Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಬೆಂಗಳೂರು ಮಾರುಕಟ್ಟೆಗೆ ಅಮುಲ್‌ – ನಂದಿನಿ ಉಳಿಸಲು ಕನ್ನಡಿಗರಿಂದ #SaveNandini ಅಭಿಯಾನ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಬೆಂಗಳೂರು ಮಾರುಕಟ್ಟೆಗೆ ಅಮುಲ್‌ – ನಂದಿನಿ ಉಳಿಸಲು ಕನ್ನಡಿಗರಿಂದ #SaveNandini ಅಭಿಯಾನ

Bengaluru City

ಬೆಂಗಳೂರು ಮಾರುಕಟ್ಟೆಗೆ ಅಮುಲ್‌ – ನಂದಿನಿ ಉಳಿಸಲು ಕನ್ನಡಿಗರಿಂದ #SaveNandini ಅಭಿಯಾನ

Public TV
Last updated: April 7, 2023 4:01 pm
Public TV
Share
3 Min Read
amul milk bengaluru
SHARE

– ಆರೋಗ್ಯಕರ ಸ್ಪರ್ಧೆಗೆ ಅಮುಲ್‌ ಬಂದರೆ ಸಮಸ್ಯೆ ಏನು?
– ಸಾಮಾಜಿಕ ಜಾಲತಾಣದಲ್ಲಿ ಪರ, ವಿರೋಧ ಚರ್ಚೆ

ಬೆಂಗಳೂರು: ಗುಜರಾತ್‌ನ ಅಮುಲ್‌  ಸಂಸ್ಥೆ ಬೆಂಗಳೂರಿನಲ್ಲಿ ಹಾಲಿನ ವ್ಯವಹಾರಕ್ಕೆ ಇಳಿದಿರುವುದರ ಬಗ್ಗೆ ಬಿಸಿಬಿಸಿ ಚರ್ಚೆಯಾಗುತ್ತಿದೆ.

ಕರ್ನಾಟಕದಲ್ಲಿ ನಮ್ಮ ಹಿರಿಯರು ಕಟ್ಟಿ ಬೆಳೆಸಿದ್ದ ಬ್ಯಾಂಕುಗಳನ್ನು ತಿಂದು ಮುಕ್ಕಿದ್ದಾಯಿತು. ಈಗ ರೈತರ ಪಾಲಿನ ಸಂಜೀವಿನಿಯಾಗಿರುವ ನಂದಿನಿಯನ್ನು ಆಪೋಶನ ತೆಗೆದುಕೊಳ್ಳಲು ಪ್ರಧಾನಿ ನರೇಂದ್ರ ಮೋದಿ ಮತ್ತು ಕೇಂದ್ರ ಸಹಕಾರ ಸಚಿವ ಅಮಿತ್ ಶಾ ಸಂಚು ಹೂಡಿದ್ದಾರೆ ಸಿದ್ದರಾಮಯ್ಯ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಇತ್ತ ಅಮುಲ್‌ ಪರ ಕೆಲವರು ಬ್ಯಾಟಿಂಗ್‌ ಮಾಡಿದ್ದು ಅಮುಲ್‌ ವ್ಯವಹಾರದಂತೆ ನಂದಿನಿ ಯಾಕೆ ಆನ್‌ಲೈನ್‌ ಮೂಲಕ ಹಾಲನ್ನು ವಿತರಣೆ ಮಾಡಬಾರದು. ಆರೋಗ್ಯಕರ ಸ್ಪರ್ಧೆ ಇದ್ದರೆ ಸಮಸ್ಯೆ ಏನು ಎಂದು ಸಾಮಾಜಿಕ ಜಾಲತಾಣದಲ್ಲಿ ಪ್ರಶ್ನಿಸಿದ್ದಾರೆ.

ಕಾಯುವಿಕೆ ಇನ್ನೇನು ಮುಗಿದೇ ಹೋಯಿತು. ಬೆಂಗಳೂರಿಗೆ ಶೀಘ್ರದಲ್ಲೇ ಬರಲಿದೆ.

ಕ್ವಿಕ್ ಕಾಮರ್ಸ್ ವೇದಿಕೆಗಳಲ್ಲಿ ಶೀಘ್ರದಲ್ಲೇ ಲಭ್ಯವಾಗಲಿದ್ದು, ಹೊಸ ತಾಜಾತನವು ನಿಮಗಾಗಿ ಕಾಯುತ್ತಿದೆ!#amul #amulindia #tasteofindia #tasteofkarnataka #tasteofhome #amulkannada pic.twitter.com/hk0rmMKSmW

— Amul Kannada (@amulkannada) April 6, 2023

ಏನಿದು ವಿವಾದ?
ಅಮುಲ್ ಕುಟುಂಬ ಬೆಂಗಳೂರು ನಗರಕ್ಕೆ ಹಾಲು ಮತ್ತು ಮೊಸರಿನ ರೂಪದಲ್ಲಿ ಹೊಸ ತಾಜಾತನವನ್ನು ತರುತ್ತಿದೆ. ಕ್ವಿಕ್ ಕಾಮರ್ಸ್ ಪ್ಲಾಟ್‌ಫಾರ್ಮ್‌ಗಳಲ್ಲಿ ಶೀಘ್ರದಲ್ಲೇ ಲಭ್ಯವಾಗಲಿದ್ದು, ಅವುಗಳನ್ನು ನಿಮ್ಮ ಮನೆ ಬಾಗಿಲಿಗೆ ಆರ್ಡರ್ ಮಾಡಬಹುದು ಎಂದು ಅಮುಲ್‌ ಕನ್ನಡ ಏಪ್ರಿಲ್‌ 5 ರಂದು ಟ್ವೀಟ್‌ ಮಾಡಿತ್ತು. ಈ ಟ್ವೀಟ್‌ ಮಾಡಿದ ಬೆನ್ನಲ್ಲೇ ಕನ್ನಡಿಗರು, ರಾಜಕೀಯ ನಾಯಕರು ಅಮುಲ್‌ ಮತ್ತು ಬಿಜೆಪಿ ವಿರುದ್ಧ ಟೀಕೆ ಮಾಡಲು ಆರಂಭಿಸಿದ್ದಾರೆ.

ಕರ್ನಾಟಕದ @BJP4Karnataka ನಾಯಕತ್ವ ಎಷ್ಟೊಂದು ದುರ್ಬಲವಾಗಿದೆಯೆಂದರೆ ಒಂದೆಡೆ ಬೆಳಗಾವಿ ಗಡಿಪ್ರದೇಶದಲ್ಲಿ ಮಹಾರಾಷ್ಟ್ರ ಸರ್ಕಾರ ನೇರವಾಗಿ ತನ್ನ ಆಡಳಿತವನ್ನು ಸ್ಥಾಪಿಸಲು ಪ್ರಯತ್ನಿಸುತ್ತಿದೆ. ಇನ್ನೊಂದೆಡೆ ಗುಜರಾತ್ ರಾಜ್ಯ ಅಮುಲ್ ಮೂಲಕ ಇಲ್ಲಿನ ರೈತರನ್ನು ಬೀದಿಗೆ ತಳ್ಳುವ ಪ್ರಯತ್ನ ಮಾಡುತ್ತಿದೆ.
8/11#SaveNandini

— Siddaramaiah (@siddaramaiah) April 7, 2023

ಸಿದ್ದರಾಮಯ್ಯ ಹೇಳಿದ್ದೇನು?
ಕೆಎಂಎಫ್ ಮತ್ತು ಅಮುಲ್ ಸಂಸ್ಥೆಗಳ ವಿಲೀನದ ಬಗ್ಗೆ ಕೇಂದ್ರ ಸಹಕಾರ ಸಚಿವರೂ ಆಗಿರುವ ಅಮಿತ್ ಶಾ ಪ್ರಸ್ತಾಪ ಮಾಡಿದ ದಿನದಿಂದ ರಾಜ್ಯದ ಹೈನು ಉದ್ಯಮಕ್ಕೆ ಗರ ಬಡಿದಿದೆ. ವಿಲೀನದ ಪ್ರಸ್ತಾವಕ್ಕೆ ಕನ್ನಡಿಗರ ತೀವ್ರ ವಿರೋಧದ ಹಿನ್ನೆಲೆಯಲ್ಲಿ ಹಿಂಬಾಗಿಲಿನಿಂದ ಅಮುಲ್ ಪ್ರವೇಶಿಸುತ್ತಿದೆ. ಕಳೆದ ಕೆಲವು ದಿನಗಳಿಂದ ರಾಜ್ಯದಲ್ಲಿ ನಂದಿನಿ ಹಾಲು ಮತ್ತು ಮೊಸರು ಮಾರುಕಟ್ಟೆಯಲ್ಲಿ ಮಾಯವಾಗುತ್ತಿದೆ. ಇದೇ ವೇಳೆ ಅಮುಲ್ ಉತ್ಪನ್ನಗಳ ಮಾರಾಟ ಭರದಿಂದ ಪ್ರಾರಂಭವಾಗಿದೆ. ಸಚಿವ ಅಮಿತ್ ಶಾ ನೇರ ಉಸ್ತುವಾರಿಯಲ್ಲಿಯೇ ಇವೆಲ್ಲ ನಡೆಯುತ್ತಿದೆ ಎನ್ನುವುದು ನಿಸ್ಸಂಶಯ.

ಗುಜರಾತ್ ಮೂಲದ ಅಮುಲ್ ಹಾಲು ಮತ್ತು ಮೊಸರು ಮಾರಾಟದ ಮೂಲಕ ಕರ್ನಾಟಕದ ಮಾರುಕಟ್ಟೆ ಪ್ರವೇಶಿಸಲು ಹಿಂದೆಯೂ ಪ್ರಯತ್ನಿಸಿತ್ತು. ಅದಕ್ಕೆ ನಾವು ಅವಕಾಶ ಕೊಡಲಿಲ್ಲ. ಈಗ ಬಿಜೆಪಿ ಕೆಂಪುಕಂಬಳಿ ಹಾಸಿ ಸ್ವಾಗತಿಸಿದೆ. ಬಿಜೆಪಿ ಆಡಳಿತಾವಧಿಯಲ್ಲಿ ಕೆಎಂಎಫ್ ನಲ್ಲಿ ಹಾಲಿನ ಸಂಗ್ರಹ ಕಡಿಮೆಯಾಗುತ್ತಿದೆ. ದಿನಕ್ಕೆ 99 ಲಕ್ಷ ಲೀಟರ್ ಹಾಲು ಸಂಗ್ರಹವಾಗಬೇಕಾಗಿದ್ದ ಕಡೆ ಕೇವಲ 71 ಲಕ್ಷ ಲೀಟರ್ ಹಾಲು ಸಂಗ್ರಹವಾಗುತ್ತಿದೆ. ಇದು ಕೆಎಂಎಫ್ ವಿರುದ್ಧದ ಷಡ್ಯಂತ್ರವೇ?


ನಮ್ಮ ಸರ್ಕಾರವು ಹಾಲಿಗೆ ನೀಡುವ ಸಹಾಯಧನವನ್ನು ಲೀಟರಿಗೆ 5 ರೂ.ಗಳಷ್ಟು ಹೆಚ್ಚಿಸಿತ್ತು. ಇದರಿಂದಾಗಿ 2012-13 ರಲ್ಲಿ 45 ಲಕ್ಷ ಲೀಟರ್ ಉತ್ಪಾದನೆಯಾಗುತ್ತಿದ್ದ ಹಾಲಿನ ಪ್ರಮಾಣವು 2017 ರ ವೇಳೆಗೆ 73 ಲಕ್ಷ ಲೀಟರಿಗೆ ಏರಿಕೆಯಾಗಿತ್ತು. ಈಗ ಕಡಿಮೆಯಾಗುತ್ತ ಸಾಗಲು ಕಾರಣವೇನು? ನಮ್ಮ ಸರ್ಕಾರ ಐದು ವರ್ಷಗಳಲ್ಲಿ 1,356 ಕೋಟಿ ರೂಪಾಯಿಗಳನ್ನು ಹಾಲಿನ ಸಹಾಯಧನಕ್ಕಾಗಿ ರೈತರಿಗೆ ಕೊಟ್ಟಿದ್ದೆವು. ಆದರೆ ಬಿಜೆಪಿ ಸರ್ಕಾರ 2020 -21 ರಲ್ಲಿ1186 ಕೋಟಿ ಖರ್ಚು ಮಾಡಿದ್ದರೆ 2023-24ಕ್ಕೆ ಕೇವಲ 1200 ಕೋಟಿ ರೂಪಾಯಿಗಳನ್ನು ಬಜೆಟ್‌ನಲ್ಲಿ ಒದಗಿಸಿ ರೈತರಿಗೆ ಅನ್ಯಾಯ ಮಾಡಿದೆ.

ಅಲ್ಲ ಕಣೋ ಕೇಂದ್ರ ರಾಜ್ಯದಲ್ಲಿ ಎರಡು ಕಡೆ ನಿಮ್ಮದೇ ಹಿಂದೂ ಪರ ಸರ್ಕಾರ ಇರುವಾಗಲೂ ಸಹ ಈ ಗೋಮಾತೆ ರಕ್ಷಣೆ ಅಂತ ಬಾಯಿ ಬಡ್ಕೊಳ್ಳೋದು ಯಾಕೆ?? #SaveNandini ಮಾಡಿಲ್ಲ ಅಂದ್ರೆ ನಮ್ಮ ನಾಡಿನ ರೈತರಿಗೆ ತೊಂದ್ರೆ ಆಗೋದು.
ಹಿಂದೂ ಹೇಲಾಟಗಾರ… ಬರಿ ಗುಜರಾತಿನ ಅಮುಲ್ ಬೆಳಿಬೇಕು ನಿಮ್ಗೆ, ಆದ್ರೆ ನಮ್ಮದೇ ರಾಜ್ಯದ ನಂದಿನಿ kmf ಬೇಡ ಆಗಿದೆ https://t.co/t3AZAK1WdY

— ಬಳ್ಳಾರಿ ರಾಯಣ್ಣ (@ballari_rayanna) April 7, 2023

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ತಕ್ಷಣ ಮಧ್ಯಪ್ರವೇಶಿಸಿ ಹಿಂಬಾಗಿಲಿನಿಂದ ಪ್ರವೇಶಿಸುತ್ತಿರುವ ಅಮುಲ್ ಸಂಸ್ಥೆಯನ್ನು ತಡೆಯಬೇಕಾಗಿದೆ. ಈ ಸಂಬಂಧ ಕೇಂದ್ರ ಗೃಹ ಸಚಿವರಾದ ಅಮಿತ್ ಶಾ ಅವರಿಗೆ ರಾಜ್ಯದ ಜನಾಭಿಪ್ರಾಯವನ್ನು ಗಮನಕ್ಕೆ ತಂದು ಈ ದ್ರೋಹ ಚಿಂತನೆಯನ್ನು ನಿಲ್ಲಿಸಬೇಕು.

KMF sells it's Nandini milk in other states.

If this is okay, why are our olaatagaaras fuming that Amul is selling it's products in Karnataka? pic.twitter.com/56xfZsQRP2

— Sanjeev (@SAnand1405) April 6, 2023

ಅಮುಲ್‌ ಪರ ವಾದವೇನು?
ನಂದಿನಿ ಕೇವಲ ಕರ್ನಾಟಕದಲ್ಲಿ ಮಾತ್ರ ಹಾಲನ್ನು ಮಾರಾಟ ಮಾಡುತ್ತಿಲ್ಲ. ಉಳಿದ ರಾಜ್ಯಗಳಲ್ಲೂ ಹಾಲನ್ನು ಮಾರಾಟ ಮಾಡುತ್ತಿದೆ. ಹೀಗಿರುವಾಗ ಅಮುಲ್‌ ಬೇಡ ಎಂದು ಹೇಳಲು ಒಕ್ಕೂಟ ವ್ಯವಸ್ಥೆಯಲ್ಲಿ  ಯಾವ ಅಧಿಕಾರವಿದೆ. ಯಾವುದು ಬೇಕೋ ಅದನ್ನು ಗ್ರಾಹಕ ಖರೀದಿಸುತ್ತಾನೆ. ಇದನ್ನೂ ಓದಿ: ಸುದೀಪ್ ವಿರುದ್ಧ ಚುನಾವಣೆ ಆಯೋಗಕ್ಕೆ ಜೆಡಿಎಸ್ ಪತ್ರ

In a free market, anyone can compete. It's up to the consumers to decide which brand to opt for!

Considering the dominance of Nandini in Ktka, it won't be easy for Amul!

The ultimate beneficiary of competition are consumers themselves!

Apply logic! Don't be so brainless! pic.twitter.com/TUQqdGs1bl

— Preetam Rao (@Preetam_M_Rao) April 7, 2023

ಯಾವುದೇ ಸಂಸ್ಥೆಯದರೂ ಸರಿಯಾದ ಸ್ಪರ್ಧೆ ಇಲ್ಲದೇ ಇದ್ದರೆ ಗುಣಮಟ್ಟದ ಉತ್ಪನ್ನ ನೀಡಲು ಸಾಧ್ಯವಿಲ್ಲ. ಕೆಎಂಎಫ್‌ ಚುನಾವಣೆಗಳಲ್ಲಿ ಹಣದ ಹೊಳೆ ಹರಿಯುತ್ತದೆ. ರಾಜಕೀಯ ಪಕ್ಷಗಳ ಮುಖಂಡರೇ ದೊಡ್ಡ ಹುದ್ದೆಗಳನ್ನು ಅಲಂಕರಿಸುತ್ತಾರೆ. ಮುಖ್ಯವಾಗಿ ವಿಚಾರದ ಬಗ್ಗೆ ನಾವು ಚರ್ಚೆಯೇ ಮಾಡುವುದಿಲ್ಲ. ಮಂಡ್ಯದಲ್ಲಿ ನೀರು ಮಿಶ್ರಿತ ಹಾಲು ವಿತರಣೆ ಮಾಡಿರುವುದು ನಮ್ಮ ಕಣ್ಣ ಮುಂದೆಯೇ ಇದೆ. ಈಗಾಗಲೇ ಸರ್ಕಾರಿ ಸ್ವಾಮ್ಯದ ಕಂಪನಿಗಳು ನಷ್ಟ ಅನುಭವಿಸಿ ಬಾಗಿಲು ಮುಚ್ಚಿದೆ. ಹೀಗಾಗಿ ತಾಂತ್ರಿಕವಾಗಿ ಅಭಿವೃದ್ಧಿ ಹೊಂದಿ ಗುಣಮಟ್ಟದ ಹಾಲನ್ನು ಕೆಎಂಎಫ್‌ ನೀಡಬೇಕು. ಸ್ಪರ್ಧೆ ಇದ್ದಷ್ಟು ಗುಣಮಟ್ಟ ಹೆಚ್ಚಾಗುತ್ತದೆ. ಅಂತಿಮವಾಗಿ ಇದರ ಲಾಭ ರೈತರಿಗೆ ಮತ್ತು ಗ್ರಾಹಕರಿಗೆ ಆಗುತ್ತದೆ ಎಂದು ಕೆಲವರು ವಾದ ಮಾಡುತ್ತಿದ್ದಾರೆ.

KMF has been under JDS control for longer time. Did these people who protest ask what changes did they brought into KMF ? If they don’t up there marketing and professionalism they will for sure loose market. I use Nandini , but I am offered Doddla many times. What to do ?

— Atul Sharma ???????? (@atul_sharma91) April 7, 2023

ಒಟ್ಟಿನಲ್ಲಿ ಕರ್ನಾಟಕ ಚುನಾವಣೆಯ ಸಮಯದಲ್ಲಿ ಅಮುಲ್‌ ಆನ್‌ಲೈನಿನಲ್ಲಿ ಹಾಲನ್ನು ಮಾರಾಟ ಮಾಡಲು ಮುಂದಾಗಿರುವುದು ಬಿಸಿಬಿಸಿ ಚರ್ಚೆಗೆ ಗ್ರಾಸವಾಗಿದೆ. ಈ ವಿಚಾರದ ಬಗ್ಗೆ ನಿಮ್ಮ ಅಭಿಪ್ರಾಯ ಏನು? ಕಮೆಂಟ್‌ ಮಾಡಿ.

TAGGED:amulbengalurukarnatakakmfmilkNandiniಅಮುಲ್ಕರ್ನಾಟಕಕೆಎಂಎಫ್ನಂದಿನಿಹಾಲು
Share This Article
Facebook Whatsapp Whatsapp Telegram

Cinema news

yash
ನಟ ಯಶ್ ಬರ್ತಡೇಗೆ ರಸ್ತೆಯಲ್ಲಿ ಬ್ಯಾನರ್ ಹಾಕಿದ್ದಕ್ಕೆ FIR
Bengaluru City Cinema Districts Karnataka Latest Main Post Sandalwood
YASH 5
ಮುಂಬೈ ಏರ್‌ಪೋರ್ಟ್‌ನಲ್ಲಿ ಕ್ಯಾಮೆರಾ ಕಣ್ಣಿಗೆ ಬಿದ್ದ ರಾಕಿಭಾಯ್
Cinema Sandalwood
TVK Vijay
ಕರೂರು ಕಾಲ್ತುಳಿತ ಪ್ರಕರಣ – 7 ಗಂಟೆಗೂ ಹೆಚ್ಚು ಕಾಲ ನಟ ವಿಜಯ್‌ಗೆ CBI ಗ್ರಿಲ್
Bengaluru City Cinema Latest Sandalwood Top Stories
Toxic
ಯಶ್ ʻಟಾಕ್ಸಿಕ್ʼ ಟೀಸರ್ ವಿರುದ್ಧ ಮಹಿಳಾ ಆಯೋಗಕ್ಕೆ ದೂರು!
Bengaluru City Cinema Districts Karnataka Latest Sandalwood Top Stories

You Might Also Like

Coffee beans washed away by rain in Chikkamagaluru
Chikkamagaluru

ಚಿಕ್ಕಮಗಳೂರಲ್ಲಿ ವರ್ಷದ ಮೊದಲ ಮಳೆಗೆ ಕೊಚ್ಚಿ ಹೋದ ಕಾಫಿ ಬೀಜ – ರೈತರ ಕಣ್ಣೀರು

Public TV
By Public TV
17 minutes ago
CT Ravi 1
Bengaluru City

ನರೇಗಾ ಬಗ್ಗೆ ಚರ್ಚೆಗೆ ಸಿದ್ಧ, ಸರ್ಕಾರ ವಿಶೇಷ ಅಧಿವೇಶನ ನಡೆಸಲಿ – ಸಿ.ಟಿ.ರವಿ

Public TV
By Public TV
19 minutes ago
sabarimala kerala karnataka
Chikkaballapur

ಕೇರಳಿಗರ ಕ್ಯಾತೆ; ಕರ್ನಾಟಕದ ಮಾಲಾಧಾರಿಗಳ ವಾಹನಗಳನ್ನು 100 ಕಿಮೀ ದೂರದಲ್ಲೇ ತಡೆದ ಕೇರಳ ಸರ್ಕಾರ

Public TV
By Public TV
54 minutes ago
Operation Gang Bust Delhi Police Arrests 280 Gangsters In 48 hour Crackdown
Crime

ಆಪರೇಷನ್ ಗ್ಯಾಂಗ್ ಬಸ್ಟ್ | 48 ಗಂಟೆಯಲ್ಲಿ 280 ದರೋಡೆಕೋರರನ್ನು ಬಂಧಿಸಿದ ದೆಹಲಿ ಪೊಲೀಸರು

Public TV
By Public TV
59 minutes ago
rahul gandhi mysuru airport
Latest

ಮೈಸೂರಿನಲ್ಲಿ ರಾಹುಲ್ ಗಾಂಧಿ ಭೇಟಿಯಾದ ಸಿಎಂ, ಡಿಸಿಎಂ

Public TV
By Public TV
1 hour ago
Makar Sankranti
Latest

23 ವರ್ಷಗಳ ಬಳಿಕ ಮಕರ ಸಂಕ್ರಾಂತಿಯಂದೇ ಷಟ್ತಿಲಾ ಏಕಾದಶಿ – ಏನಿದರ ವಿಶೇಷತೆ?

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?