ಬೆಂಗಳೂರು: ಸಿಲಿಕಾನ್ ಸಿಟಿಯಲ್ಲಿ ಪ್ರತಿಷ್ಠಿತ ಉದ್ಯಮಿ ಪುತ್ರಿಗೆ ವರದಕ್ಷಿಣೆ ಕಿರುಕುಳ ಆರೋಪವೊಂದು ಕೇಳಿಬಂದಿದೆ.
ಈ ಸಂಬಂಧ ಉದ್ಯಮಿ ಪುತ್ರಿ ಸಂದೀಪ್ ಎಂಬಾತನ ವಿರುದ್ಧ ಬಸವನಗುಡಿ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ದೂರಿನಲ್ಲಿ ಸಂದೀಪ್ ಆಗಾಗ ಮನೆಯಲ್ಲಿ ಸ್ನೇಹಿತರೊಂದಿಗೆ ಡ್ರಗ್ಸ್ ಪಾರ್ಟಿ ಮಾಡಿತ್ತಿರುತ್ತಾನೆ. ಬಳಿಕ ಗೆಳೆಯರ ಮುಂದೇಯೇ ಹಲ್ಲೆ ನಡೆಸಿ ಅಶ್ಲೀಲವಾಗಿ ಬೈಯುತ್ತಾನೆ. ಅಲ್ಲದೆ ತನ್ನ ಮೇಲೆ ಮೂತ್ರವಿಸರ್ಜನೆ ಮಾಡಿ ವಿಕೃತಿ ಮೆರೆದಿದ್ದಾನೆ ಎಂದು ಪತ್ನಿ ತಿಳಿಸಿದ್ದಾರೆ.
ದೂರು ನೀಡಿರುವಾಕೆಯ ತಂದೆ ತೆಲಂಗಾಣದಲ್ಲಿ ಪ್ರತಿಷ್ಠಿತ ಬಟ್ಟೆ ಕಂಪನಿ ಹೊಂದಿದ್ದಾರೆ. 2021ರ ಜನವರಿಯಲ್ಲಿ ರಾಮೋಜಿ ಫಿಲಂ ಸಿಟಿಯಲ್ಲಿ ಮಗಳನ್ನು ಅದ್ದೂರಿಯಾಗಿ ಮದುವೆ ಮಾಡಿಕೊಟ್ಟಿದ್ದಾರೆ. ಈ ವೇಳೆ 4 ಕೆಜಿ ಚಿನ್ನ, 200 ಕೆಜಿ ಬೆಳ್ಳಿ, 50 ಲಕ್ಷ ಹಣ, 55 ಲಕ್ಷದ ಮಿನಿಕೂಪರ್ ಕಾರು ವರದಕ್ಷಿಣೆ ನೀಡಿದ್ದರು. ಇದನ್ನೂ ಓದಿ: ದೇವನಹಳ್ಳಿಯಲ್ಲಿ ಒಂಟಿ ಮಹಿಳೆ ಕೊಲೆ – ಕತ್ತು ಕೊಯ್ದು ನಗದು ದೋಚಿದ್ದ ಕೆಲಸಗಾರನ ಬಂಧನ
ಇಷ್ಟು ವರದಕ್ಷಿಣೆ ಕೊಟ್ಟಿದ್ರೂ ಸಂದೀಪ್ಗೆ ಹಣದಾಹ ನೀಗಿರಲಿಲ್ಲ. ಸಂದೀಪ್ ಹೆಸರಿಗೆ ತೆಲಂಗಾಣದಲ್ಲಿ 2 ಬಟ್ಟೆ ಶಾಪ್ ಮಾಡಿಕೊಡಲಾಗಿತ್ತು. ಇಷ್ಟೆಲ್ಲಾ ವರದಕ್ಷಿಣೆ ಕೊಟ್ಟರೂ ಪತಿ ಡ್ರಗ್ ಸೇವಿಸಿ ಪತ್ನಿಗೆ ಹಿಂಸೆ ನೀಡುತ್ತಿದ್ದನು. ಇದೀಗ ಪತಿಯ ಹಿಂಸೆ ತಾಳಲಾರದೆ ನೊಂದ ಪತ್ನಿ ಪೊಲೀಸ್ ಮೆಟ್ಟಿಲು ಹತ್ತಿದ್ದಾರೆ.