Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಅಧಿಕಾರಕ್ಕೆ ಬಂದ್ರೆ ಮಹಿಳೆಯರ ಸಾಲ ಮನ್ನಾ ಮಾಡಿ – ಹೆಚ್‍ಡಿಕೆಗೆ ಪತ್ನಿ ಅನಿತಾ ಸಲಹೆ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | ಅಧಿಕಾರಕ್ಕೆ ಬಂದ್ರೆ ಮಹಿಳೆಯರ ಸಾಲ ಮನ್ನಾ ಮಾಡಿ – ಹೆಚ್‍ಡಿಕೆಗೆ ಪತ್ನಿ ಅನಿತಾ ಸಲಹೆ

Districts

ಅಧಿಕಾರಕ್ಕೆ ಬಂದ್ರೆ ಮಹಿಳೆಯರ ಸಾಲ ಮನ್ನಾ ಮಾಡಿ – ಹೆಚ್‍ಡಿಕೆಗೆ ಪತ್ನಿ ಅನಿತಾ ಸಲಹೆ

Public TV
Last updated: September 29, 2021 4:59 pm
Public TV
Share
3 Min Read
RMG ANITHA
SHARE

ರಾಮನಗರ: ಹಿಂದೆ ಪತಿ ಹೆಚ್.ಡಿ.ಕುಮಾರಸ್ವಾಮಿ ಅವರು ಅಧಿಕಾರದಲ್ಲಿದ್ದಾಗ ರೈತರ ಸಾಲ ಮನ್ನಾ ಮಾಡಿದರು. ಮತ್ತೆ ಅಧಿಕಾರಕ್ಕೆ ಬಂದರೆ ಮಹಿಳೆಯರ ಸಾಲ ಮನ್ನಾ ಮಾಡಬೇಕು ಎಂದು ಪತ್ನಿ, ಶಾಸಕಿ ಅನಿತಾ ಕುಮಾರಸ್ವಾಮಿ ಅವರು ಹೆಚ್‍ಡಿಕೆಗೆ ಸಲಹೆ ನೀಡಿದರು.

‘ಜನತಾ ಪರ್ವ 1.O’/’ಮಿಷನ್ 123’ ಗುರಿಯೊಂದಿಗೆ ಬಿಡದಿಯ ತೋಟದಲ್ಲಿ ಆಯೋಜಿಸಲಾಗಿರುವ ಜೆಡಿಎಸ್ ಸಂಘಟನಾ ಕಾರ್ಯಗಾರ ಮಹಿಳಾ ಗೋಷ್ಠಿಯನ್ನು ಉದ್ಘಾಟಿಸಿ ಮಾತನಾಡಿದ ಅವರು, ಮಹಿಳೆಯರು ಸಾಲ ಮನ್ನಾ ಮಾಡಿ ಎಂದು  ಕೇಳುತ್ತಿದ್ದಾರೆ. ಕಷ್ಟದಲ್ಲಿ ಇರುವ ಮಹಿಳೆಯರ ನೆರವಿಗೆ ಧಾವಿಸಬೇಕು ಎಂದರು.

hdk

ರಾಜ್ಯದ ಎಲ್ಲಾ ಜಿಲ್ಲೆಗಳಿಂದ ಆಗಮಿಸಿದ್ದ ಮಹಿಳಾ ಪ್ರತಿನಿಧಿಗಳನ್ನು ಉದ್ದೇಶಿಸಿ ಮಾತನಾಡಿದ ಅವರು, ಮಹಿಳೆಯರಿಗೆ ವಿಶೇಷವಾದ ಕಾರ್ಯಕ್ರಮ ಕೊಡಿ. ಇದು ನಾನು ಕುಮಾರಸ್ವಾಮಿ ಅವರಿಗೆ ನೀಡುವ ಮುಖ್ಯವಾದ ಸಲಹೆ. ರೈತರು ಮಾಡಿದ ಸಾಲ ಮನ್ನಾ ಕ್ರಾಂತಿಕಾರಿ ಕ್ರಮ. ಹಾಗೆಯೇ ಕುಟುಂಬ ನಿರ್ವಹಣೆಗೆ, ಮಕ್ಕಳ ಶಿಕ್ಷಣಕ್ಕೆ ಮಹಿಳೆಯರು ಸಾಲ ಮಾಡಿಕೊಂಡಿದ್ದಾರೆ. ಮುಂದೆ ನೀವು ಅಧಿಕಾರಕ್ಕೆ ಬಂದರೆ ಅಂತಹ ಮಹಿಳೆಯರ ಸಾಲವನ್ನೂ ಮನ್ನಾ ಮಾಡಿ. ಪಂಚರತ್ನ ಯೋಜನೆ ರೂಪಿಸುವ ಯೋಚನೆ ಶ್ಲಾಘನೀಯ. ಇದರ ಜತೆಗೆ ಉಚಿತ ಶಿಕ್ಷಣ ನೀಡಿದರೆ ಸಮಾಜಕ್ಕೆ, ರಾಜ್ಯಕ್ಕೆ ಇನ್ನೂ ಒಳ್ಳೆಯದು ಎಂದರು. ಇದನ್ನೂ ಓದಿ: ವಿಕೃತಕಾಮಿ ಉಮೇಶ್ ರೆಡ್ಡಿಗೆ ಗಲ್ಲು ಶಿಕ್ಷೆ ಪ್ರಕಟಿಸಿದ ಹೈಕೋರ್ಟ್

ಫ್ರೀ ಹೆಲ್ತ್ ಸ್ಕೀಮ್ ಮಾಡಿದರೆ ಒಳ್ಳೆಯದು. ಈ ಮೂಲಕ ಬಡಜನರ ಆರೋಗ್ಯ ಬವಣೆ ತಪ್ಪುತ್ತದೆ. ಉತ್ತಮ ಆರೋಗ್ಯ ಇದ್ದರೆ ಉತ್ತಮ ಸಮಾಜ ನಿರ್ಮಾಣ ಆಗುತ್ತದೆ. ಮಹಿಳೆಯರಿಗೆ ಉತ್ತಮ ಅವಕಾಶಗಳಿವೆ. ಎಲ್ಲರೂ ಪ್ರೋತ್ಸಾಹ ನೀಡಬೇಕು. ಚುನಾವಣಾ ಅಭ್ಯರ್ಥಿಗಳು ಮಹಿಳೆಯರನ್ನು ಗೌರವದಿಂದ ನಡೆಸಿಕೊಳ್ಳಬೇಕು. ಸ್ವತಂತ್ರವಾಗಿ ಮಹಿಳೆಯರು ಕೆಲಸ ನಿಭಾಯಿಸಲು ಕಲಿಯಬೇಕು. ದೇವರು ಈ ಅವಕಾಶ ಕೊಟ್ಟಿದ್ದಾನೆ. ಸ್ವತಂತ್ರವಾಗಿ ಬದುಕಬೇಕು, ನಿರ್ಧಾರಗಳನ್ನು ಕೈಗೊಳ್ಳುವ ದಿಟ್ಟತನ ತೋರಬೇಕು ಎಂದು ಹೇಳಿದರು.

RMG ANITHA 1 1

ಮೊದಲು ಯಜಮಾನರನ್ನು ಕೇಳಬೇಕು ಅನ್ನೋದನ್ನು ಬಿಡಿ. ಸ್ವತಂತ್ರವಾಗಿ ಆಲೋಚನೆ ಮಾಡಿ. ಮಹಿಳೆಯರು ಯಾವುದರಲ್ಲೂ ಕಡಿಮೆ ಇಲ್ಲ. ಎಲ್ಲಾ ಕ್ಷೇತ್ರಗಳಲ್ಲಿ ಮುಂದೆ ಇದ್ದಾರೆ. ನೀವೆಲ್ಲರೂ ಮುಂದೆ ಹೇಗೆ ಬೆಳೆಯಬೇಕು ಎಂಬುದನ್ನು ತೀರ್ಮಾನ ಮಾಡಿ. ಅನೇಕ ಮಹಿಳೆಯರು ಉತ್ತಮ ಸಾಧನೆ ಮಾಡಿದ್ದಾರೆ. ಸಾನಿಯಾ ಮಿರ್ಜಾ ಕೂಡ ಅನೇಕ ಸವಾಲುಗಳನ್ನು ಮೆಟ್ಟಿ ನಿಂತು ದೊಡ್ಡ ಸಾಧನೆ ಮಾಡಿದ್ದಾರೆ. ಪುರುಷ ಪ್ರಧಾನ ಸಮಾಜ ನಮ್ಮದು. ಮಹಿಳೆಯರಿಗೆ ಅವಕಾಶ ಸಿಗೋದು ಕಡಿಮೆ. ಆದರೆ ನಾವು ಇಂಡಿಪೆಂಡೆಂಟ್ ಆಗಿ ಇರಬೇಕು. ಮಹಿಳೆಯರ ಬಗ್ಗೆ ಟೀಕೆ ಟಿಪ್ಪಣಿ ಹೆಚ್ಚು. ಅದರ ಬಗ್ಗೆ ತಲೆಕೆಡಿಸಿಕೊಳ್ಳಬೇಡಿ ಎಂದು ತಿಳಿಸಿದರು. ಇದನ್ನೂ ಓದಿ: ಇಸ್ಲಾಂನಿಂದ ಹಿಂದೂ ಧರ್ಮಕ್ಕೆ ಮತಾಂತರ – ಶಿವನ ಭಕ್ತನಾಗಿದ್ದ ಗಾಂಜಾ ಆರೋಪಿ

ಕುಮಾರಸ್ವಾಮಿಯವರು ಮಾನವೀಯ ಗುಣವುಳ್ಳ ನಾಯಕರು. ಎರಡು ಬಾರಿ ಸಿಎಂ ಆದಾಗಲೂ ಅನೇಕ ಯೋಜನೆಗಳನ್ನು ಜಾರಿಗೆ ತಂದಿದ್ದಾರೆ. ಅನೇಕ ಹೊಸ ಹೊಸ ಕಾರ್ಯಕ್ರಮಗಳನ್ನು ನೀಡಿದ್ದಾರೆ. ಯಾವೊಬ್ಬ ಮುಖ್ಯಮಂತ್ರಿ ಮಾಡದೇ ಇರುವ ಕಾರ್ಯಕ್ರಮ ನೀಡಿದ್ದಾರೆ. ಜನತಾ ದರ್ಶನದ ಮೂಲಕ  ಜನಮನದಲ್ಲಿ ನೆಲೆಸಿದ್ದಾರೆ. ನಮಗೆಲ್ಲ ನಿಜವಾದ ಸ್ಪೂರ್ತಿ ಎಂದರೆ ದೇವೇಗೌಡರು. ನಾವು ನಾಚಿಕೊಳ್ಳುವ ರೀತಿ ಪಾದರಸ ರೀತಿ ಓಡಾಡುತ್ತಾರೆ. ಪ್ರತಿಯೊಂದು ವಿಷಯಕ್ಕೂ ಯೋಚನೆ ಮಾಡಿ ನಿರ್ಧಾರ ತೆಗೆದುಕೊಳ್ಳುತ್ತಾರೆ. ಅವರೇ ನಮಗೆಲ್ಲ ಸ್ಪೂರ್ತಿ. ಮೀಸಲಾತಿ ವಿಚಾರದಲ್ಲಿ ದೇವೇಗೌಡರ ಕೊಡುಗೆ ಅಪಾರ. ನಾನು ರಾಜಕಾರಣ ಏನಾದರೂ ತಿಳಿದುಕೊಂದಿದ್ದರೆ ಅದು ದೇವೇಗೌಡರಿಂದ ಎಂದರು.

HDK 1

ನಾನು ಅವರ ಸೊಸೆ ಎಂಬುದು ಒಂದು ಕಡೆಯಾದರೆ, ಇನ್ನೊಂದೆಡೆ ಅವರ ಅಪ್ಪಟ ಅಭಿಮಾನಿ. ಯಾವುದೇ ಒಂದು ವಿಚಾರಕ್ಕೆ ಬೇಜಾರಾದರೆ ಅವರ ಜೀವನವನ್ನು ಒಮ್ಮೆ ಮೆಲುಕು ಹಾಕಿದರೆ ಸಾಕು. ಏನೋ ಒಂದು ರೀತಿಯಾದ ಸಮಾಧಾನ ಆಗುತ್ತದೆ. ಈಗ ಬದಲಾವಣೆ ಪರ್ವ ಬಂದಿದೆ ಅನ್ನುವ ಭಾವನೆ ನನಗಿದೆ. ಜನರೂ ಕೂಡ ಬದಲಾವಣೆ ಬಯಸುತ್ತಿದ್ದಾರೆ. ಬಡವರ, ರೈತರ ಪರ ಸರ್ಕಾರ ರಚನೆ ಮಾಡಬೇಕು. ದೂರದೃಷ್ಟಿ ಇರುವ ರಾಜಕಾರಣಿಗಳಾಗಿ ನಾವೆಲ್ಲ ಬೆಳೆಯಬೇಕು ಎಂದು ಹೇಳಿದರು.

ಈ ವೇಳೆ ಜೆಡಿಎಸ್ ರಾಜ್ಯ ಮಹಿಳಾ ಅಧ್ಯಕ್ಷೆ ಲೀಲಾದೇವಿ ಆರ್ ಪ್ರಸಾದ್, ದೇವದುರ್ಗ ಮುಂದಿನ ಚುನಾವಣೆ ಅಭ್ಯರ್ಥಿ ಕರಿಯಮ್ಮ, ಬೆಂಗಳೂರು ನಗರದ ಮಹಿಳಾ ಜೆಡಿಎಸ್ ಅಧ್ಯಕ್ಷೆ ರುತ್ ಮನೋರಮಾ ಹಾಗೂ ಕೆ.ಷರೀಫಾ ಹಾಜರಿದ್ದರು.

RMG ANITHA 2 1

TAGGED:anitha kumaraswamyhd kumaraswamyPublic TVramanagarwomanಅನಿತಾ ಕುಮಾರಸ್ವಾಮಿಪಬ್ಲಿಕ್ ಟಿವಿಮಹಿಳೆರಾಮನಗರಹೆಚ್ ಡಿ ಕುಮಾರಸ್ವಾಮಿ
Share This Article
Facebook Whatsapp Whatsapp Telegram

Cinema news

darshan ex manager mallikarjun 2 1
ದರ್ಶನ್‌, ಧ್ರುವ ಸರ್ಜಾ ನಡುವೆ ಮನಸ್ತಾಪಕ್ಕೆ ಕಾರಣ ಯಾರು? – ಮಲ್ಲಿಕಾರ್ಜುನ್‌ ಹೇಳಿದ್ದೇನು?
Bengaluru City Cinema Latest Sandalwood Top Stories
darshan ex manager mallikarjun 2
ಕೇಸ್‌ ಒಂದ್ರಲ್ಲಿ ದರ್ಶನ್‌ ಸರ್‌ ಸಿಕ್ಕಾಕೊಂಡಾಗ ಬಹಳ ಬೇಜಾರಾಯ್ತು: ಮಾಜಿ ಮ್ಯಾನೇಜರ್‌ ಮಲ್ಲಿಕಾರ್ಜುನ್‌ ಮಾತು
Bengaluru City Cinema Latest Sandalwood Top Stories
darshan ex manager mallikarjun
8 ವರ್ಷ ನಾಪತ್ತೆಯಾಗಿದ್ದ ದರ್ಶನ್‌ ಮಾಜಿ ಮ್ಯಾನೇಜರ್‌ ದಿಢೀರ್‌ ಪ್ರತ್ಯಕ್ಷ – ನಡೆದಿದ್ದೇನು ಅಂತ ಎಳೆಎಳೆಯಾಗಿ ಬಿಚ್ಚಿಟ್ಟ ಮಲ್ಲಿ
Bengaluru City Cinema Latest Main Post Sandalwood
Udupi Rishab Shetty Home Bhajane Kunitha Yakshagana Harake
ನಟ ರಿಷಬ್ ಶೆಟ್ಟಿ ಮನೆಯಲ್ಲಿ ಕುಣಿತ ಭಜನೆ, ಯಕ್ಷಗಾನ ಹರಕೆ ಪ್ರದರ್ಶನ
Cinema Districts Karnataka Latest Sandalwood Top Stories Udupi

You Might Also Like

Fruits
Bengaluru City

ಮಾವು, ಬಾಳೆಹಣ್ಣು, ಪಪ್ಪಾಯ ಹಣ್ಣಿಗೆ ಕ್ಯಾಲ್ಸಿಯಂ ಕಾರ್ಬೈಡ್ ಬಳಕೆ – ಕ್ರಮ ಕೈಗೊಳ್ಳಲು FSSAI ಸೂಚನೆ

Public TV
By Public TV
2 minutes ago
Electricity
Bengaluru City

ಗೃಹಬಳಕೆ ಗ್ರಾಹಕರಿಗೆ ವಿದ್ಯುತ್ ದರ ಏರಿಕೆ ಶಾಕ್ – ಯೂನಿಟ್‌ಗೆ 56 ಪೈಸೆ ಹೆಚ್ಚಳ

Public TV
By Public TV
43 minutes ago
Rahul Gandhi 3
Latest

ದ್ವಿಪೌರತ್ವ ಪ್ರಕರಣ – ರಾಹುಲ್ ಗಾಂಧಿ ವಿರುದ್ಧ FIR ದಾಖಲಿಸಲು ಅಲಹಾಬಾದ್ ಹೈಕೋರ್ಟ್ ಆದೇಶ

Public TV
By Public TV
47 minutes ago
Loksabha
Latest

ಲೋಕಸಭೆಯಲ್ಲಿ ʻನಾರಿಶಕ್ತಿ ಬಿಲ್ʼ ತಿರಸ್ಕಾರ – ಗೆದ್ದ ವಿಪಕ್ಷಗಳ ಹಠ; NDA ಸರ್ಕಾರಕ್ಕೆ ಮುಖಭಂಗ

Public TV
By Public TV
1 hour ago
Chandra Layout Kidnap
Bengaluru City

ಸಾಲ ಪಡೆದಿದ್ದ ಹಣ ಮರಳಿ ಕೊಡದಿದ್ದಕ್ಕೆ ಸ್ವಂತ ಅಕ್ಕ, ಭಾವನಿಂದ ತಂಗಿ-ಮೈದುನನ ಕಿಡ್ನ್ಯಾಪ್

Public TV
By Public TV
1 hour ago
Strait of Hormuz 1
Latest

ವಿಶ್ವದ ಎಲ್ಲಾ ರಾಷ್ಟ್ರಗಳಿಗೆ ಹಾರ್ಮುಜ್‌ ಜಲಸಂಧಿ ಓಪನ್‌ – ಧನ್ಯವಾದ ಹೇಳಿದ ಟ್ರಂಪ್‌

Public TV
By Public TV
1 hour ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?