Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Latest

ದೇವೇಗೌಡರ ಕುಟುಂಬಕ್ಕೆ ವಿಷ ಇಟ್ಟವನ ಜತೆ ವೇದಿಕೆ ಹಂಚಿಕೊಳ್ಳಲು ಸಾಧ್ಯವೇ?: ಕುಮಾರಸ್ವಾಮಿ ಕಿಡಿ

Public TV
Last updated: July 31, 2024 3:22 pm
Public TV
Share
3 Min Read
H.D Kumaraswamy
SHARE

– ಯಾರ್ರೀ ಪ್ರೀತಂ ಗೌಡ?
– ವಿಶ್ವಾಸಕ್ಕೆ ತೆಗೆದುಕೊಳ್ಳದ ಕಾರಣ ಪಾದಯಾತ್ರೆಗೆ ಬೆಂಬಲವಿಲ್ಲ

ನವದೆಹಲಿ: ಹಾಸನದ ಮಾಜಿ ಶಾಸಕ ಪ್ರೀತಂಗೌಡರನ್ನು (Preetham Gowda) ಪಾದಯಾತ್ರೆ ಸಭೆಗೆ ಕರೆಸಿದ್ದ ಬಗ್ಗೆ ತೀವ್ರ ಆಕ್ರೋಶ ವ್ಯಕ್ತಪಡಿಸಿದ ಕೇಂದ್ರ ಸಚಿವರು, ಜೆಡಿಎಸ್ ರಾಜ್ಯಾಧ್ಯಕ್ಷರೂ ಆಗಿರುವ ಹೆಚ್.ಡಿ.ಕುಮಾರಸ್ವಾಮಿ (HD Kumaraswamy) ಅವರು ದೇವೇಗೌಡರ (Devegowda) ಕುಟುಂಬಕ್ಕೆ ವಿಷ ಇಟ್ಟವನೊಂದಿಗೆ ವೇದಿಕೆ ಹಂಚಿಕೊಳ್ಳಲು ಸಾಧ್ಯವೇ ಎಂದು ಪ್ರಶ್ನಿಸಿದ್ದಾರೆ.

ದೆಹಲಿಯಲ್ಲಿ ಮಾಧ್ಯಮಗಳ ಜತೆ ಮಾತನಾಡುತ್ತಾ ಖಾರವಾಗಿ ಪ್ರತಿಕ್ರಿಯಿಸಿದ ಅವರು, ದೇವೇಗೌಡರ ಕುಟುಂಬವನ್ನು ನಾಶ ಮಾಡಲು ಹೊರಟ ಪ್ರೀತಂಗೌಡನನ್ನು ಸಭೆಯಲ್ಲಿ ಕೂರಿಸಿಕೊಂಡು, ನನ್ನನ್ನ ಸಭೆಗೆ ಕರೆಯುತ್ತೀರಾ? ಪೆನ್ ಡ್ರೈವ್ ಗಳನ್ನು ಹಂಚಿವರು ಯಾರು ಎಂದು ಗೊತ್ತಿಲ್ಲವೇ? ಚುನಾವಣಾ ಮೈತ್ರಿಯೇ ಬೇರೆ. ರಾಜಕೀಯವೇ ಬೇರೆ ಎಂದು ಕಿಡಿಕಾರಿದರು.

 

ಪಾದಯಾತ್ರೆಯಲ್ಲಿ ಭಾಗಿಯಾಗಬಾರದು ಎಂದು ಜೆ‌.ಟಿ.ದೇವೇಗೌಡರ ಅಧ್ಯಕ್ಷತೆಯ ಕೋರ್ ಕಮಿಟಿ ಬೆಂಗಳೂರಿನಲ್ಲಿ ಮಂಗಳವಾರ ತೀರ್ಮಾನ ಮಾಡಿದೆ. ಬಿಜೆಪಿ ನಾಯಕರು ಪಾದಯಾತ್ರೆ ಮಾಡಬೇಕು ಎಂದು ನಿರ್ಧಾರ ಕೈಗೊಂಡು ಸಿದ್ಧತೆ ಮಾಡುತ್ತಿದ್ದಾರೆ. ಆದರೆ, ಪಾದಯಾತ್ರೆಗೆ ಇದು ಸೂಕ್ತ ಸಂದರ್ಭವಲ್ಲ ಎನ್ನುವ ಕಾರಣಕ್ಕೆ ನಾವು ಈ ಪದಯತ್ರೆಯಿಂದ ಹಿಂದೆ ಸರಿದಿದ್ದೇವೆ ಎಂದು ಕುಮಾರಸ್ವಾಮಿ ಅವರು ಹೇಳಿದರು.

ಇಡೀ ಮಳೆ, ನೆರೆ, ಭೂ ಕುಸಿತ, ಬೆಳೆನಾಶದಿಂದ ತತ್ತರಿಸಿದೆ. ಇಂತಹ ಸಂಕಷ್ಟ ಪರಿಸ್ಥಿತಿಯಲ್ಲಿ ಪಾದಯಾತ್ರೆ ಮಾಡಿದರೆ ಜನರಿಂದ ಟೀಕೆಗಳು ಬರುವ ಸಾಧ್ಯತೆ ಇದೆ. ಇದೇ ಕಾರಣದಿಂದ ನಾವು ಪಾದಯಾತ್ರೆಯಿಂದ ಹಿಂದೆ ಸರಿದಿದ್ದೇವೆ ಎಂದು ಅವರು ಸ್ಪಷ್ಟ ಮಾತುಗಳಲ್ಲಿ ಹೇಳಿದರು.

ಈ ಪಾದಯಾತ್ರೆಯಿಂದ ರಾಜ್ಯದ ಜನರಿಗೆ ಆಗುವ ಲಾಭವಾದರೂ ಏನು? ಇಲ್ಲಿ ಕಾನೂನು ಹೋರಾಟ ಮಾಡುವುದು ಮುಖ್ಯ. ಕೇವಲ ರಾಜಕೀಯವೇ ನಮಗೆ ಇಲ್ಲಿ ಮುಖ್ಯವಲ್ಲ. ಹೀಗಾಗಿ ನಾವು ಪಾದಯಾತ್ರೆಗೆ ನೈತಿಕ ಬೆಂಬಲವನ್ನೂ ನೀಡುವುದಿಲ್ಲ. ನಮ್ಮನ್ನು ವಿಶ್ವಾಸಕ್ಕೆ ತೆಗೆದುಕೊಳ್ಳದಿದ್ದಾಗ ಯಾಕೆ ಬೆಂಬಲ ಕೊಡಬೇಕು? ಬೆಂಗಳೂರಿನಿಂದ ಮೈಸೂರುವರೆಗೂ ನಮ್ಮ ಪಕ್ಷಕ್ಕೆ ಶಕ್ತಿ ಇದೆ. ನಮ್ಮನ್ನೇ ಪರಿಗಣಿಸಿದಿದ್ದರೆ ಹೇಗೆ ಎಂದು ಕೇಂದ್ರ ಸಚಿವರು ಬೇಸರ ವ್ಯಕ್ತಪಡಿಸಿದರು.

 

ಈ ವಿಜಯದಲ್ಲಿ ನನ್ನ ಮನಸ್ಸಿಗೆ ನೋವಾಗಿದೆ. ಯಾವ ಕಾರಣಕ್ಕಾಗಿ ನಾವು ಪಾದಯಾತ್ರೆಗೆ ಬೆಂಬಲ ಕೊಡಬೇಕು ಎನ್ನುವುದು ಪ್ರಶ್ನೆ. ಈ ಪ್ರೀತಂಗೌಡ ಯಾರು? ಹಾಸನದಲ್ಲಿ ಹಾದಿಬೀದಿಯಲ್ಲಿ ಪೆನ್ ಡ್ರೈವುಗಳನ್ನು ಹಂಚಿದವರು ಯಾರೆನ್ನುವುದು ಗೊತ್ತಿದೆ. ದೇವೇಗೌಡರ ಕುಟುಂಬಕ್ಕೆ ವಿಷ ಇಟ್ಟುವನು ಈ ವ್ಯಕ್ತಿ. ಅಂತಹ ವ್ಯಕ್ತಿಯ ಜತೆಯಲ್ಲಿ ನಾವು ವೇದಿಕೆ ಮೇಲೆ ಕೂರಲು ಸಾಧ್ಯವೇ ಇಲ್ಲವಿಲ್ಲ ಎಂದು ಹೇಳುವ ಮೂಲಕ ಬಿಜೆಪಿ ನಾಯಕರ ವಿರುದ್ಧ ಕಿಡಿಕಾರಿದ್ದಾರೆ.

ಕೋರ್ ಕಮಿಟಿ ಸಭೆಯಲ್ಲಿ ಪಾದಯಾತ್ರೆ ಬಗ್ಗೆ ನಮ್ಮ ನಾಯಕರು ವಿಸ್ತೃತವಾಗಿ ಚರ್ಚೆ ನಡೆಸಿದ್ದಾರೆ. ಎಲ್ಲರ ಅಭಿಪ್ರಾಯವೂ ಪಾದಯಾತ್ರೆ ಸದ್ಯಕ್ಕೆ ಬೇಡ, ಸ್ವಲ್ಪ ದಿನದ ನಂತರ ಮಾಡೋಣ ಎನ್ನುವುದೇ ಆಗಿದೆ. ಕೊಡಗು ಜಿಲ್ಲೆಯ ಪಕ್ಕದಲ್ಲಿಯೇ ಇರುವ ಕೇರಳದ ವೈನಾಡಿನಲ್ಲಿ ಭಾರೀ ಭೂ ಕುಸಿತ ಉಂಟಾಗಿ ನೂರಾರು ಜನರು ಸಾವನ್ನಪ್ಪಿದ್ದಾರೆ. ಇನ್ನೂ ಅನೇಕರು ಕಣ್ಮರೆಯಾಗಿದ್ದಾರೆ. ನಮ್ಮ ರಾಜ್ಯದ ಅನೇಕ ಜಿಲ್ಲೆಗಳಲ್ಲಿ ರೆಡ್ ಅರ್ಲಟ್ ಇದೆ. ಕೊಡಗು, ಹಾಸನ, ಚಿಕ್ಕಮಗಳೂರು, ಉತ್ತರ ಕನ್ನಡ, ದಕ್ಷಿಣ ಕನ್ನಡ ಸೇರಿದಂತೆ ಹಲವಾರು ಜಿಲ್ಲೆಗಳಲ್ಲಿ ನೆರೆ, ಭೂ ಕುಸಿತ ನಿರಂತರವಾಗಿದೆ. ಹೀಗಾಗಿ ಇಂಥ ಪರಿಸ್ಥಿತಿಯಲ್ಲಿ ಪಾದಯಾತ್ರೆ ಬೇಡ ಎನ್ನುವುದು ನಮ್ಮ ಪಕ್ಷದ ಅಭಿಪ್ರಾಯವಾಗಿದೆ ಎಂದು ಕುಮಾರಸ್ವಾಮಿ ಅವರು ತಿಳಿಸಿದರು.

ಬಿಡದಿಯಿಂದ ಮೈಸೂರುವರೆಗೆ ಕೃಷಿ ಚಟುವಟಿಕೆಗಳು ಆರಂಭವಾಗಿವೆ. ಮಂಡ್ಯ, ಮೈಸೂರು ಭತ್ತದ ನಾಟಿ ಶುರುವಾಗಿದೆ. ಬಿಜೆಪಿ ನಾಯಕರು ಪೂರ್ವ ಸಿದ್ದತೆ ಮಾಡಿಕೊಂಡಿದ್ದರು. ಎಲ್ಲವನ್ನೂ ಅಂತಿಮಗೊಳಿಸಿದ ನಂತರ ನಮಗೂ ಮಾಹಿತಿ ಇರಲಿ ಎಂದು ಸಭೆಗೆ ಕರೆದು ಹೇಳಿದ್ದಾರಷ್ಟೇ. ಇದು ಸೂಕ್ತ ಸಂದರ್ಭ ಅಲ್ಲ ಹಾಗಾಗಿ ಹಿಂದೇ ಸರಿದ್ದೇವೆ. ಜನಸಮಾನ್ಯರ ಭಾವನೆ ಮುಖ್ಯ. ಇದಕ್ಕೆ ನಮ್ಮ ನೈತಿಕ ಬೆಂಬಲವೂ ಇಲ್ಲ ಎಂದು ಅವರು ಹೇಳಿದರು.

TAGGED:cm siddaramaiahKumaraswamyPreetham gowdaಕುಮಾರಸ್ವಾಮಿಪಾದಯಾತ್ರೆಬಿಜೆಪಿಸಿಎಂ ಸಿದ್ದರಾಮಯ್ಯ
Share This Article
Facebook Whatsapp Whatsapp Telegram

Cinema Updates

rakshak bullet
ಸತ್ಯ ಒಪ್ಪಿಕೊಂಡ ರಕ್ಷಕ್: ಆಡಿಯೋ ವೈರಲ್ ಬಗ್ಗೆ ಹೇಳಿದ್ದೇನು?
Bengaluru City Cinema Districts Latest Top Stories
ramya 5 2
ನಿಮ್ಮಿಂದಲೇ ಹೆಣ್ಮಕ್ಕಳಿಗೆ ದೌರ್ಜನ್ಯ – ದರ್ಶನ್‌ ಫ್ಯಾನ್ಸ್‌ ವಿರುದ್ಧ ರಮ್ಯಾ ಕೆಂಡಾಮಂಡಲ
Bengaluru City Cinema Latest Main Post
Rashmika Mandannas New Film Mysaa Launched with a Traditional Pooja Muhurta program 2
ರಶ್ಮಿಕಾ ಮಂದಣ್ಣ ನಟನೆಯ ಮೈಸಾ ಚಿತ್ರಕ್ಕೆ ಮುಹೂರ್ತ- ಗೋಂಡ್ ಹಾಡಿಗೆ ಡಾನ್ಸ್
Cinema Latest South cinema
Darshan The Devil
ʼದಿ ಡೆವಿಲ್ʼ ಶೂಟಿಂಗ್ ಮುಕ್ತಾಯ : ಪೋಸ್ಟ್ ಪ್ರೊಡಕ್ಷನ್ ವರ್ಕ್ ಶುರು
Cinema Latest Sandalwood Top Stories
just married
ಶೈನ್ ಶೆಟ್ಟಿಯ ಜಸ್ಟ್ ಮ್ಯಾರೀಡ್‌ಗೆ ಡೇಟ್ ಫಿಕ್ಸ್
Cinema Latest Sandalwood Top Stories

You Might Also Like

ANEKAL CRIME
Bengaluru Rural

ಬ್ರೇಕಪ್‌ ಕೊಲೆ ಕೇಸ್‌ಗೆ ಟ್ವಿಸ್ಟ್‌ – ಕೇವಲ 2 ಸಾವಿರಕ್ಕಾಗಿ ಬಿತ್ತು ಹೆಣ!

Public TV
By Public TV
9 minutes ago
AB de Villiers 2
Cricket

ಈಗಲೂ ಅದೇ ಖದರ್‌ – 15 ಫೋರ್‌, 8 ಸಿಕ್ಸ್‌, ಆಸೀಸ್‌ ವಿರುದ್ಧ ತೂಫಾನ್‌ ಶತಕ ಸಿಡಿಸಿದ ಎಬಿಡಿ

Public TV
By Public TV
22 minutes ago
HAMPI
Bellary

ತುಂಗಭದ್ರಾ ಜಲಾಶಯದಿಂದ 96 ಸಾವಿರ ಕ್ಯೂಸೆಕ್ ನೀರು ಬಿಡುಗಡೆ – ಹಂಪಿ ಸ್ಮಾರಕಗಳು ಮುಳುಗಡೆ

Public TV
By Public TV
44 minutes ago
AYODHYA
Bengaluru City

ಕರ್ನಾಟಕ ಯಾತ್ರಿಗಳಿಗಾಗಿ ಇಡೀ ರೈಲು ಬುಕ್‌ – 8 ದಿನ ಅಯೋಧ್ಯೆ, ಕಾಶಿ ಪ್ರವಾಸ

Public TV
By Public TV
59 minutes ago
Chitradurga HIV
Chitradurga

ಚಿತ್ರದುರ್ಗ | ಸಹೋದರನಿಗೆ HIV – ಕುಟುಂಬದ ಮರ್ಯಾದೆಗೆ ಅಂಜಿ ತಮ್ಮನನ್ನೇ ಕೊಲೆಗೈದ ಅಕ್ಕ

Public TV
By Public TV
1 hour ago
why is ashlesha bali done its significance rituals
Dakshina Kannada

ಆಶ್ಲೇಷ ಬಲಿ ಯಾಕೆ ಮಾಡುತ್ತಾರೆ? ಸುಬ್ರಹ್ಮಣ್ಯನಿಗೂ ನಾಗನಿಗೂ ಏನು ಸಂಬಂಧ?

Public TV
By Public TV
2 hours ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?