Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Latest

ಪ್ರಕೃತಿಯಿಂದಲೇ ಕೈಬೀಸಿ ಕರೆಯೋ ನೈನಿತಾಲ್‌ಗೆ ಬರೋ ಪ್ರವಾಸಿಗರ ಸಂಖ್ಯೆ ಕುಸಿತ – ಯಾಕೆ?

Public TV
Last updated: June 1, 2025 10:25 pm
Public TV
Share
3 Min Read
nainital
SHARE
ಭಾರತದಲ್ಲಿರುವ ಪ್ರತಿಯೊಂದು ಪ್ರವಾಸಿ ತಾಣವು ಒಂದಕ್ಕೊಂದು ಭಿನ್ನವಾಗಿದೆ. ದಕ್ಷಿಣ ಭಾರತವು ಸಮುದ್ರ, ದ್ವೀಪಗಳು, ಪರ್ವತ ಶಿಖರಗಳು, ಪಶ್ಚಿಮ ಹಾಗೂ ಪೂರ್ವ ಘಟ್ಟಗಳಿಂದ ಪ್ರವಾಸಿಗರನ್ನು ಕೈಬೀಸಿ ಕರೆಯುತ್ತದೆ. ಇದೇ ರೀತಿ ಉತ್ತರ ಭಾರತವು ನೈಸರ್ಗಿಕ ತಾಣಗಳು, ಹಿಮಾಲಯ ಪರ್ವತ ಶ್ರೇಣಿಗಳು, ಪ್ರಮುಖ ದೇವಾಲಯಗಳು ಹಾಗೂ ವಿಭಿನ್ನ ಸರೋವರಗಳನ್ನು ತನ್ನಲ್ಲಿ ಸೃಷ್ಟಿಸಿಕೊಂಡಿದೆ. ಈ ಪೈಕಿ ಉತ್ತರ ಭಾರತದ ಪ್ರಸಿದ್ಧ ಪ್ರವಾಸಿ ತಾಣವಾದ ನೈನಿತಾಲ್  (Nainital) ಪ್ರವಾಸಿಗರನ್ನು ಪ್ರಕೃತಿ ಸೌಂದರ್ಯದ ಮೂಲಕ ತನ್ನೆಡೆಗೆ ಸೆಳೆಯುತ್ತಿದೆ.

ಇತ್ತೀಚಿನ ದಿನಗಳಲ್ಲಿ ಅಲ್ಲ…. ಮೊದಲಿನಿಂದಲೂ ನೈನಿತಾಲ್‌ಗೆ ಪ್ರವಾಸಕ್ಕೆಂದು ಹೊರಡುವ ಜನರ ಸಂಖ್ಯೆ ಹೆಚ್ಚು. ಹೀಗಿರುವಾಗ ಇತ್ತೀಚಿನ ದಿನಗಳಲ್ಲಿ ನೈನಿತಾಲ್ ಸೇರಿದಂತೆ ಉತ್ತರ ಭಾರತದ ಪ್ರಮುಖ ಪ್ರವಾಸಿ ತಾಣಗಳಲ್ಲಿ ಪ್ರವಾಸಿಗರ ಸಂಖ್ಯೆ ಕಡಿಮೆಯಾಗುತ್ತಿದೆ. ಇದರಿಂದಾಗಿ ಪ್ರವಾಸಿಗರನ್ನು ನಂಬಿಕೊಂಡ ಅಲ್ಲಿನ ಜನರ ಆರ್ಥಿಕ ಸ್ಥಿತಿ ಸಮಸ್ಯೆಗೀಡಾಗುತ್ತಿದೆ.

nainital 2

ನೈನಿತಾಲ್:
ಉತ್ತರಾಖಂಡದ (Uttarakhand) ಕುಮಾವುನ್ ಪ್ರದೇಶದಲ್ಲಿ ಕಂಡುಬರುವ ಒಂದು ಪ್ರವಾಸಿ ತಾಣವೆಂದರೆ ಅದು ನೈನಿತಾಲ್. ಇದನ್ನು ಸರೋವರಗಳ ನಗರ ಎಂದು ಕರೆಯಲಾಗುತ್ತದೆ. ಜೊತೆಗೆ ಸುಂದರವಾದ ಗಿರಿಧಾಮವನ್ನು ಇದು ಒಳಗೊಂಡಿದೆ. ಇಲ್ಲಿರುವ ಹಿಮಪರ್ವತಗಳು ಈ ಪ್ರದೇಶದ ಸೌಂದರ್ಯವನ್ನು ಮತ್ತಷ್ಟು ಹೆಚ್ಚಿಸಿದೆ. ನೈನಾದೇವಿ ದೇವಾಲಯ ದೇವಿಯ ಶಕ್ತಿಪೀಠಗಳಲ್ಲಿ ಒಂದು. ಇನ್ನೂ ನವವಿವಾಹಿತರಿಗೆ ಇದು ಹನಿಮೂನ್‌ಗೆ ಒಂದು ಬೆಸ್ಟ್ ಆಯ್ಕೆ ಅಂತಾನೆ ಹೇಳಬಹುದು. ನೈನಿತಾಲ್ ಸರೋವರ ಸಿಹಿ ನೀರಿನ ಸರೋವರವಾಗಿದ್ದು, ಈ ಸರೋವರದಲ್ಲಿ ದೋಣಿ ವಿಹಾರ ಒಳ್ಳೆಯ ಅನುಭವವನ್ನು ನೀಡುತ್ತದೆ. ಈ ಸರೋವರ ಹಚ್ಚಹಸಿರಿನ ಪರ್ವತ ಶ್ರೇಣಿಗಳಿಂದ ಆವೃತ್ತವಾಗಿದ್ದು, ಅರ್ಧಚಂದ್ರನಂತೆ ಹರಿದು ಹೋಗುತ್ತದೆ. ನೈನಿತಾಲ್‌ನಲ್ಲಿ ಔಲಿ ಎಂಬ ತಾಣ, ನಂದಾದೇವಿ ರಾಷ್ಟ್ರೀಯ ಉದ್ಯಾನವನ, ಕೌಸನಿ, ಬಿನ್ಸರ್ ವನ್ಯಜೀವಿಧಾಮ, ಅಲ್ಮೋರಾ ಹೀಗೆ ಇನ್ನಿತರ ಪ್ರದೇಶಗಳಿಗೆ ಭೇಟಿ ನೀಡಬಹುದು.

nainital 1

ನೈನಿತಾಲ್‌ಗೆ ಹೋಗುವುದಾದರೆ ಉತ್ತರಾಖಂಡದ ಪಂತನಗರದ ವಿಮಾನ ನಿಲ್ದಾಣಕ್ಕೆ ತಲುಪಿ, ಅಲ್ಲಿಂದ ಟ್ಯಾಕ್ಸಿಗಳ ಮೂಲಕ ತಲುಪಬಹುದು. ಇನ್ನೂ ರೈಲಿನ ಮೂಲಕ ಹೋಗುವುದಾದರೆ ಕತ್ಗೊಡಮ್ ರೈಲ್ವೆ ನಿಲ್ದಾಣಕ್ಕಿಳಿದು ಅಲ್ಲಿಂದ ಬಸ್ ಅಥವಾ ಟ್ಯಾಕ್ಸಿ ಮೂಲಕ ತಲುಪಬಹುದು. ಇನ್ನೂ ದೆಹಲಿಯಿಂದ 6-7 ಗಂಟೆಗಳಲ್ಲಿ ಕಾರು ಅಥವಾ ಇನ್ನಿತರ ವಾಹನಗಳ ಮೂಲಕ ತಲುಪಬಹುದು. ಇಂತಹ ಅದ್ಭುತ ತಾಣಗಳನ್ನು ಒಳಗೊಂಡಿರುವ ನೈನಿತಾಲ್‌ಗೆ ಬೇಸಿಗೆ ತಿಂಗಳಲ್ಲಿ (ಮೇ-ಜೂನ್) ಹೆಚ್ಚಿನ ಪ್ರವಾಸಿಗರು ಭೇಟಿ ನೀಡುತ್ತಾರೆ. ಆದರೆ ಈ ಬಾರಿ ಪ್ರವಾಸಿಗರ ಸಂಖ್ಯೆಯಲ್ಲಿ ಭಾರಿ ಕುಸಿತ ಕಂಡಿದ್ದು, ಪ್ರಶ್ನೆಯನ್ನು ಹುಟ್ಟು ಹಾಕಿದೆ.

nainital 4

ಈ ಕುರಿತು ನೈನಿತಾಲ್ ಅಸೋಸಿಯೇಷನ್‌ನ ಅಧ್ಯಕ್ಷ ದಿಗ್ವಿಜಯ ಸಿಂಗ್ ಮಿಷ್ತ ಮಾತನಾಡಿ, ಈ ಬಾರಿ ಇಲ್ಲಿನ ಹೋಟೆಲ್ ಮತ್ತು ರೆಸಾರ್ಟ್ ಬುಕ್ಕಿಂಗ್‌ಗಳಲ್ಲಿ ಭಾರಿ ಕುಸಿತ ಕಂಡಿದ್ದು, ಕಳೆದ ವರ್ಷಕ್ಕಿಂತ ಈ ವರ್ಷ ಶೇಕಡ 90ರಷ್ಟು ಕುಸಿತ ಕಂಡಿದೆ ಎಂದು ಮಾಹಿತಿ ನೀಡಿದ್ದಾರೆ. ಇನ್ನು ಅಡ್ವಾನ್ಸ್ ಬುಕಿಂಗ್ ಮಾಡಿದ್ದ ಪ್ರವಾಸಿಗರು ತಮ್ಮ ಬುಕಿಂಗ್‌ಗಳನ್ನು ರದ್ದುಗೊಳಿಸಿದ್ದಾರೆ. ಈ ಬಾರಿ ಕುಸಿತ ಕಂಡ ಹಾಗೆ ಈತನಕ ನೈನಿತಾಲ್‌ನಲ್ಲಿ ಯಾವತ್ತೂ ಆಗಿರಲಿಲ್ಲ ಎಂದು ತಿಳಿಸಿದ್ದಾರೆ.

ಹೌದು, ಇದಕ್ಕೆಲ್ಲ ಒಂದು ಭೀಕರ ಕಾರಣವಿದೆ. ಈ ಬಾರಿ ಏ.22 ರಂದು ಜಮ್ಮು-ಕಾಶ್ಮೀರದ ಪಹಲ್ಗಾಮ್‌ನ ಬೈಸರನ್ ಕಣಿವೆಯಲ್ಲಿ ಪಾಕಿಸ್ತಾನದ ಭಯೋತ್ಪಾದಕರು ನಡೆಸಿದ ಹಿಂದೂಗಳ ನರಮೇಧದಲ್ಲಿ 26 ನಾಗರಿಕರು ಸಾವನ್ನಪ್ಪಿದರು. ಇದು ದೇಶಾದ್ಯಂತ ಭಯದ ವಾತಾವರಣ ಸೃಷ್ಟಿಸಿತ್ತು. ಜೊತೆಗೆ ಈ ಸಮಯದಲ್ಲಿ ಭಾರತ ಮತ್ತು ಪಾಕಿಸ್ತಾನದ ಗಡಿಯಲ್ಲಿ ಉದ್ವಿಗ್ನತೆ ಹೆಚ್ಚಾಗಿತ್ತು. ಹೀಗಾಗಿ ಪ್ರಾಣ ಭಯದಿಂದಾಗಿ ಈ ಕುಸಿತ ಉಂಟಾಗಿದೆ. ಇದೇ ಮೇ 1ರಂದು ನೈನಿತಾಲ್‌ನಲ್ಲಿ 12 ವರ್ಷದ ಬಾಲಕಿ ಮೇಲೆ 60 ವರ್ಷದ ವೃದ್ಧರೊಬ್ಬರು ಹಲ್ಲೆ ನಡೆಸಿದ್ದರು. ಈ ಕಾರಣದಿಂದಾಗಿ ಅಲ್ಲಿ ಕೋಮುಗಲಭೆ ಉಂಟಾಗಿ ತೀವ್ರ ಆಕ್ರೋಶಕ್ಕೆ ಕಾರಣವಾಗಿತ್ತು. ಜೊತೆಗೆ ಪ್ರತಿಭಟನೆಗಳು ಹಾಗೂ ಕೃತ್ಯಗಳಿಗೆ ಕಾರಣವಾಯಿತು. ಈ ಪ್ರತಿಭಟನೆಯ ದೃಶ್ಯಗಳು ಸಾಮಾಜಿಕ ಜಾಲತಾಣಗಳಲ್ಲಿ ಭಾರಿ ವೈರಲ್ ಆಗಿ, ಭಯ ಸೃಷ್ಟಿಸಿತ್ತು. ಹೀಗಾಗಿ ಈ ಕುಸಿತ ಕಂಡು ಬಂದಿದೆ.

nainital 3

ಆದರೆ ಸದ್ಯದ ಪರಿಸ್ಥಿತಿಯಲ್ಲಿ ನೈನಿತಾಲ್ ಸಂಪೂರ್ಣವಾಗಿ ಸುರಕ್ಷಿತವಾಗಿದ್ದರೂ, ಕೆಲವು  ಕಾರಣಗಳಿಂದ ಪ್ರವಾಸಿಗರು ಹಿಂದೇಟು ಹಾಕುತ್ತಿದ್ದಾರೆ. ಜೊತೆಗೆ ನೈನಿತಾಲ್‌ಗೆ ತೆರಳಲು ಸುಮಾರು 10 ಕಿ.ಮೀ ದೂರದಲ್ಲಿ ವಾಹನ ನಿಲುಗಡೆ ಮಾಡಲು ಅವಕಾಶವಿದೆ. ಹೀಗಾಗಿ ಅನೇಕರಿಗೆ ಇದು ಅನಾನುಕೂಲತೆ ಉಂಟು ಮಾಡಿದೆ. ಸರ್ಕಾರಿ ಪಾರ್ಕಿಂಗ್ ಸ್ಥಳಗಳಲ್ಲಿ ಪಾರ್ಕಿಂಗ್ ಶುಲ್ಕ ದಿನಕ್ಕೆ 130 ರೂ.ಯಿಂದ 500 ರೂ.ಗೆ ಏರಿಕೆಯಾಗಿದೆ. ಜೊತೆಗೆ ಟೋಲ್‌ಗಳನ್ನು ಹೆಚ್ಚಿಸಲಾಗಿದೆ. ಹೀಗಾಗಿ ನೈನಿತಾಲ್ ಪ್ರಯಾಣ ಹಲವು ಸಮಸ್ಯೆಗಳಿಂದ ಕೂಡಿದೆ. ಇದೆಲ್ಲಾ ಕಾರಣಗಳಿಂದಾಗಿ ಪ್ರವಾಸಿಗರು ಕಾಶ್ಮೀರದ ಹಲವು ಪ್ರವಾಸಿ ತಾಣಗಳು ಸೇರಿದಂತೆ ಸುತ್ತಮುತ್ತಲಿನ ರಾಜ್ಯಗಳಿಗೆ ಪ್ರವಾಸಕ್ಕೆ ಭೇಟಿ ನೀಡಲು ಹಿಂಜರಿಯುತ್ತಿದ್ದಾರೆ.

TAGGED:indiaNainitalPahalgam Terrorist AttackpakistanUttarakhandಉತ್ತರಾಖಂಡನೈನಿತಾಲ್ಪಹಲ್ಗಾಮ್ ದಾಳಿಭಾರತ
Share This Article
Facebook Whatsapp Whatsapp Telegram

Cinema Updates

Kamal Haasan
ಅಹಂಕಾರಿ ಕಮಲ್‌ಗೆ ಬಿಗ್‌ ಶಾಕ್‌ – ಕರ್ನಾಟಕದಲ್ಲಿ ಚಿತ್ರ ಬಿಡುಗಡೆ 1 ವಾರ ಮುಂದೂಡಿಕೆ
11 hours ago
Kamal Haasan
ಮೊದಲು ಕ್ಷಮೆ ಕೇಳಿ, ಜನರ ಭಾವನೆಗೆ ಧಕ್ಕೆ ತರಬೇಡಿ: ಕಮಲ್‌ಗೆ ಹೈಕೋರ್ಟ್‌ ಚಾಟಿ
14 hours ago
Thug Life 2
ಕಮಲ್ ಹಾಸನ್‌ಗೆ ಇಂದು ನಿರ್ಣಾಯಕ ದಿನ – ಹೈಕೋರ್ಟ್‌ನಲ್ಲಿ ‘ಥಗ್‌ಲೈಫ್’ ಬಿಡುಗಡೆ ನಿರ್ಧಾರ
18 hours ago
Ananth Nag MODI
ಹೈ ಟೀ ಸಮಾರಂಭದಲ್ಲಿ ಮೋದಿ ಭೇಟಿಯಾದ ಅನಂತ್‌ನಾಗ್‌
1 day ago

You Might Also Like

rishi sunak rcb 1
Cricket

IPL 2025; ಆರ್‌ಸಿಬಿ ಗೆಲುವು ಸಾಧಿಸುತ್ತಿದ್ದಂತೆ ಎದ್ದು ಕುಣಿದು ಕುಪ್ಪಳಿಸಿದ ಬ್ರಿಟನ್‌ ಮಾಜಿ ಪ್ರಧಾನಿ

Public TV
By Public TV
7 minutes ago
RCB fans celebration
Bengaluru City

ಲಾಯಲ್‌ ಫ್ಯಾನ್ಸ್‌ಗಾಗಿ ರಾಯಲ್‌ ಗೆಲುವು – ಎಲ್ಲೆಡೆ ಆರ್‌ಸಿಬಿ ಗೆಲುವನ್ನು ಸಂಭ್ರಮಿಸಿ ಮೆರೆದಾಡಿದ ಫ್ಯಾನ್ಸ್‌

Public TV
By Public TV
27 minutes ago
IPL Chompions
Cricket

ಚೊಚ್ಚಲ ಟ್ರೋಫಿ ಗೆದ್ದ ಆರ್‌ಸಿಬಿಗೆ ಸಿಕ್ಕ ಬಹುಮಾನ ಎಷ್ಟು..? – ಇಲ್ಲಿದೆ ಕಂಪ್ಲೀಟ್‌ ಲಿಸ್ಟ್‌…

Public TV
By Public TV
37 minutes ago
RCB Team
Cricket

18 ವರ್ಷಗಳ ವನವಾಸ ಅಂತ್ಯ – ಕೊನೆಗೂ ʻಈ ಸಲ ಕಪ್‌ ನಮ್ದುʼ, ಅಭಿಮಾನಿ ದೇವ್ರುಗಳಿಗೆ ಆರ್‌ಸಿಬಿ ಗಿಫ್ಟ್‌

Public TV
By Public TV
1 hour ago
Siddaramaiah DKshivakumar H.D Kumaraswamy
Cricket

ಈ ಸಲ ಕಪ್ ನಮ್ದು – ಆರ್‌ಸಿಬಿ ದಿಗ್ವಿಜಯಕ್ಕೆ ಸಿದ್ದರಾಮಯ್ಯ, ಡಿಕೆಶಿ, ಹೆಚ್‌ಡಿಕೆ ಅಭಿನಂದನೆ

Public TV
By Public TV
1 hour ago
03 2
Bengaluru City

RCB Champions | ಈ ಖುಷಿ ನಮ್ಮಿಂದ ತಡೆಯೋಕೆ ಆಗ್ತಿಲ್ಲ – ಅಭಿಮಾನಿ ದೇವ್ರುಗಳಲ್ಲಿ ಮುಗಿಲು ಮುಟ್ಟಿದ ಸಂಭ್ರಮ

Public TV
By Public TV
2 hours ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?