ಬೆಳಗಾವಿ: ಪತಿಯ ಎರಡು ಎಕರೆ ಜಮೀನನ್ನು ತನ್ನ ಹೆಸರಿಗೆ ಮಾಡಿಕೊಳ್ಳುವ ಉದ್ದೇಶದಿಂದ ಮಹಿಳೆಯೊಬ್ಬಳು ಪತಿಗೆ ಉಪ್ಪಿಟ್ಟಿನಲ್ಲಿ ವಿಷ ಹಾಕಿ ಕೊಲೆಗೆ ಯತ್ನಿಸಿದ ಪ್ರಕರಣವನ್ನು ಸವದತ್ತಿಯ ಗೋರಾಬಾಳದಲ್ಲಿ ನಡೆದಿದೆ.
ಸಾವಕ್ಕ (32) ಎಂಬಾಕೆ ಪತಿಗೆ ಆ.11ರ ಬೆಳಗ್ಗೆ ಉಪ್ಪಿಟ್ಟು ಮಾಡಿಕೊಟ್ಟಿದ್ದಳು. ಉಪ್ಪಿಟ್ಟು ತಿಂದ ಬಳಿಕ ನಿಂಗಪ್ಪ ಹಮಾನಿ (35) ತೀವ್ರ ಹೊಟ್ಟೆ ನೋವಿನಿಂದ ಬಳಿದ್ದಾನೆ. ಬಳಿಕ ಆತನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಬಳಿಕ ಹೆಚ್ಚಿನ ಚಿಕಿತ್ಸೆಗೆ ಹುಬ್ಬಳಿಯ ( Hubballi) ಕಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಈ ವೇಳೆ ವಿಷ ಆಹಾರ ಸೇವಿಸಿರುವ ವಿಚಾರವನ್ನು ವೈದ್ಯರು ತಿಳಿಸಿದ್ದಾರೆ. ಇದನ್ನೂ ಓದಿ: ಖಾಸಗಿ ವೀಡಿಯೋ ಬಹಿರಂಗ ಭೀತಿ – ಸ್ನೇಹಿತನನ್ನು ಕೊಲೆಗೈದ ಪಾತಕಿ
ನಿಂಗಪ್ಪನಿಗೆ ಐಸಿಯುನಲ್ಲಿ ಚಿಕಿತ್ಸೆ ಮುಂದುವರೆಸಲಾಗಿದೆ. ಆತನಿಗೆ ನೀಡಿದ್ದ ಉಪ್ಪಿಟ್ಟನ್ನು ತಿಂದ ಒಂದು ನಾಯಿ ಮತ್ತು ಒಂದು ಬೆಕ್ಕು ಸತ್ತುಹೋಗಿವೆ ಎಂದು ಜಿಲ್ಲಾ ಪೊಲೀಸ್ (Police) ವರಿಷ್ಠಾಧಿಕಾರಿ ಡಾ.ಸಂಜೀವ ಪಾಟೀಲ ತಿಳಿಸಿದ್ದಾರೆ.
ನಿಂಗಪ್ಪ ಅವರ ತಂದೆ ಫಕೀರಪ್ಪ ನೀಡಿದ ದೂರಿನ ಅನ್ವಯ ಸಾವಕ್ಕ ಹಾಗೂ ಆಕೆಯ ಸಹೋದರ ಫಕೀರಪ್ಪ ಲಕ್ಷ್ಮಣ ಸಿಂಧೋಗಿ (30) ಎಂಬಾತನ ಮೇಲೆ ಪ್ರಕರಣ ದಾಖಲಿಸಿಕೊಳ್ಳಲಾಗಿದೆ. ಇದನ್ನೂ ಓದಿ: ಅಮೇಥಿಯಿಂದ ರಾಹುಲ್, ವಾರಣಾಸಿಯಿಂದ ಪ್ರಿಯಾಂಕಾ ಸ್ಪರ್ಧೆ
Web Stories