ಮೈಸೂರು: ಹಾಯ್ ಬೆಂಗಳೂರು ಸಂಪಾದಕ ರವಿ ಬೆಳೆಗೆರೆ ಬಂಧನ ಕುರಿತಂತೆ ಪ್ರತಿಕ್ರಿಯೆ ನೀಡಲು ಕೇಳಿದಾಗ ಸಿಎಂ ಸಿದ್ದರಾಮಯ್ಯ, ಯಾವ ಕಾರಣಕ್ಕೆ ಬಂಧನ ಮಾಡಿದ್ದಾರೆ? ಅಂತ ಪ್ರಶ್ನಿಸಿದ್ದಾರೆ.
ನಗರದಲ್ಲಿ ಈ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪೊಲೀಸರು ಕಾನೂನು ಪ್ರಕಾರ ತನಿಖೆ ಮಾಡ್ತಾರೆ. ನಮಗೂ ಅದಕ್ಕೂ ಸಂಬಂಧ ಇಲ್ಲ. ಅವರ ಬಳಿ ಸಾಕ್ಷಿ ಇದೆಯೋ ಏನೋ ಗೊತ್ತಿಲ್ಲ. ಮಾತಾಡಬೇಕು. ಪೊಲೀಸರು ನನ್ನೊಂದಿಗೆ ಮಾತಾಡಿಲ್ಲ ಅಂದ್ರು. ಇದನ್ನೂ ಓದಿ: Exclusive: ಮದ್ವೆ ಮನೆಯಲ್ಲಿ ಊಟ ಮಾಡಿ ಸಿಎಂ ಕೊಟ್ಟ ಆದೇಶದಿಂದ ಬೆಳಗೆರೆ ಅರೆಸ್ಟ್!
ರವಿ ಬೆಳಗರೆ ಕರ್ನಾಟಕದ ಖ್ಯಾತ ಪತ್ರಕರ್ತರಾದ ಹಿನ್ನೆಲೆಯಲ್ಲಿ ಅವರನ್ನು ಬಂಧಿಸುವುದು ಹೇಗೆ ಎಂದು ಪೊಲೀಸರು ಚಿಂತೆಯಲ್ಲಿದ್ದಾಗ ಸಿಎಂ ಸಿದ್ದರಾಮಯ್ಯ ಪೊಲೀಸರಿಗೆ ಸಂಪೂರ್ಣ ಬೆಂಬಲ ನೀಡಿದ್ದರು. ಸಿಎಂ ಬೆನ್ನಿಗೆ ನಿಲ್ಲದೇ ಇದ್ದಲ್ಲಿ ಬಂಧನ ಕಷ್ಟವಾಗುತಿತ್ತು ಎಂದು ಬೆಳಗೆರೆ ಬಂಧನವಾದ ಬಳಿಕ ಪೊಲೀಸ್ ಮೂಲಗಳು ಮಾಹಿತಿ ನೀಡಿದ್ದವು. ಇದನ್ನೂ ಓದಿ: Exclusive: ರವಿಬೆಳಗೆರೆ ರಾಕ್ಷಸ, ನನ್ನ ವಿರುದ್ಧ ಸುಪಾರಿ ನೀಡಿರುವುದು ಅತ್ಯಂತ ಕೆಟ್ಟ ಕೆಲಸ: ಸುನೀಲ್ ಹೆಗ್ಗರವಳ್ಳಿ
ಹಿರಿಯ ಪತ್ರಕರ್ತೆ ಗೌರಿ ಲಂಕೇಶ್ ಪ್ರಕರಣದ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ ಆರಂಭದಲ್ಲಿ ನಾಡ ಪಿಸ್ತೂಲ್ ಮಾರಾಟ ಮಾಡಲು ಪ್ರಯತ್ನಿಸುತ್ತಿದ್ದ ತಾಹೀರ್ ಹುಸೇನ್ ಅನೂಪ್ ಗೌಡನನ್ನು ವಶಕ್ಕೆ ಪಡೆದಿದ್ದರು. ಯಲಹಂಕದಲ್ಲರುವ ಆತನ ಮನೆಯನ್ನು ಪರಿಶೀಲನೆ ನಡೆಸುತ್ತಿದ್ದಾಗ ಒನಿಡಾ ಟಿವಿಯ ಹಿಂದುಗಡೆ ಮೂರು ಪಿಸ್ತೂಲ್ ಇರುವುದನ್ನು ನೋಡಿ ಪೊಲೀಸರು ಒಮ್ಮೆ ಬೆಚ್ಚಿ ಬಿದ್ದಿದ್ದರು. ಬಳಿಕ ಆತನನ್ನು ವಿಚಾರಣೆ ನಡೆಸಿದಾಗ ಪತ್ರಕರ್ತ ಸುನಿಲ್ ಹೆಗ್ಗರವಳ್ಳಿಯವರನ್ನು ಹತ್ಯೆ ಮಾಡಲು ರವಿ ಬೆಳೆಗೆರೆ 30 ಲಕ್ಷ ಸುಪಾರಿ ನಿಡಿರುವ ಬಗ್ಗೆ ಬೆಳಕಿಗೆ ಬಂದಿತ್ತು. ಈ ಹಿನ್ನೆಲೆಯಲ್ಲಿ ರವಿಬೆಳೆಗೆರೆಯನ್ನು ಪೊಲಿಸರು ಬಂಧಿಸಿದ್ದರು. ಇದನ್ನೂ ಓದಿ: ರವಿ ಬೆಳಗೆರೆ ಸುಪಾರಿ ಪ್ರಕರಣ: ಮಗಳು ಭಾವನಾ, ಮಗ ಕರ್ಣ ಹೀಗಂದ್ರು
https://www.youtube.com/watch?v=gpHJrcsZuBM
https://www.youtube.com/watch?v=kJ5uYUEgVeM
https://www.youtube.com/watch?v=lgEoaxQ1l44
https://www.youtube.com/watch?v=tvAkOpM6ZZo
https://www.youtube.com/watch?v=p0Orve2DpiM
https://www.youtube.com/watch?v=ucQolRekyhU