ಬೆಂಗಳೂರು: ಪತ್ನಿ ಹಣ ಕೊಡಲು ನಿರಾಕರಿಸಿದ್ದಕ್ಕೆ ಕೂಲಿ ಕಾರ್ಮಿಕನಾಗಿದ್ದ ಪತಿ ಖಾಸಗಿ ಶಾಲಾ ಕಟ್ಟಡವೊಂದರಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಅಮೃತಹಳ್ಳಿಯ (Amrutahalli) ಮರಿಯಣ್ಣನ ಪಾಳ್ಯದಲ್ಲಿ ನಡೆದಿದೆ.
ತಮಿಳುನಾಡು (Tamilnadu) ಮೂಲದ ರಾಜೇಂದ್ರ (48) ಮೃತ ವ್ಯಕ್ತಿ. ಖಾಸಗಿ ಶಾಲೆಯ ಕಟ್ಟಡವೊಂದರಲ್ಲಿ ಕಾಮಗಾರಿ ಕೆಲಸ ಮಾಡುತ್ತಿದ್ದರು. ರಾತ್ರಿ ಶಾಲಾ ಕಟ್ಟಡದಲ್ಲಿಯೇ ಮಲಗಿಕೊಳ್ಳುತ್ತಿದ್ದರು. ಬುಧವಾರ ಬೆಳಿಗ್ಗೆ ಪತ್ನಿಗೆ ಕರೆ ಮಾಡಿ 20 ಸಾವಿರ ರೂ. ಕೊಡುವಂತೆ ಕೇಳಿದ್ದರು. ಈ ವೇಳೆ ಪತ್ನಿ ನಿರಾಕರಿಸಿದ್ದರು. ಇದರಿಂದ ಬೇಸತ್ತ ಪತಿ ರಾತ್ರಿ ಮದ್ಯಪಾನ ಮಾಡಿ, ಶಾಲಾ ಆವರಣದಲ್ಲಿರುವ ಕಟ್ಟಡದಲ್ಲಿಯೇ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.ಇದನ್ನೂ ಓದಿ: ಇರಾನ್ನಲ್ಲಿ ಸಿಲುಕಿದ್ದ ವಿದ್ಯಾರ್ಥಿಗಳ ರಕ್ಷಣೆ – ದೆಹಲಿಗೆ ಬಂದ ನಂತ್ರ ಕಳಪೆ ಬಸ್ಸು ನೀಡಿದ್ದಕ್ಕೆ ಆಕ್ರೋಶ
ಪ್ರತಿದಿನದಂತೆ ಇಂದು ಇಸ್ಕಾನ್ನಿಂದ ಶಾಲೆಗೆ ಊಟ ಬಂದಿತ್ತು. ಅದನ್ನು ಇಡಲು ವಿದ್ಯಾರ್ಥಿಗಳು ಶಾಲೆ ಪಕ್ಕದಲ್ಲಿರುವ ಕಟ್ಟಡಕ್ಕೆ ತೆರಳಿದ್ದರು. ಈ ವೇಳೆ ವಿದ್ಯಾರ್ಥಿಗಳು ಹೆದರಿಕೊಂಡು ಕಿರುಚಾಡುತ್ತಾ ಓಡಿ ಬಂದಿದ್ದಾರೆ. ಗಾಬರಿಗೊಂಡ ಶಿಕ್ಷಕರು ಒಳಹೋಗಿ ನೋಡಿದಾಗ ನೇಣು ಬಿಗಿದ ಸ್ಥಿತಿಯಲ್ಲಿ ಕಾರ್ಮಿಕನ ಶವ ಪತ್ತೆಯಾಗಿದೆ. ಇದರಿಂದ ಶಾಲೆಗೆ ರಜೆ ನೀಡಿ, ವಿದ್ಯಾರ್ಥಿಗಳನ್ನು ವಾಪಸ್ ಮನೆಗೆ ಕಳುಹಿಸಿದ್ದಾರೆ.
ಸದ್ಯ ಸ್ಥಳಕ್ಕೆ ಅಮೃತಹಳ್ಳಿ ಪೊಲೀಸರು (Amruthalli Police) ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ. ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದ್ದು, ಅಸಹಜ ಸಾವು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.ಇದನ್ನೂ ಓದಿ: 2 ಗಂಟೆ ಹಾರಾಟದ ಬಳಿಕ ತಾಂತ್ರಿಕ ದೋಷ – ಲೇಹ್ಗೆ ಹೊರಟಿದ್ದ ಇಂಡಿಗೋ ವಿಮಾನ ದೆಹಲಿಗೆ ವಾಪಸ್