Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಗೋಬಿ, ಕಾಟನ್‌ ಕ್ಯಾಂಡಿ ಆಯ್ತು.. ಈಗ ಚಿಕನ್‌, ಫಿಶ್‌ ಕಬಾಬ್‌ಗೆ ಕರ್ನಾಟಕ ಶಾಕ್‌!
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Latest | ಗೋಬಿ, ಕಾಟನ್‌ ಕ್ಯಾಂಡಿ ಆಯ್ತು.. ಈಗ ಚಿಕನ್‌, ಫಿಶ್‌ ಕಬಾಬ್‌ಗೆ ಕರ್ನಾಟಕ ಶಾಕ್‌!

Latest

ಗೋಬಿ, ಕಾಟನ್‌ ಕ್ಯಾಂಡಿ ಆಯ್ತು.. ಈಗ ಚಿಕನ್‌, ಫಿಶ್‌ ಕಬಾಬ್‌ಗೆ ಕರ್ನಾಟಕ ಶಾಕ್‌!

Public TV
Last updated: June 29, 2024 8:56 pm
Public TV
Share
5 Min Read
chicken and fish kabab artificial color ban in karnataka
SHARE

– ಕೃತಕ ಬಣ್ಣ ಬಳಕೆಯ ಆಹಾರ ಆರೋಗ್ಯಕ್ಕೆ ಎಷ್ಟು ಅಪಾಯಕಾರಿ?
– ಆಹಾರದಲ್ಲಿ ಬಳಸುವ ಕೃತಕ ಬಣ್ಣಗಳು ಯಾವುವು?

ಗೋಬಿ ಮಂಚೂರಿ (Gobi Manchurian), ಕಾಟನ್‌ ಕ್ಯಾಂಡಿ (Cotton Candy) ಆಯ್ತು. ಈಗ ಕಬಾಬ್‌ ಪ್ರಿಯರಿಗೆ ರಾಜ್ಯ ಸರ್ಕಾರ ಶಾಕ್‌ ಕೊಟ್ಟಿದೆ. ಕ್ಯಾನ್ಸರ್‌ ಕಾರಕ ಅಂಶ ಇರುವ ಕಾರಣ ಗೋಬಿ ಮತ್ತು ಕ್ಯಾಂಡಿ ಕಾಟನ್‌ಗೆ ಕೃತಕ ಬಣ್ಣ ಬಳಕೆಗೆ ನಿಷೇಧ ಹೇರಿತ್ತು. ಅದರ ಬೆನ್ನಲ್ಲೇ ಚಿಕನ್‌ ಕಬಾಬ್‌, ಫಿಶ್‌ ಕಬಾಬ್‌ ಹಾಗೂ ಇತರೆ ಖಾದ್ಯಗಳ ತಯಾರಿಕೆಗೆ ಕೃತಕ ಬಣ್ಣ ಬಳಸುವುದಕ್ಕೆ ಸರ್ಕಾರ ನಿಷೇಧ ವಿಧಿಸಿ ಆದೇಶ ಹೊರಡಿಸಿದೆ.

ಕಣ್ಣಿಗೆ ಆಕರ್ಷಣೆ, ನಾಲಿಗೆಗೆ ರುಚಿ ಸಿಕ್ಕರೆ ಮನುಷ್ಯ ತನ್ನ ಮೇಲಿನ ನಿಯಂತ್ರಣವನ್ನೇ ಕಳೆದುಕೊಳ್ಳುತ್ತಾನೆ. ತಿನಿಸುಗಳು ಮೊದಲು ಕಣ್ಣಿಗೆ ಆಕರ್ಷಣೀಯವಾಗಿ ಕಾಣುತ್ತವೆ. ಆಮೇಲೆ ರುಚಿ ಆಸ್ವಾಧಿಸಲು ಸೆಳೆಯುತ್ತವೆ. ರುಚಿಕರ ತಿನಿಸನ್ನು ನಾಲಿಗೆಗೆ ಇಟ್ಟರೆ ಸಾಕು, ಆಹಾ.. ಇನ್ನೂ ಬೇಕು ಎನಿಸುತ್ತದೆ. ಆದರೆ ಆರೋಗ್ಯಕ್ಕೆ? ರುಚಿಯ ಮುಂದೆ ಕೆಲವೊಮ್ಮೆ ಆರೋಗ್ಯ ಕಾಳಜಿಯೂ ಗೌಣವಾಗಿಬಿಡುತ್ತದೆ. ಈ ಬಗ್ಗೆ ಎಷ್ಟೇ ಜಾಗೃತಿ ಮೂಡಿಸಿದರೂ ಬಹುಪಾಲು ಮಂದಿ ಡೋಂಟ್ ಕೇರ್ ಎನ್ನುತ್ತಾರೆ. ಆದರೆ ಸರ್ಕಾರ ಬಿಡಬೇಕಲ್ಲ, ತನ್ನ ಸಮಾಜದ ಪ್ರತಿಯೊಬ್ಬ ನಾಗರಿಕರ ಹಿತಕ್ಕಾಗಿ ಕೆಲವೊಂದು ಕಟ್ಟುನಿಟ್ಟಿನ ನಿಯಮಗಳನ್ನು ಜಾರಿಗೊಳಿಸುತ್ತದೆ. ಈಗಲೂ ಅಂತಹದ್ದೊಂದು ಘೋಷಣೆಯಾಗಿದೆ. ಇದನ್ನೂ ಓದಿ: ಕೇಂದ್ರದಿಂದ ರಾಜ್ಯಕ್ಕೆ ಸಿಗಬೇಕಾದ ನೆರವಿನ ವಿಚಾರದಲ್ಲಿ ಕೇಂದ್ರ ಸಚಿವರಿಂದ ಭರವಸೆ: ಡಿಕೆಶಿ

Chicken Seekh Kabab 1

ಚಿಕನ್ (Chicken Kabab), ಫಿಶ್ ಕಬಾಬ್‌ (Fish Kabab) ಹಾಗೂ ಇತರೆ ಖಾದ್ಯಗಳ ತಯಾರಿಕೆಗೆ ಕೃತಕ ಬಣ್ಣಗಳನ್ನು ಬಳಸುವುದಕ್ಕೆ ಕರ್ನಾಟಕ ಸರ್ಕಾರ ಸಂಪೂರ್ಣ ನಿಷೇಧ ವಿಧಿಸಿದೆ. ಚಿಕನ್ ಮತ್ತು ಫಿಶ್ ಕಬಾಬ್ ತಯಾರಿಕೆಯಲ್ಲಿ ಬಳಸುವ ಕೃತಕ ಬಣ್ಣಗಳ ಮಾದರಿಗಳನ್ನು ತಪಾಸಣೆಗೆ ಒಳಪಡಿಸಿದಾಗ ಕಳಪೆ ಗುಣಮಟ್ಟದ್ದು ಎಂದು ತಿಳಿದುಬಂದಿದೆ. ಕೃತಕ ಬಣ್ಣಗಳನ್ನು ಬಳಸಿದ ಖಾದ್ಯಗಳ ಸೇವನೆಯಿಂದಾಗುವ ದುಷ್ಪರಿಣಾಮಗಳ ಬಗ್ಗೆ ಆಹಾರ ಸುರಕ್ಷತಾ ಇಲಾಖೆ ಆಯುಕ್ತರು ತನಿಖೆ ನಡೆಸಿ ಕ್ರಮಕೈಗೊಳ್ಳಲಿದ್ದಾರೆ ಎಂದು ರಾಜ್ಯ ಸರ್ಕಾರ ಹೇಳಿದೆ. ರಾಜ್ಯಾದ್ಯಂತ ಕಬಾಬ್ ಮತ್ತು ತಿನಿಸುಗಳಲ್ಲಿ ಕೃತಕ ಬಣ್ಣಗಳನ್ನು ಬಳಸುತ್ತಿರುವ ಕುರಿತು ರಾಜ್ಯದ ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಇಲಾಖೆಗೆ ಅನೇಕ ದೂರುಗಳು ಬಂದ ಹಿನ್ನೆಲೆಯಲ್ಲಿ ಈ ಕ್ರಮಕೈಗೊಳ್ಳಲಾಗಿದೆ.

39 ಕಬಾಬ್ ಮಾದರಿಗಳ ಪರೀಕ್ಷೆಯಿಂದ ಗೊತ್ತಾಗಿದ್ದೇನು?
ಆಹಾರ ಸುರಕ್ಷತಾ ಮತ್ತು ಗುಣಮಟ್ಟ ಇಲಾಖೆಯು ಪ್ರಯೋಗಾಲಯಗಳಲ್ಲಿ 39 ಕಬಾಬ್‌ಗಳ ಮಾದರಿಗಳನ್ನು ಪರೀಕ್ಷೆಗೆ ಒಳಪಡಿಸಿತು. ಅವುಗಳ ಪೈಕಿ ಎಂಟರಲ್ಲಿ ಕೃತಕ ಬಣ್ಣವನ್ನು ಬಳಸಿರುವುದರಿಂದ ಸೇವನೆಗೆ ಅಸುರಕ್ಷಿತವಾಗಿದೆ ಎಂದು ತಿಳಿದುಬಂತು. ಇವುಗಳಲ್ಲಿ ಏಳು ಮಾದರಿಗಳಲ್ಲಿ ‘ಸೂರ್ಯಾಸ್ತ ಹಳದಿ’ (ಸೂರ್ಯ ಮುಳುಗುವ ಸಂದರ್ಭದಲ್ಲಿ ಕಂಡುಬರುವ ಬಣ್ಣ) ಹಾಗೂ ಒಂದರಲ್ಲಿ ‘ಸೂರ್ಯಾಸ್ತ ಹಳದಿ’ ಮತ್ತು ಕಾರ್ಮೋಸಿಸ್’ ಕಂಡುಬಂದಿದೆ. ಇದನ್ನೂ ಓದಿ: ಯಾರಾದರೂ ಆರಾಮಾಗಿ ಇರುತ್ತಾರಾ: ದರ್ಶನ್‌ ಭೇಟಿಯ ನಂತರ ರಕ್ಷಿತಾ ಪ್ರೇಮ್‌ ಭಾವುಕ

ಯಾವ ಆರೋಗ್ಯ ಸಮಸ್ಯೆಗೆ ಕಾರಣ?
ಕಳೆದ 50 ವರ್ಷಗಳಲ್ಲಿ ಕೃತಕ ಬಣ್ಣಗಳನ್ನು ಒಳಗೊಂಡಿರುವ ಆಹಾರಗಳ ಸೇವನೆಯು 500% ಹೆಚ್ಚಾಗಿದೆ. ಇಂತಹ ಪದಾರ್ಥ ಸೇವನೆಯಲ್ಲಿ ಮಕ್ಕಳ ಪಾಲು ಹೆಚ್ಚಿದೆ ಅಧ್ಯಯನಗಳು ಹೇಳುತ್ತವೆ. ತಜ್ಞರ ಪ್ರಕಾರ, ಆಹಾರದ ಬಣ್ಣಗಳು ಅನೇಕ ಗಂಭೀರ ಮತ್ತು ಅಪಾಯಕಾರಿ ಆರೋಗ್ಯ ಸಮಸ್ಯೆಗಳಿಗೆ ಕಾರಣವಾಗುತ್ತವೆ. ಇದರಲ್ಲಿ ಹೃದ್ರೋಗಗಳು, ಮೆಟಾಬಾಲಿಕ್ ಸಿಂಡ್ರೋಮ್, ಜನನ ದೋಷಗಳು, ನರಕೋಶಗಳಿಗೆ ಹಾನಿ, ಮೂತ್ರಪಿಂಡ ಮತ್ತು ಕ್ಯಾನ್ಸರ್‌ನಂತಹ ಸಮಸ್ಯೆಗಳಿಗೆ ಕಾರಣವಾಗಬಹುದು ಎಂದು ಹೇಳುತ್ತಾರೆ.

fish kabab 3

ಅಲರ್ಜಿ ಸಮಸ್ಯೆ: ಕೆಲವರಿಗೆ ಕೃತಕ ಬಣ್ಣ ಬಳಕೆಯ ಆಹಾರ ಪದಾರ್ಥ ಸೇವಿಸಿದ ಬಳಿಕ ಅಸ್ತಮಾ, ಸೀನುವಿಕೆ, ಕಣ್ಣಿನಲ್ಲಿ ನೀರೂರುವುದು, ಚರ್ಮದ ಕಿರಿಕಿಯಂತಹ ಅಲರ್ಜಿ ಸಮಸ್ಯೆಯನ್ನು ಅನುಭವಿಸುತ್ತಾರೆ. ಇಂತಹವರು ಆರೋಗ್ಯಕರ ಆಹಾರ ಸೇವನೆ ಅಭ್ಯಾಸ ರೂಢಿಸಿಕೊಳ್ಳಬೇಕು. ಜೊತೆಗೆ ಸೂಕ್ತ ಚಿಕಿತ್ಸೆ ಪಡೆದುಕೊಳ್ಳಬೇಕು. ಇಲ್ಲದೇ ಹೋದರೆ, ಕೋಮಾ ಸ್ಥಿತಿಗೆ ಹೋಗಬಹುದು. ಪರಿಸ್ಥಿತಿ ಗಂಭೀರವಾದಲ್ಲಿ ಸಾವು ಕೂಡ ಸಂಭವಿಸಬಹುದು ಎಂದು ವೈದ್ಯರು ಎಚ್ಚರಿಸಿದ್ದಾರೆ.

ವರ್ತನೆಯ ಸಮಸ್ಯೆ: ಕೃತಕ ಆಹಾರ ಬಣ್ಣಗಳು ಮಕ್ಕಳಲ್ಲಿ ಹೈಪರ್‌ಆಕ್ಟೀವ್‌, ನಿದ್ರಾಹೀನತೆ, ಕಿರಿಕಿರಿ, ಖಿನ್ನತೆ ಮತ್ತು ಕೋಪಗೊಳ್ಳುವಿಕೆಯಂತಹ ನಡವಳಿಕೆಯ ಬದಲಾವಣೆಗಳಿಗೆ ಕಾರಣವಾಗುತ್ತವೆ ಎಂದು ಅಧ್ಯಯನ ತಿಳಿಸಿದೆ. ಇದನ್ನೂ ಓದಿ: ದರ್ಶನ್‌ ಭೇಟಿಗೆ ಪರಪ್ಪನ ಅಗ್ರಹಾರಕ್ಕೆ ಆಗಮಿಸಿದ ರಕ್ಷಿತಾ, ಪ್ರೇಮ್‌

ಜೀರ್ಣಕ್ರಿಯೆ ಸಮಸ್ಯೆ: ಕೃತಕ ಆಹಾರ ಬಣ್ಣಗಳಿಂದ ಜೀರ್ಣಕ್ರಿಯೆ ಸಮಸ್ಯೆಗೆ ಕಾರಣವಾಗುತ್ತದೆ. ಇದರಿಂದ ತೀವ್ರವಾದ ಅತಿಸಾರ, ಎದೆಯುರಿ ಮತ್ತು ಮಲಬದ್ಧತೆಗೆ ಕಾರಣವಾಗುತ್ತದೆ.

CANCER 1

ಕ್ಯಾನ್ಸರ್‌: ರೆಡ್‌ 40, ಯೆಲ್ಲೋ 5 ಮತ್ತು ಯೆಲ್ಲೋ 6 (ಕೃತಕ ಆಹಾರ ಬಣ್ಣಗಳು) ಇವು ಕ್ಯಾನ್ಸರ್ ಕಾರಕ ವಸ್ತುಗಳು ಎಂದು ಅಧ್ಯಯನಗಳು ಹೇಳುತ್ತದೆ. ಇವುಗಳಲ್ಲಿ ಮಾಲಿನ್ಯಕಾರಕ ಅಂಶಗಳಿರುತ್ತವೆ. ಬೆಂಜಿಡಿನ್, 4-ಅಮಿನೊಬಿಫೆನಿಲ್ ಮತ್ತು 4-ಅಮಿನೊಅಜೋಬೆನ್ಜೆನ್ ಆಹಾರದ ಬಣ್ಣಗಳಲ್ಲಿ ಕಂಡುಬರುವ ಕಾರ್ಸಿನೋಜೆನ್‌ಗಳಾಗಿವೆ.

ಆಹಾರದಲ್ಲಿ ಬಳಸುವ ಕೃತಕ ಬಣ್ಣಗಳು ಯಾವುವು?
ರೆಡ್‌ 3: ಇದನ್ನು ಎರಿಥ್ರೋಸಿನ್ ಎಂದೂ ಕರೆಯುತ್ತಾರೆ. ಈ ಚೆರ್ರಿ-ಕೆಂಪು ಬಣ್ಣವನ್ನು ಸಾಮಾನ್ಯವಾಗಿ ಕ್ಯಾಂಡಿ, ಪಾಪ್ಸಿಕಲ್ಸ್ ಮತ್ತು ಕೇಕ್-ಅಲಂಕರಣ ಜೆಲ್‌ಗಳಲ್ಲಿ ಬಳಸಲಾಗುತ್ತದೆ.

ರೆಡ್‌ 40: ಅಲ್ಲೂರ ಕೆಂಪು ಬಣ್ಣವು ಗಾಢವಾಗಿರುತ್ತದೆ. ಇದನ್ನು ಕ್ರೀಡಾ ಪಾನೀಯಗಳು, ಕ್ಯಾಂಡಿ, ಕಾಂಡಿಮೆಂಟ್ಸ್ ಮತ್ತು ಸಿರಿಧಾನ್ಯಗಳಲ್ಲಿ ಬಳಸಲಾಗುತ್ತದೆ. ಇದನ್ನೂ ಓದಿ: ಬಿಬಿಎಂಪಿಯಲ್ಲಿ ಕೋಟಿ ಕೋಟಿ ಹಣ ಅಕ್ರಮ ವರ್ಗಾವಣೆ ಬಯಲಿಗೆ

ಯೆಲ್ಲೋ 5: ಟಾರ್ಟ್ರಾಜೈನ್ ನಿಂಬೆ-ಹಳದಿ ಬಣ್ಣವಾಗಿದೆ. ಇದನ್ನು ಕ್ಯಾಂಡಿ, ತಂಪು ಪಾನೀಯಗಳು, ಚಿಪ್ಸ್ ಮತ್ತು ಪಾಪ್ಕಾರ್ನ್‌ಗಳಲ್ಲಿ ಹೆಚ್ಚಾಗಿ ಬಳಸಲಾಗುತ್ತದೆ.

ಬ್ಲ್ಯೂ 1: ಇದನ್ನು ಬ್ರಿಲಿಯಂಟ್ ಬ್ಲೂ ಎಂದೂ ಕರೆಯಲಾಗುತ್ತದೆ. ಹಸಿರು-ನೀಲಿ ಬಣ್ಣವನ್ನು ಐಸ್ ಕ್ರೀಮ್, ಬಟಾಣಿ, ಪ್ಯಾಕೇಜ್ ಮಾಡಿದ ಸೂಪ್‌ಗಳು, ಪಾಪ್ಸಿಕಲ್‌ಗಳು ಮತ್ತು ಐಸಿಂಗ್‌ಗಳಲ್ಲಿ ವ್ಯಾಪಕವಾಗಿ ಬಳಸಲಾಗುತ್ತದೆ.

ಬೇರೆ ರಾಜ್ಯಗಳಲ್ಲಿ ನಿಷೇಧ?
ಇದವರೆಗೂ ಕರ್ನಾಟಕ ಬಿಟ್ಟರೆ ಬೇರೆ ರಾಜ್ಯಗಳಲ್ಲಿ ಆಹಾರ ಪದಾರ್ಥಕ್ಕೆ ಕೃತಕ ಬಣ್ಣಗಳ ಬಳಕೆಗೆ ನಿಷೇಧ ಹೇರಿಲ್ಲ. 2024 ರ ಮಾರ್ಚ್‌ ತಿಂಗಳಲ್ಲಿ ಗೋಬಿ ಮಂಚೂರಿ ಮತ್ತು ಕಾಟನ್‌ ಕ್ಯಾಂಡಿ ತಯಾರಿಕೆಗೆ ಕೃತಕ ಬಣ್ಣ ಬಳಸುವುದನ್ನು ನಿಷೇಧಿಸಿ ಕರ್ನಾಟಕ ಸರ್ಕಾರ ಆದೇಶ ಹೊರಡಿಸಿತ್ತು. ಮತ್ತೆ ಈಗ ಚಿಕನ್‌, ಫಿಶ್‌ ಮತ್ತು ಇತರೆ ಖಾದ್ಯಗಳಲ್ಲಿ ಕೃತಕ ಬಣ್ಣ ಬಳಕೆಗೆ ನಿಷೇಧ ಹೇರಿದೆ. ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಕಾಯಿದೆ 2006 ಹಾಗೂ ಆಹಾರ ಸುರಕ್ಷತೆ ಮತ್ತು ಗುಣಮಟ್ಟಗಳು (ಆಹಾರ ಉತ್ಪನ್ನಗಳು, ಗುಣಮಟ್ಟಗಳು ಮತ್ತು ಆಹಾರ ಸೇರ್ಪಡೆಗಳು) ನಿಯಮಗಳು 2011 ರ ಅನ್ವಯ ನಿಷೇಧ ವಿಧಿಸಿದೆ. ಗ್ರಾಹಕರಲ್ಲಿ ಗಂಭೀರವಾದ ಆರೋಗ್ಯ ಅಪಾಯಗಳನ್ನು ಉಂಟುಮಾಡುತ್ತವೆ ಎಂಬುದನ್ನು ಈ ನಿಯಮಗಳು ಒತ್ತಿ ಹೇಳುತ್ತವೆ.

ಆರೋಗ್ಯಕರ, ಉತ್ತಮ ಆಹಾರ ಸೇವಿಸಿ
ಸಂಸ್ಕರಿಸದ ಆಹಾರ ಸೇವನೆ ಮಾಡಬೇಕು. ಜಂಕ್ ಫುಡ್‌ ಬದಲಾಗಿ ಪೌಷ್ಟಿಕಾಂಶ ಇರುವ ಆಹಾರ ಸೇವಿಸಬೇಕು. ಆರೋಗ್ಯದ ದೃಷ್ಟಿಯಿಂದ ನೀವು ಹಾಲು, ಮೊಸರು, ಚೀಸ್, ಮೊಟ್ಟೆ, ಮಾಂಸ, ಸುವಾಸನೆಯಿಲ್ಲದ ಬಾದಾಮಿ, ಮಕಾಡಾಮಿಯಾ ಬೀಜಗಳು, ಗೋಡಂಬಿ, ವಾಲ್‌ನಟ್ಸ್, ಸೂರ್ಯಕಾಂತಿ ಬೀಜಗಳು, ತಾಜಾ ಹಣ್ಣು ಮತ್ತು ತರಕಾರಿ, ಓಟ್ಸ್, ಕಂದು ಅಕ್ಕಿ, ಕ್ವಿನೋವಾ, ಬಾರ್ಲಿ, ಬೀನ್ಸ್‌ ಕಡಲೆಯಂತಹ ಆಹಾರಗಳನ್ನು ಸೇವಿಸಿ ಎಂದು ವೈದ್ಯರು ಸಲಹೆ ನೀಡಿದ್ದಾರೆ.

TAGGED:Artificial ColoursChicken KebabsFish Kebabskarnatakaಕರ್ನಾಟಕಕೃತಕ ಬಣ್ಣಚಿಕನ್ ಕಬಾಬ್ಫಿಶ್ ಕಬಾಬ್
Share This Article
Facebook Whatsapp Whatsapp Telegram

Cinema news

Asha Bhosle Funeral
ಸರ್ಕಾರಿ ಗೌರವಗಳೊಂದಿಗೆ ನೆರವೇರಿದ ಗಾಯಕಿ ಆಶಾ ಭೋಸ್ಲೆ ಅಂತ್ಯಕ್ರಿಯೆ
Cinema Latest National Top Stories
Jogi Prem
ಕನ್ನಡ ಸಿನಿಮಾ ಅಂತಲೇ ರಾಜಕಾರಣ – ಸೆನ್ಸಾರ್ ಬೋರ್ಡ್ ವಿರುದ್ಧ ಪ್ರೇಮ್ ಕಿಡಿ
Cinema Latest Sandalwood Top Stories
Dhruva Sarja
LPG ಗ್ಯಾಸ್‌ ಬಿಕ್ಕಟ್ಟಿನಿಂದ ಕಂಗಾಲಾದ ಆಟೋ ಚಾಲಕರಿಗೆ ಆಸರೆ – 25 ಲಕ್ಷ ನೆರವು ನೀಡಿದ ಧ್ರುವ ಸರ್ಜಾ!
Bengaluru City Cinema Latest Sandalwood Top Stories
Asha Bhosle 3
`ಅಭೀ ನಾ ಜಾವೋ ಛೋಡ್ ಕರ್’ ಗಾಯಕಿ ಸಂಗೀತದಲ್ಲಿ ಲೀನ – ಇಂದು ಆಶಾ ಭೋಸ್ಲೆ ಅಂತ್ಯಕ್ರಿಯೆ
Cinema Latest Main Post Top Stories

You Might Also Like

Tyavarekoppa Hippopotamus Shivamogga
Latest

ಪಶುವೈದ್ಯೆ ಕೊಂದಿದ್ದ ನೀರಾನೆ ಬಹು ಅಂಗಾಂಗ ಸೋಂಕಿನಿಂದ ಸಾವು

Public TV
By Public TV
1 minute ago
Rajanna Naseer next Zameer Ahmed CM Siddaramaiahs close circle friends is the big target Karnataka Politics
Bengaluru City

ರಾಜಣ್ಣ, ನಸೀರ್‌ ಆಯ್ತು ಮುಂದೆ ಜಮೀರ್‌? – ಸಿಎಂ ಆಪ್ತರೇ ಬಿಗ್‌ ಟಾರ್ಗೆಟ್‌

Public TV
By Public TV
14 minutes ago
leopard rescue udupi
Latest

ಉಡುಪಿ| ಬಾವಿಗೆ ಬಿದ್ದಿದ್ದ ಚಿರತೆ ರಕ್ಷಿಸಿದ ಅರಣ್ಯ ಇಲಾಖೆ ಸಿಬ್ಬಂದಿ

Public TV
By Public TV
40 minutes ago
Strait of Hormuz 1
Latest

ಅಮೆರಿಕ ದಿಗ್ಭಂಧನಕ್ಕೆ ಸೆಡ್ಡು – ಹಾರ್ಮುಜ್‌ ದಾಟಿದ ಇರಾನ್‌ ಬಂದರಿನಿಂದ ಬಂದ 2 ಹಡಗು

Public TV
By Public TV
1 hour ago
Marathi mandatory for rickshaw and taxi drivers in Maharashtra from May 1 Pratap Sarnaik RTO
Latest

ಮೇ 1 ರಿಂದ ಮಹಾರಾಷ್ಟ್ರದಲ್ಲಿ ಆಟೋ, ಟ್ಯಾಕ್ಸಿ ಚಾಲಕರಿಗೆ ಮರಾಠಿ ಕಡ್ಡಾಯ – ಇಲ್ಲದಿದ್ದರೆ ಲೈಸೆನ್ಸ್‌ ರದ್ದು

Public TV
By Public TV
1 hour ago
Vedanta power plant boiler blast
Latest

ಛತ್ತೀಸ್‌ಗಢದ ವೇದಾಂತ ವಿದ್ಯುತ್ ಸ್ಥಾವರದಲ್ಲಿ ಬಾಯ್ಲರ್ ಸ್ಫೋಟ – 9 ಕಾರ್ಮಿಕರು ದುರ್ಮರಣ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?