Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಖಾತೆಗಳಿಗಾಗಿ ಕ್ಯಾತೆ – ವಾಸ್ತವ ಏನು? ಯಾಕೆ..?
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Column | ಖಾತೆಗಳಿಗಾಗಿ ಕ್ಯಾತೆ – ವಾಸ್ತವ ಏನು? ಯಾಕೆ..?

Column

ಖಾತೆಗಳಿಗಾಗಿ ಕ್ಯಾತೆ – ವಾಸ್ತವ ಏನು? ಯಾಕೆ..?

Public TV
Last updated: February 13, 2020 3:37 pm
Public TV
Share
7 Min Read
vidhana soudha
SHARE

– ಬದ್ರುದ್ದೀನ್ ಕೆ ಮಾಣಿ
ಸಂಪುಟ ದರ್ಜೆ `ಸಚಿವ’ರನ್ನಾಗಿ ಮಾಡಿದರೆ ಸಾಲದು `ಪ್ರಮುಖ ಖಾತೆ’ನೇ ಬೇಕು. ಇದು ಸಚಿವರಾಗುವವರ ಸಹಜ ಬೇಡಿಕೆ. ಸಚಿವ ಸ್ಥಾನ ನೀಡೋದು ಖಾತೆ ಹಂಚಿಕೆ ಮಾಡೋದು ಸಿಎಂ ವಿವೇಚನಾಧಿಕಾರ. ಅದು ಸಿಎಂಗೆ ಬಿಟ್ಟಿದ್ದು. ಆದರೆ ನನಗೆ `ಬೆಂಗಳೂರು ಅಭಿವೃದ್ಧಿ’ ಖಾತೆ ಕೊಟ್ರೆ ಒಳ್ಳೆಯದು, `ಜಲಸಂಪನ್ಮೂಲ’ ನನಗೇ ಬೇಕು, `ಇಂಧನ’ ಕೊಟ್ರೆ ಮಾತ್ರ ಕೆಲಸ ಮಾಡೋದು, ಇಂತಹ ಕ್ಷೇತ್ರಗಳಲ್ಲಿ ನಮಗೆ ಆಸಕ್ತಿ, ಹಾಗಾಗಿ ಆಸಕ್ತಿಯ ಖಾತೆ ಕೊಟ್ರೆ ಕೆಲಸ ಮಾಡೋದು ಸುಲಭ ಎಂಬುದಾಗಿ ಆಕಾಂಕ್ಷಿಗಳು ಬೇಡಿಕೆ ಇಡೋದು ಸಾಮಾನ್ಯವಾಗಿ ಹೋಗಿದೆ. ಇದು ಕ್ಷೇತ್ರದ ಜನರ ಬೇಡಿಕೆ, ನಿರೀಕ್ಷೆ ಅಷ್ಟೇ.. ಹೀಗಂತ ಹೇಳೋದನ್ನು ಹೇಳಿ ಕೊನೆಗೆ, ಸಿಎಂ ಯಾವ ಖಾತೆ ಕೊಟ್ರೂ ನಿಭಾಯಿಸುತ್ತೇವೆ ಅಂತ ಹೇಳಿ ಮುಗಿಸುತ್ತಾರೆ. ಆ ಮೂಲಕ ತಮ್ಮ ಬೇಡಿಕೆ ಏನೆಂಬುದು, ಎಲ್ಲಿಗೆ ತಲುಪಿಸಬೇಕೋ ತಲುಪುವಂತೆ ಒತ್ತಡವನ್ನ ಹೇರೋ ಜಾಣತನವನ್ನ ಪ್ರದರ್ಶಿಸುತ್ತಾರೆ.

BADRU JUST POLITICSಇದಲ್ಲದೇ ಸಾರಿಗೆ, ಕಂದಾಯ, ಬೃಹತ್ ಕೈಗಾರಿಕೆ, ನಗರಾಭಿವೃದ್ಧಿ ಮುಂತಾದ ಖಾತೆಗಳಿಗೂ ಭಾರೀ ಬೇಡಿಕೆ. ಆದ್ರೆ, `ಕೃಷಿ’ ಖಾತೆ ಬೇಕು ಜನರಿಗೆ ಸಹಾಯ ಮಾಡಬಹುದು, ಶೋಷಿತರ ನೋವಿಗೆ ನೆರವಾಗಬಹುದು ಅಂತ `ಸಮಾಜಕಲ್ಯಾಣ’, `ಹಿಂದುಳಿದವರ ಕಲ್ಯಾಣ’, `ಅಲ್ಪಸಂಖ್ಯಾತರ ಕಲ್ಯಾಣ’ ಖಾತೆ ಕೊಡಿ ಅಂತಾಗಲಿ ಅಥವಾ ಬಡ-ಮಧ್ಯಮ ವರ್ಗದ ಅಭಿವೃದ್ಧಿಗಾಗಿ `ಪಶುಸಂಗೋಪನೆ’, `ಮೀನುಗಾರಿಕೆ’, `ತೋಟಗಾರಿಕೆ’, `ರೇಷ್ಮೆ’, `ಕಾರ್ಮಿಕ’ ಮೊದಲಾದ ಖಾತೆಗಳನ್ನು ಕೊಡಿ ಅಂತಾ ಯಾರಾದ್ರೂ ಬೇಡಿಕೆ ಇಡೋದನ್ನ ಕೇಳಿದ್ದಿರಾ?.

ಹೋಗ್ಲಿ ಬಿಡಿ, ಶಿಕ್ಷಣ ಮತ್ತು ಆರೋಗ್ಯ ಕ್ಷೇತ್ರಗಳ ಸುಧಾರಣೆಗೆ ಶ್ರಮಿಸುವ ಸಲುವಾಗಿ `ಪ್ರಾಥಮಿಕ- ಪ್ರೌಢಶಿಕ್ಷಣ’ ಅಥವಾ `ಆರೋಗ್ಯ’ ಖಾತೆ ಕೊಡಿ ಅಂತ ಹಠ ಹಿಡಿದಿರುವ ಸಚಿವರನ್ನು ನೋಡಿದ್ದಿರಾ?.. ನಾಡು-ನುಡಿಯ ಉಳಿವಿಗಾಗಿ ಪಣತೊಟ್ಟು, ಸಂಸ್ಕೃತಿತಿ ಉಳಿವಿಗೆ ನೆರವಾಗಲು `ಕನ್ನಡ ಮತ್ತು ಸಂಸ್ಕೃತಿ’ ಖಾತೆ ಕೇಳಿರುವುದನ್ನು ಕಂಡಿದ್ದೀವಾ?. ನಾಡಿನ ಬಡಮಕ್ಕಳು ಮತ್ತು ಮಹಿಳೆಯರ ಕಲ್ಯಾಣಕ್ಕಾಗಿ ಸಂಕಲ್ಪ ಮಾಡಿ `ಮಹಿಳೆ ಮತ್ತು ಮಕ್ಕಳ ಅಭಿವೃದ್ಧಿ’ ಖಾತೆ ಕೊಡಿ ಅಂತಾ ಮನವಿ ಮಾಡಿರುವ ಸಚಿವರ ಬಗ್ಗೆ ಗೊತ್ತಿದೆಯಾ?ಇಲ್ಲವೇ ಇಲ್ಲ. ಇಂತಹ ಬೇಡಿಕೆಯನ್ನ ನಿರೀಕ್ಷಿಸುವುದು ಬಿಡಿ, ಊಹಿಸಲೂ ಸಾಧ್ಯವಿಲ್ಲ. ಇಂತಹ ಖಾತೆಗಳನ್ನು ಹಂಚಿಕೆ ಮಾಡಿದಾಗ ಆ ಸಚಿವರ ಪ್ರತಿಕ್ರಿಯೆ ಹೇಗಿರುತ್ತೆ ಅಂತ ಅವರ ಆಪ್ತವಲಯಗಳಲ್ಲಿ ಮಾತನಾಡಿದ್ರೆ ಗೊತ್ತಾಗುತ್ತೆ. ಇಂತಹ ಖಾತೆಗಳಿಂದ ನಾವೇನು ಕೆಲಸ ಮಾಡಕ್ಕಾಗಲ್ಲ, ಕೇವಲ ಸಚಿವ ಅಂತ ಅನ್ನಿಸಿಕೊಳ್ಳೊದು ಮಾತ್ರ. ಈ ಖಾತೆಗಳಿಂದ ಜನರಿಗೆ ಸಹಾಯ ಮಾಡಕ್ಕಾಗಲ್ಲ, ಪಕ್ಷದ ಸಂಘಟನೆಯನ್ನೂ ಮಾಡಕ್ಕಾಗಲ್ಲ, ಇದರಿಂದ ಏನೂ ಪ್ರಯೋಜನ ಇಲ್ಲ. ಜನರಿಗೆ ಹತ್ತಿರವಾದ ಖಾತೆ ಕೊಟ್ಟಿದ್ರೆ ಒಳ್ಳೆಯದಿತ್ತು. ಇದು, ಸಣ್ಣ-ಪುಟ್ಟ ಖಾತೆ ಪಡೆದ ಸಚಿವರ ಪ್ರತಿಕ್ರಿಯೆ.

agriculture 2

ಜನರ ಬಳಿ ಮತಯಾಚಿಸುವಾಗ ಹೇಳಿರುವ ಅಥವಾ ಭರವಸೆ ನೀಡಿರೋದನ್ನ ಮರೆತು ನಮ್ಮ ಜನಪ್ರತಿನಿಧಿಗಳು ಹೇಳುವ ಮಾತಿದು. ಮತಯಾಚನೆ ವೇಳೆ ಜನರಿಗೆ ಭರವಸೆ ನೀಡುವ ಜನಪ್ರತಿನಿಧಿಗಳು, ನಮ್ಮನ್ನು ಆಯ್ಕೆ ಮಾಡಿದರೆ ರೈತರ ಹಿತ ಕಾಯುತ್ತೇವೆ, ಬಡವರ ಶೋಷಿತರ ಕಲ್ಯಾಣಕ್ಕಾಗಿ ಹಗಲಿರುಳು ಶ್ರಮಿಸುತ್ತೇವೆ. ನಿರ್ಗತಿಕರ ಶ್ರೇಯೋಭಿವೃದ್ಧಿಯೇ ನನ್ನ ಗುರಿ. ಶಿಕ್ಷಣ ಮತ್ತು ಆರೋಗ್ಯ ಕ್ಷೇತ್ರಗಳ ಸುಧಾರಣೆಯೇ ನನ್ನ ಸಂಕಲ್ಪ, ನಾಡು ನುಡಿಯ ಸಂರಕ್ಷಣೆಗೆ ಬದ್ಧನಾಗಿರುತ್ತೇನೆ. ಹಾಗೇ-ಹೀಗೆ ಅಂತಾ ಪುಂಖಾನುಪುಂಖವಾಗಿ ಭಾಷಣ ಬಿಗಿದಿರುತ್ತಾರೆ. ಗೆದ್ದು ಶಾಸಕರಾಗುತ್ತಿದ್ದಂತೆ, ಕೇವಲ ಶಾಸಕರಾಗಿದ್ದುಕೊಂಡು ಏನ್ ಕೆಲಸ ಮಾಡೋಕೆ ಸಾಧ್ಯ? ಸಚಿವ ಸ್ಥಾನ ಸಿಕ್ಕಿದ್ರೆ ಒಳ್ಳೆಯ ಕೆಲಸ ಮಾಡಬಹುದು ಅಂತ ತಮ್ಮ ಇಂಗಿತ ವ್ಯಕ್ತಪಡಿಸುತ್ತಾರೆ. ಹಾಗೂ-ಹೀಗೂ ಅವರಿವರ ಕೈ-ಕಾಲು ಹಿಡಿದು ಸಚಿವ ಸ್ಥಾನ ಗಿಟ್ಟಿಸಿಕೊಳ್ಳುವ ಇವರು, ನನಗೆ ಇಂತಹ ಪ್ರಮುಖ ಖಾತೆ ಬೇಕು ಅಂತ ಕ್ಯಾತೆ ತೆಗೆಯುತ್ತಾರೆ. ಇಲ್ಲದಿದ್ರೆ ಕೆಲಸ ಮಾಡೋಕ್ಕೆ ಆಗಲ್ಲ. ಜನರಿಗೆ ಹತ್ತಿರವಿರುವ ಖಾತೆ ಕೊಟ್ರೆ ಒಳ್ಳೆಯದು, ಒಳ್ಳೆಯ ಕೆಲಸ ಮಾಡಬಹುದು ಅಂತ ‘ಆಯಕಟ್ಟಿನ’ ಪ್ರಮುಖ ಖಾತೆಗಳಿಗೆ ಬೇಡಿಕೆ ಇಡ್ತಾರೆ, ಆದ್ರೆ ಅದನ್ನ ಪಡೆದುಕೊಂಡ ಮೇಲೆ ಏನು ಮಾಡುತ್ತಾರೆ ಅನ್ನೋದು ನಿಮಗೆಲ್ಲಾ ಗೊತ್ತೇ ಇದೆ.

weather report 9

ಇದಕ್ಕೆಲ್ಲ ಕಾರಣ ಏನು ಗೊತ್ತಾ..? ಕೃಷಿ, ತೋಟಗಾರಿಕೆ, ಪಶುಸಂಗೋಪನೆ, ಮೀನುಗಾರಿಕೆ, ಕಾರ್ಮಿಕ, ಸಮಾಜಕಲ್ಯಾಣ, ಅಲ್ಪಸಂಖ್ಯಾತರ ಕಲ್ಯಾಣ, ಹಿಂದುಳಿದ ವರ್ಗಗಳ ಕಲ್ಯಾಣ, ಶಿಕ್ಷಣ, ಆರೋಗ್ಯ, ಕನ್ನಡ ಮತ್ತು ಸಂಸ್ಕೃತಿ  ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇವೆಲ್ಲಾ ನೇರವಾಗಿ ಜನರಿಗೆ ಸಂಬಂಧಿಸಿದ ಇಲಾಖೆಗಳು. ಆದರೆ, ಇದನ್ನು ಪಡೆಯಲು ಹಿಂದೇಟು ಹಾಕೋದು ಯಾಕೆಂತ ಬೇರೆ ಹೇಳಬೇಕೆ? ಯಾಕೆಂದ್ರೆ ಈ ಖಾತೆಗಳಿಗೆ ಅನುದಾನ ಸಾವಿರಾರು ಕೋಟಿ ರೂಪಾಯಿಗಳಲ್ಲಿ ಇರೋದಿಲ್ಲ. ಇಲ್ಲಿ ಗುತ್ತಿಗೆ ಕೊಡೋದು, ಅಕ್ರಮ ಮಾಡೋದಕ್ಕೆ ಅವಕಾಶ ಇದೆಯಾದರೂ, ಅದರ ಪ್ರಮಾಣ ತುಂಬಾ ಕಡಿಮೆ. ಜನರಿಗೆ ಸಿಗುವ ಸವಲತ್ತುಗಳು, ನೆರವುಗಳು ನೇರವಾಗಿ ಸಿಗುತ್ತವೆ ಮತ್ತು ಕಣ್ಣಿಗೆ ಕಾಣುವಂತಿರುತ್ತದೆ. ಹಾಗಾಗಿ ಕಡಿಮೆ ಅನುದಾನದ ಇಲಾಖೆಗಳಲ್ಲಿ ನೇರ ಜನರ ಒಳಗೊಳ್ಳುವಿಕೆ ಹೆಚ್ಚು. ಅಕ್ರಮಗಳಾದ್ರೆ ಬಹುಬೇಗ ಗೊತ್ತಾಗುತ್ತೆ. ಹೆಚ್ಚು-ಹೆಚ್ಚು ಭ್ರಷ್ಟಾಚಾರ ಪ್ರಕರಣಗಳು ಬಯಲಿಗೆ ಬರೋದು ಇಲ್ಲಿಯೇ.

ಕಿರಿಕಿರಿ ಜಾಸ್ತಿ, ಆದಾಯ ಕಡಿಮೆ ಇದುವೇ ಎಲ್ಲಾ ಪ್ರಕ್ರಿಯೆಗಳ ಸಾರಾಂಶ. ಹಾಗಾಗಿಯೇ ಇಂತಹ ಜನಕಲ್ಯಾಣ, ರೈತರ ಕಲ್ಯಾಣ, ಜನೋಪಯೋಗಿ ಖಾತೆಗಳು ಯಾರಿಗೂ ಬೇಡ ಅನ್ನೋದು ವಾಸ್ತವ. ಹಾಗಾದ್ರೆ ಭಾರೀ ಬೇಡಿಕೆಯ ಖಾತೆಗಳಾದ ಜಲಸಂಪನ್ಮೂಲ, ಲೋಕೋಪಯೋಗಿ, ಇಂಧನ, ಬೆಂಗಳೂರು ಅಭಿವೃದ್ಧಿ, ಸಾರಿಗೆ, ಕಂದಾಯ, ಬೃಹತ್ ಕೈಗಾರಿಕೆ, ಗಣಿ ಮತ್ತು ಭೂ ವಿಜ್ಞಾನ ಖಾತೆಗಳ ಬಗ್ಗೆ ಸಚಿವರುಗಳಿಗೆ ಹೆಚ್ಚು ಒಲವು ಯಾಕೆ ಎಂದು ಬೇರೆ ಹೇಳಬೇಕಿಲ್ಲ. ಈ ಬೃಹತ್ ಖಾತೆಗಳು ಜನರಿಗೆ ಸಹಾಯ ಮಾಡಲು ನೆರವಾಗುತ್ತೆ ಅನ್ನೋ ಸಮರ್ಥನೆ ಹಾಸ್ಯಾಸ್ಪದ. ಈ ಖಾತೆಗಳಲ್ಲಿ ಹೆಚ್ಚು ಒಳಗೊಂಡಿರುವವರು ಗುತ್ತಿಗೆದಾರರು ಮತ್ತು ಇಂಜಿನಿಯರ್‍ಗಳು. ಇವರುಗಳೇ ನಮ್ಮ ಜನಪ್ರತಿನಿಧಿಗಳ ಆದಾಯದ ಮೂಲ ಅನ್ನೋದನ್ನ ಪ್ರತ್ಯೇಕವಾಗಿ ಹೇಳಬೇಕಿಲ್ಲ.

Sugar Factory copy

ಕೆಟ್ಟ ಗುತ್ತಿಗೆದಾರರು, ಭ್ರಷ್ಟ ಅಧಿಕಾರಿಗಳು, ಲೂಟಿ ಮಾಡಲೆಂದೇ ಕಾರ್ಯನಿರ್ವಹಿಸುವ ಕೆಲವು ಎಂಜಿನಿಯರ್‍ಗಳು ಈ ಖಾತೆಗಳಲ್ಲಿ ಬರುವ ಅನುದಾನದ ಹೊಣೆಗಾರರು. ಆದ್ದರಿಂದಲೇ ನಮ್ಮ ಸಚಿವರಿಗೆ ಇಂತಹ ಖಾತೆಗಳ ಮೇಲೆ ಹೆಚ್ಚು ಪ್ರೀತಿ. ಅತ್ಯಂತ ಹೆಚ್ಚು ಅಕ್ರಮಗಳು, ಭ್ರಷ್ಟಾಚಾರಗಳು ನಡೆಯುವುದೇ ಇಲ್ಲಿ. ಅದ್ರೇ ಅದು ಬಯಲಾಗುವುದು, ಶಿಕ್ಷೆಗೊಳಗಾಗುವ ಪ್ರಮಾಣ ಮಾತ್ರ ಕಡಿಮೆ. ಏಕೆಂದರೆ, ಮೇಲಿಂದ ಕೆಳಗಿನವರೆಗೆ ಎಲ್ಲರೂ ಇದರಲ್ಲಿ ಶಾಮೀಲಾಗಿರುತ್ತಾರೆ. ಜನ ಈ ಖಾತೆಗಳಿಂದ ಹೆಚ್ಚು ನಿರೀಕ್ಷೆ ಮಾಡಿದರೂ, ಪ್ರತಿನಿತ್ಯ ನಾಗರಿಕರು ಇದರಲ್ಲಿ ಪಾಲ್ಗೊಳ್ಳುವುದು ವಿರಳ. ಒಮ್ಮೊಮ್ಮೆ ಕೆಲವು ನಾಗರಿಕರು, ಸಂಘಟನೆಗಳು ಅಕ್ರಮಗಳ ವಿರುದ್ಧ ಧ್ವನಿ ಎತ್ತಿದ್ರೂ ಅದರ ಸದ್ದಡಗಿಸುವ ಎಲ್ಲಾ ಕಲೆಗಳನ್ನು ಭ್ರಷ್ಟ ವ್ಯವಸ್ಥೆ ಕಂಡುಕೊಂಡಿದೆ. ಸಾವಿರಾರು ಕೋಟಿ ಅನುದಾನ ಇಂತಹ ಪ್ರಮುಖ ಖಾತೆಗಳಲ್ಲಿ ಇರುವುದೇ, ನಮ್ಮ ಸಚಿವರುಗಳಿಗೆ ಈ ಆಯಕಟ್ಟಿನ ಖಾತೆಗಳ ಬಗ್ಗೆ ಹೆಚ್ಚು ಒಲವು. ಇಲ್ಲಿ ಹಣ ಖರ್ಚು ಮಾಡುವುದು, ಹಣ ಬಿಡುಗಡೆ ಮಾಡೋದೇ ಹೆಚ್ಚು ಕೆಲಸ. ಅದೇ ಅಕ್ರಮಗಳಿಗೆ ಹಾದಿ ಎಂಬುದನ್ನು ಪ್ರತ್ಯೇಕವಾಗಿ ಹೇಳಬೇಕಿಲ್ಲ.

ಈಗ ಅರ್ಥವಾಯಿತಲ್ಲ, ನಮ್ಮ ಶಾಸಕರು, ಸಚಿವರಾಗುತ್ತಿದ್ದಂತೆ ಯಾಕೆ ಬೃಹತ್ ಖಾತೆಗಳಿಗೆ ಬೇಡಿಕೆ ಇಡ್ತಾರೆ ಅಂತ. ಜನರ ಬಳಿ ಮತಯಾಚಿಸುವಾಗ ಹೇಳಿರುವ ವಿಚಾರಗಳಾಗಲಿ, ನೀಡಿರುವ ವಾಗ್ದಾನಗಳಾಗಲಿ, ಯಾವುದೂ ಈಗ ನಮ್ಮ ಜನಪ್ರತಿನಿಧಿಗಳಿಗೆ ನೆನಪಿಗೆ ಬರೋದಿಲ್ಲ. ಅಧಿಕಾರ ಸಿಗ್ತಾ ಇದ್ದಂತೆ, ಅವರ ಆದ್ಯತೆ, ಬೇಡಿಕೆಗಳು ಬದಲಾಗುತ್ತವೆ ಅನ್ನೋದು ಕಟುಸತ್ಯ. ಹಾಗಾದ್ರೆ ಅವರ ಪ್ರಕಾರ ಯಾರಿಗೂ ಬೇಡವಾದ ಖಾತೆಗಳಲ್ಲಿ ಕೆಲಸ ಮಾಡಲು ಸಾಧ್ಯವಿಲ್ಲವೇ?

ak 203 factory

ಇತಿಹಾಸದ ಪುಟಗಳನ್ನ ನೋಡಿದ್ರೆ ವಾಸ್ತವದ ಅರಿವಾಗುತ್ತೆ. ದಿವಂಗತ ರಾಮಕೃಷ್ಣ ಹೆಗ್ಡೆ ಸಂಪುಟದಲ್ಲಿ ಸಚಿವರಾಗಿದ್ದ ತುಮಕೂರಿನ ದಿವಂಗತ ವೀರಣ್ಣ ಅವರು ಸಣ್ಣ ಉಳಿತಾಯ ಮತ್ತು ಲಾಟರಿ ಖಾತೆ ಮಂತ್ರಿಯಾಗಿದ್ರು. ಅದೇ ಸಣ್ಣ ಖಾತೆಯಲ್ಲಿ ಏನು ಸುಧಾರಣೆ ಮಾಡಬಹುದು ಅಂತ ಅವರು ಸಾಬೀತು ಪಡಿಸಿ ಜನಮನ್ನಣೆ ಗಳಿಸಿದ್ರು. ಯಾರಿಗೂ ಬೇಡವಾಗಿದ್ದ ಗ್ರಾಮೀಣಾಭಿವೃದ್ಧಿ ಖಾತೆಗೆ ಮಹತ್ವ ಬರುವಂತೆ ಮಾಡಿದ ಕೀರ್ತಿ ದಿ.ಅಬ್ದುಲ್ ನಜೀರ್ ಸಾಬ್ ಅವರಿಗೆ ಸಲ್ಲುತ್ತದೆ. ದಿವಂಗತ ಹೆಗ್ಡೆ ಸಂಪುಟದಲ್ಲಿ ಸಚಿವರಾಗಿದ್ದ ನಜೀರ್ ಸಾಬ್, ಹಳ್ಳಿಗಾಡಿಗೆ ಕುಡಿಯುವ ನೀರನ್ನ ಕಲ್ಪಿಸಿ “ನೀರ್ ಸಾಬ್” ಎಂದೇ ಖ್ಯಾತರಾಗಿದ್ದರು.

ದಿ. ದೇವರಾಜ ಅರಸು ಸಂಪುಟದಲ್ಲಿ ‘ಭೂ ಸುಧಾರಣೆ’ ಖಾತೆಗೆಂದೇ ಒಬ್ಬರು ಸಚಿವರನ್ನ ನೇಮಿಸಲಾಗಿತ್ತು. ಸುಬ್ಬಯ್ಯ ಶೆಟ್ಟಿ ಸಚಿವರಾಗಿ ಆ ಖಾತೆಯಲ್ಲಿ ಐತಿಹಾಸಿಕ ಸಾಧನೆ ಮಾಡಿದ್ದಾರೆ. ಬಡ ಗೇಣಿದಾರರಿಗೆ ಭೂಮಿಯ ಒಡೆತನ ಸಿಗಲು ಪರಿಣಾಮಕಾರಿಯಾಗಿ ಕೆಲಸ ಮಾಡಿ ಜನಪ್ರಿಯರಾಗಿದ್ದರು. ದಿ.ಜೆ.ಎಚ್. ಪಟೇಲ್ ಸಂಪುಟದಲ್ಲಿ ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವರಾಗಿದ್ದ ದಿ.ಎಚ್.ಜಿ.ಗೋವಿಂದೇಗೌಡರ ಸಾಧನೆ ಅಪ್ರತಿಮ. ಈಗಲೂ ರಾಜ್ಯದ ಮಟ್ಟಿಗೆ ಶಿಕ್ಷಣ ಇಲಾಖೆ ಅಂದ್ರೆ, ತಟ್ಟನೆ ನೆನಪಿಗೆ ಬರುವುದೇ ದಿ.ಗೋವಿಂದೇಗೌಡರ ಹೆಸರು. ಶಿಕ್ಷಣ ಇಲಾಖೆಯ ಸುಧಾರಣೆಗೆ ಶ್ರಮಿಸಿ ಇಲಾಖೆಗೆ ಕಾಯಕಲ್ಪ ಕಲ್ಪಿಸಿದ ಕೀರ್ತಿ ಗೋವಿಂದೇಗೌಡರಿಗೆ ಸಲ್ಲುತ್ತದೆ.

Mandya Adichunchanagiri Math aa

ವೀರಪ್ಪ ಮೊಯ್ಲಿ ಸಂಪುಟದಲ್ಲಿ ಸಚಿವರಾಗಿದ್ದ ದಿ.ಬಸವಲಿಂಗಪ್ಪ ತಮಗೆ ಕೊಟ್ಟ ಖಾತೆಯನ್ನು ಹೇಗೆ ಜನಪ್ರಿಯಗೊಳಿಸಿ ಬಹುಬೇಡಿಕೆಯ ಖಾತೆಯನ್ನಾಗಿ ಮಾಡಿದ್ರು ಅನ್ನೋದು ಗೊತ್ತೇ ಇದೆ. ದಿ.ಬಸವಲಿಂಗಪ್ಪ ಅವರಿಗೆ ಹೆಚ್ಚು ಆದ್ಯತೆ ಸಿಗದಿರಲಿ ಅಂತ ಯಾರಿಗೂ ಬೇಡವಾಗಿದ್ದ ‘ಪರಿಸರ’ ಖಾತೆಯನ್ನ ಹಂಚಿಕೆ ಮಾಡಲಾಗಿತ್ತು. ಅದನ್ನು ಅವರು ನಿಭಾಯಿಸಿ, ಅದರ ಮಹತ್ವ ಏನು ಅನ್ನೋದನ್ನ ತೋರಿಸಿಕೊಟ್ರು. ಹತ್ತು ಹಲವು ಕೈಗಾರಿಕೆಗಳು, ದೊಡ್ಡ ದೊಡ್ಡ ಕಟ್ಟಡಗಳಿಗೆ, ಹೋಟೆಲ್‍ನವರಿಗೆ ಪರಿಸರ ನಿಯಮಗಳನ್ನ ಉಲ್ಲಂಘಿಸಿದ್ದಕ್ಕೆ ಬಿಸಿ ಮುಟ್ಟಿಸಿ ಜನಪ್ರಿಯರಾದರು. ಈಗ ಆ ‘ಪರಿಸರ’ ಖಾತೆಗೆ ಬೇಡಿಕೆ ಬರುವಂತಾಗಿದೆ.

ಯಾರಿಗೂ ಬೇಡವಾಗಿದ್ದ ‘ಮೀನುಗಾರಿಕೆ’ ಇಲಾಖೆ ಇದೆ ಅಂತ ತೋರಿಸಿಕೊಟ್ಟ ಕೀರ್ತಿ ಜಯಪ್ರಕಾಶ್ ಹೆಗ್ಡೆಯವರಿಗೆ ಸಲ್ಲುತ್ತದೆ. ಹೆಚ್.ಡಿ.ದೇವೇಗೌಡರ ಸಂಪುಟದಲ್ಲಿ ಮೀನುಗಾರಿಕೆ ಸಚಿವರಾದ ಜಯಪ್ರಕಾಶ್ ಹೆಗ್ಡೆ, ಮೀನುಗಾರಿಕೆ ಇಲಾಖೆಗೆ ಮಹತ್ವ ಬರುವಂತೆ ಕೆಲಸ ಮಾಡಿ ತೋರಿಸಿದ್ರು. ಕೇವಲ ಕರಾವಳಿಯ ಸಮುದ್ರ ಮೀನುಗಾರಿಕೆಯಲ್ಲಿ ಸುಧಾರಣೆ ಮಾತ್ರ ಅಲ್ಲ, ಒಳನಾಡು ಮೀನುಗಾರಿಕೆ ಕೂಡ ಲಾಭದಾಯಕ ಅಂತ ತೋರಿಸಿಕೊಟ್ಟು ಬಡ-ಮಧ್ಯಮವರ್ಗದ ಜನರಿಗೆ ಸಹಾಯವಾಗುವಂತೆ ಮಾಡಿದ್ರು. ಕರಾವಳಿ ಮೀನುಗಾರಿಕೆಯಲ್ಲಿ ಆಧುನಿಕ ತಂತ್ರಜ್ಞಾನ ಬಳಕೆ ಹೇಗೆ ಎಂಬುದನ್ನು ತೋರಿಸಿಕೊಟ್ರು.

Private School Students

ವೀರಪ್ಪ ಮೊಯ್ಲಿ ಸಂಪುಟದಲ್ಲಿ ಸಚಿವರಾಗಿದ್ದ ಕೆ.ಎನ್.ನಾಗೇಗೌಡರಿಗೆ ಅಂದು ಯಾರಿಗೂ ಬೇಡವಾಗಿದ್ದ ಪಶುಸಂಗೋಪನಾ ಖಾತೆ ದೊರಕಿತ್ತು. ಆ ಇಲಾಖೆ ಮೂಲಕ ಕುರಿ-ಕೋಳಿ, ಮೇಕೆ ಸಾಕಾಣಿಕೆ, ಪಶುಪಾಲನೆಗೆ ಪ್ರೋತ್ಸಾಹ ಸಿಗುವಂತೆ ಮಾಡಿ, ಹತ್ತು ಹಲವು ಮೇಳಗಳನ್ನು ಆಯೋಜಿಸಿ, ಯೋಜನೆಗಳನ್ನು ಜನರ ಬಳಿ ಕೊಂಡೊಯ್ದರು. ಹೈನುಗಾರಿಕೆಗೆ ಹೆಚ್ಚು ಮಹತ್ವವಿದೆ ಎಂದು ಸಾರಿ ಹೇಳಿ ರೈತರಿಗೆ ಕಾರ್ಯಕ್ರಮ ರೂಪಿಸಿ ಈ ಖಾತೆಗೆ ಮಹತ್ವ ಇದೆ ಎಂದು ತೋರಿಸಿಕೊಟ್ಟು, ಸಾಕಷ್ಟು ಪ್ರಚಾರ ಗಿಟ್ಟಿಸಿಕೊಂಡರು. ಹೀಗೆ, ಹೇಳುತ್ತಾ ಹೋದರೆ ನಮಗೆ ಹತ್ತು ಹಲವು ಉದಾಹರಣೆಗಳು ಸಿಗುತ್ತವೆ.

ಆದರೆ ಈಗ ಕಾಲ ಬದಲಾಗಿದೆ. ನಮ್ಮ ಜನಪ್ರತಿನಿಧಿಗಳ ಆದ್ಯತೆ ಕೂಡ ಬದಲಾಗುತ್ತಾ ಹೋಗಿದೆ. ಜನಕಲ್ಯಾಣ, ರೈತರ ಶ್ರೇಯೋಭಿವೃದ್ಧಿ ಕಾರ್ಯಕ್ರಮಗಳು ಕೇವಲ ಕಡತ – ದಾಖಲೆಗಳಲ್ಲಿ ಉಳಿಯುವಂತಾಗಿದೆ. ಕೋಟ್ಯಂತರ ರೂಪಾಯಿ ಕೈ ಬದಲಾಗುವ ಖಾತೆಗಳೇ ಆದ್ಯತೆಯ ಕ್ಷೇತ್ರವಾಗಿ ಪರಿವರ್ತನೆಯಾಗಿದೆ. ಪ್ರಜ್ಞಾವಂತ ಮತದಾರರು ನಮ್ಮ ಜನಪ್ರತಿನಿಧಿಗಳ ಆದ್ಯತೆ, ಆಕರ್ಷಣೆ, ಒಲವು ಏನು ಎಂಬುದನ್ನು ಅರಿತುಕೊಳ್ಳುವುದು ಇಂದಿನ ಅಗತ್ಯತೆ.

TAGGED:bengalurucabinetcorruptionkannada newskarnatakaಕರ್ನಾಟಕಖಾತೆಗುತ್ತಿಗೆಭ್ರಷ್ಟಾಚಾರಮಂತ್ರಿರಾಜಕೀಯ
Share This Article
Facebook Whatsapp Whatsapp Telegram

Cinema news

Veera Kambal Trailer Released The Glory of Tulunad Revealed Adithya SV Rajendra Singh Babu Kadri Manikanth
ವೀರ ಕಂಬಳ ಟ್ರೈಲರ್ ಬಿಡುಗಡೆ : ತುಳುನಾಡಿನ ವೈಭವ ಅನಾವರಣ
Cinema Latest Sandalwood
Rashmika Mandanna Vijay Devarakonda 1
ರಶ್ಮಿಕಾ, ವಿಜಯ್ ಮದುವೆಗೆ ಫೋನ್ ಬ್ಯಾನ್ – ವಿಡಿಯೋ ಚಿತ್ರೀಕರಣ ತಂಡದಿಂದಲೂ NDAಗೆ ಸಹಿ
Bollywood Cinema Latest Main Post
Rajanivasa
ʻರಾಜನಿವಾಸʼದಲ್ಲಿ ʻಕಾಂತಾರʼದ ಝಲಕ್‌ – ಕುತೂಹಲ ಹೆಚ್ಚಿಸಿದ ಟ್ರೇಲರ್‌!
Cinema Latest Sandalwood
salman khan salim khan
ಸಲ್ಮಾನ್‌ ಖಾನ್‌ ತಂದೆ ಸಲೀಂ ಖಾನ್‌ ಆಸ್ಪತ್ರೆಗೆ ದಾಖಲು
Bollywood Cinema Latest Main Post

You Might Also Like

Valmiki Prasannananda Puri Swamiji heart attack
Karnataka

ಡಾ.ವಾಲ್ಮೀಕಿ ಪ್ರಸನ್ನಾನಂದ ಪುರಿ ಸ್ವಾಮೀಜಿಗೆ ಲಘು ಹೃದಯಾಘಾತ – ಆಸ್ಪತ್ರೆಗೆ ದಾಖಲು

Public TV
By Public TV
25 minutes ago
Hanuman Statue Texas
Latest

ಅತಿಕ್ರಮಣ ನಿಲ್ಲಿಸಿ: ಅಮೆರಿಕದ ಟೆಕ್ಸಾಸ್‌ನಲ್ಲಿ ಹನುಮನ ಪ್ರತಿಮೆ ಪ್ರತಿಷ್ಠಾಪನೆಗೆ MAGA ನಾಯಕ ವಿರೋಧ

Public TV
By Public TV
1 hour ago
Bandipur Tiger Reserve
Chamarajanagar

ನಾಗರಹೊಳೆ, ಬಂಡೀಪುರದಲ್ಲಿ ಸಫಾರಿಗೆ ಸರ್ಕಾರ ಅಸ್ತು – ಹೋರಾಟದ ಎಚ್ಚರಿಕೆ ಕೊಟ್ಟ ರೈತರು

Public TV
By Public TV
2 hours ago
Hyderabad Murder
Crime

ಟೆಕ್ಕಿ ಮಾಜಿ ಪತ್ನಿಯ ಮನೆಗೆ ನುಗ್ಗಿ ಇರಿದು ಕೊಂದ ವ್ಯಕ್ತಿ

Public TV
By Public TV
2 hours ago
DK Shivakumar 1 1
Bengaluru City

ಸಾರಿಗೆ ನೌಕರರು ಸರ್ಕಾರದ ಪರಿಸ್ಥಿತಿ ಅರ್ಥಮಾಡಿಕೊಳ್ಳಿ: ಮುಷ್ಕರ ಕೈಬಿಡುವಂತೆ ಡಿಕೆಶಿ ಮನವಿ

Public TV
By Public TV
3 hours ago
Hassan Youth Died suspiciously in factory
Crime

ಫ್ಯಾಕ್ಟರಿ ಕೆಲಸಕ್ಕೆ ಹೋಗಿದ್ದ ಯುವಕ ಅನುಮಾನಾಸ್ಪದ ಸಾವು

Public TV
By Public TV
3 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?