Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಪ್ರಕೃತಿಯಿಂದಲೇ ಕೈಬೀಸಿ ಕರೆಯೋ ನೈನಿತಾಲ್‌ಗೆ ಬರೋ ಪ್ರವಾಸಿಗರ ಸಂಖ್ಯೆ ಕುಸಿತ – ಯಾಕೆ?
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Latest | ಪ್ರಕೃತಿಯಿಂದಲೇ ಕೈಬೀಸಿ ಕರೆಯೋ ನೈನಿತಾಲ್‌ಗೆ ಬರೋ ಪ್ರವಾಸಿಗರ ಸಂಖ್ಯೆ ಕುಸಿತ – ಯಾಕೆ?

Latest

ಪ್ರಕೃತಿಯಿಂದಲೇ ಕೈಬೀಸಿ ಕರೆಯೋ ನೈನಿತಾಲ್‌ಗೆ ಬರೋ ಪ್ರವಾಸಿಗರ ಸಂಖ್ಯೆ ಕುಸಿತ – ಯಾಕೆ?

Public TV
Last updated: June 1, 2025 10:25 pm
Public TV
Share
3 Min Read
nainital
SHARE
ಭಾರತದಲ್ಲಿರುವ ಪ್ರತಿಯೊಂದು ಪ್ರವಾಸಿ ತಾಣವು ಒಂದಕ್ಕೊಂದು ಭಿನ್ನವಾಗಿದೆ. ದಕ್ಷಿಣ ಭಾರತವು ಸಮುದ್ರ, ದ್ವೀಪಗಳು, ಪರ್ವತ ಶಿಖರಗಳು, ಪಶ್ಚಿಮ ಹಾಗೂ ಪೂರ್ವ ಘಟ್ಟಗಳಿಂದ ಪ್ರವಾಸಿಗರನ್ನು ಕೈಬೀಸಿ ಕರೆಯುತ್ತದೆ. ಇದೇ ರೀತಿ ಉತ್ತರ ಭಾರತವು ನೈಸರ್ಗಿಕ ತಾಣಗಳು, ಹಿಮಾಲಯ ಪರ್ವತ ಶ್ರೇಣಿಗಳು, ಪ್ರಮುಖ ದೇವಾಲಯಗಳು ಹಾಗೂ ವಿಭಿನ್ನ ಸರೋವರಗಳನ್ನು ತನ್ನಲ್ಲಿ ಸೃಷ್ಟಿಸಿಕೊಂಡಿದೆ. ಈ ಪೈಕಿ ಉತ್ತರ ಭಾರತದ ಪ್ರಸಿದ್ಧ ಪ್ರವಾಸಿ ತಾಣವಾದ ನೈನಿತಾಲ್  (Nainital) ಪ್ರವಾಸಿಗರನ್ನು ಪ್ರಕೃತಿ ಸೌಂದರ್ಯದ ಮೂಲಕ ತನ್ನೆಡೆಗೆ ಸೆಳೆಯುತ್ತಿದೆ.

ಇತ್ತೀಚಿನ ದಿನಗಳಲ್ಲಿ ಅಲ್ಲ…. ಮೊದಲಿನಿಂದಲೂ ನೈನಿತಾಲ್‌ಗೆ ಪ್ರವಾಸಕ್ಕೆಂದು ಹೊರಡುವ ಜನರ ಸಂಖ್ಯೆ ಹೆಚ್ಚು. ಹೀಗಿರುವಾಗ ಇತ್ತೀಚಿನ ದಿನಗಳಲ್ಲಿ ನೈನಿತಾಲ್ ಸೇರಿದಂತೆ ಉತ್ತರ ಭಾರತದ ಪ್ರಮುಖ ಪ್ರವಾಸಿ ತಾಣಗಳಲ್ಲಿ ಪ್ರವಾಸಿಗರ ಸಂಖ್ಯೆ ಕಡಿಮೆಯಾಗುತ್ತಿದೆ. ಇದರಿಂದಾಗಿ ಪ್ರವಾಸಿಗರನ್ನು ನಂಬಿಕೊಂಡ ಅಲ್ಲಿನ ಜನರ ಆರ್ಥಿಕ ಸ್ಥಿತಿ ಸಮಸ್ಯೆಗೀಡಾಗುತ್ತಿದೆ.

nainital 2

ನೈನಿತಾಲ್:
ಉತ್ತರಾಖಂಡದ (Uttarakhand) ಕುಮಾವುನ್ ಪ್ರದೇಶದಲ್ಲಿ ಕಂಡುಬರುವ ಒಂದು ಪ್ರವಾಸಿ ತಾಣವೆಂದರೆ ಅದು ನೈನಿತಾಲ್. ಇದನ್ನು ಸರೋವರಗಳ ನಗರ ಎಂದು ಕರೆಯಲಾಗುತ್ತದೆ. ಜೊತೆಗೆ ಸುಂದರವಾದ ಗಿರಿಧಾಮವನ್ನು ಇದು ಒಳಗೊಂಡಿದೆ. ಇಲ್ಲಿರುವ ಹಿಮಪರ್ವತಗಳು ಈ ಪ್ರದೇಶದ ಸೌಂದರ್ಯವನ್ನು ಮತ್ತಷ್ಟು ಹೆಚ್ಚಿಸಿದೆ. ನೈನಾದೇವಿ ದೇವಾಲಯ ದೇವಿಯ ಶಕ್ತಿಪೀಠಗಳಲ್ಲಿ ಒಂದು. ಇನ್ನೂ ನವವಿವಾಹಿತರಿಗೆ ಇದು ಹನಿಮೂನ್‌ಗೆ ಒಂದು ಬೆಸ್ಟ್ ಆಯ್ಕೆ ಅಂತಾನೆ ಹೇಳಬಹುದು. ನೈನಿತಾಲ್ ಸರೋವರ ಸಿಹಿ ನೀರಿನ ಸರೋವರವಾಗಿದ್ದು, ಈ ಸರೋವರದಲ್ಲಿ ದೋಣಿ ವಿಹಾರ ಒಳ್ಳೆಯ ಅನುಭವವನ್ನು ನೀಡುತ್ತದೆ. ಈ ಸರೋವರ ಹಚ್ಚಹಸಿರಿನ ಪರ್ವತ ಶ್ರೇಣಿಗಳಿಂದ ಆವೃತ್ತವಾಗಿದ್ದು, ಅರ್ಧಚಂದ್ರನಂತೆ ಹರಿದು ಹೋಗುತ್ತದೆ. ನೈನಿತಾಲ್‌ನಲ್ಲಿ ಔಲಿ ಎಂಬ ತಾಣ, ನಂದಾದೇವಿ ರಾಷ್ಟ್ರೀಯ ಉದ್ಯಾನವನ, ಕೌಸನಿ, ಬಿನ್ಸರ್ ವನ್ಯಜೀವಿಧಾಮ, ಅಲ್ಮೋರಾ ಹೀಗೆ ಇನ್ನಿತರ ಪ್ರದೇಶಗಳಿಗೆ ಭೇಟಿ ನೀಡಬಹುದು.

nainital 1

ನೈನಿತಾಲ್‌ಗೆ ಹೋಗುವುದಾದರೆ ಉತ್ತರಾಖಂಡದ ಪಂತನಗರದ ವಿಮಾನ ನಿಲ್ದಾಣಕ್ಕೆ ತಲುಪಿ, ಅಲ್ಲಿಂದ ಟ್ಯಾಕ್ಸಿಗಳ ಮೂಲಕ ತಲುಪಬಹುದು. ಇನ್ನೂ ರೈಲಿನ ಮೂಲಕ ಹೋಗುವುದಾದರೆ ಕತ್ಗೊಡಮ್ ರೈಲ್ವೆ ನಿಲ್ದಾಣಕ್ಕಿಳಿದು ಅಲ್ಲಿಂದ ಬಸ್ ಅಥವಾ ಟ್ಯಾಕ್ಸಿ ಮೂಲಕ ತಲುಪಬಹುದು. ಇನ್ನೂ ದೆಹಲಿಯಿಂದ 6-7 ಗಂಟೆಗಳಲ್ಲಿ ಕಾರು ಅಥವಾ ಇನ್ನಿತರ ವಾಹನಗಳ ಮೂಲಕ ತಲುಪಬಹುದು. ಇಂತಹ ಅದ್ಭುತ ತಾಣಗಳನ್ನು ಒಳಗೊಂಡಿರುವ ನೈನಿತಾಲ್‌ಗೆ ಬೇಸಿಗೆ ತಿಂಗಳಲ್ಲಿ (ಮೇ-ಜೂನ್) ಹೆಚ್ಚಿನ ಪ್ರವಾಸಿಗರು ಭೇಟಿ ನೀಡುತ್ತಾರೆ. ಆದರೆ ಈ ಬಾರಿ ಪ್ರವಾಸಿಗರ ಸಂಖ್ಯೆಯಲ್ಲಿ ಭಾರಿ ಕುಸಿತ ಕಂಡಿದ್ದು, ಪ್ರಶ್ನೆಯನ್ನು ಹುಟ್ಟು ಹಾಕಿದೆ.

nainital 4

ಈ ಕುರಿತು ನೈನಿತಾಲ್ ಅಸೋಸಿಯೇಷನ್‌ನ ಅಧ್ಯಕ್ಷ ದಿಗ್ವಿಜಯ ಸಿಂಗ್ ಮಿಷ್ತ ಮಾತನಾಡಿ, ಈ ಬಾರಿ ಇಲ್ಲಿನ ಹೋಟೆಲ್ ಮತ್ತು ರೆಸಾರ್ಟ್ ಬುಕ್ಕಿಂಗ್‌ಗಳಲ್ಲಿ ಭಾರಿ ಕುಸಿತ ಕಂಡಿದ್ದು, ಕಳೆದ ವರ್ಷಕ್ಕಿಂತ ಈ ವರ್ಷ ಶೇಕಡ 90ರಷ್ಟು ಕುಸಿತ ಕಂಡಿದೆ ಎಂದು ಮಾಹಿತಿ ನೀಡಿದ್ದಾರೆ. ಇನ್ನು ಅಡ್ವಾನ್ಸ್ ಬುಕಿಂಗ್ ಮಾಡಿದ್ದ ಪ್ರವಾಸಿಗರು ತಮ್ಮ ಬುಕಿಂಗ್‌ಗಳನ್ನು ರದ್ದುಗೊಳಿಸಿದ್ದಾರೆ. ಈ ಬಾರಿ ಕುಸಿತ ಕಂಡ ಹಾಗೆ ಈತನಕ ನೈನಿತಾಲ್‌ನಲ್ಲಿ ಯಾವತ್ತೂ ಆಗಿರಲಿಲ್ಲ ಎಂದು ತಿಳಿಸಿದ್ದಾರೆ.

ಹೌದು, ಇದಕ್ಕೆಲ್ಲ ಒಂದು ಭೀಕರ ಕಾರಣವಿದೆ. ಈ ಬಾರಿ ಏ.22 ರಂದು ಜಮ್ಮು-ಕಾಶ್ಮೀರದ ಪಹಲ್ಗಾಮ್‌ನ ಬೈಸರನ್ ಕಣಿವೆಯಲ್ಲಿ ಪಾಕಿಸ್ತಾನದ ಭಯೋತ್ಪಾದಕರು ನಡೆಸಿದ ಹಿಂದೂಗಳ ನರಮೇಧದಲ್ಲಿ 26 ನಾಗರಿಕರು ಸಾವನ್ನಪ್ಪಿದರು. ಇದು ದೇಶಾದ್ಯಂತ ಭಯದ ವಾತಾವರಣ ಸೃಷ್ಟಿಸಿತ್ತು. ಜೊತೆಗೆ ಈ ಸಮಯದಲ್ಲಿ ಭಾರತ ಮತ್ತು ಪಾಕಿಸ್ತಾನದ ಗಡಿಯಲ್ಲಿ ಉದ್ವಿಗ್ನತೆ ಹೆಚ್ಚಾಗಿತ್ತು. ಹೀಗಾಗಿ ಪ್ರಾಣ ಭಯದಿಂದಾಗಿ ಈ ಕುಸಿತ ಉಂಟಾಗಿದೆ. ಇದೇ ಮೇ 1ರಂದು ನೈನಿತಾಲ್‌ನಲ್ಲಿ 12 ವರ್ಷದ ಬಾಲಕಿ ಮೇಲೆ 60 ವರ್ಷದ ವೃದ್ಧರೊಬ್ಬರು ಹಲ್ಲೆ ನಡೆಸಿದ್ದರು. ಈ ಕಾರಣದಿಂದಾಗಿ ಅಲ್ಲಿ ಕೋಮುಗಲಭೆ ಉಂಟಾಗಿ ತೀವ್ರ ಆಕ್ರೋಶಕ್ಕೆ ಕಾರಣವಾಗಿತ್ತು. ಜೊತೆಗೆ ಪ್ರತಿಭಟನೆಗಳು ಹಾಗೂ ಕೃತ್ಯಗಳಿಗೆ ಕಾರಣವಾಯಿತು. ಈ ಪ್ರತಿಭಟನೆಯ ದೃಶ್ಯಗಳು ಸಾಮಾಜಿಕ ಜಾಲತಾಣಗಳಲ್ಲಿ ಭಾರಿ ವೈರಲ್ ಆಗಿ, ಭಯ ಸೃಷ್ಟಿಸಿತ್ತು. ಹೀಗಾಗಿ ಈ ಕುಸಿತ ಕಂಡು ಬಂದಿದೆ.

nainital 3

ಆದರೆ ಸದ್ಯದ ಪರಿಸ್ಥಿತಿಯಲ್ಲಿ ನೈನಿತಾಲ್ ಸಂಪೂರ್ಣವಾಗಿ ಸುರಕ್ಷಿತವಾಗಿದ್ದರೂ, ಕೆಲವು  ಕಾರಣಗಳಿಂದ ಪ್ರವಾಸಿಗರು ಹಿಂದೇಟು ಹಾಕುತ್ತಿದ್ದಾರೆ. ಜೊತೆಗೆ ನೈನಿತಾಲ್‌ಗೆ ತೆರಳಲು ಸುಮಾರು 10 ಕಿ.ಮೀ ದೂರದಲ್ಲಿ ವಾಹನ ನಿಲುಗಡೆ ಮಾಡಲು ಅವಕಾಶವಿದೆ. ಹೀಗಾಗಿ ಅನೇಕರಿಗೆ ಇದು ಅನಾನುಕೂಲತೆ ಉಂಟು ಮಾಡಿದೆ. ಸರ್ಕಾರಿ ಪಾರ್ಕಿಂಗ್ ಸ್ಥಳಗಳಲ್ಲಿ ಪಾರ್ಕಿಂಗ್ ಶುಲ್ಕ ದಿನಕ್ಕೆ 130 ರೂ.ಯಿಂದ 500 ರೂ.ಗೆ ಏರಿಕೆಯಾಗಿದೆ. ಜೊತೆಗೆ ಟೋಲ್‌ಗಳನ್ನು ಹೆಚ್ಚಿಸಲಾಗಿದೆ. ಹೀಗಾಗಿ ನೈನಿತಾಲ್ ಪ್ರಯಾಣ ಹಲವು ಸಮಸ್ಯೆಗಳಿಂದ ಕೂಡಿದೆ. ಇದೆಲ್ಲಾ ಕಾರಣಗಳಿಂದಾಗಿ ಪ್ರವಾಸಿಗರು ಕಾಶ್ಮೀರದ ಹಲವು ಪ್ರವಾಸಿ ತಾಣಗಳು ಸೇರಿದಂತೆ ಸುತ್ತಮುತ್ತಲಿನ ರಾಜ್ಯಗಳಿಗೆ ಪ್ರವಾಸಕ್ಕೆ ಭೇಟಿ ನೀಡಲು ಹಿಂಜರಿಯುತ್ತಿದ್ದಾರೆ.

TAGGED:indiaNainitalPahalgam Terrorist AttackpakistanUttarakhandಉತ್ತರಾಖಂಡನೈನಿತಾಲ್ಪಹಲ್ಗಾಮ್ ದಾಳಿಭಾರತ
Share This Article
Facebook Whatsapp Whatsapp Telegram

Cinema news

Wild Life Safari
ದುಬೈನಲ್ಲಿ ಬಿಡುಗಡೆ ಆಯ್ತು ವೈಲ್ಡ್ ಟೈಗರ್ ಸಫಾರಿ ಟೀಸರ್
Cinema Latest Sandalwood Top Stories
kicchana chappale ashwini gowda dhruvanth
Bigg Boss ಸೀಸನ್‌ 12ರ ಕೊನೆಯ ಕಿಚ್ಚನ ಚಪ್ಪಾಳೆ ಗಿಟ್ಟಿಸಿಕೊಂಡ ಅಶ್ವಿನಿ, ಧ್ರುವಂತ್‌
Cinema Latest Top Stories TV Shows
Monalisa Bhosle
ರೊಮ್ಯಾಂಟಿಕ್‌ ಸಾಂಗ್‌ನಲ್ಲಿ ಕುಂಭಮೇಳದ ನೀಲಿ ಕಂಗಳ ಚೆಲುವೆ – ದಿಲ್‌ ಕದ್ದ ಮೊನಾಲಿಸಾ!
Bollywood Cinema Latest National Top Stories
Niveditha Gowda
ಕಡಲ ಅಲೆಯಲ್ಲಿ ಗುಲಾಬಿ ದಳದಂತೆ ತೇಲಿದ ನಿವೇದಿತಾ!
Cinema Latest Sandalwood Top Stories

You Might Also Like

cricket news India vs New Zealand 1st ODI india need 301 runs to win
Cricket

IND vs NZ | ಭಾರತಕ್ಕೆ 301 ರನ್‌ಗಳ ಗುರಿ ನೀಡಿದ ಕಿವೀಸ್‌

Public TV
By Public TV
21 minutes ago
Basavaraj Bommai
Bengaluru City

ವರದಾ, ಬೇಡ್ತಿ ನದಿ ಜೋಡಣೆ – ಮಠಾಧೀಶರು, ಜನಪ್ರತಿನಿಧಿಗಳ ಜನಜಾಗೃತಿ ಸಭೆ: ಬೊಮ್ಮಾಯಿ

Public TV
By Public TV
25 minutes ago
Raichuru Accident NS Bosaraju
Crime

ಟ್ರ‍್ಯಾಕ್ಟರ್‌ಗೆ ಲಾರಿ ಡಿಕ್ಕಿ, ರೈತ ಸಾವು – ಮಾರ್ಗಮಧ್ಯೆ ಘಟನೆ ಕಂಡು ಸ್ಥಳಕ್ಕೆ ಭೇಟಿ, ಸಾಂತ್ವನ ಹೇಳಿದ ಸಚಿವ ಬೋಸರಾಜು

Public TV
By Public TV
38 minutes ago
DKSHI HDK
Bengaluru City

ಮನರೇಗಾ ವಿಚಾರವಾಗಿ ಹೆಚ್‌ಡಿಕೆ ಜೊತೆ ಬಹಿರಂಗ ಚರ್ಚೆಗೆ ಸಿದ್ಧ: ಡಿಕೆಶಿ

Public TV
By Public TV
54 minutes ago
ayatollah ali khamenei donald trump
Latest

ಇಸ್ರೇಲ್‌, ಅಮೆರಿಕ ವಾಯುನೆಲೆಗಳ ಮೇಲೆ ದಾಳಿ ಮಾಡ್ತೀವಿ: ಟ್ರಂಪ್‌ಗೆ ಇರಾನ್‌ ವಾರ್ನಿಂಗ್‌

Public TV
By Public TV
2 hours ago
hockey
Crime

ಸ್ಟೇಡಿಯಂನ ಬಾತ್ರೂಮ್‌ನಲ್ಲಿ ಅಪ್ರಾಪ್ತ ಹಾಕಿ ಆಟಗಾರ್ತಿಯ ಮೇಲೆ ರೇಪ್, ಬಳಿಕ ಗರ್ಭಪಾತ – ಕೋಚ್ ಅರೆಸ್ಟ್

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?