Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ರಾತ್ರಿ 11 ಗಂಟೆಗೆ ನಿರ್ಧಾರ – ತಡವಾಗಿದ್ದಕ್ಕೆ ಕಾರಣ ತಿಳಿಸಿದ ಮಾಧುಸ್ವಾಮಿ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | States | Karnataka | ರಾತ್ರಿ 11 ಗಂಟೆಗೆ ನಿರ್ಧಾರ – ತಡವಾಗಿದ್ದಕ್ಕೆ ಕಾರಣ ತಿಳಿಸಿದ ಮಾಧುಸ್ವಾಮಿ

Karnataka

ರಾತ್ರಿ 11 ಗಂಟೆಗೆ ನಿರ್ಧಾರ – ತಡವಾಗಿದ್ದಕ್ಕೆ ಕಾರಣ ತಿಳಿಸಿದ ಮಾಧುಸ್ವಾಮಿ

Public TV
Last updated: July 26, 2019 12:40 pm
Public TV
Share
2 Min Read
MADHUSWAMY
SHARE

ನವದೆಹಲಿ: ಯಡಿಯೂರಪ್ಪನವರು ಅಧಿಕಾರದ ಚುಕ್ಕಾಣಿ ಹಿಡಿಯಬೇಕೆಂಬುದು ತುಂಬಾ ದಿನಗಳ ಬಯಕೆಯಾಗಿತ್ತು ಅದೀಗ ಈಡೇರಿದೆ. ರಾಜ್ಯಕ್ಕೆ ಏನೇನು ಒಳ್ಳೆಯ ಕೆಲಸಗಳಾಗಬೇಕೋ ಅದೆಲ್ಲವನ್ನು ಯಡಿಯೂರಪ್ಪನವರು ಮಾಡುತ್ತಾರೆ ಎಂದು ಮಾಧುಸ್ವಾಮಿ ಅಭಿಪ್ರಾಯ ಪಟ್ಟಿದ್ದಾರೆ.

ದೆಹಲಿಯಲ್ಲಿ ಪಬ್ಲಿಕ್ ಟಿವಿ ಜೊತೆ ಮಾತನಾಡಿದ ಅವರು, ಮೈತ್ರಿ ಸರ್ಕಾರ ಅಸ್ತಿತ್ವದ ನಂತರ ತುಂಬಾ ಸಂಕಟವಾಗಿತ್ತು. ಯಡಿಯೂರಪ್ಪನವರಿಗೂ ಸಹ ತುಂಬಾ ದಿನಗಳಿಂದ ಒಂದು ರೀತಿಯ ಬೇಸರ ಕಾಡುತ್ತಿತ್ತು. ಇದೀಗ ಮರಳಿ ಅಧಿಕಾರಕ್ಕೇರುತ್ತಿರುವುದು ಹಾಗೂ ಯಡಿಯೂರಪ್ಪನವರನ್ನು ಮುಖ್ಯಮಂತ್ರಿಯಾಗುತ್ತಿರುವುದು ತುಂಬಾ ಸಂತಸ ತಂದಿದೆ. ರಾಜ್ಯಕ್ಕೆ ಏನೇನು ಒಳ್ಳೆಯ ಕೆಲಸ ಮಾಡಬೇಕೋ ಅದನ್ನು ಅವರು ಮಾಡುತ್ತಾರೆ ಎಂದು ಅಭಿಪ್ರಾಯಪಟ್ಟರು.

yeddy aa

ವಿಧಾನಸಭೆ ಚುನಾವಣೆಯಲ್ಲಿ ಮತದಾರರು 105 ಜೊತೆಗೆ ಇನ್ನು 5-6 ಸ್ಥಾನ ನೀಡಿದ್ದರೆ ಈ ಪರಿಸ್ಥಿತಿ ಬರುತ್ತಿರಲಿಲ್ಲ. ಕೆಲವೇ ಸ್ಥಾನ ಕಡಿಮೆ ಬಂದಿದ್ದರಿಂದ ದೊಡ್ಡ ಪಾರ್ಟಿಯಾಗಿದ್ದರೂ ಅಧಿಕಾರದಿಂದ ದೂರ ಉಳಿಯಬೇಕಾಯಿತು. ಹೀಗಾಗಿ ಮೈತ್ರಿ ಸರ್ಕಾರ ಅಧಿಕಾರಕ್ಕೆ ಬಂತು. ನಂತರ ಅವರ ಕಚ್ಚಾಟ ಶುರುವಾಯಿತು. ಆಗಲೇ ಇವರು ತುಂಬಾ ದಿನ ಉಳಿಯುವುದಿಲ್ಲ ಎಂದು ನಾವು ಅಂದುಕೊಂಡಿದ್ದೆವು. ನಂತರ ನಡೆದ ಲೋಕಸಭಾ ಚುನಾವಣೆ ವೇಳೆ ಮತದಾರರು ಜಾಗೃತಿಯಿಂದ ಮತ ಹಾಕಿದರು ಎಂದು ತಿಳಿಸಿದರು.

ವಿಧಾನಸಭೆಯಲ್ಲಾದ ತಪ್ಪು ಲೋಕಸಭೆಯಲ್ಲಾಗಬಾರದು ಎಂದು ಉತ್ತಮ ತೀರ್ಪು ನೀಡಿದರು. ಹೆಚ್ಚು ಸ್ಥಾನಗಳಲ್ಲಿ ಬಿಜೆಪಿ ಗೆಲ್ಲಿಸಿ ಕೊಟ್ಟರು. ಇದರಿಂದ ಜನರ ಅಭಿಪ್ರಾಯವೇನು ಎಂಬುದು ಸ್ಪಷ್ಟವಾಗುತ್ತದೆ. ಇಡೀ ರಾಜ್ಯದ ಜನತೆ ಇದೀಗ ನಮ್ಮ ಜೊತೆಗಿದ್ದಾರೆ. ಮೈತ್ರಿ ಸರ್ಕಾರದ ಶಾಸಕರಿಗೂ ಅಲ್ಲಿನ ದುರಾಡಳಿತ ನೋಡಿ ಬೇಸರವಾಯಿತು. ಶಾಸಕರು ನಿರೀಕ್ಷಿಸಿದ ಕೆಲಸ ಆಗುತ್ತಿಲ್ಲ. ಕೆಲವೇ ಜನರ ಕೆಲಸವಾಗುತ್ತದೆ. ಒಂದೇ ಕುಟುಂಬದ ಮಾತನ್ನು ಎಲ್ಲರೂ ಕೇಳುವ ಪರಿಸ್ಥಿತಿ ಇದೆ ಎಂದು ಅವರಲ್ಲೇ ಭಿನ್ನಾಭಿಪ್ರಾಯ ಮೂಡಿ ಹೊರ ನಡೆದರು. ಇದೇ ಸಂದರ್ಭವನ್ನು ನಾವು ಸದ್ಬಳಕೆ ಮಾಡಿಕೊಂಡಿದ್ದೇವೆ ಎಂದು ಹೇಳಿ ಸರ್ಕಾರ ರಚನೆಗೆ ಮುಂದಾಗಿದನ್ನು ಸಮರ್ಥಿಸಿಕೊಂಡರು.

Rebel MLAs C 1

ನಮ್ಮ ಪಕ್ಷದಲ್ಲಿ ಹೈ ಕಮಾಂಡ್ ಅವರೇ ಅಂತಿಮ ನಿರ್ಧಾರ ಮಾಡಬೇಕು. ಹೀಗಾಗಿ ನಾವು ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿದ್ದೆವು. ಈ ವೇಳೆ ಅವರು ರಾಷ್ಟ್ರೀಯ ನಾಯಕರೊಂದಿಗೆ ಚರ್ಚಿಸಿ ತೀರ್ಮಾನ ಕೈಗೊಳ್ಳುವುದಾಗಿ ತಿಳಿಸಿದರು. ಅವರು ಸಂಸತ್‍ನಲ್ಲಿ ಕಾರ್ಯನಿರತರಾಗಿದ್ದರಿಂದ ರಾತ್ರಿ ವೇಳೆ ಸಭೆ ನಡೆಸಿ ಚರ್ಚಿಸಿ, ರಾತ್ರಿ 11ಕ್ಕೆ ನಿರ್ಧಾರ ಕೈಗೊಂಡಿದ್ದಾರೆ. ಹೀಗಾಗಿ ಸರ್ಕಾರ ರಚನೆಗೆ ತಡವಾಗಿ ಸಂದೇಶ ನೀಡಿದ್ದಾರೆ ಎಂದು ತಿಳಿಸಿದರು.

ನಮ್ಮದು 105 ಇದ್ದರೂ ಇಬ್ಬರು ಪಕ್ಷೇತರರು ಬೆಂಬಲ ನೀಡಿದ್ದಾರೆ. ಅಲ್ಲದೆ, ಬಿಎಸ್‍ಪಿಯ ಮಹೇಶ್ ಅವರನ್ನು ಉಚ್ಛಾಟನೆ ಮಾಡಿದ್ದಾರೆ. ಬಿಎಸ್‍ಪಿ ಹೈ ಕಮಾಂಡ್ ಮಹೇಶ್ ಅವರಿಗೆ ಮೈತ್ರಿ ಸರ್ಕಾರಕ್ಕೆ ಮತ ಹಾಕಿ ಎಂದರೂ ಸಹ ಹೋಗಿಲ್ಲದ್ದನ್ನು ಕಂಡರೆ ಅವರು ನಮ್ಮ ಪರವಾಗಿದ್ದಾರೆ ಎಂದರ್ಥ. ಹೀಗಾಗಿ ನಾವು 108 ಜನ ಆಗುತ್ತೇವೆ. ಬಹುಮತಕ್ಕೆ ಕೇವಲ 5 ಸ್ಥಾನ ಮಾತ್ರ ವ್ಯತ್ಯಾಸವಾಗಲಿದೆ ಎಂದು ಮಾಧುಸ್ವಾಮಿ ತಿಳಸಿದರು.

N MAHESH

ಈ ಹಿಂದೆ ಯಡಿಯೂರಪ್ಪನವರು ಪ್ರಮಾಣವಚನ ಸ್ವೀಕರಿಸುವ ಸಂದರ್ಭದಲ್ಲಿ ರಾಜ್ಯಪಾಲರು ಸಂವಿಧಾನದಕ್ಕೆ ಬದ್ಧವಾಗಿ ಕ್ರಮ ಕೈಗೊಂಡರು. ಅಲ್ಲದೆ, ಮೈತ್ರಿ ನಾಯಕರು ಸುಪ್ರೀಂ ಕೋರ್ಟ್ ಮೆಟ್ಟಿಲೇರಿ, ಕೇವಲ 24 ಗಂಟೆಯಲ್ಲಿ ಬಹುಮತ ಸಾಬೀತುಪಡಿಸುವಂತೆ ಸೂಚಿಸಿದರು. ಹೀಗಾಗಿ ಗಲಿಬಿಲಿಯಾಯಿತು. ಅಲ್ಲದೆ, ಆಗ ಪಕ್ಷೇತರರು ಸಹ ಅವರೊಂದಿಗೆ ಹೋಗಿದ್ದರು. ಇಂದು ಆ ಪರಿಸ್ಥಿತಿ ಇಲ್ಲ ಅವರೊಂದಿಗೆ ಪಕ್ಷೇತರರು, ಬಿಎಸ್‍ಪಿ ಶಾಸಕರಿಲ್ಲ. ನಾವು ಒಟ್ಟು 108 ಜನ ಇದ್ದೇವೆ. ಅಲ್ಲದೆ, ಅತೃಪ್ತ ಶಾಸಕರೂ ಸಹ ಯಾವುದೇ ಕಾರಣಕ್ಕೂ ಮರಳಿ ಮೈತ್ರಿ ಪಕ್ಷಗಳನ್ನು ಸೇರುವುದಿಲ್ಲ. ಹೀಗಾಗಿ ಸರ್ಕಾರ ನಡೆಸುವ ಕುರಿತು ನಮಗೆ ವಿಶ್ವಾಸವಿದೆ ಎಂದರು.

TAGGED:bs yeddyurappagovernmentMadhuswamyPublic TVswornಪಬ್ಲಿಕ್ ಟಿವಿಪ್ರಮಾಣ ವಚನ ಸ್ವೀಕಾರಬಿ.ಎಸ್.ಯಡಿಯೂರಪ್ಪಮಾಧುಸ್ವಾಮಿಸರ್ಕಾರ ರಚೆನೆ
Share This Article
Facebook Whatsapp Whatsapp Telegram

Cinema news

rishab shetty public tv anniversary
ಪಬ್ಲಿಕ್‌ ಟಿವಿಗೆ ಇನ್ನೂ ಟೀನೇಜ್‌, ರಂಗಣ್ಣ ಸರ್‌ ಈ ಸಮಾಜಕ್ಕೆ ದೊಡ್ಡ ಕೊಡುಗೆ: ರಿಷಬ್‌ ಶೆಟ್ಟಿ
Bengaluru City Cinema Latest Main Post Sandalwood
Sathish Ninasam Public TV Anniversary
ಆಟೋ ಡ್ರೈವರ್‌ಗಳಿಂದ ಕಾರಿನಲ್ಲಿ ಓಡಾಡೋರು ನಿಮ್ಮನ್ನ ಇಷ್ಟ ಪಡ್ತಾರೆ, ರಂಗಣ್ಣ ಸರ್‌ ಮಾಸ್‌ ಹೀರೋ: ನೀನಾಸಂ ಸತೀಶ್‌ ಬಣ್ಣನೆ
Bengaluru City Cinema Latest Main Post Sandalwood
Toxic
ʻಟಾಕ್ಸಿಕ್‌ʼ ಚಿತ್ರತಂಡಕ್ಕೆ ಮತ್ತೊಂದು ಸಂಕಷ್ಟ – ಸಿನಿಮಾ ವಿರುದ್ಧ ಕ್ರೈಸ್ತರ ಒಕ್ಕೂಟ ದೂರು
Bengaluru City Cinema Latest Main Post Sandalwood
nandini milk sudha rani
ನಂದಿನಿ ಉತ್ಪನ್ನಗಳ ಪ್ರಚಾರ ರಾಯಭಾರಿಯಾಗಿ ನಟಿ ಸುಧಾರಾಣಿ ಆಯ್ಕೆ
Bengaluru City Cinema Latest Main Post Sandalwood

You Might Also Like

ICC Mens T20 World Cup ind vs Namibia Jasprit Bumrahs stunning catch Axar Patel shocked
Cricket

ಬುಮ್ರಾ ಸ್ಟನ್ನಿಂಗ್‌ ಕ್ಯಾಚ್‌ – ಅಕ್ಷರ್‌ ಪಟೇಲ್‌ ಶಾಕ್‌!

Public TV
By Public TV
3 hours ago
kids died accident
Districts

ಶಾಲಾ ಬಸ್ ಹರಿದು ಮಕ್ಕಳು ಸಾವು – ಸ್ವಗ್ರಾಮದಲ್ಲಿ ನೆರವೇರಿದ ಅಂತ್ಯಕ್ರಿಯೆ

Public TV
By Public TV
4 hours ago
Ishan Kishan Hardik Pandya
Cricket

ಕಿಶನ್‌ ದಾಖಲೆಯ ಫಿಫ್ಟಿ, ಪಾಂಡ್ಯ ಆಲ್‌ರೌಂಡರ್‌ ಆಟ – ನಮೀಬಿಯಾ ವಿರುದ್ಧ 93 ರನ್‌ಗಳ ಭರ್ಜರಿ ಜಯ

Public TV
By Public TV
4 hours ago
01 6
Big Bulletin

ಬಿಗ್‌ ಬುಲೆಟಿನ್‌ 12 February 2026 ಭಾಗ-1

Public TV
By Public TV
4 hours ago
02 7
Big Bulletin

ಬಿಗ್‌ ಬುಲೆಟಿನ್‌ 12 February 2026 ಭಾಗ-2

Public TV
By Public TV
4 hours ago
03 6
Big Bulletin

ಬಿಗ್‌ ಬುಲೆಟಿನ್‌ 12 February 2026 ಭಾಗ-3

Public TV
By Public TV
4 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?