ರಾಯಚೂರು: ಸಿಂಧನೂರು ತಾಲೂಕಿನ ಕಲ್ಮಂಗಿ ಗ್ರಾಮದಲ್ಲಿ ಅನೈತಿಕ ಸಂಬಂಧ ಪ್ರಶ್ನಿಸಿದ್ದಕ್ಕೆ ಪತಿಯನ್ನೇ ಪತ್ನಿ ಕೊಂದಿರುವ ಘಟನೆ ನಡೆದಿದೆ. 43 ವರ್ಷದ ಬಸವನಗೌಡ ಕೊಲೆಯಾಗಿರುವ ವ್ಯಕ್ತಿ. ಪತ್ನಿ ದೇವಮ್ಮ ಗಂಡನನ್ನ ಕತ್ತು ಹಿಸುಕಿ ಕೊಲೆ ಮಾಡಿದ್ದಾಳೆ ಎಂದು ಅಕ್ಕಪಕ್ಕದ ಮನೆಯ ನಿವಾಸಿಗಳು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.
ನಿನ್ನೆ ರಾತ್ರಿ ಗಂಡ ಹೆಂಡತಿ ನಡುವೆ ಜಗಳ ಜೋರಾಗಿ ನಡೆದಿದ್ದು ಪತಿಯ ಕೊಲೆಯಲ್ಲಿ ಅಂತ್ಯವಾಗಿದೆ. ಕುತ್ತಿಗೆಗೆ ಹಗ್ಗ ಬಿಗಿದು ಬಸವನಗೌಡನನ್ನ ಕೊಲೆ ಮಾಡಲಾಗಿದೆ. ಆದ್ರೆ ಪತ್ನಿ ದೇವಮ್ಮ ಮಾತ್ರ ಪತಿ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಅವನನ್ನು ನಾನೇ ನೇಣಿನ ಕುಣಿಕೆಯಿಂದ ಕೆಳಗಿಳಿಸಿದ್ದೇನೆ ಎಂದು ಹೇಳಿದ್ದಾಳೆ.
ಬಸವನಗೌಡನ ಕುತ್ತಿಗೆ ಭಾಗದಲ್ಲಿ ಹಗ್ಗದಿಂದ ಬಿಗಿದಿರುವ ಗುರುತುಗಳಿದ್ದು. ಅಸಹಜ ಸಾವು ಅಂತ ಪ್ರಕರಣ ದಾಖಲಾಗಿದೆ.ಪ್ರಕರಣ ದಾಖಲಿಸಿಕೊಂಡಿರುವ ತುರ್ವಿಹಾಳ ಪೊಲೀಸರು ದೇವಮ್ಮನನ್ನ ವಶಕ್ಕೆ ಪಡೆದಿದ್ದು ವಿಚಾರಣೆ ನಡೆಸಿದ್ದಾರೆ.