ಚಾಮರಾಜನಗರ: ಸಫಾರಿ ವಾಹನದ ಮೇಲೆ ಕಾಡಾನೆಯೊಂದು (Wild Elephant) ದಾಳಿಗೆ ಯತ್ನಿಸಿದ ಘಟನೆ ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆ ತಾಲೂಕಿನ ಬಂಡೀಪುರದ (Bandipura) ಸಫಾರಿಯಲ್ಲಿ ನಡೆದಿದೆ.
ಸಫಾರಿ (Safari) ರಸ್ತೆಯ ಪಕ್ಕದಲ್ಲಿ ನಿಂತಿದ್ದ ಕಾಡಾನೆಯೊಂದು ಸಫಾರಿ ಜೀಪ್ ಕಂಡ ಕೂಡಲೇ ಅಟ್ಟಾಡಿಸಿಕೊಂಡು ಬಂದಿದೆ. ಈ ವೇಳೆ ಚಾಲಕ ಎಚ್ಚೆತ್ತುಕೊಂಡು ಜೀಪ್ ಅನ್ನು ರಿವರ್ಸ್ ಚಲಾಯಿಸಿ ಅಪಾಯದಿಂದ ಪಾರಾಗಿದ್ದಾರೆ. ಇದನ್ನೂ ಓದಿ: ಕ್ರಿಕೆಟ್ ಪಂದ್ಯ ನಡೆಯುತ್ತಿದ್ದಾಗ ಪಾಕ್ ಸ್ಟೇಡಿಯಂನಲ್ಲಿ ಸ್ಫೋಟ – ಓರ್ವ ಸಾವು, ಹಲವರಿಗೆ ಗಾಯ

