ಚಿಕ್ಕಬಳ್ಳಾಪುರ: ಫ್ಯಾನಿಗೆ ನೇಣು ಬಿಗಿದುಕೊಂಡು ಗೃಹಿಣಿ ಆತ್ಮಹತ್ಯೆ

Public TV
1 Min Read
chikkaballapura

ಚಿಕ್ಕಬಳ್ಳಾಪುರ: ಕೌಟುಂಬಿಕ ಕಲಹದ ಹಿನ್ನಲೆಯಲ್ಲಿ ನೇಣು ಬಿಗಿದುಕೊಂಡು ಗೃಹಿಣಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಚಿಕ್ಕಬಳ್ಳಾಪುರದ ಪ್ರಶಾಂತನಗರದಲ್ಲಿ ನಡೆದಿದೆ.

27 ವರ್ಷದ ಕೀರ್ತಿ ಆತ್ಮಹತ್ಯೆಗೆ ಶರಣಾದ ಗೃಹಿಣಿ. ಕಳೆದ ರಾತ್ರಿ ಮನೆಯ ರೂಂ ನಲ್ಲಿನ ಫ್ಯಾನಿಗೆ ನೇಣು ಬಿಗಿದುಕೊಂಡು ಕೀರ್ತಿ ಆತ್ಮಹತ್ಯೆಗೆ ಶರಣಾಗಿದ್ದಾರೆ.

ckb 8

ಮೂಲತಃ ಕೋಲಾರ ನಗರದ ಕೀರ್ತಿ ಹಾಗೂ ಕೆನರಾ ಬ್ಯಾಂಕ್ ನ ಅಸಿಸ್ಟೆಂಟ್ ಮ್ಯಾನೇಜರ್ ಆಗಿರುವ ಚಿಕ್ಕಬಳ್ಳಾಪುರ ಮೂಲದ ರಾಜೇಶ್ ಗೆ ಮದುವೆಯಾಗಿ ಎರಡೂವರೆ ವರ್ಷ ಕಳೆದಿದ್ದು, ಒಂದು ವರ್ಷದ ಮುದ್ದಾದ ಗಂಡು ಮಗು ಕೂಡ ಇದೆ.

ತಡರಾತ್ರಿ ಮಗನನ್ನ ಕೀರ್ತಿ ಹೊಡೆದ ವಿಚಾರದಲ್ಲಿ ಗಂಡ-ಹೆಂಡತಿ ನಡುವೆ ಜಗಳ ಅರಂಭವಾಗಿದ್ದು ಈ ವೇಳೆ ನಾನು ತವರು ಮನೆಗೆ ಹೋಗ್ತೀನಿ ಅಂತ ಕೀರ್ತಿ ಗಲಾಟೆ ಮಾಡಿಕೊಂಡಳು. ಕೊನೆಗೆ ಗಲಾಟೆ ವಿಕೋಪಕ್ಕೆ ತಿರುಗಿ ಕೀರ್ತೀ ರೂಂ ಗೆ ಹೋಗಿ ಬಾಗಿಲು ಹಾಕಿಕೊಂಡು ಫ್ಯಾನಿಗೆ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾಳೆ ಎಂದು ಗಂಡ ರಾಜೇಶ್ ಪೊಲೀಸರಿಗೆ ಹೇಳಿದ್ದಾನೆ.

ckb 3

ಆದ್ರೆ ವರದಕ್ಷಿಣೆಗಾಗಿ ಮೊದಲಿನಿಂದಲೂ ಕಿರುಕುಳ ನೀಡುತ್ತಿದ್ದರು. ಕೀರ್ತಿಯನ್ನ ಗಂಡ ರಾಜೇಶ್ ಕೊಲೆ ಮಾಡಿದ್ದಾನೆ ಅಂತ ಮೃತ ಕೀರ್ತಿಯ ಸಂಬಂಧಿಕರು ದೂರಿದ್ದಾರೆ. ಈ ಸಂಬಂಧ ಚಿಕ್ಕಬಳ್ಳಾಪುರ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ಗಂಡ ರಾಜೇಶ್ ನನ್ನ ಪೊಲೀಸರು ಬಂಧಿಸಿದ್ದಾರೆ.

ckb 5

ckb 1

ckb 2

ckb 4

ckb

ckb 6

ckb 7

Share This Article
Leave a Comment

Leave a Reply

Your email address will not be published. Required fields are marked *