Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Latest

ಭಾರತದ 100ನೇ ಉಪಗ್ರಹ ಉಡಾಯಿಸಿದ ಬೆನ್ನಲ್ಲೇ ನರ್ವಸ್ ಆಯ್ತು ಪಾಕಿಸ್ತಾನ

Public TV
Last updated: January 12, 2018 3:11 pm
Public TV
Share
3 Min Read
isro pslv pak
SHARE

ನವದೆಹಲಿ: ಉಗ್ರಗಾಮಿಗಳಿಗೆ ಆರ್ಥಿಕ ಸಹಾಯ ನೀಡಿ ಭಾರತದಲ್ಲಿ ಅಶಾಂತಿ ನೆಲೆಸಲು ಪ್ರೋತ್ಸಾಹ ನೀಡುತ್ತಿರುವ ಪಾಕಿಸ್ತಾನಕ್ಕೆ ಭಾರತ 100ನೇ ಉಪಗ್ರಹ ಯಶಸ್ವಿಯಾಗಿ ಕಕ್ಷೆಗೆ ಸೇರಿದ್ದು ತಲೆನೋವಾಗಿ ಪರಿಣಮಿಸಿದೆ.

ಹೌದು, ಇಸ್ರೋ ಸಂಸ್ಥೆ ಇಂದು ಬೆಳಗ್ಗೆ ಭಾರತದ 100 ನೇ ಉಪಗ್ರಹವನ್ನು ಯಶಸ್ವಿಯಾಗಿ ನಭಕ್ಕೆ ಚಿಮ್ಮಿಸಿದೆ. ಆದರೆ ಭಾರತದ ಉಪಗ್ರಹ ಉಡಾವಣೆ ಯಶಸ್ವಿಯಾದ ಕೂಡಲೇ ಪಾಕಿಸ್ತಾನ ಈ ಕುರಿತು ಅಪಸ್ವರ ಎತ್ತಿದ್ದು, ಭಾರತದ ಈ ಉಪಗ್ರಹ ಯೋಜನೆಯಿಂದ ಪ್ರಾದೇಶಿಕ ವ್ಯೂಹಾತ್ಮಕ ಸ್ಥಿರತೆಯ ಮೇಲೆ ಋಣಾತ್ಮಕ ಪರಿಣಾಮ ಬೀರಲಿದೆ ಎಂದು ಆರೋಪಿಸಿದೆ.

isro

ಈ ಆರೋಪದ ಜೊತೆ ಭಾರತದ ಈ ಉಪಗ್ರಹ ತಂತ್ರಜ್ಞಾನವನ್ನು ತನ್ನ ಮಿಲಿಟರಿ ರಕ್ಷಣಾ ವ್ಯವಸ್ಥೆಗೆ ಬಳಸಿಕೊಂಡರೆ ದಕ್ಷಿಣ ಏಷ್ಯಾ ಖಂಡದಲ್ಲಿ ಶಾಂತಿಗೆ ದಕ್ಕೆ ಉಂಟಾಗಲಿದೆ ಎಂದು ಪಾಕಿಸ್ತಾನ ವಿದೇಶಾಂಗ ಇಲಾಖೆ ಹೇಳಿದೆ.

ಮಾಧ್ಯಮಗಳಿಗೆ ಹೇಳಿಕೆ ನೀಡಿದ ಪಾಕಿಸ್ತಾನ ವಿದೇಶಾಂಗ ಇಲಾಖೆ ವಕ್ತಾರ ಮೊಹಮ್ಮದ್ ಫೈಸಲ್, ಭಾರತ ಉಡಾವಣೆ ಮಾಡಿರುವ ಉಪಗ್ರಹಗಳು ಮಿಲಿಟರಿ ಹಾಗೂ ನಾಗರಿಕ ಉದ್ದೇಶ ಎರಡಕ್ಕೂ ಬಳಕೆ ಮಾಡಿಕೊಳ್ಳಲು ಸಾಧ್ಯವಿದ್ದು, ಒಂದು ವೇಳೆ ಭಾರತ ಇದನ್ನೂ ಮಿಲಿಟರಿ ವ್ಯವಸ್ಥೆಯಲ್ಲಿ ಬಳಕೆ ಮಾಡಿಕೊಂಡರೆ ಅದು ಮಿಲಿಟರಿ ವ್ಯವಸ್ಥೆಯ ಅಸ್ಥಿರತೆಗೆ ಕಾರಣವಾಗಲಿದೆ. ಅಲ್ಲದೇ ಪ್ರಾದೇಶಿಕ ಸಂಬಂಧಗಳ ಆಸ್ಥಿರತೆಗೆ ಕಾರಣವಾಗಲಿದೆ ಎಂದು ಆತಂಕ ವ್ಯಕ್ತಪಡಿಸಿದ್ದಾರೆ.

ಇಸ್ರೋ ತನ್ನ 100ನೇ ಉಪಗ್ರಹವನ್ನು ಆಂಧ್ರದ ಶ್ರೀಹರಿಕೋಟಾದಲ್ಲಿರುವ ಉಡಾವಣಾ ಕೇಂದ್ರದಿಂದ ಯಶಸ್ವಿಯಾಗಿ ನಭಕ್ಕೆ ಕಳುಹಿಸಿತ್ತು. ಕಾರ್ಟೋಸ್ಯಾಟ್-2 ಸಿರೀಸ್‍ನ ಒಂದು, ಒಂದು ನ್ಯಾನೋ ಮತ್ತು ಮೈಕ್ರೋ ಸ್ಯಾಟಲೈಟ್‍ಗಳನ್ನು ಹೊತ್ತು ಪಿಎಸ್‍ಎಲ್‍ವಿ ಸಿ-40 ಉಡಾವಣಾ ನೌಕೆ ಯಶಸ್ವಿಯಾಗಿ ಕಕ್ಷೆಗೆ ಸೇರಿಸಿದೆ. ಭಾರತದ ಉಪಗ್ರಹದ ಜೊತೆಗೆ ಜೊತೆಗೆ ಅಮೆರಿಕ, ಕೆನಡಾ, ಇಂಗ್ಲೆಂಡ್, ಕೊರಿಯಾ, ಫಿನ್‍ಲ್ಯಾಂಡ್ ಹಾಗೂ ಫ್ರಾನ್ಸ್ ಗೆ ಸೇರಿದ 28 ವಿದೇಶಿ ಉಪಗ್ರಹಗಳು ಕಕ್ಷೆ ಸೇರಿದ್ದವು. ಕಾರ್ಟೋಸ್ಯಾಟ್-2 ಸ್ಯಾಟ್‍ಲೈಟ್ 710 ಕೆಜಿ ಭಾರ ಹೊಂದಿತ್ತು. ಆದರೆ ಕಳೆದ ವರ್ಷದ ಆಗಸ್ಟ್ ನಲ್ಲಿ ಉಷ್ಣ ಕವಚ ಪ್ರತ್ಯೇಕೀಕರಣದಲ್ಲಿ ತೊಂದರೆ ಉಂಟಾಗಿ ಐಆರ್ ಎನ್‍ಎಸ್‍ಎಸ್-1ಎಚ್ ಉಪಗ್ರಹ ಉಡಾವಣೆ ವಿಫಲವಾಗಿತ್ತು.

isro

ಸಾರ್ಕ್ ಉಪಗ್ರಹಕ್ಕೆ ಸಹಕರಿಸಲಿಲ್ಲ:
2014ರ ಮೇನಲ್ಲಿ ಅಧಿಕಾರಕ್ಕೆ ಬಂದ ನಂತರ ಪ್ರಧಾನಿ ಮೋದಿ, ಮಿತ್ರರಾಷ್ಟ್ರಗಳಿಗೆ ಭಾರತದ ಉಡುಗೊರೆಯಾಗಿ ಸಾರ್ಕ್ ಸ್ಯಾಟಲೈಟ್ ಅಭಿವೃದ್ಧಿಪಡಿಸಲು ಇಸ್ರೋ ವಿಜ್ಞಾನಿಗಳಿಗೆ 2014ರ ಜೂನ್ ನಲ್ಲಿ ಕೇಳಿದ್ದರು. ಮೋದಿ ಆಶಯದಂತೆ ದಕ್ಷಿಣ ಏಷ್ಯಾ ಬಾಂಧವ್ಯದ ಪ್ರತೀಕ `ಸೌತ್ ಏಷ್ಯಾ ಕಮ್ಯುನಿಕೇಷನ್ ಸ್ಯಾಟಲೈಟ್’ ಆದ ಜಿಸ್ಯಾಟ್-9(ಜಿಯೋಸ್ಟೇಷನರಿ ಕಮ್ಯುನಿಕೇಷನ್ ಸ್ಯಾಟಲೈಟ್) ಇಸ್ರೋ ತಯಾರಿಸಿ 2017ರ ಮೇ ತಿಂಗಳಿನಲ್ಲಿ ಕಕ್ಷೆಗೆ ಸೇರಿಸಿತ್ತು.

ಈ ಮಹತ್ವದ ಯೋಜನೆಗೆ ಪಾಕಿಸ್ತಾನ ಸಹಕಾರ ನೀಡಿರಲಿಲ್ಲ. ಸಾರ್ಕ್ ರಾಷ್ಟ್ರಗಳಾದ ಭಾರತ, ನೇಪಾಳ, ಭೂತಾನ್, ಬಾಂಗ್ಲಾದೇಶ, ಮಾಲ್ಡೀವ್ಸ್, ಶ್ರೀಲಂಕಾ ಮತ್ತು ಅಫ್ಘಾನಿಸ್ತಾನ ಈ ಯೋಜನೆಯ ಭಾಗವಾಗಿತ್ತು. ದೂರಸಂಪರ್ಕ, ದೂರಸಂವಹನ, ಡಿಟಿಎಚ್, ವಿಸ್ಯಾಟ್, ದೂರಶಿಕ್ಷಣ ಮತ್ತು ಟೆಲಿ ಮೆಡಿಸಿನ್ ಕ್ಷೇತ್ರದಲ್ಲಿ ಈ ಉಪಗ್ರಹ ನೆರವಿಗೆ ಬರಲಿದೆ. ಅಷ್ಟೇ ಅಲ್ಲ, ಭೂಕಂಪ, ಪ್ರವಾಹ, ಚಂಡಮಾರುತ, ಸುನಾಮಿಗಳು ಹೀಗೆ ಪ್ರಕೃತಿ ವಿಕೋಪಗಳು ಸಂಭವಿಸಿದಾಗ ಹಾಟ್‍ಲೈನ್ ಸಂಪರ್ಕದ ಮೂಲಕ ಪರಿಹಾರ ಕಾರ್ಯಾಚರಣೆಗೆ ನೆರವಾಗಲಿದೆ.

PSLVC40 Satellite 1

ಭಾರತಕ್ಕಿಂತಲೂ ಮೊದಲು ಅಂದರೆ 1961 ರಲ್ಲೇ ಪಾಕಿಸ್ತಾನ ಬಾಹ್ಯಾಕಾಶ ಕೇಂದ್ರವನ್ನು ಆರಂಭಿಸಿ ಸಂಶೋಧನೆಯಲ್ಲಿ ತೊಡಗಿತ್ತು. ನಂತರದಲ್ಲಿ 8 ವರ್ಷಗಳ ಬಳಿಕ ಭಾರತ ತನ್ನ ಬಾಹ್ಯಾಕಾಶ ಕೇಂದ್ರ ಇಸ್ರೋ ವನ್ನು ಸ್ಥಾಪಿಸಿತು. ಇಸ್ರೋ ತನ್ನ ಆಧುನಿಕ ಸಂಶೋಧನೆಗಳ ಮೂಲಕ ಹೊಸ ತಂತ್ರಜ್ಞಾನವನ್ನು ಬಳಕೆ ಮಾಡಿಕೊಂಡು ಹೆಚ್ಚು ಉಪಗ್ರಹಗಳನ್ನು ಉಡಾವಣೆ ಮಾಡುವ ಮೂಲಕ ಬಾಹ್ಯಾಕಾಶ ಕ್ಷೇತ್ರದಲ್ಲಿ ಕೀರ್ತಿ ಪಡೆದಿದೆ. ಅಲ್ಲದೇ ಅಮೆರಿಕದ ನಾಸಾ ಬಾಹ್ಯಾಕಾಶ ಸಂಸ್ಥೆಗೆ ಪೈಪೋಟಿ ನೀಡುವ ಹಂತವನ್ನು ತಲುಪಿದೆ. ಇಸ್ರೋ ಕೇವಲ ಭಾರತದ ಉಪಗ್ರಹಗಳನ್ನು ಮಾತ್ರ ಉಡಾವಣೆ ಮಾಡದೇ ಈಗ ವಿದೇಶಿ ಉಪಗ್ರಹಗಳನ್ನು ಸಹ ಕಡಿಮೆ ವೆಚ್ಚದಲ್ಲಿ ಉಡಾವಣೆ ಮಾಡುಕೊಡುತ್ತಿದೆ.

ತಿರುಗೇಟು ಕೊಟ್ಟ ಜನ:
ಇಸ್ರೋ ಉಪಗ್ರಹ ಅಪಸ್ವರ ಎತ್ತಿದ ಪಾಕ್ ನಡೆಯಲ್ಲಿ ಖಂಡಿಸಿದ ಭಾರತೀಯರು, ನೀವು ಕ್ಷಿಪಣಿ, ಬಾಂಬ್ ತಯಾರಿಸುವುದರ ಜೊತೆಗೆ ಉಗ್ರರಿಗೆ ಆರ್ಥಿಕ ಸಹಾಯ ನೀಡುವುದು ಹೇಗೆ ಎನ್ನುವುದರ ಬಗ್ಗೆ ತಲೆಕೆಡಿಸಿಕೊಳ್ಳಿ. ನಮ್ಮ ದೇಶದ ಸಾಧನೆ ವಿಚಾರದ ಬಗ್ಗೆ ತಲೆಕೆಡಿಸಿಕೊಳ್ಳಬೇಡಿ ಎಂದು ಸಾಮಾಜಿಕ ಜಾಲತಾಣದಲ್ಲಿ ತಿರುಗೇಟು ನೀಡಿದ್ದಾರೆ.

#ISRO hits a century into space, successfully launches 100th satellite on #PSLVC40 from the Satish Dhawan Space Centre, Sriharikota in Andhra Pradesh ????@isro pic.twitter.com/oBNBRgyrSm

— DD News (@DDNewslive) January 12, 2018

653570 isro launch

isro launch success 1

TAGGED:Cartosat-2indiaISROLaunchpakistanPSLVPublic TVsatelliteಇಸ್ರೋಉಡಾವಣೆಉಪಗ್ರಹಕಾರ್ಟೋಸ್ಯಾಟ್-2ಪಬ್ಲಿಕ್ ಟಿವಿಪಾಕಿಸ್ತಾನಪಿಎಸ್‍ಎಲ್‍ವಿಭಾರತ
Share This Article
Facebook Whatsapp Whatsapp Telegram
Leave a Comment

Leave a Reply

Your email address will not be published. Required fields are marked *

Cinema News

the devil first single
‘ಇದ್ರೆ ನೆಮ್ಮದಿಯಾಗ್ ಇರ್ಬೇಕು’ ಎಂದ ದರ್ಶನ್!
Cinema Latest Sandalwood Top Stories
Dhruva Sarja 1
ಧ್ರುವ ಸರ್ಜಾ ಮಕ್ಕಳ ರಕ್ಷಾಬಂಧನ ಆಚರಣೆ
Cinema Latest Sandalwood
Sumalatha
ಕೋರ್ಟ್‌ ಆದೇಶದ ಮುಂದೆ ನಾವೆಲ್ಲ ನಿಸ್ಸಹಾಯಕರು – ವಿಷ್ಣು ಸಮಾಧಿ ತೆರವಿಗೆ ನಟಿ ಸುಮಲತಾ ಬೇಸರ
Bengaluru City Cinema Districts Karnataka Latest Main Post Sandalwood
CHOWKIDAR
ಚೌಕಿದಾರ್ ಜಾಲಿ ಹಾಡಿಗೆ ಕುಣಿದ ಪೃಥ್ವಿ ಅಂಬಾರ್, ಸಾಥ್‌ ಕೊಟ್ಟ ಸಾಯಿ ಕುಮಾರ್
Cinema Latest Sandalwood Top Stories
Siri Ravikumar
`ಶೋಧ’ಕ್ಕಾಗಿ ಪವನ್ ಕುಮಾರ್ ಜೊತೆ ಒಂದಾದ ಸಿರಿ ರವಿಕುಮಾರ್
Cinema Latest

You Might Also Like

Rahul Gandhi
Bengaluru City

ಮತಗಳ್ಳತನ ಆರೋಪ: ದಾಖಲೆ ಕೊಡುವಂತೆ ರಾಹುಲ್ ಗಾಂಧಿಗೆ ಚುನಾವಣಾ ಆಯೋಗ ನೋಟಿಸ್

Public TV
By Public TV
14 minutes ago
Dasara Gajapade
Districts

ಅರಣ್ಯ ಭವನದಲ್ಲಿ ದಸರಾ ಗಜಪಡೆಗೆ ಪೂಜೆ – ಅರಮನೆಗೆ ಎಂಟ್ರಿ ಕೊಟ್ಟ ಅಭಿಮನ್ಯು ಟೀಂ

Public TV
By Public TV
18 minutes ago
Vidhya Mandira 5 1
Bengaluru City

ಪಬ್ಲಿಕ್ ಟಿವಿ `ವಿದ್ಯಾಮಂದಿರ’ಕ್ಕೆ ಭರ್ಜರಿ ರೆಸ್ಪಾನ್ಸ್ – 4ನೇ ಆವೃತ್ತಿಯ ಶೈಕ್ಷಣಿಕ ಮೇಳಕ್ಕೆ ಅದ್ಧೂರಿ ತೆರೆ

Public TV
By Public TV
29 minutes ago
mumbai traffic jam 1
Latest

ರಾಷ್ಟ್ರೀಯ ಹೆದ್ದಾರಿಯಲ್ಲಿ ಭಾರಿ ಟ್ರಾಫಿಕ್‌ ಜಾಮ್‌ – ಆಸ್ಪತ್ರೆಗೆ ಸಾಗಿಸಲಾಗದೇ ಅಂಬುಲೆನ್ಸ್‌ನಲ್ಲೇ ಮಹಿಳೆ ಸಾವು

Public TV
By Public TV
32 minutes ago
Rohit Sharma Virat Kohli
Cricket

ಈ ವರ್ಷವೇ ಏಕದಿನ ಕ್ರಿಕೆಟ್‌ಗೆ ಗುಡ್‌ಬೈ ಹೇಳ್ತಾರಾ ರೋ-ಕೊ?

Public TV
By Public TV
54 minutes ago
Janardhana Poojary
Dakshina Kannada

ಮಸೀದಿ, ಚರ್ಚ್‌ನಲ್ಲಿ ಶವ ಹೂತಿಡಲಿಲ್ವಾ.. ಕೇವಲ ಧರ್ಮಸ್ಥಳದಲ್ಲಿ ಮಾತ್ರಾನಾ: ಜನಾರ್ದನ ಪೂಜಾರಿ ಪ್ರಶ್ನೆ

Public TV
By Public TV
3 hours ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?