ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರು ಸಮೀಪದ ಸರತ್ಕಲ್ ನ ಕಾಟಿಪಳ್ಳದಲ್ಲಿ ದುಷ್ಕರ್ಮಿಗಳ ಅಟ್ಟಹಾಸಕ್ಕೆ ಬಲಿಯಾದ ದೀಪಕ್ ರಾವ್ ಮನೆಗೆ ಇಂದು ದ.ಕ ಜಿಲ್ಲೆಯ ಸುರತ್ಕಲ್ ಶಾಸಕ ಮೊಯ್ದೀನ್ ಬಾವಾ ಭೇಟಿ ನೀಟಿದ್ರು.
ಬಾವಾ ಅವರು ದೀಪಕ್ ಮನೆಗೆ ಭೇಟಿ ನೀಡುತ್ತಿದ್ದಂತೆಯೇ ಮೃತನ ಕುಟುಂಬಸ್ಥರು, ನಿನ್ನೆ, ಮೊನ್ನೆ ಎಲ್ಲಿದ್ರಿ? ಎಂದು ಆಕ್ರೋಶ ವ್ಯಕ್ತಪಡಿಸಿದ್ರು. ಈ ವೇಳೆ ದೀಪಕ್ ಅವರ ತಾಯಿ ಪ್ರೇಮಾ ರಾವ್, ಮಗನನ್ನು ಕೊಂದವರಿಗೆ ಹೀಗೆಯೇ ಶಿಕ್ಷೆಯಾಗಬೇಕು. ಅವರಿಗೆ ಯಾರೂ ರಕ್ಷಣೆ ಕೊಡಬಾರದು ಅಂತ ಒತ್ತಾಯಿಸಿ ಶಾಸಕರ ಎದುರು ಕಣ್ಣೀರು ಹಾಕಿದ್ರು. ಈ ವೇಳೆ ದೀಪಕ್ ತಾಯಿಗೆ ಸಾಂತ್ವಾನ ಹೇಳಿದ ಬಾವಾ, ಭಗವಂತನಲ್ಲಿ ನಿಮ್ಮ ಕುಟಂಬಕ್ಕೆ ಪ್ರಾರ್ಥನೆ ಮಾಡುತ್ತೇನೆ. ಆರೋಪಿಗಳಿಗೆ ಕಠಿಣ ಶಿಕ್ಷೆ ಆಗಬೇಕು. ನಾನು ಮಸೀದಿಯಲ್ಲಿ ನಮಾಜ್ ಸಂದರ್ಭ ಬೇಡುತ್ತೇನೆ. ದೀಪಕ್ ಕೊಲೆಯ ನಾಲ್ವರು ಆರೋಪಿಗಳಿಗೆ ಗಲ್ಲು ಶಿಕ್ಷೆಯಾಗಬೇಕು ಅಂದ್ರು.
ಚೆಕ್ ನಿರಾಕರಣೆ: ಸಾಂತ್ವಾನ ಹೇಳಿದ ಬಳಿಕ ಬಾವಾ ಅವರು ದೀಪಕ್ ತಾಯಿಗೆ ಒತ್ತಾಯಪೂರ್ವಕವಾಗಿ ಚೆಕ್ ನೀಡಲು ಮುಂದಾದ್ರು. ಈ ವೇಳೆ ಪ್ರೇಮಾ ಅವರು ಚೆಕ್ ಬೇಡವೇ ಬೇಡ ಎಂದು ದೂರ ತಳ್ಳಿದ್ರು.
ಈ ಸಂದರ್ಭದಲ್ಲಿ ನೆರೆದಿದ್ದ ದೀಪಕ್ ಕುಟುಂಬಸ್ಥರು ಹಾಗೂ ಸ್ಥಳೀಯರು ಶಾಸಕ ಅವರಿಗೆ ಬೈಗುಳದ ಸುರಿಮಳೆಗೈದ್ರು. ಅಲ್ಲದೇ ನಂತ್ರ ಮನೆಯಿಂದ ಹೊರ ಕಳುಹಿಸಿದ್ರು. ಶಾಸಕರ ಜೊತೆ ದಕ್ಷಿಣ ಕನ್ನಡ ಜಿಲ್ಲಾ ವಿಧಾನ ಪರಿಷತ್ ಸದಸ್ಯ ಐವನ್ ಡಿಸೋಜಾ ಕೂಡ ಆಗಮಿಸಿದ್ದರು.
https://www.youtube.com/watch?v=TmFE1kqWa2w