ಬೆಂಗಳೂರು: ಮುಂಗಾರು ಮಳೆ ಸಕಾಲಕ್ಕೆ ಆಗಮಿಸದೇ ಇರುವುದರಿಂದ ಕಾಡಿನಲ್ಲಿ ಆಹಾರದ ಕೊರತೆ ಉಂಟಾಗಿದ್ದು, ಕಾಡಾನೆಗಳು ಆಹಾರ ಅರಸಿ ನಾಡಿನತ್ತ ಮುಖ ಮಾಡಿವೆ.
ಬೆಂಗಳೂರು ಹೊರವಲಯ ಆನೇಕಲ್ ಗಡಿಗೆ ಹೊಂದಿಕೊಂಡಿರುವ ತಮಿಳುನಾಡಿನ ಚಿನ್ನರದೊಡ್ಡಿ ಗ್ರಾಮಕ್ಕೆ ಇಂದು ಬೆಳಿಗ್ಗೆ 6 ಕಾಡಾನೆಗಳ ಗುಂಪೊಂದು ನುಗ್ಗಿದೆ. ಕಾಡಾನೆಗಳು ಗ್ರಾಮ ಸುತ್ತಮುತ್ತ ಬೆಳೆದಿದ್ದ ಬೆಳೆಗಳನ್ನು ತಿಂದು, ತುಳಿದು ನಾಶ ಮಾಡಿವೆ. ಗ್ರಾಮಸ್ಥರು ಒಂದೆಡೆಯಿಂದ ಆನೆಗಳನ್ನು ಕಾಡಿನತ್ತ ಓಡಿಸಿದರೆ, ಮತ್ತೆ ಇನ್ನೊಂದು ತುದಿಯಿಂದ ಜಮೀನುಗಳಿಗೆ ನುಗ್ಗುತ್ತಿವೆ. ಇದರಿಂದಾಗಿ ಗ್ರಾಮಸ್ತರು ಹೈರಾಣಾಗಿದ್ದಾರೆ. ಇದನ್ನೂ ಓದಿ: ಸೊಂಡಿಲಿನಿಂದ ತಿವಿದು ಕಾಡಾನೆ ದಾಳಿ, ಅದೃಷ್ಟವಶಾತ್ ಬದುಕುಳಿದ ವ್ಯಕ್ತಿ: ವಿಡಿಯೋ ನೋಡಿ
ಈಗಾಗಲೇ ಮುಂಗಾರು ಮಳೆ ಆಗಮಿಸಿ ಕಾಡಿನಲ್ಲಿರುವ ಕೆರೆ, ಹೊಂಡಗಳು ತುಂಬಿದ್ದರೆ ಹಾಗೂ ಮೇವು ಬೆಳೆದಿದ್ದರೆ ಆನೆಗಳು ನಾಡಿಗೆ ಬರುತ್ತಿರಲಿಲ್ಲ. ಆದರೆ ಮುಂಗಾರು ವಿಳಂಬದಿಂದಾಗಿ ಕಾಡು ಒಣಗಿದ್ದು ಆಹಾರ, ನೀರು ಸಿಗದೇ ಆನೆಗಳು ನಾಡಿಗೆ ಬರುತ್ತಿವೆ ಎಂದು ಗ್ರಾಮಸ್ಥರ ಹೇಳಿದ್ದಾರೆ.