭೆ ಚುನಾವಣೆಯಲ್ಲಿ ಮತದಾರರು 105 ಜೊತೆಗೆ ಇನ್ನು 5-6 ಸ್ಥಾನ ನೀಡಿದ್ದರೆ ಈ ಪರಿಸ್ಥಿತಿ ಬರುತ್ತಿರಲಿಲ್ಲ. ಕೆಲವೇ ಸ್ಥಾನ ಕಡಿಮೆ ಬಂದಿದ್ದರಿಂದ ದೊಡ್ಡ ಪಾರ್ಟಿಯಾಗಿದ್ದರೂ ಅಧಿಕಾರದಿಂದ ದೂರ ಉಳಿಯಬೇಕಾಯಿತು. ಹೀಗಾಗಿ ಮೈತ್ರಿ ಸರ್ಕಾರ ಅಧಿಕಾರಕ್ಕೆ ಬಂತು. ನಂತರ ಅವರ ಕಚ್ಚಾಟ ಶುರುವಾಯಿತು. ಆಗಲೇ ಇವರು ತುಂಬಾ ದಿನ ಉಳಿಯುವುದಿಲ್ಲ ಎಂದು ನಾವು ಅಂದುಕೊಂಡಿದ್ದೆವು. ನಂತರ ನಡೆದ ಲೋಕಸಭಾ ಚುನಾವಣೆ ವೇಳೆ ಮತದಾರರು ಜಾಗೃತಿಯಿಂದ ಮತ ಹಾಕಿದರು ಎಂದು ತಿಳಿಸಿದರು.

ವಿಧಾನಸಭೆಯಲ್ಲಾದ ತಪ್ಪು ಲೋಕಸಭೆಯಲ್ಲಾಗಬಾರದು ಎಂದು ಉತ್ತಮ ತೀರ್ಪು ನೀಡಿದರು. ಹೆಚ್ಚು ಸ್ಥಾನಗಳಲ್ಲಿ ಬಿಜೆಪಿ ಗೆಲ್ಲಿಸಿ ಕೊಟ್ಟರು. ಇದರಿಂದ ಜನರ ಅಭಿಪ್ರಾಯವೇನು ಎಂಬುದು ಸ್ಪಷ್ಟವಾಗುತ್ತದೆ. ಇಡೀ ರಾಜ್ಯದ ಜನತೆ ಇದೀಗ ನಮ್ಮ ಜೊತೆಗಿದ್ದಾರೆ. ಮೈತ್ರಿ ಸರ್ಕಾರದ ಶಾಸಕರಿಗೂ ಅಲ್ಲಿನ ದುರಾಡಳಿತ ನೋಡಿ ಬೇಸರವಾಯಿತು. ಶಾಸಕರು ನಿರೀಕ್ಷಿಸಿದ ಕೆಲಸ ಆಗುತ್ತಿಲ್ಲ. ಕೆಲವೇ ಜನರ ಕೆಲಸವಾಗುತ್ತದೆ. ಒಂದೇ ಕುಟುಂಬದ ಮಾತನ್ನು ಎಲ್ಲರೂ ಕೇಳುವ ಪರಿಸ್ಥಿತಿ ಇದೆ ಎಂದು ಅವರಲ್ಲೇ ಭಿನ್ನಾಭಿಪ್ರಾಯ ಮೂಡಿ ಹೊರ ನಡೆದರು. ಇದೇ ಸಂದರ್ಭವನ್ನು ನಾವು ಸದ್ಬಳಕೆ ಮಾಡಿಕೊಂಡಿದ್ದೇವೆ ಎಂದು ಹೇಳಿ ಸರ್ಕಾರ ರಚನೆಗೆ ಮುಂದಾಗಿದನ್ನು ಸಮರ್ಥಿಸಿಕೊಂಡರು.

Rebel MLAs C 1

ನಮ್ಮ ಪಕ್ಷದಲ್ಲಿ ಹೈ ಕಮಾಂಡ್ ಅವರೇ ಅಂತಿಮ ನಿರ್ಧಾರ ಮಾಡಬೇಕು. ಹೀಗಾಗಿ ನಾವು ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿದ್ದೆವು. ಈ ವೇಳೆ ಅವರು ರಾಷ್ಟ್ರೀಯ ನಾಯಕರೊಂದಿಗೆ ಚರ್ಚಿಸಿ ತೀರ್ಮಾನ ಕೈಗೊಳ್ಳುವುದಾಗಿ ತಿಳಿಸಿದರು. ಅವರು ಸಂಸತ್‍ನಲ್ಲಿ ಕಾರ್ಯನಿರತರಾಗಿದ್ದರಿಂದ ರಾತ್ರಿ ವೇಳೆ ಸಭೆ ನಡೆಸಿ ಚರ್ಚಿಸಿ, ರಾತ್ರಿ 11ಕ್ಕೆ ನಿರ್ಧಾರ ಕೈಗೊಂಡಿದ್ದಾರೆ. ಹೀಗಾಗಿ ಸರ್ಕಾರ ರಚನೆಗೆ ತಡವಾಗಿ ಸಂದೇಶ ನೀಡಿದ್ದಾರೆ ಎಂದು ತಿಳಿಸಿದರು.

ನಮ್ಮದು 105 ಇದ್ದರೂ ಇಬ್ಬರು ಪಕ್ಷೇತರರು ಬೆಂಬಲ ನೀಡಿದ್ದಾರೆ. ಅಲ್ಲದೆ, ಬಿಎಸ್‍ಪಿಯ ಮಹೇಶ್ ಅವರನ್ನು ಉಚ್ಛಾಟನೆ ಮಾಡಿದ್ದಾರೆ. ಬಿಎಸ್‍ಪಿ ಹೈ ಕಮಾಂಡ್ ಮಹೇಶ್ ಅವರಿಗೆ ಮೈತ್ರಿ ಸರ್ಕಾರಕ್ಕೆ ಮತ ಹಾಕಿ ಎಂದರೂ ಸಹ ಹೋಗಿಲ್ಲದ್ದನ್ನು ಕಂಡರೆ ಅವರು ನಮ್ಮ ಪರವಾಗಿದ್ದಾರೆ ಎಂದರ್ಥ. ಹೀಗಾಗಿ ನಾವು 108 ಜನ ಆಗುತ್ತೇವೆ. ಬಹುಮತಕ್ಕೆ ಕೇವಲ 5 ಸ್ಥಾನ ಮಾತ್ರ ವ್ಯತ್ಯಾಸವಾಗಲಿದೆ ಎಂದು ಮಾಧುಸ್ವಾಮಿ ತಿಳಸಿದರು.

N MAHESH

ಈ ಹಿಂದೆ ಯಡಿಯೂರಪ್ಪನವರು ಪ್ರಮಾಣವಚನ ಸ್ವೀಕರಿಸುವ ಸಂದರ್ಭದಲ್ಲಿ ರಾಜ್ಯಪಾಲರು ಸಂವಿಧಾನದಕ್ಕೆ ಬದ್ಧವಾಗಿ ಕ್ರಮ ಕೈಗೊಂಡರು. ಅಲ್ಲದೆ, ಮೈತ್ರಿ ನಾಯಕರು ಸುಪ್ರೀಂ ಕೋರ್ಟ್ ಮೆಟ್ಟಿಲೇರಿ, ಕೇವಲ 24 ಗಂಟೆಯಲ್ಲಿ ಬಹುಮತ ಸಾಬೀತುಪಡಿಸುವಂತೆ ಸೂಚಿಸಿದರು. ಹೀಗಾಗಿ ಗಲಿಬಿಲಿಯಾಯಿತು. ಅಲ್ಲದೆ, ಆಗ ಪಕ್ಷೇತರರು ಸಹ ಅವರೊಂದಿಗೆ ಹೋಗಿದ್ದರು. ಇಂದು ಆ ಪರಿಸ್ಥಿತಿ ಇಲ್ಲ ಅವರೊಂದಿಗೆ ಪಕ್ಷೇತರರು, ಬಿಎಸ್‍ಪಿ ಶಾಸಕರಿಲ್ಲ. ನಾವು ಒಟ್ಟು 108 ಜನ ಇದ್ದೇವೆ. ಅಲ್ಲದೆ, ಅತೃಪ್ತ ಶಾಸಕರೂ ಸಹ ಯಾವುದೇ ಕಾರಣಕ್ಕೂ ಮರಳಿ ಮೈತ್ರಿ ಪಕ್ಷಗಳನ್ನು ಸೇರುವುದಿಲ್ಲ. ಹೀಗಾಗಿ ಸರ್ಕಾರ ನಡೆಸುವ ಕುರಿತು ನಮಗೆ ವಿಶ್ವಾಸವಿದೆ ಎಂದರು.

TAGGED:bs yeddyurappagovernmentMadhuswamyPublic TVswornಪಬ್ಲಿಕ್ ಟಿವಿಪ್ರಮಾಣ ವಚನ ಸ್ವೀಕಾರಬಿ.ಎಸ್.ಯಡಿಯೂರಪ್ಪಮಾಧುಸ್ವಾಮಿಸರ್ಕಾರ ರಚೆನೆ
Share This Article
Facebook Whatsapp Whatsapp Telegram

Cinema news

Salman Khan
ಸಲ್ಮಾನ್ ಖಾನ್ ಅಭಿನಯದ `ಬ್ಯಾಟಲ್ ಆಫ್ ಗಲ್ವಾನ್’ ಈಗ `ಮಾತೃಭೂಮಿ’
Bollywood Cinema Latest Top Stories
Oscars 2026 Michael B Jordan Jessie Buckley
Oscars 2026: ಮೈಕೆಲ್ ಬಿ ಜೋರ್ಡಾನ್ ಅತ್ಯುತ್ತಮ ನಟ, ಜೆಸ್ಸಿ ಬಕ್ಲಿ ಅತ್ಯುತ್ತಮ ನಟಿ
Cinema Latest Top Stories World
Dhurandhar 2 Trailer
ರಿಲೀಸ್‌ಗೂ ಮುನ್ನವೇ 100 ಕೋಟಿ ಬಾಚಿದ ಧುರಂಧರ್‌-2
Bollywood Cinema Latest Top Stories
chandanavana film critics academy awards
ಚಂದನವನ ಫಿಲ್ಮ್ ಕ್ರಿಟಿಕ್ಸ್ ಅಕಾಡೆಮಿ ಪ್ರಶಸ್ತಿ – ಅತಿ ಹೆಚ್ಚು ನಾಮನಿರ್ದೇಶಿತರು ಯಾರು?
Cinema Latest Sandalwood Top Stories

You Might Also Like

sri lanka fuel crisis
Latest

ವಾರದಲ್ಲಿ 4 ದಿನ ಮಾತ್ರ ಕೆಲಸ, ಪ್ರತಿ ಬುಧವಾರವೂ ರಜೆ: ಪೆಟ್ರೋಲ್‌, ಡೀಸೆಲ್ ಉಳಿಸಲು ಶ್ರೀಲಂಕಾ ಹೊಸ ರೂಲ್ಸ್‌

Public TV
By Public TV
26 seconds ago
Traffic Rules Violation Chikkamagaluru Court
Chikkamagaluru

ಟ್ರಾಫಿಕ್ ರೂಲ್ಸ್ ಬ್ರೇಕ್ – ಬೋರ್ಡ್ ಹಿಡಿದು ಇಡೀ ದಿನ ರಸ್ತೆ ಮಧ್ಯೆ ನಿಲ್ಲುವ ಶಿಕ್ಷೆ!

Public TV
By Public TV
46 minutes ago
LPG Cylinders Jagalur
Davanagere

ಜಗಳೂರು | ಹೋಟೆಲ್‍ಗಳ ಮೇಲೆ ತಹಶೀಲ್ದಾರ್ ದಾಳಿ – 20 ಗೃಹ ಬಳಕೆ ಸಿಲಿಂಡರ್ ವಶಕ್ಕೆ

Public TV
By Public TV
1 hour ago
kabul hospital pak strikes
Latest

ಅನಾಗರಿಕ, ಹೇಡಿತನದ ಕೃತ್ಯ: ಕಾಬೂಲ್‌ ಆಸ್ಪತ್ರೆ ಮೇಲಿನ ಪಾಕ್‌ ದಾಳಿ ಖಂಡಿಸಿದ ಭಾರತ

Public TV
By Public TV
2 hours ago
Four workers fall ill due to chemical reaction in Hubballi
Dharwad

ಹುಬ್ಬಳ್ಳಿ | ಫ್ಲೈವುಡ್‌ ಕೆಲಸದ ವೇಳೆ ಕೆಮಿಕಲ್ ರಿಯಾಕ್ಷನ್ – ನಾಲ್ವರು ಕಾರ್ಮಿಕರು ಅಸ್ವಸ್ಥ

Public TV
By Public TV
2 hours ago
congress leader pm modi
Chikkamagaluru

ಸ್ವಪಕ್ಷದ ಮುಖಂಡನ ವಿರುದ್ಧವೇ ದೂರು – ನ್ಯಾಯಕ್ಕಾಗಿ ಪ್ರಧಾನಿ ಮೋದಿ ಕಚೇರಿ ಕದ ತಟ್ಟಿದ ಕಾಂಗ್ರೆಸ್ ನಾಯಕಿ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?