Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Latest

ಬರ ಪರಿಹಾರ; ಕೇಂದ್ರ V/S ಕರ್ನಾಟಕ ಸರ್ಕಾರ – ರಾಜ್ಯ ‘ಸುಪ್ರೀಂ’ ಮೆಟ್ಟಿಲೇರಿದ್ಯಾಕೆ?

Public TV
Last updated: April 3, 2024 12:46 pm
Public TV
Share
5 Min Read
karnataka drought supreme court
SHARE

ಲೋಕಸಭಾ ಚುನಾವಣೆ ಹೊತ್ತಲ್ಲಿ ಕೇಂದ್ರದ ವಿರುದ್ಧ ರಾಜ್ಯ ಸರ್ಕಾರ ‘ಬರ ಪರಿಹಾರ’ ಅಸ್ತ್ರ ಪ್ರಯೋಗಿಸಿದೆ. ಮುಂಗಾರು ಕೊರತೆಯಿಂದಾಗಿ ರಾಜ್ಯದಲ್ಲಿ ಬರ ಪರಿಸ್ಥಿತಿ ತಲೆದೋರಿದೆ. ನೀರಿಗೂ ಹಾಹಾಕಾರ ಶುರುವಾಗಿದೆ. ಡೋಲಾಯಮಾನ ಪರಿಸ್ಥಿತಿ ಬಗ್ಗೆ ಕೇಂದ್ರಕ್ಕೆ ರಾಜ್ಯ ಸರ್ಕಾರ ಮನವರಿಕೆ ಮಾಡಿತು. ಆದರೆ ಕೇಂದ್ರದಿಂದ ಸೂಕ್ತ ಸ್ಪಂದನೆ ಸಿಗಲಿಲ್ಲ ಎಂದು ಸಿದ್ದರಾಮಯ್ಯ ನೇತೃತ್ವದ ಸರ್ಕಾರ ಕಾನೂನು ಹೋರಾಟಕ್ಕೆ ಮುಂದಾಗಿದೆ. ಬರ ಪರಿಹಾರಕ್ಕಾಗಿ ರಾಜ್ಯ ಸರ್ಕಾರ ಸುಪ್ರೀಂ ಕೋರ್ಟ್ (ರಿಟ್ ಅರ್ಜಿ) ಮೊರೆ ಹೋಗಿದೆ. ಈ ಬೆಳವಣಿಗೆ ರಾಜ್ಯದ ಆಡಳಿತ ಮತ್ತು ವಿಪಕ್ಷಗಳ ನಡುವಿನ ಜಟಾಪಟಿಗೆ ಕಾರಣವಾಗಿದೆ.

ರಾಷ್ಟ್ರೀಯ ವಿಪತ್ತು ನಿರ್ವಹಣಾ ನಿಧಿ (ಎನ್‌ಡಿಆರ್‌ಎಫ್) ಅಡಿಯಲ್ಲಿ ರಾಜ್ಯಕ್ಕೆ 18,171 ಕೋಟಿ ರೂ. ಬರ ಪರಿಹಾರ ಬರಬೇಕಿದೆ. ಪರಿಹಾರವನ್ನು ಬಿಡುಗಡೆ ಮಾಡುವಂತೆ ಕೇಂದ್ರ ಸರ್ಕಾರಕ್ಕೆ ನಿದೇರ್ಶನ ನೀಡಬೇಕು ಎಂದು ಕೋರಿ ಕರ್ನಾಟಕ ಸರ್ಕಾರವು ಸುಪ್ರೀಂ ಕೋರ್ಟ್ ಮೊರೆ ಹೋಗಿದೆ.

ಕೇಂದ್ರಕ್ಕೆ ಕಾನೂನು ಸವಾಲು!
ಬಿರು ಬೇಸಿಗೆಯಿಂದ ರಾಜ್ಯದಲ್ಲಿ ಒಣ ಹವೆ ಹೆಚ್ಚಾಗಿದೆ. ವಿವಿಧ ಜಿಲ್ಲೆಗಳು ಈಗಾಗಲೇ ನೀರಿನ ಕೊರತೆ ಎದುರಿಸುತ್ತಿವೆ. ಈ ಕುರಿತು ಮಾತನಾಡಿರುವ ಸಿಎಂ ಸಿದ್ದರಾಮಯ್ಯ, ರಾಜ್ಯಕ್ಕೆ ಬೇರೆ ದಾರಿಯಿಲ್ಲ. ಎನ್‌ಡಿಆರ್‌ಎಫ್ ಅಡಿಯಲ್ಲಿ ಹಕ್ಕು ಪಡೆಯಲು ಸರ್ಕಾರ ಕಳೆದ 5 ತಿಂಗಳಿಂದ ಕಾಯುತ್ತಿದೆ ಎಂದು ತಿಳಿಸಿದ್ದಾರೆ. ಪರಿಹಾರಕ್ಕಾಗಿ ಕೇಂದ್ರಕ್ಕೆ ಕಾನೂನು ಸವಾಲು ಹಾಕಿರುವ ರಾಜ್ಯ ಸರ್ಕಾರವನ್ನು ವಿಪಕ್ಷಗಳಾದ ಬಿಜೆಪಿ ಮತ್ತು ಜೆಡಿಎಸ್ ತರಾಟೆಗೆ ತೆಗೆದುಕೊಂಡಿವೆ.

ಆರ್ಥಿಕ ಕಾರಣಗಳಿಗಾಗಿ ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರ ಹಾಗೂ ಕಾಂಗ್ರೆಸ್ ನೇತೃತ್ವದ ಕರ್ನಾಟಕ ಸರ್ಕಾರದ ನಡುವೆ ಜಟಾಪಟಿ ನಡೆಯುತ್ತಿದೆ. ಕಳೆದ ತಿಂಗಳು ತೆರಿಗೆ ಮತ್ತು ಇತರೆ ಅನುದಾನ ಹಂಚಿಕೆಗಳಲ್ಲಿ ರಾಜ್ಯಕ್ಕೆ ಅನ್ಯಾಯವಾಗಿದೆ ಎಂದು ಆರೋಪಿಸಿ ಕೇಂದ್ರದ ವಿರುದ್ಧ ಸಿಎಂ ಮತ್ತು ಅವರ ಸಚಿವ ಸಂಪುಟ ‘ದೆಹಲಿ ಚಲೋ’ ನಡೆಸಿತ್ತು.

ಪ್ರಸ್ತುತ ಕರ್ನಾಟಕದಲ್ಲಿ ಬರ ಮತ್ತು ನೀರಿನ ಕೊರತೆ ಪ್ರಮಾಣ ಎಷ್ಟಿದೆ?
ರಾಜ್ಯವು ಕೇಂದ್ರ ಸರ್ಕಾರಕ್ಕೆ ಸಲ್ಲಿಸಿದ ವರದಿ ಪ್ರಕಾರ, 236 ರ ಪೈಕಿ 223 ತಾಲೂಕುಗಳು ಬರಪೀಡಿತ ಎಂದು ಘೋಷಿಸಲಾಗಿದೆ. ಬರ ಪರಿಣಾಮದಿಂದಾಗಿ 48 ಲಕ್ಷ ಹೆಕ್ಟೇರ್ ಭೂಮಿಯಲ್ಲಿ ಬೆಳೆ ನಷ್ಟವಾಗಿದೆ ಎಂದು ಅಂದಾಜಿಸಲಾಗಿದೆ. 2023 ರ ಅಕ್ಟೋಬರ್‌ನಲ್ಲಿ ನಷ್ಟ ಪರಿಶೀಲಿಸಲು ಅಂತರ-ಸಚಿವಾಲಯದ ಕೇಂದ್ರ ತಂಡ (ಐಎಂಸಿಟಿ) ಸಹ ರಾಜ್ಯಕ್ಕೆ ಭೇಟಿ ನೀಡಿತ್ತು. ಕಳೆದ ವರ್ಷ ಮುಂಗಾರು ಹಂಗಾಮಿನಲ್ಲಿ (ಜೂನ್) ಮಳೆಯ ಕೊರತೆ ಶೇ.56 ರಷ್ಟಿತ್ತು. ಅಂದರೆ 122 ವರ್ಷಗಳ ಬಳಿಕ ಈ ಪ್ರಮಾಣದ ಕೊರತೆ ಎದುರಾಗಿದೆ. ಜೊತೆಗೆ ಆಗಸ್ಟ್ ತಿಂಗಳಲ್ಲಿ ಶೇ.73 ಮಳೆ ಕೊರತೆ ಉಂಟಾಗಿದೆ.

ಕಳೆದ ವರ್ಷದ ಮಾನ್ಸೂನ್ ಸಮಯದಲ್ಲಿ ಕರ್ನಾಟಕದಲ್ಲಿ ಸಾಮಾನ್ಯಕ್ಕಿಂತ ಶೇ.18 ರಷ್ಟು ಕಡಿಮೆ ಮಳೆಯಾಗಿದೆ. 2015 ರ ಬಳಿಕ ಈ ಪ್ರಮಾಣದಲ್ಲಿ ಕಡಿಮೆ ಮಳೆ ಬಿದ್ದಿದೆ. ಮುಂಗಾರು ನಂತರದ ಅವಧಿಯು ಸಹ ರಾಜ್ಯಕ್ಕೆ ಹೆಚ್ಚಿನ ಮಳೆಯನ್ನು ತರಲಿಲ್ಲ.

ಕರ್ನಾಟಕ ಎಷ್ಟು ಪರಿಹಾರ ಕೇಳಿದೆ?
ರಾಜ್ಯವು ಬರಗಾಲದಿಂದ 35,162.05 ಕೋಟಿ ರೂ. ಬೆಳೆ ನಷ್ಟವನ್ನು ಅಂದಾಜಿಸಿದೆ. ಎನ್‌ಡಿಆರ್‌ಎಫ್ ಅಡಿಯಲ್ಲಿ ಕೇಂದ್ರದಿAದ 18,171 ಕೋಟಿ ರೂ. ಪರಿಹಾರ ಕೇಳಿದೆ. ಇದರಲ್ಲಿ ಬೆಳೆ ನಷ್ಟದ ಇನ್‌ಪುಟ್ ಸಬ್ಸಿಡಿಗೆ 4,663.12 ಕೋಟಿ ರೂ., ಜೀವನೋಪಾಯಕ್ಕೆ ತೊಂದರೆಯಾದ ಕುಟುಂಬಗಳಿಗೆ ಅನಪೇಕ್ಷಿತ ಪರಿಹಾರಕ್ಕಾಗಿ 12,577.9 ಕೋಟಿ ರೂ., ಕುಡಿಯುವ ನೀರಿನ ಕೊರತೆಯನ್ನು ಪರಿಹರಿಸಲು 566.78 ಕೋಟಿ ರೂ., ಜಾನುವಾರುಗಳ ಆರೈಕೆಗಾಗಿ 363.68 ಕೋಟಿ ರೂ. ಸೇರಿದೆ.

ರಾಜ್ಯದ 33 ಲಕ್ಷ ರೈತರಿಗೆ ಮಧ್ಯಂತರ ಪರಿಹಾರವಾಗಿ ಪ್ರತಿ ವ್ಯಕ್ತಿಗೆ 2,000 ರೂ.ನಂತೆ ಕರ್ನಾಟಕ ಸರ್ಕಾರ ತನ್ನ ಖಜಾನೆಯಿಂದ 650 ಕೋಟಿ ರೂ. ಬಿಡುಗಡೆ ಮಾಡಿದೆ. ಜೊತೆಗೆ ಮೇವಿಗೆ 450 ಕೋಟಿ ಹಾಗೂ ಕುಡಿಯುವ ನೀರಿಗೆ 870 ಕೋಟಿ ರೂಪಾಯಿ ಬಿಡುಗಡೆ ಮಾಡಿದೆ. ಪರಿಹಾರ ಕುರಿತು ಮಾತನಾಡಿರುವ ಸಿಎಂ ಸಿದ್ದರಾಮಯ್ಯ, ಬೆಳೆ ನಷ್ಟದ ಇನ್‌ಪುಟ್ ಸಬ್ಸಿಡಿಗಾಗಿ ಕೇಳಿರುವ 4,663 ಕೋಟಿ ರೂ. ಅನ್ನು ನಿಯಮಾನುಸಾರ ವಿಳಂಬವಿಲ್ಲದೇ ಬಿಡುಗಡೆ ಮಾಡಬೇಕಿತ್ತು. ಆದರೂ ಐದು ತಿಂಗಳು ಕಳೆದರೂ ರಾಜ್ಯಕ್ಕೆ ಯಾವುದೇ ಹಣ ಬಂದಿಲ್ಲ ಎಂದು ತಿಳಿಸಿದ್ದಾರೆ.

ರಿಟ್ ಅರ್ಜಿ ಏನು ಹೇಳುತ್ತೆ?
ವಿಪತ್ತು ನಿರ್ವಹಣಾ ಕಾಯ್ದೆ 2005 ರ ಅಡಿಯಲ್ಲಿ ರಾಜ್ಯಕ್ಕೆ ತನ್ನ ಬಾಧ್ಯತೆಯಾಗಿರುವ ಹಣಕಾಸಿನ ನೆರವನ್ನು ಕೇಂದ್ರವು ನೀಡಬೇಕು. ಕರ್ನಾಟಕ ಸರ್ಕಾರವು ಸುಪ್ರೀಂ ಕೋರ್ಟ್‌ಗೆ ಸಲ್ಲಿಸಿರುವ ಅರ್ಜಿಯು ಸಂವಿಧಾನದ 32ನೇ ವಿಧಿಯ ಅಡಿಯಲ್ಲಿ ಪರಿಹಾರ ಕೋರುತ್ತದೆ. ಇದು ಸಾಂವಿಧಾನಿಕ ಪರಿಹಾರಕ್ಕೆ ಸಂಬಂಧಿಸಿದೆ. ನಾಗರಿಕರು ತಮ್ಮ ಮೂಲಭೂತ ಹಕ್ಕುಗಳನ್ನು ಉಲ್ಲಂಘಿಸಲಾಗಿದೆ ಎಂದೆನಿಸಿದರೆ ಅವರು, ಸುಪ್ರೀಂ ಕೋರ್ಟ್ ಅನ್ನು ಸಂಪರ್ಕಿಸಬಹುದು.

ಐಎಂಸಿಟಿ ವರದಿಯ ಮೇಲೆ ಕಾರ್ಯನಿರ್ವಹಿಸಲು ಮತ್ತು ಹಣಕಾಸಿನ ನೆರವನ್ನು ಒದಗಿಸಲು ಅಂತಿಮ ನಿರ್ಧಾರ ತೆಗೆದುಕೊಳ್ಳುವಲ್ಲಿ ವಿಳಂಬವಾಗಿದೆ. ಭಾರತದ ಸಂವಿಧಾನದ 14 ಮತ್ತು 21 ನೇ ವಿಧಿಗಳ ಅಡಿಯಲ್ಲಿ ಅದರ ನಾಗರಿಕರಿಗೆ ಖಾತರಿಪಡಿಸಿದ ಮೂಲಭೂತ ಹಕ್ಕುಗಳ ಉಲ್ಲಂಘನೆಯಾಗಿದೆ ಎಂದು ಕರ್ನಾಟಕ ಸರ್ಕಾರ ವಾದಿಸಿದೆ.

ಭಾರತದ ರಾಜ್ಯಗಳಿಗೆ ವಿಪತ್ತು ಪರಿಹಾರ ನಿಯೋಜನೆ ಹೇಗೆ?
ರಾಜ್ಯಗಳು ರಾಜ್ಯ ವಿಪತ್ತು ಪರಿಹಾರ ನಿಧಿಗಳನ್ನು ಹೊಂದಿವೆ. ಕೇಂದ್ರವು 75% ನಿಧಿಯನ್ನು (ಹಿಮಾಲಯ ಮತ್ತು ಈಶಾನ್ಯ ರಾಜ್ಯಗಳಿಗೆ 90%) ಮತ್ತು ರಾಜ್ಯಗಳು ಉಳಿದ ಹಣವನ್ನು ನೀಡುತ್ತವೆ. ಒಟ್ಟು ಮೊತ್ತವನ್ನು ಬಜೆಟ್ ಹಂಚಿಕೆಯ ಭಾಗವಾಗಿ ನಿರ್ಧರಿಸಲಾಗುತ್ತದೆ. ಕೇಂದ್ರವು ನಿಯತಕಾಲಿಕವಾಗಿ ಬಿಡುಗಡೆ ಮಾಡುತ್ತದೆ.

ಕೇಂದ್ರದ ನೆರವು ಅಗತ್ಯವಿದ್ದರಾ ರಾಜ್ಯ ಏನು ಮಾಡಬೇಕು?
ರಾಜ್ಯಕ್ಕೆ ಕೇಂದ್ರದ ನೆರವು ಅಗತ್ಯವಿದ್ದರೆ, ಅದು ಕೆಲವು ಕಾರ್ಯವಿಧಾನಗಳನ್ನು ಅನುಸರಿಸಬೇಕು.
1) ಜ್ಞಾಪಕ ಪತ್ರದಲ್ಲಿ ಹಾನಿಯ ಪ್ರಮಾಣವನ್ನು ವಿವರಿಸಬೇಕು. ನಂತರ ಅದನ್ನು ಸಲ್ಲಿಸಬೇಕು.
2) ಇದನ್ನು ಕೇಂದ್ರವು ಒಪ್ಪಿಕೊಂಡರೆ, ಐಎಂಸಿಟಿ ಸ್ಥಳ ಪರಿಶೀಲನೆ ಕೈಗೊಂಡು ಹಾನಿಯ ಸಮೀಕ್ಷೆ ನಡೆಸುತ್ತದೆ.
3) ರಾಷ್ಟ್ರೀಯ ಕಾರ್ಯಕಾರಿ ತಂಡವು ಐಎಂಸಿಟಿ ವರದಿಯನ್ನು ವಿಶ್ಲೇಷಿಸುತ್ತದೆ.
4) ಅದರ ಶಿಫಾರಸುಗಳ ಆಧಾರದ ಮೇಲೆ ಉನ್ನತಮಟ್ಟದ ಸಮಿತಿಯು ತಕ್ಷಣದ ಪರಿಹಾರ ಬಿಡುಗಡೆಯನ್ನು ಅನುಮೋದಿಸುತ್ತದೆ.

ರಾಜ್ಯ ಸರ್ಕಾರ ಸುಪ್ರೀಂ ಮೊರೆ ಹೋಗಿದ್ಯಾಕೆ?
2023ರ ಸೆಪ್ಟೆಂಬರ್ ಮತ್ತು ನವೆಂಬರ್ ಸಂದರ್ಭದಲ್ಲಿ 3 ಜ್ಞಾಪಕ ಪತ್ರಗಳೊಂದಿಗೆ ರಾಜ್ಯ ಸರ್ಕಾರ ಕೇಂದ್ರವನ್ನು ಸಂಪರ್ಕಿಸಿತು. ಡಿ.19 ರಂದು ಪ್ರಧಾನಿ ನರೇಂದ್ರ ಮೋದಿ ಮತ್ತು ಡಿ.20 ರಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ಭೇಟಿ ಮಾಡಿದ ನಂತರವೂ ಯಾವುದೇ ಫಲ ಸಿಗಲಿಲ್ಲ. ಈಗ ಕರ್ನಾಟಕ ಸಿಎಂ ಸಿದ್ದರಾಮಯ್ಯ ಕಾನೂನು ಮಾರ್ಗ ಹಿಡಿದಿದ್ದಾರೆ. ರಾಜ್ಯಕ್ಕೆ ಒಂದು ಪೈಸೆ ಕೂಡ ಬಿಡುಗಡೆಯಾಗಿಲ್ಲ ಎಂದು ಆರೋಪಿಸಿದ್ದಾರೆ.

ವಿಪಕ್ಷಗಳು ಏನು ಹೇಳುತ್ತಿವೆ?
ಮುಂಬರುವ ಲೋಕಸಭಾ ಚುನಾವಣೆಗೆ ಸಂಬಂಧಿಸಿದಂತೆ ರಾಜಕೀಯ ಮಾಡಲು ಸಿದ್ದರಾಮಯ್ಯ ನೇತೃತ್ವದ ಸರ್ಕಾರ ಪ್ರಯತ್ನಿಸುತ್ತಿದೆ ಎಂದು ವಿಪಕ್ಷ ನಾಯಕ ಆರ್.ಅಶೋಕ್ ಅಸಮಾಧಾನ ಹೊರಹಾಕಿದ್ದಾರೆ. ಬಿಜೆಪಿಯೊಂದಿಗಿನ ಮೈತ್ರಿಯ ಭಾಗವಾಗಿರುವ ಜೆಡಿಎಸ್ ರಾಜ್ಯಾಧ್ಯಕ್ಷ ಹೆಚ್.ಡಿ.ಕುಮಾರಸ್ವಾಮಿ ಕೂಡ ರಾಜ್ಯ ಸರ್ಕಾರದ ನಡೆಗೆ (ದೆಹಲಿ ಚಲೋ ಪ್ರತಿಭಟನೆ) ಟೀಕೆ ವ್ಯಕ್ತಪಡಿಸಿದ್ದಾರೆ.

TAGGED:Central govtDrought reliefKarnataka DroughtKarnataka govtSupreme Court
Share This Article
Facebook Whatsapp Whatsapp Telegram

Cinema Updates

Kamal Haasan
ಕಮಲ್‌ ಹಾಸನ್‌ಗೆ ಮತ್ತೆ ಶಾಕ್‌ – ತುರ್ತು ವಿಚಾರಣೆ ನಡೆಸಲ್ಲ ಎಂದ ಸುಪ್ರೀಂ ಕೋರ್ಟ್‌
12 hours ago
Chitradurga Renukaswamy Father
ಮಗನ ಸಾವಿನ ನೋವು ನಿರಂತರವಾಗಿ ಕಾಡ್ತಿದೆ – ಮೃತ ರೇಣುಕಾಸ್ವಾಮಿ ತಂದೆ
1 day ago
virat kohli sumalatha ambareesh
ಕಾಲ್ತುಳಿತ ಪ್ರಕರಣದಲ್ಲಿ ಕೊಹ್ಲಿ ವಿರುದ್ಧ ಮಾತನಾಡುವುದು ಮೂರ್ಖತನ: ಸುಮಲತಾ ಬೇಸರ
1 day ago
madenur manu
ಮಡೆನೂರು ಮನು ಪರಪ್ಪನ ಅಗ್ರಹಾರ ಜೈಲಿನಿಂದ ರಿಲೀಸ್
2 days ago

You Might Also Like

Farmers stage a day night protest in front of Jamkhandi Sugars Factory demanding payment of sugarcane bill 1
Bagalkot

ಕಬ್ಬಿನ ಬಿಲ್ ಪಾವತಿಗೆ ಆಗ್ರಹಿಸಿ ಜಮಖಂಡಿ ಶುಗರ್ಸ್ ಫ್ಯಾಕ್ಟರಿ ಮುಂದೆ ರೈತರ ಅಹೋರಾತ್ರಿ ಧರಣಿ

Public TV
By Public TV
4 hours ago
ED Conducts Raids At Residence Of DCCB Chief Manjunath Gowda In Multicrore Loan Fraud Shivamogga bengaluru
Bengaluru City

ಕೈ ನಾಯಕ ಮಂಜುನಾಥ ಗೌಡಗೆ ಇಡಿ ಶಾಕ್‌ – 13.91 ಕೋಟಿ ಆಸ್ತಿ ಮುಟ್ಟುಗೋಲು

Public TV
By Public TV
4 hours ago
KP Agrahara Sucide 1
Bengaluru City

ಪತ್ನಿ ಮನೆಬಿಟ್ಟು ಹೋಗಿದ್ದಕ್ಕೆ ಬೇಸತ್ತು ಪತಿ ಆತ್ಮಹತ್ಯೆ

Public TV
By Public TV
4 hours ago
Manjunath Bhandari
Dakshina Kannada

ಸುಹಾಸ್ ಶೆಟ್ಟಿ ಹತ್ಯೆಯಂತೆಯೇ ಅಶ್ರಫ್, ರಹಿಮಾನ್ ಹತ್ಯೆಯನ್ನೂ ಎನ್‌ಐಎಗೆ ವಹಿಸಿ: ಮಂಜುನಾಥ ಭಂಡಾರಿ

Public TV
By Public TV
5 hours ago
Axiom 4 Mission carrying Indian Astronaut Shubhanshu Shukla delayed again postponed to June 11 1
Latest

Axiom-4 Mission | ಶುಭಾಂಶು ಶುಕ್ಲಾ ಬಾಹ್ಯಾಕಾಶ ಪ್ರಯಾಣ ಮುಂದೂಡಿಕೆ

Public TV
By Public TV
5 hours ago
Kodagu Home
Districts

`ಪಬ್ಲಿಕ್ ಟಿವಿ’ ಮನವಿಗೆ ಮಿಡಿದ ಹೃದಯ – ರುಂಡ ಕತ್ತರಿಸಿದ ಬಾಲಕಿ ಕುಟುಂಬಕ್ಕೆ ಹೊಸ ಮನೆ ಹಸ್ತಾಂತರಿಸಿದ ಮಂತರ್ ಗೌಡ

Public TV
By Public TV
5 hours ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?