ಪತ್ನಿ ಸಾವಿನಿಂದ ಮನನೊಂದು ಪತಿ ಆತ್ಮಹತ್ಯೆಗೆ ಶರಣು

Public TV
1 Min Read
chikkaballapura

ಚಿಕ್ಕಬಳ್ಳಾಪುರ: ಅನಾರೋಗ್ಯದಿಂದ ಪತ್ನಿ ಮೃತಳಾದ ಹಿನ್ನೆಲೆ ಮನನೊಂದ ಪತಿ ನೇಣುಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವ ಮನಕಲುಕುವ ಘಟನೆ ದೇವನಹಳ್ಳಿ ತಾಲೂಕಿನ ಬೂದಿಗೆರೆ ಗ್ರಾಮದಲ್ಲಿ ನಡೆದಿದೆ.

ಬೂದಿಗೆರೆ ಗ್ರಾಮದ ವಿಜಯೇಂದ್ರ(38) ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡವರು. ಇವರ ಪತ್ನಿ ಲಾವಣ್ಯ(34) ಅನಾರೋಗ್ಯದಿಂದ ಮೃತಪಟ್ಟಿದ್ದರು. ವಿಜಯೇಂದ್ರ 9 ವರ್ಷಗಳ ಹಿಂದೆ ಲಾವಣ್ಯ ಅವರನ್ನು ಮದುವೆಯಾಗಿದ್ರು. ಈ ದಂಪತಿಗೆ ಮಕ್ಕಳಿರಲಿಲ್ಲ. ಆದರೆ ಕಳೆದ ಒಂದು ವರ್ಷದಿಂದ ಲಾವಣ್ಯ ಅನಾರೋಗ್ಯಕ್ಕೆ ತುತ್ತಾಗಿದ್ರು. ಇದನ್ನೂ ಓದಿ:  ಗುಡಿಸಲಿನ ಮೇಲೆ ಬಿದ್ದ ಟ್ರಕ್ – ಮೂವರು ಅಪ್ರಾಪ್ತ ಸಹೋದರಿಯರು ಬಲಿ

Suicide Sickness Chikkaballapur

ಲಿವರ್ ಸಮಸ್ಯೆ, ಕಿಡ್ನಿ ಸಮಸ್ಯೆ ಎಂದು ಲಾವಣ್ಯಗೆ ವಿಜಯೇಂದ್ರ ಸಾಕಷ್ಟು ಕಡೆ ಚಿಕಿತ್ಸೆ ಕೊಡಿಸಿದ್ರೂ ಚೇತರಿಸಿಕೊಂಡಿರಲಿಲ್ಲ. ಕಳೆದ ರಾತ್ರಿ ಮನೆಯಲ್ಲೇ ಲಾವಣ್ಯ ಮೃತಪಟ್ಟಿದ್ದು, ಅದನ್ನು ವಿಜಯೇಂದ್ರ ಕಣ್ಣಾರೆ ಕಂಡಿದ್ದಾರೆ. ನಂತರ ಪತ್ನಿ ಸಾವಿನ ಬಗ್ಗೆ ಯಾರಿಗೂ ತಿಳಿಸದೆ ತಾನು ಮನೆಯಲ್ಲಿದ್ದ ಫ್ಯಾನ್ ಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

Suicide Sickness Chikkaballapur 1

ಮನೆಯ ಮುಂದೆಯೇ ಚಿಲ್ಲರೆ ಅಂಗಡಿ ಇಟ್ಟುಕೊಂಡಿದ್ದ ವಿಜಯೇಂದ್ರ, ಬೆಳಗ್ಗೆ ಏಕೆ ಅಂಗಡಿ ತೆಗೆದಿಲ್ಲ ಎಂದು ಅಕ್ಕಪಕ್ಕದವರು ಮನೆಯ ಬಾಗಿಲು ಬಡಿದ್ರೂ ತೆಗೆದಿಲ್ಲ. ಆಗ ಸ್ನೇಹಿತರು, ಸಂಬಂಧಿಕರು ಬಂದು ಬಾಗಿಲು ಒಡೆದು ಒಳಗೆ ಹೋದಾಗ ಘಟನೆ ಬೆಳಕಿಗೆ ಬಂದಿದೆ. ಇದನ್ನೂ ಓದಿ: ರಾಷ್ಟ್ರೀಯ ಹೆದ್ದಾರಿಯಲ್ಲಿ ಅಪಘಾತದಿಂದ ವಾಲಿದ ವಿದ್ಯುತ್ ಕಂಬ – ಆತಂಕದಲ್ಲಿ ಸವಾರರು

ಚನ್ನರಾಯಪಟ್ಟಣ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.

Share This Article