Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಕನ್ನಡದಲ್ಲಿ ಯಾಕೆ ಮಾತನಾಡಬೇಕು: ಬೆಂಗಳೂರಿನಲ್ಲಿ ನೆಲೆಸಿರುವ ಅನ್ಯಭಾಷಿಕರು ನೋಡ್ಲೇಬೇಕಾದ ವಿಡಿಯೋ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಕನ್ನಡದಲ್ಲಿ ಯಾಕೆ ಮಾತನಾಡಬೇಕು: ಬೆಂಗಳೂರಿನಲ್ಲಿ ನೆಲೆಸಿರುವ ಅನ್ಯಭಾಷಿಕರು ನೋಡ್ಲೇಬೇಕಾದ ವಿಡಿಯೋ

Bengaluru City

ಕನ್ನಡದಲ್ಲಿ ಯಾಕೆ ಮಾತನಾಡಬೇಕು: ಬೆಂಗಳೂರಿನಲ್ಲಿ ನೆಲೆಸಿರುವ ಅನ್ಯಭಾಷಿಕರು ನೋಡ್ಲೇಬೇಕಾದ ವಿಡಿಯೋ

Public TV
Last updated: July 28, 2017 6:32 pm
Public TV
Share
2 Min Read
prashanth sambargi
SHARE

ಬೆಂಗಳೂರು: ಕೇಂದ್ರ ಸರ್ಕಾರದ ಹಿಂದಿ ಹೇರಿಕೆಯನ್ನು ಯಾಕೆ ವಿರೋಧಿಸಬೇಕು? ದೇಶದ ಅಭಿವೃದ್ಧಿಯಲ್ಲಿ ಪ್ರಾದೇಶಿಕ ಭಾಷೆಗಳು ಹೇಗೆ ಬಹಳ ಮುಖ್ಯ ಪಾತ್ರವನ್ನು ವಹಿಸುತ್ತದೆ ಎಂದು ಕನ್ನಡಿಗರೊಬ್ಬರು ಹಿಂದಿಯಲ್ಲಿ ವಿವರಿಸುವ ವಿಡಿಯೋವೊಂದು ಈಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

ಉದ್ಯಮಿ ಪ್ರಶಾಂತ್ ಸಂಬರ್ಗಿ ಅವರು ಈ ವಿಡಿಯೋದಲ್ಲಿ ಮಾತನಾಡಿ ಬೆಂಗಳೂರಿನಲ್ಲಿ ನೆಲೆಸಿರುವ ಹೊರ ರಾಜ್ಯದವರಿಗೆ ಕನ್ನಡ ಕಲಿಯುವಂತೆ ಮನವಿ ಮಾಡಿದ್ದಾರೆ.

ವಿಡಿಯೋದಲ್ಲಿ ಹೇಳಿದ್ದೇನು?
ನಾನು ಯಾವುದೇ ಪಕ್ಷಕ್ಕೆ ಸೇರಿದ ವ್ಯಕ್ತಿಯಲ್ಲ. ಯಾವುದೇ ರಾಜಕೀಯ ಉದ್ದೇಶವೂ ನನಗೆ ಇಲ್ಲ. ಮೆಟ್ರೋವನ್ನು ನಾವು ಪ್ರೀತಿಯಿಂದ ‘ನಮ್ಮ ಮೆಟ್ರೋ’ ಎಂದು ಕರೆದಿದ್ದೇವೆ. ಆದರೆ ನಮ್ಮ ಮೆಟ್ರೋದಲ್ಲಿ ಹಿಂದಿ ಹೇರಿಕೆಯನ್ನು ವಿರೋಧಿಸಿದ ವಿಚಾರ ರಾಷ್ಟ್ರಮಟ್ಟದಲ್ಲಿ ಸುದ್ದಿಯಾಗಿದೆ. ಕಳೆದ 70 ವರ್ಷಗಳಿಂದ ಕೇಂದ್ರ ಸರ್ಕಾರಗಳು ಹಿಂದಿ ಅಭಿವೃದ್ಧಿಗೆ 1700 ಕೋಟಿ ರೂ. ಅನುದಾನ ಕೊಟ್ಟಿದೆ.

ಪ್ರಾದೇಶಿಕ ಭಾಷೆಗಳು ನಮ್ಮ ನಾಡಿನ ಸೊಬಗು. ಭಾರತದ ವಿವಿಧತೆಯಲ್ಲಿ ವೈವಿಧ್ಯತೆಯನ್ನು ಹೊಂದಿರುವ ದೇಶವಾಗಿದೆ. ಆದರೆ ಹಿಂದಿ ದಬ್ಬಾಳಿಕೆಯಿಂದ ವೈವಿಧ್ಯತೆಯಲ್ಲಿ ಏಕತೆಯ ಬದಲು ಮೂರ್ಖತೆಯಲ್ಲಿ ಏಕತೆ ಕಾಣುತ್ತಿದ್ದೇವೆ. ಬಿಹಾರದ ಮೈಥಿಲಿ, ಗುಜರಾತಿನ ಸಿಂಧಿ, ಅಸ್ಸಾಮಿನ ಬೋಡೋ ಭಾಷೆಯನ್ನು ಈಗಾಗಲೇ ಕೊಲ್ಲಲಾಗಿದೆ.

ಕನ್ನಡ ಹೇಗೆ ಸಾಯುತ್ತದೆ ಎಂದು ನೀವು ಕೇಳಬಹುದು. 18ನೇ ಶತಮಾನದಲ್ಲಿ ಚಾರ್ಲ್ಸ್ ಡಾರ್ವಿನ್ ವಿಕಾಸವಾದ ನಿಮಗೆ ತಿಳಿದಿರಬಹುದು. ಮನುಷ್ಯನಿಗೂ ಮಂಗನಂತೆ ಬಾಲ ಇತ್ತು. ಆದರೆ ನಾವು ಅದನ್ನು ಬಳಸಲಿಲ್ಲ. ಹೀಗಾಗಿ ಬಾಲ ಮಾಯವಾಗಿದೆ ಎನ್ನುವ ವಿಕಾಸವಾದ ಪ್ರಾದೇಶಿಕ ಭಾಷೆಗಳಿಗೂ ಅನ್ವಯವಾಗುತ್ತದೆ. ಹಿಂದಿ ಹೇರಿಕೆ ಜಾಸ್ತಿಯಾಗಿ ಪ್ರಾದೇಶಿಕ ಭಾಷೆಗಳನ್ನು ಮಾತನಾಡುವವರ ಸಂಖ್ಯೆ ಕಡಿಮೆಯಾದರೆ ಈ ಭಾಷೆಗಳು ಕಣ್ಮರೆಯಾಗಬಹುದು. ಹೀಗಾಗಿ ಕನ್ನಡ ಕಣ್ಮರೆಯಾಗದಂತೆ ನೋಡಿಕೊಳ್ಳುವ ಜವಾಬ್ದಾರಿ ನಮ್ಮೆಲ್ಲರ ಮೇಲಿದೆ.

ಬೇರೆ ರಾಜ್ಯಗಳಿಂದ ಬೆಂಗಳೂರಿಗೆಂದು ಉದ್ಯೋಗಕ್ಕೆ ಬಂದವರಲ್ಲಿ ನಾನು ಮನವಿ ಮಾಡುತ್ತಿದ್ದೇನೆ. ಒಂದು ಕನ್ನಡ ಕಲಿಯಲು ಒಂದು ಹೆಜ್ಜೆ ಇಟ್ಟರೆ ಕನ್ನಡಿಗರು ನಿಮಗೆ ಕನ್ನಡ ಕಲಿಸಲು ಎರಡು ಹೆಜ್ಜೆ ಮುಂದಕ್ಕೆ ಇಡುತ್ತಾರೆ. ನಾವೆಲ್ಲರೂ ಪ್ರಾದೇಶಿಕ ಭಾಷೆಯನ್ನು ಉಳಿಸಲು ಪ್ರಮಾಣ ಮಾಡೋಣ. ಈ ಮೂಲಕ ದೇಶದ ವೈವಿಧ್ಯತೆಯಲ್ಲಿ ಏಕತೆಯನ್ನು ಸಾಧಿಸೋಣ ಎಂದು ಅವರು ವಿಡಿಯೋದಲ್ಲಿ ಹೇಳಿಕೊಂಡಿದ್ದಾರೆ.

ಅಚ್ಚ ಕನ್ನಡಿಗರಾಗಿರುವ ಇವರು ‘ನಿಜವಾದ ಕನ್ನಡಿಗ ಯಾರು’ ಎನ್ನುವ ಶೀರ್ಷಿಕೆಯ ಅಡಿ ವಿಡಿಯೋಗಳನ್ನು ತರುತ್ತಿದ್ದಾರೆ. ಡಬ್ಬಿಂಗ್ ಪರವಾಗಿರುವ ಇವರು ಕನ್ನಡ ಸಾಹಿತ್ಯ ಓದುವವರು, ಕನ್ನಡದಲ್ಲಿ ವ್ಯವಹರಿಸುವವರು ನಿಜವಾದ ಕನ್ನಡಿಗರು ಎಂದು ಹೇಳಿದ್ದಾರೆ. ಬಾಹುಬಲಿ ಸತ್ಯರಾಜ್ ಗಲಾಟೆ ಸಂದರ್ಭದಲ್ಲಿ ಇವರು ವಿಡಿಯೋ ಮೂಲಕ ಕನ್ನಡಿಗರು ಯಾರು ಎಂದು ವಿವರಿಸಿದ್ದರು.
ಈ ವಿಡಿಯೋಗೆ ಕನ್ನಡ ಸಂಘಟನೆಗಳಿಂದ ಆಕ್ಷೇಪ ಕೇಳಿ ಬಂದಿತ್ತು.

ವಿಡಿಯೋ ವೀಕ್ಷಿಸಲು ಲಿಂಕ್: https://www.facebook.com/VS.Prashanth.Sambargi

 

TAGGED:bengaluruhindikannadaPrashanth Sambargisandalwoodvideoಕನ್ನಡಕನ್ನಡಿಗರುನಮ್ಮ ಮೆಟ್ರೋಪ್ರಶಾಂತ್ ಸಂಬರ್ಗಿಹಿಂದಿ ಹೇರಿಕೆ
Share This Article
Facebook Whatsapp Whatsapp Telegram

Cinema news

Asha Bhosle 3
`ಅಭೀ ನಾ ಜಾವೋ ಛೋಡ್ ಕರ್’ ಗಾಯಕಿ ಸಂಗೀತದಲ್ಲಿ ಲೀನ – ಇಂದು ಆಶಾ ಭೋಸ್ಲೆ ಅಂತ್ಯಕ್ರಿಯೆ
Cinema Latest Main Post Top Stories
Ramya 2
ನಟಿ ರಮ್ಯಾ ವಿರುದ್ಧ ಅಶ್ಲೀಲ ಕಾಮೆಂಟ್‌ ಪ್ರಕರಣ – ಉಳಿದ 29 ಆರೋಪಿಗಳ ಬಲೆ ಬೀಸಿದ ಸಿಸಿಬಿ ಪೊಲೀಸ್‌
Bengaluru City Cinema Crime Districts Karnataka Latest Main Post
Asha Bhosle 2
10ನೇ ವಯಸ್ಸಿನಲ್ಲಿ ಶುರುವಾದ ಗಾಯನದ ಬದುಕು – `ಸ್ವರʼ ನಿಲ್ಲಿಸಿದ ಆಶಾ ಭೋಸ್ಲೆ
Cinema Latest Main Post National
Actor Harish
ಕೊಡಗಿನಲ್ಲಿ ಭೀಕರ ರಸ್ತೆ ಅಪಘಾತ – ಚಿತ್ರನಟ ಹರೀಶ್ ಸ್ಥಳದಲ್ಲೇ ಸಾವು
Cinema Crime Karnataka Kodagu Latest Sandalwood Top Stories

You Might Also Like

Siddaramaiah Wife Parvathi Siddaramaiah
Chikkamagaluru

ಕಾಫಿನಾಡಲ್ಲಿ ಸಿಎಂ ಪತ್ನಿ ಟೆಂಪಲ್ ರನ್

Public TV
By Public TV
31 minutes ago
Benjamin Netanyahu
Latest

ಅಮೆರಿಕ-ಇರಾನ್‌ ಸಂಧಾನ ಯಶಸ್ವಿಯಾಗ್ತಿತ್ತು, ನೆತನ್ಯಾಹು 1 ಫೋನ್ ಕಾಲ್‌ ಎಲ್ಲವನ್ನ ಹಾಳುಮಾಡಿತು: ಇರಾನ್‌ ಹೊಸ ಬಾಂಬ್‌

Public TV
By Public TV
47 minutes ago
GS Patil
Districts

4 ಬಾರಿ ಆಯ್ಕೆ ಆಗಿದ್ದೇನೆ, ನನಗೂ ಸಚಿವ ಸ್ಥಾನ ಬೇಕು – ದೆಹಲಿಗೆ ಹಾರಿದ ರೋಣ ಶಾಸಕ ಜಿ.ಎಸ್ ಪಾಟೀಲ

Public TV
By Public TV
1 hour ago
adarsh nagar PSI
Districts

ಲಂಚ ಪಡೆಯುವಂತೆ PSI ಒತ್ತಡ – ಕಿರುಕುಳಕ್ಕೆ ಬೇಸತ್ತು ದಯಾಮರಣ ಕೋರಿ ಸಿಎಂ, ಗೃಹ ಸಚಿವರಿಗೆ ಠಾಣೆಯ ಅಧಿಕಾರಿಗಳ ಪತ್ರ

Public TV
By Public TV
1 hour ago
Delhi Dehradun Expressway
Latest

ನಾಳೆ ಪ್ರಧಾನಿಗಳಿಂದ ಉದ್ಘಾಟನೆ ಆಗಬೇಕಿರುವ ಎಕ್ಸ್‌ಪ್ರೆಸ್‌ವೇನಲ್ಲಿ ಭೀಕರ ಸರಣಿ ಅಪಘಾತ – ತಪ್ಪಿದ ದುರಂತ

Public TV
By Public TV
2 hours ago
trump crude oil
Latest

ಇರಾನ್‌ ಜೊತೆಗಿನ ಮಾತುಕತೆ ವಿಫಲವಾದ ಬೆನ್ನಲ್ಲೇ ಕಚ್ಚಾ ತೈಲ ಬೆಲೆ ಶೇ.11 ರಷ್ಟು ಏರಿಕೆ

Public TV
By Public TV
3 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?